Sign In

By signing in or creating an account, you agree with Associated Broadcasting Company's Terms & Conditions and Privacy Policy.

Thalapathy Vijay: ಒಂದೇ ಮಾತಿನಲ್ಲಿ ದಳಪತಿ ವಿಜಯ್​ಗೆ ಶಾರುಖ್ ಖಾನ್​ ಹೊಗಳಿಕೆ; ಯಾವುದು ಆ ಮಾತು?

Shah Rukh Khan: ದಕ್ಷಿಣ ಭಾರತದಲ್ಲೂ ಶಾರುಖ್​​ ಖಾನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಈಗ ದಳಪತಿ ವಿಜಯ್​ ಬಗ್ಗೆ ಒಳ್ಳೆಯ ಮಾತುಗಳನ್ನು ಹೇಳುವ ಮೂಲಕ ಇನ್ನಷ್ಟು ಜನರನ್ನು ಅವರು ಸೆಳೆದುಕೊಂಡಿದ್ದಾರೆ.

Thalapathy Vijay: ಒಂದೇ ಮಾತಿನಲ್ಲಿ ದಳಪತಿ ವಿಜಯ್​ಗೆ ಶಾರುಖ್ ಖಾನ್​ ಹೊಗಳಿಕೆ; ಯಾವುದು ಆ ಮಾತು?
ದಳಪತಿ ವಿಜಯ್​, ಶಾರುಖ್​ ಖಾನ್​
Follow us
ಮದನ್​ ಕುಮಾರ್​
|

Updated on: Jun 26, 2021 | 9:46 AM

ಬಾಲಿವುಡ್​​ನ ಸ್ಟಾರ್ ನಟ ಶಾರುಖ್​ ಖಾನ್​ ಅವರು ಇತ್ತೀಚೆಗೆ ಅಭಿಮಾನಿಗಳ ಜೊತೆ ಪ್ರಶ್ನೋತ್ತರ ನಡೆಸಿದರು. #AskSrk ಹ್ಯಾಶ್​ಟ್ಯಾಗ್​ ಮೂಲಕ ಟ್ವಿಟರ್​ನಲ್ಲಿ ಅಭಿಮಾನಿಗಳಿಂದ ಪ್ರಶ್ನೆ ಸ್ವೀಕರಿಸಿದರು. ಈ ವೇಳೆ ಅವರಿಗೆ ಫ್ಯಾನ್ಸ್​ ವಿವಿಧ ವಿಚಾರಗಳ ಬಗ್ಗೆ ಪ್ರಶ್ನೆ ಕೇಳಿದ್ದಾರೆ. ದಕ್ಷಿಣ ಭಾರತ ಚಿತ್ರರಂಗದ ಸ್ಟಾರ್​ ನಟರಲ್ಲಿ ಒಬ್ಬರಾದ ದಳಪತಿ ವಿಜಯ್​ ಬಗ್ಗೆಯೂ ಈ ಪ್ರಶ್ನೋತ್ತರದಲ್ಲಿ ಪ್ರಸ್ತಾಪ ಆಯಿತು. ಅದಕ್ಕೆ ಒಂದೇ ಮಾತಿನಲ್ಲಿ ಶಾರುಖ್​ ಪ್ರತಿಕ್ರಿಯೆ ನೀಡಿದರು.

ಈ ವರ್ಷ ಆರಂಭದಲ್ಲಿ ತೆರೆಕಂಡ ಮಾಸ್ಟರ್​ ಸಿನಿಮಾದ ಯಶಸ್ಸಿನಿಂದಾಗಿ ದಳಪತಿ ವಿಜಯ್​ ಅವರ ಖ್ಯಾತಿ ಹೆಚ್ಚಿದೆ. ಬಾಲಿವುಡ್​ ಮಂದಿಗೂ ವಿಜಯ್​ ತಾಕತ್ತು ಏನೆಂಬುದು ಗೊತ್ತಿದೆ. ಹಾಗಾಗಿ, ‘ದಳಪತಿ ವಿಜಯ್​ ಬಗ್ಗೆ ಒಂದು ಪದ ಹೇಳಿ’ ಎಂದು ಅಭಿಮಾನಿಯೊಬ್ಬ ಶಾರುಖ್​ಗೆ ಬೇಡಿಕೆ ಇಟ್ಟಿದ್ದಾನೆ. ಅದಕ್ಕೆ ಉತ್ತರಿಸಿರುವ ಶಾರುಖ್​, ‘ವೆರಿ ಕೂಲ್​’ ಎಂದು ಟ್ವೀಟ್​ ಮಾಡಿದ್ದಾರೆ.

50.9 ಸಾವಿರ ಮಂದಿ ಈ ಟ್ವೀಟ್​ ಅನ್ನು ಲೈಕ್​ ಮಾಡಿದ್ದಾರೆ. 14 ಸಾವಿರಕ್ಕೂ ಅಧಿಕ ಕಮೆಂಟ್​ಗಳು ಬಂದಿವೆ. ವಿಜಯ್​ ಮತ್ತು ಶಾರುಖ್​ ಫೋಟೋಗಳನ್ನು ಜೊತೆಯಾಗಿ ಶೇರ್​ ಮಾಡುವ ಮೂಲಕ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ದಕ್ಷಿಣ ಭಾರತದಲ್ಲೂ ಶಾರುಖ್​​ ಖಾನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಇಲ್ಲಿಯೂ ಅವರ ಸಿನಿಮಾಗಳು ಸೂಪರ್ ಹಿಟ್​ ಆಗುತ್ತವೆ. ಈಗ ವಿಜಯ್​ ಬಗ್ಗೆ ಒಳ್ಳೆಯ ಮಾತುಗಳನ್ನು ಹೇಳುವ ಮೂಲಕ ಇನ್ನಷ್ಟು ಜನರನ್ನು ಅವರು ಸೆಳೆದುಕೊಂಡಿದ್ದಾರೆ.

ಜೂ.22ರಂದು ವಿಜಯ್​ ಜನ್ಮದಿನ. ಆ ಪ್ರಯುಕ್ತ ಅವರ ಹೊಸ ಸಿನಿಮಾದ ಟೈಟಲ್​ ಅನೌನ್ಸ್​ ಮಾಡಲಾಯಿತು. ವಿಜಯ್​ ನಟಿಸುತ್ತಿರುವ 65ನೇ ಸಿನಿಮಾ ಇದಾಗಿದ್ದು, ‘ಬೀಸ್ಟ್​’ ಎಂದು ಹೆಸರು ಇಡಲಾಗಿದೆ. ಇದರಲ್ಲಿ ವಿಜಯ್​ಗೆ ನಾಯಕಿಯಾಗಿ ಪೂಜಾ ಹೆಗ್ಡೆ ಅಭಿನಯಿಸುತ್ತಿದ್ದಾರೆ. ಸನ್​ ಪಿಕ್ಚರ್ಸ್​ ಮೂಲಕ ‘ಬೀಸ್ಟ್’ ತಯಾರಾಗುತ್ತಿದೆ. ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆ ಆಗಿರುವ ಫಸ್ಟ್​ಲುಕ್​ ಪೋಸ್ಟರ್​ನಲ್ಲಿ ವಿಜಯ್​ ಗನ್​ ಹಿಡಿದು ಕಾಣಿಸಿಕೊಂಡಿದ್ದು, ಅಭಿಮಾನಿಗಳು ಥ್ರಿಲ್​ ಆಗಿದ್ದಾರೆ.

ಇದನ್ನೂ ಓದಿ:

Shah Rukh Khan: ‘ನೀವು ನಿರುದ್ಯೋಗಿ ಆಗಿಬಿಟ್ರಾ’ ಎಂದು ನೇರವಾಗಿ ಕೇಳಿದ ನೆಟ್ಟಿಗನಿಗೆ ಶಾರುಖ್​ ಖಾನ್​ ಕೊಟ್ಟ ಉತ್ತರ ಏನು?

‘ನಾನು ಜೈಲಿಗೆ ಹೋಗಲು ಹಿಂಜರಿಯುವುದಿಲ್ಲ’; ಪುತ್ರಿ ಸುಹಾನಾ ಬಾಯ್​ಫ್ರೆಂಡ್​ ಬಗ್ಗೆ ಶಾರುಖ್​ ಖಡಕ್​ ವಾರ್ನಿಂಗ್​

ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ