AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋತು ಸುಣ್ಣವಾಗಿರುವ ಶಾರುಖ್​ ಖಾನ್​ಗೆ ಈಗ ಸಿಗುತ್ತಿರುವ ಸಂಭಾವನೆ ಎಷ್ಟು?

‘ಜೀರೋ’ ಚಿತ್ರದ ಸೋಲಿನ ಬಳಿಕ ಮೂರು ವರ್ಷ ಸುಮ್ಮನಿದ್ದ ಶಾರುಖ್​ ಈಗ ‘ಪಠಾಣ್​’ ಚಿತ್ರದ ಶೂಟಿಂಗ್​ನಲ್ಲಿ ತೊಡಗಿಕೊಂಡಿದ್ದಾರೆ. ಈ ಸಿನಿಮಾಗಾಗಿ ಅವರು ಪಡೆಯುತ್ತಿರುವ ಸಂಭಾವನೆ ಎಷ್ಟು ಎಂಬ ಬಗ್ಗೆ ಗುಸುಗುಸು ಕೇಳಿಬರುತ್ತಿದೆ.

ಸೋತು ಸುಣ್ಣವಾಗಿರುವ ಶಾರುಖ್​ ಖಾನ್​ಗೆ ಈಗ ಸಿಗುತ್ತಿರುವ ಸಂಭಾವನೆ ಎಷ್ಟು?
ಶಾರುಖ್​ ಖಾನ್​
ಮದನ್​ ಕುಮಾರ್​
|

Updated on:Mar 28, 2021 | 9:04 AM

Share

ಶಾರುಖ್​ ಖಾನ್​ಗೆ ಭಾರತದಲ್ಲಿ ಮಾತ್ರವಲ್ಲದೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಬಾಲಿವುಡ್​ನ ಟಾಪ್​ ಹೀರೋಗಳ ಸಾಲಿನಲ್ಲಿ ಶಾರುಖ್​ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತದೆ. ಆದರೆ ಮೊದಲೆಲ್ಲ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ್ದ ಶಾರುಖ್​ಗೆ ಇತ್ತೀಚಿನ ವರ್ಷಗಳಲ್ಲಿ ಸಿಕ್ಕಿದ್ದೆಲ್ಲವೂ ಸೋಲು. ಹಾಗಾದರೆ ಕಿಂಗ್​ ಖಾನ್​ ಈಗ ಎಷ್ಟು ಸಂಭಾವನೆ ಪಡೆಯುತ್ತಿದ್ದಾರೆ?

ಒಂದು ಕಾಲದಲ್ಲಿ ಶಾರುಖ್​ ಖಾನ್​, ಆಮೀರ್​ ಖಾನ್​ ಮತ್ತು ಸಲ್ಮಾನ್​ ಖಾನ್​ ಬಾಲಿವುಡ್​ನಲ್ಲಿ ಬಹುಬೇಡಿಕೆಯ ನಟರಾಗಿ ಮಿಂಚುತ್ತಿದ್ದರು. ಆದರೆ ಈಗ ಆಮೀರ್ ಖಾನ್​ ಮತ್ತು ಶಾರುಖ್​ ಯಾಕೋ ಸ್ವಲ್ಪ ಮಂಕಾಗಿದ್ದಾರೆ. ಅದರಲ್ಲೂ ಶಾರುಖ್ ಬರೀ ಸೋಲುಗಳನ್ನೇ ಕಾಣುತ್ತಿದ್ದಾರೆ. ಏನೇ ಪ್ರಯೋಗ ಮಾಡಿದರೂ ಅವರಿಗೆ ಗೆಲುವು ಸಿಗುತ್ತಿಲ್ಲ. ಅವರು ನಟಿಸಿದ ಸಾಲು ಸಾಲು ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲಿ ಹೀನಾಯವಾಗಿ ಮಕಾಡೆ ಮಲಗಿದವು.

2014ರಲ್ಲಿ ಬಂದ ‘ಹ್ಯಾಪಿ ನ್ಯೂ ಇಯರ್’​ ಸಿನಿಮಾ ಬಳಿಕ ಶಾರುಖ್​ ಅವರ ಯಾವ ಸಿನಿಮಾಗಳೂ ಗೆದ್ದಿಲ್ಲ. ದಿಲ್​ವಾಲೆ, ಫ್ಯಾನ್​, ರಯೀಸ್​, ಜೀರೋ, ಜಬ್​ ಹ್ಯಾರಿ ಮೆಟ್​ ಸೇಜಲ್​ ಚಿತ್ರಗಳು ಸೋತು ಸುಣ್ಣವಾದವು. ಹಾಗಂತ ಶಾರುಖ್​ಗೆ ಇದ್ದ ಬೇಡಿಕೆ ಕಮ್ಮಿ ಆಗಿಲ್ಲ. ಈಗಲೂ ಅವರು ಅನೇಕ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಜೀರೋ ಚಿತ್ರದ ಸೋಲಿನ ಬಳಿಕ ಮೂರು ವರ್ಷ ಸುಮ್ಮನಿದ್ದ ಶಾರುಖ್​ ಈಗ ‘ಪಠಾಣ್​‘ ಚಿತ್ರದ ಶೂಟಿಂಗ್​ನಲ್ಲಿ ತೊಡಗಿಕೊಂಡಿದ್ದಾರೆ.

ಪಠಾಣ್​ ಚಿತ್ರಕ್ಕೆ ದೀಪಿಕಾ ಪಡುಕೋಣೆ ನಾಯಕಿ. ಜಾನ್​ ಅಬ್ರಾಹಂ ಅವರು ವಿಲನ್​ ಆಗಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಶಾರುಖ್​ ಖಾನ್​ಗೆ ಎಷ್ಟು ಸಂಭಾವನೆ ಸಿಗುತ್ತಿದೆ ಎಂಬ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಮೂಡಿದೆ. ಅದಕ್ಕುತ್ತರ ಬರೋಬ್ಬರಿ 100 ಕೋಟಿ ರೂ.! ಈ ಚಿತ್ರವನ್ನು ಆದಿತ್ಯ ಚೋಪ್ರಾ ನಿರ್ಮಾಣ ಮಾಡುತ್ತಿದ್ದು, ಬ್ಯಾಂಗ್​ ಬ್ಯಾಂಗ್​, ವಾರ್​ ಸಿನಿಮಾಗಳ ಖ್ಯಾತಿಯ ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡುತ್ತಿದ್ದಾರೆ.

ಶಾರುಖ್​ ಪದೇಪದೇ ಸೋತು ಸುಣ್ಣವಾಗಿದ್ದರೂ ಕೂಡ ಅವರಿಗೆ ಇದ್ದ ಬೇಡಿಕೆ ಕಮ್ಮಿ ಆಗಿಲ್ಲ. ಸಿಗಬೇಕಾದ ಸಂಭಾವನೆ ಮೊತ್ತವೂ ಇಳಿಕೆ ಆಗಿಲ್ಲ. ಇಂದಿಗೂ 100 ಕೋಟಿ ರೂ. ಡಿಮ್ಯಾಂಡ್​ ಮಾಡುವ ಅವರ ಕಾಲ್​ಶೀಟ್​ಗಾಗಿ ನಿರ್ಮಾಪಕರು ಕಾಯುತ್ತಿರುತ್ತಾರೆ.

ಇದನ್ನೂ ಓದಿ: ದುಬೈನಲ್ಲಿ ಶಾರುಖ್ ಖಾನ್​​ ಸಿನಿಮಾ ಶೂಟಿಂಗ್​: ಲೀಕ್​ ಆಯ್ತು ಪಠಾಣ್​ ಸಿನಿಮಾ ದೃಶ್ಯಗಳು!

Published On - 8:27 am, Sun, 28 March 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ