AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟೈಮ್​ಗೆ​ ಸರಿಯಾಗಿ ಶೂಟಿಂಗ್​ಗೆ ಬರ್ತೀನಿ, ಪ್ಲೀಸ್​ ಚಾನ್ಸ್​ ಕೊಡಿ’; ನಿರ್ಮಾಪಕಿ ಬಳಿ ಶಾರುಖ್​ ಮನವಿ

Shah Rukh Khan: ‘ಮುಂದಿನ ಸಿನಿಮಾದಲ್ಲಿ ನನಗೊಂದು ಚಿಕ್ಕ ಅವಕಾಶ ಕೊಡಿ. ಸರಿಯಾದ ಸಮಯಕ್ಕೆ ನಾನು ಶೂಟಿಂಗ್​ಗೆ ಬರುತ್ತೇನೆ. ತುಂಬ ಪ್ರೊಫೆಷನಲ್​ ಆಗಿ ಇರುತ್ತೇನೆ. ಈ ಬಗ್ಗೆ ಪ್ರಾಮಿಸ್​ ಮಾಡುತ್ತೇನೆ’ ಎಂದು ಶಾರುಖ್​ ಖಾನ್ ಮನವಿ ಮಾಡಿದ್ದಾರೆ.

‘ಟೈಮ್​ಗೆ​ ಸರಿಯಾಗಿ ಶೂಟಿಂಗ್​ಗೆ ಬರ್ತೀನಿ, ಪ್ಲೀಸ್​ ಚಾನ್ಸ್​ ಕೊಡಿ’; ನಿರ್ಮಾಪಕಿ ಬಳಿ ಶಾರುಖ್​ ಮನವಿ
ಶಾರುಖ್​ ಖಾನ್​
TV9 Web
| Edited By: |

Updated on: Jul 04, 2021 | 4:02 PM

Share

ಬಾಲಿವುಡ್​ನಲ್ಲಿ ಸದ್ಯ ಶಾರುಖ್​ ಖಾನ್​ ಸ್ಥಿತಿ ಯಾವ ರೀತಿ ಎಂಬುದು ಎಲ್ಲರಿಗೂ ಗೊತ್ತು. ಇತ್ತೀಚಿನ ವರ್ಷಗಳಲ್ಲಿ ಅವರು ನಟಿಸಿದ ಯಾವ ಸಿನಿಮಾ ಕೂಡ ಗೆದ್ದಿಲ್ಲ. ಏನೇ ಪ್ರಯತ್ನಪಟ್ಟರೂ ವಿಜಯಲಕ್ಷ್ಮೀ ಅವರ ಕಡೆಗೆ ಸುಳಿಯುತ್ತಿಲ್ಲ. ಹಾಗಾಗಿ, ‘ಜೀರೋ’ ಸಿನಿಮಾ ಸೋತ ಬಳಿಕ ಅವರು ದೀರ್ಘ ಗ್ಯಾಪ್​ ಪಡೆದುಕೊಂಡಿದ್ದರು. ಈಗ ‘ಪಠಾಣ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಎಷ್ಟೇ ಬಾರಿ ಸೋತಿದ್ದರೂ ಕೂಡ ಅವರ ಕಾಲ್​ಶೀಟ್​ಗಾಗಿ ನಿರ್ಮಾಪಕರು ಮುಗಿಬೀಳುವುದನ್ನು ನಿಲ್ಲಿಸಿಲ್ಲ. ಆದರೆ ಅವರೆಲ್ಲರನ್ನೂ ಬಿಟ್ಟು, ಓರ್ವ ನಟಿಯ ಬಳಿ ಶಾರುಖ್​ ಅವಕಾಶ ಕೇಳಿದ್ದಾರೆ.

ಶಾರುಖ್​ ಹೀಗೆ ಅವಕಾಶ ಕೇಳಿರುವುದು ಆಲಿಯಾ ಭಟ್​ ಬಳಿ. ಇದು ನಿಜವೋ ಅಥವಾ ತಮಾಷೆಯೋ ಅಂತ ನೀವೇ ನಿರ್ಧರಿಸಿ. ಅಸಲಿಗೆ ನಡೆದ ಘಟನೆ ಏನೆಂದರೆ, ಈಗ ಆಲಿಯಾ ಭಟ್​ ನಿರ್ಮಾಪಕಿ ಕೂಡ ಆಗಿದ್ದಾರೆ. ‘ಡಾರ್ಲಿಂಗ್ಸ್’ ಶೀರ್ಷಿಕೆಯ ಹೊಸ ಚಿತ್ರಕ್ಕೆ ಅವರು ಬಂಡವಾಳ ಹೂಡುವುದರ ಜೊತೆಗೆ ನಟಿಸುತ್ತಿದ್ದಾರೆ ಕೂಡ. ಆ ಚಿತ್ರದ ಮೊದಲ ದಿನದ ಚಿತ್ರೀಕರಣದ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅದಕ್ಕೆ ಕಮೆಂಟ್​ ಮಾಡಿರುವ ಶಾರುಖ್​ ಅವರು, ಆಲಿಯಾ ಬಳಿ ಬಹಿರಂಗವಾಗಿಯೇ ಅವಕಾಶ ಕೇಳಿದ್ದಾರೆ.

‘ಈ ಸಿನಿಮಾ ಆದ ಬಳಿಕ ನಿಮ್ಮ ಹೋಮ್​ ಪ್ರೊಡಕ್ಷನ್​ನಲ್ಲಿ ಬರುವ ಮುಂದಿನ ಸಿನಿಮಾದಲ್ಲಿ ನನಗೊಂದು ಚಿಕ್ಕ ಅವಕಾಶ ಕೊಡಿ. ಸರಿಯಾದ ಸಮಯಕ್ಕೆ ನಾನು ಶೂಟಿಂಗ್​ಗೆ ಬರುತ್ತೇನೆ. ತುಂಬ ಪ್ರೊಫೆಷನಲ್​ ಆಗಿ ಇರುತ್ತೇನೆ. ಈ ಬಗ್ಗೆ ಪ್ರಾಮಿಸ್​ ಮಾಡುತ್ತೇನೆ’ ಎಂದು ಶಾರುಖ್​ ಖಾನ್​ ಟ್ವೀಟ್​ ಮಾಡಿದ್ದಾರೆ. ಇದು ಸದ್ಯ ವೈರಲ್​ ಆಗುತ್ತಿದೆ. ಆಲಿಯಾ ನಿರ್ಮಿಸುತ್ತಿರುವ ‘ಡಾರ್ಲಿಂಗ್ಸ್​’ ಚಿತ್ರಕ್ಕೆ ಶಾರುಖ್​ ಪತ್ನಿ ಗೌರಿ ಖಾನ್​ ಕೂಡ ನಿರ್ಮಾಪಕಿ ಎಂಬುದು ಗಮನಿಸಬೇಕಾದ ಅಂಶ.

ಶಾರುಖ್​ ಮಾಡಿದ ಟ್ವೀಟ್​ಗೆ ಆಲಿಯಾ ಕೂಡಲೇ ಉತ್ತರ ನೀಡಿದ್ದಾರೆ. ‘ಹಹ್ಹಹ್ಹ.. ಇದಕ್ಕಿಂತ ಹೆಚ್ಚು ನಾನು ಏನ್ನನ್ನೂ ಕೇಳಲು ಸಾಧ್ಯವಿಲ್ಲ. ಆಯಿತು, ಒಪ್ಪಂದಕ್ಕೆ ಸಹಿ ಮಾಡಿದ್ದೇನೆ. ಲವ್​ ಯೂ ಮೈ ಫೇವರಿಟ್​’ ಎಂದು ಆಲಿಯಾ ಪ್ರತಿಕ್ರಿಯಿಸಿದ್ದಾರೆ. ಇಬ್ಬರ ನಡುವಿನ ಈ ಟ್ವೀಟ್​ ಮಾತುಕತೆ ಅಭಿಮಾನಿಗಳ ಗಮನ ಸೆಳೆದಿದೆ. 2016ರಲ್ಲಿ ಗೌರಿ ಶಿಂದೆ ನಿರ್ದೇಶನ ಮಾಡಿದ್ದ ‘ಡಿಯರ್​ ಜಿಂದಗಿ’ ಸಿನಿಮಾದಲ್ಲಿ ಶಾರುಖ್​ ಮತ್ತು ಆಲಿಯಾ ಜೊತೆಯಾಗಿ ನಟಿಸಿದ್ದರು.

ಇದನ್ನೂ ಓದಿ:

Shah Rukh Khan: ‘ನೀವು ನಿರುದ್ಯೋಗಿ ಆಗಿಬಿಟ್ರಾ’ ಎಂದು ನೇರವಾಗಿ ಕೇಳಿದ ನೆಟ್ಟಿಗನಿಗೆ ಶಾರುಖ್​ ಖಾನ್​ ಕೊಟ್ಟ ಉತ್ತರ ಏನು?

Follow Us
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ