Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ನಟನೆಯ ಪಠಾಣ್​ ಸಿನಿಮಾ ರಿಲೀಸ್​ಗೆ ಫಿಕ್ಸ್​ ಆಯ್ತು ದಿನಾಂಕ 

ಕೊವಿಡ್​ ಕಾರಣದಿಂದ ಪಠಾಣ್​ ಸಿನಿಮಾ ಶೂಟಿಂಗ್​ ನಿಂತಿತ್ತು. ಈಗ ಶಾರುಖ್​ ಚಿತ್ರರಂಗಕ್ಕೆ ಕಾಲಿಟ್ಟು 29 ವರ್ಷ ಕಳೆದಿದೆ. ಇದೇ ವಿಶೇಷ ಸಂದರ್ಭದಂದು ಪಠಾಣ್​ ಚಿತ್ರೀಕರಣ ಆರಂಭಗೊಂಡಿದೆ

ಶಾರುಖ್​ ನಟನೆಯ ಪಠಾಣ್​ ಸಿನಿಮಾ ರಿಲೀಸ್​ಗೆ ಫಿಕ್ಸ್​ ಆಯ್ತು ದಿನಾಂಕ 
ಶಾರುಖ್​ ಖಾನ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jun 25, 2021 | 8:17 PM

ಸಿದ್ಧಾರ್ಥ್​ ಆನಂದ್ ನಿರ್ದೇಶನ ಮಾಡುತ್ತಿರುವ ‘ಪಠಾಣ್​’ ಚಿತ್ರದ ಮೂಲಕ ಶಾರುಖ್​ ಖಾನ್​ ಕಂಬ್ಯಾಕ್​ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗ ಸಿನಿಮಾ ರಿಲೀಸ್ ದಿನಾಂಕದ ಬಗ್ಗೆ ಮಾಹಿತಿಯೊಂದು ಹರಿದಾಡಿದೆ.

2013ರಲ್ಲಿ ತೆರೆಗೆ ಬಂದಿದ್ದ ಶಾರುಖ್​ ನಟನೆಯ ‘ಚೆನ್ನೈ ಎಕ್ಸ್​ಪ್ರೆಸ್’​ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಅವರ ಅಭಿನಯದ ‘ಹ್ಯಾಪಿ ನ್ಯೂ ಇಯರ್’​ ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಗಳಿಕೆ ಮಾಡಿದ್ದರೂ, ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದಾದ ನಂತರ ತೆರೆಕಂಡ ಅವರ ನಟನೆಯ ಎಲ್ಲಾ ಚಿತ್ರಗಳೂ ನೆಲ ಕಚ್ಚಿದ್ದವು. ಈಗ ಶಾರುಖ್​ ‘ಪಠಾಣ್’​ ಸಿನಿಮಾ ಮೂಲಕ ಮತ್ತೆ ತೆರೆ ಮೇಲೆ ಬರಲು ಸಿದ್ಧರಾಗಿದ್ದಾರೆ. ಮೂಲಗಳ ಪ್ರಕಾರ ಮುಂದಿನ ಈದ್​ಗೆ ಈ ಸಿನಿಮಾ ತೆರೆಗೆ ಬರಲಿದೆಯಂತೆ.

ಕೊವಿಡ್​ ಕಾರಣದಿಂದ ಪಠಾಣ್​ ಸಿನಿಮಾ ಶೂಟಿಂಗ್​ ನಿಂತಿತ್ತು. ಈಗ ಶಾರುಖ್​ ಚಿತ್ರರಂಗಕ್ಕೆ ಕಾಲಿಟ್ಟು 29 ವರ್ಷ ಕಳೆದಿದೆ. ಇದೇ ವಿಶೇಷ ಸಂದರ್ಭದಂದು ಪಠಾಣ್​ ಚಿತ್ರೀಕರಣ ಆರಂಭಗೊಂಡಿದೆ. ಅಂದಹಾಗೆ, ವೃತ್ತಿಜೀವನದಲ್ಲಿ ಶಾರುಖ್​ ಇಷ್ಟು ದೊಡ್ಡ ಬ್ರೇಕ್​ ತೆಗೆದುಕೊಂಡಿದ್ದು ಇದೇ ಮೊದಲು.

ಮುಂಬೈನ ಯಶ್ ರಾಜ್​ ಸ್ಟುಡಿಯೋದಲ್ಲಿ ಪಠಾಣ್​ ಶೂಟಿಂಗ್​ ನಡೆಯುತ್ತಿದೆ. ಮುಂದಿನ 18 ದಿನಗಳ ಕಾಲ ಚಿತ್ರತಂಡ ಇಲ್ಲಿಯೇ ಬೀಡು ಬಿಡಲಿದೆ. ವಾರ್​​ ಸಿನಿಮಾ ನಿರ್ದೇಶನ ಮಾಡಿದ ಖ್ಯಾತಿ ಸಿದ್ಧಾರ್ಥ್​ ಆನಂದ್​ಗೆ ಇದೆ. ಆ್ಯಕ್ಷನ್​ ಸಿನಿಮಾ ಮಾಡುವುದರಲ್ಲಿ ಎತ್ತಿದ ಕೈ ಅವರದ್ದು. ಹೀಗಾಗಿ ಪಠಾಣ್​ ಚಿತ್ರದಲ್ಲೂ ದೊಡ್ಡ ಮಟ್ಟದಲ್ಲಿ ಆ್ಯಕ್ಷನ್​ ಇರಲಿದೆ ಎನ್ನಲಾಗುತ್ತಿದೆ.

ಇತ್ತೀಚೆಗೆ ಪಠಾಣ್​ ಚಿತ್ರತಂಡ ದುಬೈನಲ್ಲಿ ಶೂಟಿಂಗ್​ ನಡೆಸಿತ್ತು.ಇದರ ಫೋಟೋ ಹಾಗೂ ವಿಡಿಯೋಗಳು ವೈರಲ್​ ಆಗಿದ್ದವು. ಇದಲ್ಲದೆ, ಯುರೋಪ್​ ಹಾಗೂ ರಷ್ಯಾದಲ್ಲಿಯೂ ಪಠಾಣ್​ ಶೂಟಿಂಗ್​ ನಡೆಸೋಕೆ ಪ್ಲ್ಯಾನ್ ರೂಪಿಸಲಾಗಿದೆ.

ಇದನ್ನೂ ಓದಿ: ಹಲವು ವರ್ಷಗಳ ಶಾರುಖ್-ಸಲ್ಮಾನ್ ಜಗಳಕ್ಕೆ ಮದುವೆ ವಿಚಾರ ಕಾರಣ; ಕಿಂಗ್ ಖಾನ್ ಬಿಚ್ಚಿಟ್ಟ ರಹಸ್ಯ

Shah Rukh Khan: ‘ನೀವು ನಿರುದ್ಯೋಗಿ ಆಗಿಬಿಟ್ರಾ’ ಎಂದು ನೇರವಾಗಿ ಕೇಳಿದ ನೆಟ್ಟಿಗನಿಗೆ ಶಾರುಖ್​ ಖಾನ್​ ಕೊಟ್ಟ ಉತ್ತರ ಏನು?

Published On - 8:13 pm, Fri, 25 June 21

ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ