AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ನಟನೆಯ ಪಠಾಣ್​ ಸಿನಿಮಾ ರಿಲೀಸ್​ಗೆ ಫಿಕ್ಸ್​ ಆಯ್ತು ದಿನಾಂಕ 

ಕೊವಿಡ್​ ಕಾರಣದಿಂದ ಪಠಾಣ್​ ಸಿನಿಮಾ ಶೂಟಿಂಗ್​ ನಿಂತಿತ್ತು. ಈಗ ಶಾರುಖ್​ ಚಿತ್ರರಂಗಕ್ಕೆ ಕಾಲಿಟ್ಟು 29 ವರ್ಷ ಕಳೆದಿದೆ. ಇದೇ ವಿಶೇಷ ಸಂದರ್ಭದಂದು ಪಠಾಣ್​ ಚಿತ್ರೀಕರಣ ಆರಂಭಗೊಂಡಿದೆ

ಶಾರುಖ್​ ನಟನೆಯ ಪಠಾಣ್​ ಸಿನಿಮಾ ರಿಲೀಸ್​ಗೆ ಫಿಕ್ಸ್​ ಆಯ್ತು ದಿನಾಂಕ 
ಶಾರುಖ್​ ಖಾನ್​
TV9 Web
| Edited By: |

Updated on:Jun 25, 2021 | 8:17 PM

Share

ಸಿದ್ಧಾರ್ಥ್​ ಆನಂದ್ ನಿರ್ದೇಶನ ಮಾಡುತ್ತಿರುವ ‘ಪಠಾಣ್​’ ಚಿತ್ರದ ಮೂಲಕ ಶಾರುಖ್​ ಖಾನ್​ ಕಂಬ್ಯಾಕ್​ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗ ಸಿನಿಮಾ ರಿಲೀಸ್ ದಿನಾಂಕದ ಬಗ್ಗೆ ಮಾಹಿತಿಯೊಂದು ಹರಿದಾಡಿದೆ.

2013ರಲ್ಲಿ ತೆರೆಗೆ ಬಂದಿದ್ದ ಶಾರುಖ್​ ನಟನೆಯ ‘ಚೆನ್ನೈ ಎಕ್ಸ್​ಪ್ರೆಸ್’​ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಅವರ ಅಭಿನಯದ ‘ಹ್ಯಾಪಿ ನ್ಯೂ ಇಯರ್’​ ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಗಳಿಕೆ ಮಾಡಿದ್ದರೂ, ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದಾದ ನಂತರ ತೆರೆಕಂಡ ಅವರ ನಟನೆಯ ಎಲ್ಲಾ ಚಿತ್ರಗಳೂ ನೆಲ ಕಚ್ಚಿದ್ದವು. ಈಗ ಶಾರುಖ್​ ‘ಪಠಾಣ್’​ ಸಿನಿಮಾ ಮೂಲಕ ಮತ್ತೆ ತೆರೆ ಮೇಲೆ ಬರಲು ಸಿದ್ಧರಾಗಿದ್ದಾರೆ. ಮೂಲಗಳ ಪ್ರಕಾರ ಮುಂದಿನ ಈದ್​ಗೆ ಈ ಸಿನಿಮಾ ತೆರೆಗೆ ಬರಲಿದೆಯಂತೆ.

ಕೊವಿಡ್​ ಕಾರಣದಿಂದ ಪಠಾಣ್​ ಸಿನಿಮಾ ಶೂಟಿಂಗ್​ ನಿಂತಿತ್ತು. ಈಗ ಶಾರುಖ್​ ಚಿತ್ರರಂಗಕ್ಕೆ ಕಾಲಿಟ್ಟು 29 ವರ್ಷ ಕಳೆದಿದೆ. ಇದೇ ವಿಶೇಷ ಸಂದರ್ಭದಂದು ಪಠಾಣ್​ ಚಿತ್ರೀಕರಣ ಆರಂಭಗೊಂಡಿದೆ. ಅಂದಹಾಗೆ, ವೃತ್ತಿಜೀವನದಲ್ಲಿ ಶಾರುಖ್​ ಇಷ್ಟು ದೊಡ್ಡ ಬ್ರೇಕ್​ ತೆಗೆದುಕೊಂಡಿದ್ದು ಇದೇ ಮೊದಲು.

ಮುಂಬೈನ ಯಶ್ ರಾಜ್​ ಸ್ಟುಡಿಯೋದಲ್ಲಿ ಪಠಾಣ್​ ಶೂಟಿಂಗ್​ ನಡೆಯುತ್ತಿದೆ. ಮುಂದಿನ 18 ದಿನಗಳ ಕಾಲ ಚಿತ್ರತಂಡ ಇಲ್ಲಿಯೇ ಬೀಡು ಬಿಡಲಿದೆ. ವಾರ್​​ ಸಿನಿಮಾ ನಿರ್ದೇಶನ ಮಾಡಿದ ಖ್ಯಾತಿ ಸಿದ್ಧಾರ್ಥ್​ ಆನಂದ್​ಗೆ ಇದೆ. ಆ್ಯಕ್ಷನ್​ ಸಿನಿಮಾ ಮಾಡುವುದರಲ್ಲಿ ಎತ್ತಿದ ಕೈ ಅವರದ್ದು. ಹೀಗಾಗಿ ಪಠಾಣ್​ ಚಿತ್ರದಲ್ಲೂ ದೊಡ್ಡ ಮಟ್ಟದಲ್ಲಿ ಆ್ಯಕ್ಷನ್​ ಇರಲಿದೆ ಎನ್ನಲಾಗುತ್ತಿದೆ.

ಇತ್ತೀಚೆಗೆ ಪಠಾಣ್​ ಚಿತ್ರತಂಡ ದುಬೈನಲ್ಲಿ ಶೂಟಿಂಗ್​ ನಡೆಸಿತ್ತು.ಇದರ ಫೋಟೋ ಹಾಗೂ ವಿಡಿಯೋಗಳು ವೈರಲ್​ ಆಗಿದ್ದವು. ಇದಲ್ಲದೆ, ಯುರೋಪ್​ ಹಾಗೂ ರಷ್ಯಾದಲ್ಲಿಯೂ ಪಠಾಣ್​ ಶೂಟಿಂಗ್​ ನಡೆಸೋಕೆ ಪ್ಲ್ಯಾನ್ ರೂಪಿಸಲಾಗಿದೆ.

ಇದನ್ನೂ ಓದಿ: ಹಲವು ವರ್ಷಗಳ ಶಾರುಖ್-ಸಲ್ಮಾನ್ ಜಗಳಕ್ಕೆ ಮದುವೆ ವಿಚಾರ ಕಾರಣ; ಕಿಂಗ್ ಖಾನ್ ಬಿಚ್ಚಿಟ್ಟ ರಹಸ್ಯ

Shah Rukh Khan: ‘ನೀವು ನಿರುದ್ಯೋಗಿ ಆಗಿಬಿಟ್ರಾ’ ಎಂದು ನೇರವಾಗಿ ಕೇಳಿದ ನೆಟ್ಟಿಗನಿಗೆ ಶಾರುಖ್​ ಖಾನ್​ ಕೊಟ್ಟ ಉತ್ತರ ಏನು?

Published On - 8:13 pm, Fri, 25 June 21

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ