AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thalapathy Vijay: ಒಂದೇ ಮಾತಿನಲ್ಲಿ ದಳಪತಿ ವಿಜಯ್​ಗೆ ಶಾರುಖ್ ಖಾನ್​ ಹೊಗಳಿಕೆ; ಯಾವುದು ಆ ಮಾತು?

Shah Rukh Khan: ದಕ್ಷಿಣ ಭಾರತದಲ್ಲೂ ಶಾರುಖ್​​ ಖಾನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಈಗ ದಳಪತಿ ವಿಜಯ್​ ಬಗ್ಗೆ ಒಳ್ಳೆಯ ಮಾತುಗಳನ್ನು ಹೇಳುವ ಮೂಲಕ ಇನ್ನಷ್ಟು ಜನರನ್ನು ಅವರು ಸೆಳೆದುಕೊಂಡಿದ್ದಾರೆ.

Thalapathy Vijay: ಒಂದೇ ಮಾತಿನಲ್ಲಿ ದಳಪತಿ ವಿಜಯ್​ಗೆ ಶಾರುಖ್ ಖಾನ್​ ಹೊಗಳಿಕೆ; ಯಾವುದು ಆ ಮಾತು?
ದಳಪತಿ ವಿಜಯ್​, ಶಾರುಖ್​ ಖಾನ್​
ಮದನ್​ ಕುಮಾರ್​
|

Updated on: Jun 26, 2021 | 9:46 AM

Share

ಬಾಲಿವುಡ್​​ನ ಸ್ಟಾರ್ ನಟ ಶಾರುಖ್​ ಖಾನ್​ ಅವರು ಇತ್ತೀಚೆಗೆ ಅಭಿಮಾನಿಗಳ ಜೊತೆ ಪ್ರಶ್ನೋತ್ತರ ನಡೆಸಿದರು. #AskSrk ಹ್ಯಾಶ್​ಟ್ಯಾಗ್​ ಮೂಲಕ ಟ್ವಿಟರ್​ನಲ್ಲಿ ಅಭಿಮಾನಿಗಳಿಂದ ಪ್ರಶ್ನೆ ಸ್ವೀಕರಿಸಿದರು. ಈ ವೇಳೆ ಅವರಿಗೆ ಫ್ಯಾನ್ಸ್​ ವಿವಿಧ ವಿಚಾರಗಳ ಬಗ್ಗೆ ಪ್ರಶ್ನೆ ಕೇಳಿದ್ದಾರೆ. ದಕ್ಷಿಣ ಭಾರತ ಚಿತ್ರರಂಗದ ಸ್ಟಾರ್​ ನಟರಲ್ಲಿ ಒಬ್ಬರಾದ ದಳಪತಿ ವಿಜಯ್​ ಬಗ್ಗೆಯೂ ಈ ಪ್ರಶ್ನೋತ್ತರದಲ್ಲಿ ಪ್ರಸ್ತಾಪ ಆಯಿತು. ಅದಕ್ಕೆ ಒಂದೇ ಮಾತಿನಲ್ಲಿ ಶಾರುಖ್​ ಪ್ರತಿಕ್ರಿಯೆ ನೀಡಿದರು.

ಈ ವರ್ಷ ಆರಂಭದಲ್ಲಿ ತೆರೆಕಂಡ ಮಾಸ್ಟರ್​ ಸಿನಿಮಾದ ಯಶಸ್ಸಿನಿಂದಾಗಿ ದಳಪತಿ ವಿಜಯ್​ ಅವರ ಖ್ಯಾತಿ ಹೆಚ್ಚಿದೆ. ಬಾಲಿವುಡ್​ ಮಂದಿಗೂ ವಿಜಯ್​ ತಾಕತ್ತು ಏನೆಂಬುದು ಗೊತ್ತಿದೆ. ಹಾಗಾಗಿ, ‘ದಳಪತಿ ವಿಜಯ್​ ಬಗ್ಗೆ ಒಂದು ಪದ ಹೇಳಿ’ ಎಂದು ಅಭಿಮಾನಿಯೊಬ್ಬ ಶಾರುಖ್​ಗೆ ಬೇಡಿಕೆ ಇಟ್ಟಿದ್ದಾನೆ. ಅದಕ್ಕೆ ಉತ್ತರಿಸಿರುವ ಶಾರುಖ್​, ‘ವೆರಿ ಕೂಲ್​’ ಎಂದು ಟ್ವೀಟ್​ ಮಾಡಿದ್ದಾರೆ.

50.9 ಸಾವಿರ ಮಂದಿ ಈ ಟ್ವೀಟ್​ ಅನ್ನು ಲೈಕ್​ ಮಾಡಿದ್ದಾರೆ. 14 ಸಾವಿರಕ್ಕೂ ಅಧಿಕ ಕಮೆಂಟ್​ಗಳು ಬಂದಿವೆ. ವಿಜಯ್​ ಮತ್ತು ಶಾರುಖ್​ ಫೋಟೋಗಳನ್ನು ಜೊತೆಯಾಗಿ ಶೇರ್​ ಮಾಡುವ ಮೂಲಕ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ದಕ್ಷಿಣ ಭಾರತದಲ್ಲೂ ಶಾರುಖ್​​ ಖಾನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಇಲ್ಲಿಯೂ ಅವರ ಸಿನಿಮಾಗಳು ಸೂಪರ್ ಹಿಟ್​ ಆಗುತ್ತವೆ. ಈಗ ವಿಜಯ್​ ಬಗ್ಗೆ ಒಳ್ಳೆಯ ಮಾತುಗಳನ್ನು ಹೇಳುವ ಮೂಲಕ ಇನ್ನಷ್ಟು ಜನರನ್ನು ಅವರು ಸೆಳೆದುಕೊಂಡಿದ್ದಾರೆ.

ಜೂ.22ರಂದು ವಿಜಯ್​ ಜನ್ಮದಿನ. ಆ ಪ್ರಯುಕ್ತ ಅವರ ಹೊಸ ಸಿನಿಮಾದ ಟೈಟಲ್​ ಅನೌನ್ಸ್​ ಮಾಡಲಾಯಿತು. ವಿಜಯ್​ ನಟಿಸುತ್ತಿರುವ 65ನೇ ಸಿನಿಮಾ ಇದಾಗಿದ್ದು, ‘ಬೀಸ್ಟ್​’ ಎಂದು ಹೆಸರು ಇಡಲಾಗಿದೆ. ಇದರಲ್ಲಿ ವಿಜಯ್​ಗೆ ನಾಯಕಿಯಾಗಿ ಪೂಜಾ ಹೆಗ್ಡೆ ಅಭಿನಯಿಸುತ್ತಿದ್ದಾರೆ. ಸನ್​ ಪಿಕ್ಚರ್ಸ್​ ಮೂಲಕ ‘ಬೀಸ್ಟ್’ ತಯಾರಾಗುತ್ತಿದೆ. ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆ ಆಗಿರುವ ಫಸ್ಟ್​ಲುಕ್​ ಪೋಸ್ಟರ್​ನಲ್ಲಿ ವಿಜಯ್​ ಗನ್​ ಹಿಡಿದು ಕಾಣಿಸಿಕೊಂಡಿದ್ದು, ಅಭಿಮಾನಿಗಳು ಥ್ರಿಲ್​ ಆಗಿದ್ದಾರೆ.

ಇದನ್ನೂ ಓದಿ:

Shah Rukh Khan: ‘ನೀವು ನಿರುದ್ಯೋಗಿ ಆಗಿಬಿಟ್ರಾ’ ಎಂದು ನೇರವಾಗಿ ಕೇಳಿದ ನೆಟ್ಟಿಗನಿಗೆ ಶಾರುಖ್​ ಖಾನ್​ ಕೊಟ್ಟ ಉತ್ತರ ಏನು?

‘ನಾನು ಜೈಲಿಗೆ ಹೋಗಲು ಹಿಂಜರಿಯುವುದಿಲ್ಲ’; ಪುತ್ರಿ ಸುಹಾನಾ ಬಾಯ್​ಫ್ರೆಂಡ್​ ಬಗ್ಗೆ ಶಾರುಖ್​ ಖಡಕ್​ ವಾರ್ನಿಂಗ್​

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!