‘ಗುಂಟೂರು ಖಾರಂ’ ಸಿನಿಮಾ ನೋಡಲಿರುವ ಶಾರುಖ್​ ಖಾನ್​; ಮಹೇಶ್​ ಬಾಬು ಫ್ಯಾನ್ಸ್​ಗೆ ಖುಷಿ

ಶಾರುಖ್​ ಖಾನ್​ ಮತ್ತು ಮಹೇಶ್​ ಬಾಬು ನಡುವೆ ಸ್ನೇಹ ಇದೆ. ಆ ಕಾರಣದಿಂದ ಶಾರುಖ್​ ಖಾನ್​ ಅವರು ‘ಗುಂಟೂರು ಖಾರಂ’ ಸಿನಿಮಾ ವೀಕ್ಷಿಸುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಅವರು ಎಕ್ಸ್​​ನಲ್ಲಿ ಪೋಸ್ಟ್​ ಮಾಡಿದ್ದಾರೆ. ಶಾರುಖ್​ ಖಾನ್​ ಅವರು ಈ ಸಿನಿಮಾ ಬಗ್ಗೆ ಟ್ವೀಟ್​ ಮಾಡಿರುವುದು ಮಹೇಶ್ ಬಾಬು ಅಭಿಮಾನಿಗಳಿಗೆ ಖುಷಿ ನೀಡಿದೆ.

‘ಗುಂಟೂರು ಖಾರಂ’ ಸಿನಿಮಾ ನೋಡಲಿರುವ ಶಾರುಖ್​ ಖಾನ್​; ಮಹೇಶ್​ ಬಾಬು ಫ್ಯಾನ್ಸ್​ಗೆ ಖುಷಿ
ಶಾರುಖ್​ ಖಾನ್​, ಮಹೇಶ್​ ಬಾಬು
Follow us
|

Updated on: Jan 14, 2024 | 7:16 AM

ಟಾಲಿವುಡ್​ ‘ಪ್ರಿನ್ಸ್​’ ಮಹೇಶ್​ ಬಾಬು (Mahesh Babu) ನಟನೆಯ ‘ಗುಂಟೂರು ಖಾರಂ’ ಸಿನಿಮಾ ತೆರೆಕಂಡಿದೆ. ಈ ಚಿತ್ರದಲ್ಲಿ ಮಹೇಶ್​ ಬಾಬುಗೆ ಜೊತೆಯಾಗಿ ಶ್ರೀಲೀಲಾ ನಟಿಸಿದ್ದಾರೆ. ಈ ಚಿತ್ರಕ್ಕಾಗಿ ಫ್ಯಾನ್ಸ್​ ಕಾತರದಿಂದ ಕಾದಿದ್ದರು. ಜನವರಿ 12ರಂದು ಬಿಡುಗಡೆಯಾದ ಈ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ. ಅಭಿಮಾನಿಗಳು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ‘ಗುಂಟೂರು ಖಾರಂ’ ಸಿನಿಮಾ ಬಗ್ಗೆ ಆಸಕ್ತಿ ತೋರಿಸಿದ್ದಾರೆ. ಈಗ ಶಾರುಖ್​ ಖಾನ್​ (Shah Rukh Khan) ಕೂಡ ಈ ಸಿನಿಮಾ ವೀಕ್ಷಿಸಲು ಆಸಕ್ತಿ ತೋರಿಸಿದ್ದಾರೆ. ಶಾರುಖ್​ ಖಾನ್​ ಮತ್ತು ಮಹೇಶ್​ ಬಾಬು ನಡುವೆ ಸ್ನೇಹ ಇದೆ. ಆ ಕಾರಣದಿಂದ ಶಾರುಖ್​ ಖಾನ್​ ಅವರು ‘ಗುಂಟೂರು ಖಾರಂ’ (Guntur Kaaram) ಸಿನಿಮಾ ವೀಕ್ಷಿಸುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಶಾರುಖ್​ ಖಾನ್​ ಅವರು ಎಕ್ಸ್​​ನಲ್ಲಿ ಪೋಸ್ಟ್​ ಮಾಡಿದ್ದಾರೆ. ‘ಗೆಳೆಯ ಮಹೇಶ್​ ಬಾಬು ಅವರೇ.. ಗುಂಟೂರು ಖಾರಂ ನೋಡಲು ಕಾದಿದ್ದೇನೆ. ಮಾಸ್​, ಆ್ಯಕ್ಷನ್​, ಎಮೋಷನ್​ ಪಯಣದ ರೀತಿ ಇದೆ. ಬೆಂಕಿ..’ ಎಂದು ಶಾರುಖ್​ ಖಾನ್​ ಬರೆದುಕೊಂಡಿದ್ದಾರೆ. ಈ ವರ್ಷ ಸಂಕ್ರಾಂತಿ ಹಬ್ಬಕ್ಕೆ ಹಲವು ಸಿನಿಮಾಗಳು ಬಿಡುಗಡೆ ಆಗಿವೆ. ಸ್ಟಾರ್​ ನಟರ ಸಿನಿಮಾಗಳು ಪರಸ್ಪರ ಪೈಪೋಟಿಗೆ ಬಿದ್ದಿವೆ. ಹಾಗಾಗಿ ಬಾಕ್ಸ್​ ಆಫೀಸ್​ನಲ್ಲಿ ಸ್ಪರ್ಧೆ ಜೋರಾಗಿದೆ. ಅವುಗಳ ನಡುವೆ ‘ಗುಂಟೂರು ಖಾರಂ’ ಸಿನಿಮಾ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದೆ. ಈ ಸಂದರ್ಭದಲ್ಲಿ ಶಾರುಖ್​ ಖಾನ್​ ಅವರು ಈ ಸಿನಿಮಾ ಬಗ್ಗೆ ಟ್ವೀಟ್​ ಮಾಡಿರುವುದು ಮಹೇಶ್ ಬಾಬು ಅಭಿಮಾನಿಗಳಿಗೆ ಖುಷಿ ಆಗಿದೆ.

ಇದನ್ನೂ ಓದಿ: ‘ನಾನು ಕೆಟ್ಟ ವ್ಯಕ್ತಿಯ ಪಾತ್ರ ಮಾಡಿದರೆ..’; ‘ಅನಿಮಲ್​’ ಚಿತ್ರಕ್ಕೆ ಕುಟುಕಿದ್ರಾ ಶಾರುಖ್​ ಖಾನ್​?

ಈ ಹಿಂದೆ ಶಾರುಖ್​ ಖಾನ್​ ನಟನೆಯ ‘ಜವಾನ್​’ ಸಿನಿಮಾ ಬಿಡುಗಡೆ ಆದಾಗ ಮಹೇಶ್​ ಬಾಬು ಅವರು ಟ್ವೀಟ್​ ಮಾಡಿದ್ದರು. ‘ಜವಾನ್​ ಒಂದು ಬ್ಲಾಕ್​ ಬಸ್ಟರ್​ ಸಿನಿಮಾ. ನಿರ್ದೇಶಕ ಅಟ್ಲಿ ಅವರು ಕಿಂಗ್​ ಜೊತೆ ಸೇರಿಕೊಂಡು ಕಿಂಗ್​ ಸೈಜ್​ ಸಿನಿಮಾ ನೀಡಿದ್ದಾರೆ. ಇದು ಅವರ ವೃತ್ತಿಜೀವನದ ಬೆಸ್ಟ್​ ಆ್ಯಕ್ಷನ್​ ಸಿನಿಮಾ. ಶಾರುಖ್​ ಖಾನ್​ ಅವರಿಗೆ ಯಾರೂ ಸಾಟಿ ಇಲ್ಲ’ ಎಂದು ಅವರು ಪೋಸ್ಟ್​ ಮಾಡಿದ್ದರು.

ಇದನ್ನೂ ಓದಿ:  ‘ಗುಂಟೂರು ಖಾರಂ’, ‘ಹನುಮಾನ್’, ‘ಕ್ಯಾಪ್ಟನ್ ಮಿಲ್ಲರ್’; ರೇಟಿಂಗ್​ನಲ್ಲಿ ಗೆದ್ದವರು ಯಾರು?

‘ಗುಂಟೂರು ಖಾರಂ’ ಸಿನಿಮಾಗೆ ತ್ರಿವಿಕ್ರಂ ಶ್ರೀನಿವಾಸ್​ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಮೊದಲ ದಿನವೇ ವಿಶ್ವಾದ್ಯಂತ 94 ಕೋಟಿ ರೂಪಾಯಿ ಕಲೆಕ್ಷನ್​ ಮಾಡುವ ಮೂಲಕ ದಾಖಲೆ ಬರೆದಿದೆ ಎಂದು ಸ್ವತಃ ಚಿತ್ರತಂಡದವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಸಿನಿಮಾಗೆ ಥಮನ್​ ಸಂಗೀತ ನೀಡಿದ್ದಾರೆ. ಮಹೇಶ್ ಬಾಬು, ಶ್ರೀಲೀಲಾ ಜೊತೆ ಮೀನಾಕ್ಷಿ ಚೌಧರಿ, ರಮ್ಯಾ ಕೃಷ್ಣನ್​ ಮುಂತಾದವರು ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!