AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ನಟನೆಯ ಪಠಾಣ್​ ಸಿನಿಮಾ ರಿಲೀಸ್​ಗೆ ಫಿಕ್ಸ್​ ಆಯ್ತು ದಿನಾಂಕ 

ಕೊವಿಡ್​ ಕಾರಣದಿಂದ ಪಠಾಣ್​ ಸಿನಿಮಾ ಶೂಟಿಂಗ್​ ನಿಂತಿತ್ತು. ಈಗ ಶಾರುಖ್​ ಚಿತ್ರರಂಗಕ್ಕೆ ಕಾಲಿಟ್ಟು 29 ವರ್ಷ ಕಳೆದಿದೆ. ಇದೇ ವಿಶೇಷ ಸಂದರ್ಭದಂದು ಪಠಾಣ್​ ಚಿತ್ರೀಕರಣ ಆರಂಭಗೊಂಡಿದೆ

ಶಾರುಖ್​ ನಟನೆಯ ಪಠಾಣ್​ ಸಿನಿಮಾ ರಿಲೀಸ್​ಗೆ ಫಿಕ್ಸ್​ ಆಯ್ತು ದಿನಾಂಕ 
ಶಾರುಖ್​ ಖಾನ್​
TV9 Web
| Edited By: |

Updated on:Jun 25, 2021 | 8:17 PM

Share

ಸಿದ್ಧಾರ್ಥ್​ ಆನಂದ್ ನಿರ್ದೇಶನ ಮಾಡುತ್ತಿರುವ ‘ಪಠಾಣ್​’ ಚಿತ್ರದ ಮೂಲಕ ಶಾರುಖ್​ ಖಾನ್​ ಕಂಬ್ಯಾಕ್​ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗ ಸಿನಿಮಾ ರಿಲೀಸ್ ದಿನಾಂಕದ ಬಗ್ಗೆ ಮಾಹಿತಿಯೊಂದು ಹರಿದಾಡಿದೆ.

2013ರಲ್ಲಿ ತೆರೆಗೆ ಬಂದಿದ್ದ ಶಾರುಖ್​ ನಟನೆಯ ‘ಚೆನ್ನೈ ಎಕ್ಸ್​ಪ್ರೆಸ್’​ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಅವರ ಅಭಿನಯದ ‘ಹ್ಯಾಪಿ ನ್ಯೂ ಇಯರ್’​ ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಗಳಿಕೆ ಮಾಡಿದ್ದರೂ, ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದಾದ ನಂತರ ತೆರೆಕಂಡ ಅವರ ನಟನೆಯ ಎಲ್ಲಾ ಚಿತ್ರಗಳೂ ನೆಲ ಕಚ್ಚಿದ್ದವು. ಈಗ ಶಾರುಖ್​ ‘ಪಠಾಣ್’​ ಸಿನಿಮಾ ಮೂಲಕ ಮತ್ತೆ ತೆರೆ ಮೇಲೆ ಬರಲು ಸಿದ್ಧರಾಗಿದ್ದಾರೆ. ಮೂಲಗಳ ಪ್ರಕಾರ ಮುಂದಿನ ಈದ್​ಗೆ ಈ ಸಿನಿಮಾ ತೆರೆಗೆ ಬರಲಿದೆಯಂತೆ.

ಕೊವಿಡ್​ ಕಾರಣದಿಂದ ಪಠಾಣ್​ ಸಿನಿಮಾ ಶೂಟಿಂಗ್​ ನಿಂತಿತ್ತು. ಈಗ ಶಾರುಖ್​ ಚಿತ್ರರಂಗಕ್ಕೆ ಕಾಲಿಟ್ಟು 29 ವರ್ಷ ಕಳೆದಿದೆ. ಇದೇ ವಿಶೇಷ ಸಂದರ್ಭದಂದು ಪಠಾಣ್​ ಚಿತ್ರೀಕರಣ ಆರಂಭಗೊಂಡಿದೆ. ಅಂದಹಾಗೆ, ವೃತ್ತಿಜೀವನದಲ್ಲಿ ಶಾರುಖ್​ ಇಷ್ಟು ದೊಡ್ಡ ಬ್ರೇಕ್​ ತೆಗೆದುಕೊಂಡಿದ್ದು ಇದೇ ಮೊದಲು.

ಮುಂಬೈನ ಯಶ್ ರಾಜ್​ ಸ್ಟುಡಿಯೋದಲ್ಲಿ ಪಠಾಣ್​ ಶೂಟಿಂಗ್​ ನಡೆಯುತ್ತಿದೆ. ಮುಂದಿನ 18 ದಿನಗಳ ಕಾಲ ಚಿತ್ರತಂಡ ಇಲ್ಲಿಯೇ ಬೀಡು ಬಿಡಲಿದೆ. ವಾರ್​​ ಸಿನಿಮಾ ನಿರ್ದೇಶನ ಮಾಡಿದ ಖ್ಯಾತಿ ಸಿದ್ಧಾರ್ಥ್​ ಆನಂದ್​ಗೆ ಇದೆ. ಆ್ಯಕ್ಷನ್​ ಸಿನಿಮಾ ಮಾಡುವುದರಲ್ಲಿ ಎತ್ತಿದ ಕೈ ಅವರದ್ದು. ಹೀಗಾಗಿ ಪಠಾಣ್​ ಚಿತ್ರದಲ್ಲೂ ದೊಡ್ಡ ಮಟ್ಟದಲ್ಲಿ ಆ್ಯಕ್ಷನ್​ ಇರಲಿದೆ ಎನ್ನಲಾಗುತ್ತಿದೆ.

ಇತ್ತೀಚೆಗೆ ಪಠಾಣ್​ ಚಿತ್ರತಂಡ ದುಬೈನಲ್ಲಿ ಶೂಟಿಂಗ್​ ನಡೆಸಿತ್ತು.ಇದರ ಫೋಟೋ ಹಾಗೂ ವಿಡಿಯೋಗಳು ವೈರಲ್​ ಆಗಿದ್ದವು. ಇದಲ್ಲದೆ, ಯುರೋಪ್​ ಹಾಗೂ ರಷ್ಯಾದಲ್ಲಿಯೂ ಪಠಾಣ್​ ಶೂಟಿಂಗ್​ ನಡೆಸೋಕೆ ಪ್ಲ್ಯಾನ್ ರೂಪಿಸಲಾಗಿದೆ.

ಇದನ್ನೂ ಓದಿ: ಹಲವು ವರ್ಷಗಳ ಶಾರುಖ್-ಸಲ್ಮಾನ್ ಜಗಳಕ್ಕೆ ಮದುವೆ ವಿಚಾರ ಕಾರಣ; ಕಿಂಗ್ ಖಾನ್ ಬಿಚ್ಚಿಟ್ಟ ರಹಸ್ಯ

Shah Rukh Khan: ‘ನೀವು ನಿರುದ್ಯೋಗಿ ಆಗಿಬಿಟ್ರಾ’ ಎಂದು ನೇರವಾಗಿ ಕೇಳಿದ ನೆಟ್ಟಿಗನಿಗೆ ಶಾರುಖ್​ ಖಾನ್​ ಕೊಟ್ಟ ಉತ್ತರ ಏನು?

Published On - 8:13 pm, Fri, 25 June 21

Follow Us
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು