AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ನಟನೆಯ ಪಠಾಣ್​ ಸಿನಿಮಾ ರಿಲೀಸ್​ಗೆ ಫಿಕ್ಸ್​ ಆಯ್ತು ದಿನಾಂಕ 

ಕೊವಿಡ್​ ಕಾರಣದಿಂದ ಪಠಾಣ್​ ಸಿನಿಮಾ ಶೂಟಿಂಗ್​ ನಿಂತಿತ್ತು. ಈಗ ಶಾರುಖ್​ ಚಿತ್ರರಂಗಕ್ಕೆ ಕಾಲಿಟ್ಟು 29 ವರ್ಷ ಕಳೆದಿದೆ. ಇದೇ ವಿಶೇಷ ಸಂದರ್ಭದಂದು ಪಠಾಣ್​ ಚಿತ್ರೀಕರಣ ಆರಂಭಗೊಂಡಿದೆ

ಶಾರುಖ್​ ನಟನೆಯ ಪಠಾಣ್​ ಸಿನಿಮಾ ರಿಲೀಸ್​ಗೆ ಫಿಕ್ಸ್​ ಆಯ್ತು ದಿನಾಂಕ 
ಶಾರುಖ್​ ಖಾನ್​
TV9 Web
| Edited By: |

Updated on:Jun 25, 2021 | 8:17 PM

Share

ಸಿದ್ಧಾರ್ಥ್​ ಆನಂದ್ ನಿರ್ದೇಶನ ಮಾಡುತ್ತಿರುವ ‘ಪಠಾಣ್​’ ಚಿತ್ರದ ಮೂಲಕ ಶಾರುಖ್​ ಖಾನ್​ ಕಂಬ್ಯಾಕ್​ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗ ಸಿನಿಮಾ ರಿಲೀಸ್ ದಿನಾಂಕದ ಬಗ್ಗೆ ಮಾಹಿತಿಯೊಂದು ಹರಿದಾಡಿದೆ.

2013ರಲ್ಲಿ ತೆರೆಗೆ ಬಂದಿದ್ದ ಶಾರುಖ್​ ನಟನೆಯ ‘ಚೆನ್ನೈ ಎಕ್ಸ್​ಪ್ರೆಸ್’​ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಅವರ ಅಭಿನಯದ ‘ಹ್ಯಾಪಿ ನ್ಯೂ ಇಯರ್’​ ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಗಳಿಕೆ ಮಾಡಿದ್ದರೂ, ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದಾದ ನಂತರ ತೆರೆಕಂಡ ಅವರ ನಟನೆಯ ಎಲ್ಲಾ ಚಿತ್ರಗಳೂ ನೆಲ ಕಚ್ಚಿದ್ದವು. ಈಗ ಶಾರುಖ್​ ‘ಪಠಾಣ್’​ ಸಿನಿಮಾ ಮೂಲಕ ಮತ್ತೆ ತೆರೆ ಮೇಲೆ ಬರಲು ಸಿದ್ಧರಾಗಿದ್ದಾರೆ. ಮೂಲಗಳ ಪ್ರಕಾರ ಮುಂದಿನ ಈದ್​ಗೆ ಈ ಸಿನಿಮಾ ತೆರೆಗೆ ಬರಲಿದೆಯಂತೆ.

ಕೊವಿಡ್​ ಕಾರಣದಿಂದ ಪಠಾಣ್​ ಸಿನಿಮಾ ಶೂಟಿಂಗ್​ ನಿಂತಿತ್ತು. ಈಗ ಶಾರುಖ್​ ಚಿತ್ರರಂಗಕ್ಕೆ ಕಾಲಿಟ್ಟು 29 ವರ್ಷ ಕಳೆದಿದೆ. ಇದೇ ವಿಶೇಷ ಸಂದರ್ಭದಂದು ಪಠಾಣ್​ ಚಿತ್ರೀಕರಣ ಆರಂಭಗೊಂಡಿದೆ. ಅಂದಹಾಗೆ, ವೃತ್ತಿಜೀವನದಲ್ಲಿ ಶಾರುಖ್​ ಇಷ್ಟು ದೊಡ್ಡ ಬ್ರೇಕ್​ ತೆಗೆದುಕೊಂಡಿದ್ದು ಇದೇ ಮೊದಲು.

ಮುಂಬೈನ ಯಶ್ ರಾಜ್​ ಸ್ಟುಡಿಯೋದಲ್ಲಿ ಪಠಾಣ್​ ಶೂಟಿಂಗ್​ ನಡೆಯುತ್ತಿದೆ. ಮುಂದಿನ 18 ದಿನಗಳ ಕಾಲ ಚಿತ್ರತಂಡ ಇಲ್ಲಿಯೇ ಬೀಡು ಬಿಡಲಿದೆ. ವಾರ್​​ ಸಿನಿಮಾ ನಿರ್ದೇಶನ ಮಾಡಿದ ಖ್ಯಾತಿ ಸಿದ್ಧಾರ್ಥ್​ ಆನಂದ್​ಗೆ ಇದೆ. ಆ್ಯಕ್ಷನ್​ ಸಿನಿಮಾ ಮಾಡುವುದರಲ್ಲಿ ಎತ್ತಿದ ಕೈ ಅವರದ್ದು. ಹೀಗಾಗಿ ಪಠಾಣ್​ ಚಿತ್ರದಲ್ಲೂ ದೊಡ್ಡ ಮಟ್ಟದಲ್ಲಿ ಆ್ಯಕ್ಷನ್​ ಇರಲಿದೆ ಎನ್ನಲಾಗುತ್ತಿದೆ.

ಇತ್ತೀಚೆಗೆ ಪಠಾಣ್​ ಚಿತ್ರತಂಡ ದುಬೈನಲ್ಲಿ ಶೂಟಿಂಗ್​ ನಡೆಸಿತ್ತು.ಇದರ ಫೋಟೋ ಹಾಗೂ ವಿಡಿಯೋಗಳು ವೈರಲ್​ ಆಗಿದ್ದವು. ಇದಲ್ಲದೆ, ಯುರೋಪ್​ ಹಾಗೂ ರಷ್ಯಾದಲ್ಲಿಯೂ ಪಠಾಣ್​ ಶೂಟಿಂಗ್​ ನಡೆಸೋಕೆ ಪ್ಲ್ಯಾನ್ ರೂಪಿಸಲಾಗಿದೆ.

ಇದನ್ನೂ ಓದಿ: ಹಲವು ವರ್ಷಗಳ ಶಾರುಖ್-ಸಲ್ಮಾನ್ ಜಗಳಕ್ಕೆ ಮದುವೆ ವಿಚಾರ ಕಾರಣ; ಕಿಂಗ್ ಖಾನ್ ಬಿಚ್ಚಿಟ್ಟ ರಹಸ್ಯ

Shah Rukh Khan: ‘ನೀವು ನಿರುದ್ಯೋಗಿ ಆಗಿಬಿಟ್ರಾ’ ಎಂದು ನೇರವಾಗಿ ಕೇಳಿದ ನೆಟ್ಟಿಗನಿಗೆ ಶಾರುಖ್​ ಖಾನ್​ ಕೊಟ್ಟ ಉತ್ತರ ಏನು?

Published On - 8:13 pm, Fri, 25 June 21

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ