AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋತು ಸುಣ್ಣವಾಗಿರುವ ಶಾರುಖ್​ ಖಾನ್​ಗೆ ಈಗ ಸಿಗುತ್ತಿರುವ ಸಂಭಾವನೆ ಎಷ್ಟು?

‘ಜೀರೋ’ ಚಿತ್ರದ ಸೋಲಿನ ಬಳಿಕ ಮೂರು ವರ್ಷ ಸುಮ್ಮನಿದ್ದ ಶಾರುಖ್​ ಈಗ ‘ಪಠಾಣ್​’ ಚಿತ್ರದ ಶೂಟಿಂಗ್​ನಲ್ಲಿ ತೊಡಗಿಕೊಂಡಿದ್ದಾರೆ. ಈ ಸಿನಿಮಾಗಾಗಿ ಅವರು ಪಡೆಯುತ್ತಿರುವ ಸಂಭಾವನೆ ಎಷ್ಟು ಎಂಬ ಬಗ್ಗೆ ಗುಸುಗುಸು ಕೇಳಿಬರುತ್ತಿದೆ.

ಸೋತು ಸುಣ್ಣವಾಗಿರುವ ಶಾರುಖ್​ ಖಾನ್​ಗೆ ಈಗ ಸಿಗುತ್ತಿರುವ ಸಂಭಾವನೆ ಎಷ್ಟು?
ಶಾರುಖ್​ ಖಾನ್​
ಮದನ್​ ಕುಮಾರ್​
|

Updated on:Mar 28, 2021 | 9:04 AM

Share

ಶಾರುಖ್​ ಖಾನ್​ಗೆ ಭಾರತದಲ್ಲಿ ಮಾತ್ರವಲ್ಲದೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಬಾಲಿವುಡ್​ನ ಟಾಪ್​ ಹೀರೋಗಳ ಸಾಲಿನಲ್ಲಿ ಶಾರುಖ್​ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತದೆ. ಆದರೆ ಮೊದಲೆಲ್ಲ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ್ದ ಶಾರುಖ್​ಗೆ ಇತ್ತೀಚಿನ ವರ್ಷಗಳಲ್ಲಿ ಸಿಕ್ಕಿದ್ದೆಲ್ಲವೂ ಸೋಲು. ಹಾಗಾದರೆ ಕಿಂಗ್​ ಖಾನ್​ ಈಗ ಎಷ್ಟು ಸಂಭಾವನೆ ಪಡೆಯುತ್ತಿದ್ದಾರೆ?

ಒಂದು ಕಾಲದಲ್ಲಿ ಶಾರುಖ್​ ಖಾನ್​, ಆಮೀರ್​ ಖಾನ್​ ಮತ್ತು ಸಲ್ಮಾನ್​ ಖಾನ್​ ಬಾಲಿವುಡ್​ನಲ್ಲಿ ಬಹುಬೇಡಿಕೆಯ ನಟರಾಗಿ ಮಿಂಚುತ್ತಿದ್ದರು. ಆದರೆ ಈಗ ಆಮೀರ್ ಖಾನ್​ ಮತ್ತು ಶಾರುಖ್​ ಯಾಕೋ ಸ್ವಲ್ಪ ಮಂಕಾಗಿದ್ದಾರೆ. ಅದರಲ್ಲೂ ಶಾರುಖ್ ಬರೀ ಸೋಲುಗಳನ್ನೇ ಕಾಣುತ್ತಿದ್ದಾರೆ. ಏನೇ ಪ್ರಯೋಗ ಮಾಡಿದರೂ ಅವರಿಗೆ ಗೆಲುವು ಸಿಗುತ್ತಿಲ್ಲ. ಅವರು ನಟಿಸಿದ ಸಾಲು ಸಾಲು ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲಿ ಹೀನಾಯವಾಗಿ ಮಕಾಡೆ ಮಲಗಿದವು.

2014ರಲ್ಲಿ ಬಂದ ‘ಹ್ಯಾಪಿ ನ್ಯೂ ಇಯರ್’​ ಸಿನಿಮಾ ಬಳಿಕ ಶಾರುಖ್​ ಅವರ ಯಾವ ಸಿನಿಮಾಗಳೂ ಗೆದ್ದಿಲ್ಲ. ದಿಲ್​ವಾಲೆ, ಫ್ಯಾನ್​, ರಯೀಸ್​, ಜೀರೋ, ಜಬ್​ ಹ್ಯಾರಿ ಮೆಟ್​ ಸೇಜಲ್​ ಚಿತ್ರಗಳು ಸೋತು ಸುಣ್ಣವಾದವು. ಹಾಗಂತ ಶಾರುಖ್​ಗೆ ಇದ್ದ ಬೇಡಿಕೆ ಕಮ್ಮಿ ಆಗಿಲ್ಲ. ಈಗಲೂ ಅವರು ಅನೇಕ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಜೀರೋ ಚಿತ್ರದ ಸೋಲಿನ ಬಳಿಕ ಮೂರು ವರ್ಷ ಸುಮ್ಮನಿದ್ದ ಶಾರುಖ್​ ಈಗ ‘ಪಠಾಣ್​‘ ಚಿತ್ರದ ಶೂಟಿಂಗ್​ನಲ್ಲಿ ತೊಡಗಿಕೊಂಡಿದ್ದಾರೆ.

ಪಠಾಣ್​ ಚಿತ್ರಕ್ಕೆ ದೀಪಿಕಾ ಪಡುಕೋಣೆ ನಾಯಕಿ. ಜಾನ್​ ಅಬ್ರಾಹಂ ಅವರು ವಿಲನ್​ ಆಗಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಶಾರುಖ್​ ಖಾನ್​ಗೆ ಎಷ್ಟು ಸಂಭಾವನೆ ಸಿಗುತ್ತಿದೆ ಎಂಬ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಮೂಡಿದೆ. ಅದಕ್ಕುತ್ತರ ಬರೋಬ್ಬರಿ 100 ಕೋಟಿ ರೂ.! ಈ ಚಿತ್ರವನ್ನು ಆದಿತ್ಯ ಚೋಪ್ರಾ ನಿರ್ಮಾಣ ಮಾಡುತ್ತಿದ್ದು, ಬ್ಯಾಂಗ್​ ಬ್ಯಾಂಗ್​, ವಾರ್​ ಸಿನಿಮಾಗಳ ಖ್ಯಾತಿಯ ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡುತ್ತಿದ್ದಾರೆ.

ಶಾರುಖ್​ ಪದೇಪದೇ ಸೋತು ಸುಣ್ಣವಾಗಿದ್ದರೂ ಕೂಡ ಅವರಿಗೆ ಇದ್ದ ಬೇಡಿಕೆ ಕಮ್ಮಿ ಆಗಿಲ್ಲ. ಸಿಗಬೇಕಾದ ಸಂಭಾವನೆ ಮೊತ್ತವೂ ಇಳಿಕೆ ಆಗಿಲ್ಲ. ಇಂದಿಗೂ 100 ಕೋಟಿ ರೂ. ಡಿಮ್ಯಾಂಡ್​ ಮಾಡುವ ಅವರ ಕಾಲ್​ಶೀಟ್​ಗಾಗಿ ನಿರ್ಮಾಪಕರು ಕಾಯುತ್ತಿರುತ್ತಾರೆ.

ಇದನ್ನೂ ಓದಿ: ದುಬೈನಲ್ಲಿ ಶಾರುಖ್ ಖಾನ್​​ ಸಿನಿಮಾ ಶೂಟಿಂಗ್​: ಲೀಕ್​ ಆಯ್ತು ಪಠಾಣ್​ ಸಿನಿಮಾ ದೃಶ್ಯಗಳು!

Published On - 8:27 am, Sun, 28 March 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ