‘ಗುಂಟೂರು ಖಾರಂ’ ಸಿನಿಮಾ ನೋಡಲಿರುವ ಶಾರುಖ್​ ಖಾನ್​; ಮಹೇಶ್​ ಬಾಬು ಫ್ಯಾನ್ಸ್​ಗೆ ಖುಷಿ

|

Updated on: Jan 14, 2024 | 7:16 AM

ಶಾರುಖ್​ ಖಾನ್​ ಮತ್ತು ಮಹೇಶ್​ ಬಾಬು ನಡುವೆ ಸ್ನೇಹ ಇದೆ. ಆ ಕಾರಣದಿಂದ ಶಾರುಖ್​ ಖಾನ್​ ಅವರು ‘ಗುಂಟೂರು ಖಾರಂ’ ಸಿನಿಮಾ ವೀಕ್ಷಿಸುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಅವರು ಎಕ್ಸ್​​ನಲ್ಲಿ ಪೋಸ್ಟ್​ ಮಾಡಿದ್ದಾರೆ. ಶಾರುಖ್​ ಖಾನ್​ ಅವರು ಈ ಸಿನಿಮಾ ಬಗ್ಗೆ ಟ್ವೀಟ್​ ಮಾಡಿರುವುದು ಮಹೇಶ್ ಬಾಬು ಅಭಿಮಾನಿಗಳಿಗೆ ಖುಷಿ ನೀಡಿದೆ.

‘ಗುಂಟೂರು ಖಾರಂ’ ಸಿನಿಮಾ ನೋಡಲಿರುವ ಶಾರುಖ್​ ಖಾನ್​; ಮಹೇಶ್​ ಬಾಬು ಫ್ಯಾನ್ಸ್​ಗೆ ಖುಷಿ
ಶಾರುಖ್​ ಖಾನ್​, ಮಹೇಶ್​ ಬಾಬು
Follow us on

ಟಾಲಿವುಡ್​ ‘ಪ್ರಿನ್ಸ್​’ ಮಹೇಶ್​ ಬಾಬು (Mahesh Babu) ನಟನೆಯ ‘ಗುಂಟೂರು ಖಾರಂ’ ಸಿನಿಮಾ ತೆರೆಕಂಡಿದೆ. ಈ ಚಿತ್ರದಲ್ಲಿ ಮಹೇಶ್​ ಬಾಬುಗೆ ಜೊತೆಯಾಗಿ ಶ್ರೀಲೀಲಾ ನಟಿಸಿದ್ದಾರೆ. ಈ ಚಿತ್ರಕ್ಕಾಗಿ ಫ್ಯಾನ್ಸ್​ ಕಾತರದಿಂದ ಕಾದಿದ್ದರು. ಜನವರಿ 12ರಂದು ಬಿಡುಗಡೆಯಾದ ಈ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ. ಅಭಿಮಾನಿಗಳು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ‘ಗುಂಟೂರು ಖಾರಂ’ ಸಿನಿಮಾ ಬಗ್ಗೆ ಆಸಕ್ತಿ ತೋರಿಸಿದ್ದಾರೆ. ಈಗ ಶಾರುಖ್​ ಖಾನ್​ (Shah Rukh Khan) ಕೂಡ ಈ ಸಿನಿಮಾ ವೀಕ್ಷಿಸಲು ಆಸಕ್ತಿ ತೋರಿಸಿದ್ದಾರೆ. ಶಾರುಖ್​ ಖಾನ್​ ಮತ್ತು ಮಹೇಶ್​ ಬಾಬು ನಡುವೆ ಸ್ನೇಹ ಇದೆ. ಆ ಕಾರಣದಿಂದ ಶಾರುಖ್​ ಖಾನ್​ ಅವರು ‘ಗುಂಟೂರು ಖಾರಂ’ (Guntur Kaaram) ಸಿನಿಮಾ ವೀಕ್ಷಿಸುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಶಾರುಖ್​ ಖಾನ್​ ಅವರು ಎಕ್ಸ್​​ನಲ್ಲಿ ಪೋಸ್ಟ್​ ಮಾಡಿದ್ದಾರೆ. ‘ಗೆಳೆಯ ಮಹೇಶ್​ ಬಾಬು ಅವರೇ.. ಗುಂಟೂರು ಖಾರಂ ನೋಡಲು ಕಾದಿದ್ದೇನೆ. ಮಾಸ್​, ಆ್ಯಕ್ಷನ್​, ಎಮೋಷನ್​ ಪಯಣದ ರೀತಿ ಇದೆ. ಬೆಂಕಿ..’ ಎಂದು ಶಾರುಖ್​ ಖಾನ್​ ಬರೆದುಕೊಂಡಿದ್ದಾರೆ. ಈ ವರ್ಷ ಸಂಕ್ರಾಂತಿ ಹಬ್ಬಕ್ಕೆ ಹಲವು ಸಿನಿಮಾಗಳು ಬಿಡುಗಡೆ ಆಗಿವೆ. ಸ್ಟಾರ್​ ನಟರ ಸಿನಿಮಾಗಳು ಪರಸ್ಪರ ಪೈಪೋಟಿಗೆ ಬಿದ್ದಿವೆ. ಹಾಗಾಗಿ ಬಾಕ್ಸ್​ ಆಫೀಸ್​ನಲ್ಲಿ ಸ್ಪರ್ಧೆ ಜೋರಾಗಿದೆ. ಅವುಗಳ ನಡುವೆ ‘ಗುಂಟೂರು ಖಾರಂ’ ಸಿನಿಮಾ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದೆ. ಈ ಸಂದರ್ಭದಲ್ಲಿ ಶಾರುಖ್​ ಖಾನ್​ ಅವರು ಈ ಸಿನಿಮಾ ಬಗ್ಗೆ ಟ್ವೀಟ್​ ಮಾಡಿರುವುದು ಮಹೇಶ್ ಬಾಬು ಅಭಿಮಾನಿಗಳಿಗೆ ಖುಷಿ ಆಗಿದೆ.

ಇದನ್ನೂ ಓದಿ: ‘ನಾನು ಕೆಟ್ಟ ವ್ಯಕ್ತಿಯ ಪಾತ್ರ ಮಾಡಿದರೆ..’; ‘ಅನಿಮಲ್​’ ಚಿತ್ರಕ್ಕೆ ಕುಟುಕಿದ್ರಾ ಶಾರುಖ್​ ಖಾನ್​?

ಈ ಹಿಂದೆ ಶಾರುಖ್​ ಖಾನ್​ ನಟನೆಯ ‘ಜವಾನ್​’ ಸಿನಿಮಾ ಬಿಡುಗಡೆ ಆದಾಗ ಮಹೇಶ್​ ಬಾಬು ಅವರು ಟ್ವೀಟ್​ ಮಾಡಿದ್ದರು. ‘ಜವಾನ್​ ಒಂದು ಬ್ಲಾಕ್​ ಬಸ್ಟರ್​ ಸಿನಿಮಾ. ನಿರ್ದೇಶಕ ಅಟ್ಲಿ ಅವರು ಕಿಂಗ್​ ಜೊತೆ ಸೇರಿಕೊಂಡು ಕಿಂಗ್​ ಸೈಜ್​ ಸಿನಿಮಾ ನೀಡಿದ್ದಾರೆ. ಇದು ಅವರ ವೃತ್ತಿಜೀವನದ ಬೆಸ್ಟ್​ ಆ್ಯಕ್ಷನ್​ ಸಿನಿಮಾ. ಶಾರುಖ್​ ಖಾನ್​ ಅವರಿಗೆ ಯಾರೂ ಸಾಟಿ ಇಲ್ಲ’ ಎಂದು ಅವರು ಪೋಸ್ಟ್​ ಮಾಡಿದ್ದರು.

ಇದನ್ನೂ ಓದಿ:  ‘ಗುಂಟೂರು ಖಾರಂ’, ‘ಹನುಮಾನ್’, ‘ಕ್ಯಾಪ್ಟನ್ ಮಿಲ್ಲರ್’; ರೇಟಿಂಗ್​ನಲ್ಲಿ ಗೆದ್ದವರು ಯಾರು?

‘ಗುಂಟೂರು ಖಾರಂ’ ಸಿನಿಮಾಗೆ ತ್ರಿವಿಕ್ರಂ ಶ್ರೀನಿವಾಸ್​ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಮೊದಲ ದಿನವೇ ವಿಶ್ವಾದ್ಯಂತ 94 ಕೋಟಿ ರೂಪಾಯಿ ಕಲೆಕ್ಷನ್​ ಮಾಡುವ ಮೂಲಕ ದಾಖಲೆ ಬರೆದಿದೆ ಎಂದು ಸ್ವತಃ ಚಿತ್ರತಂಡದವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಸಿನಿಮಾಗೆ ಥಮನ್​ ಸಂಗೀತ ನೀಡಿದ್ದಾರೆ. ಮಹೇಶ್ ಬಾಬು, ಶ್ರೀಲೀಲಾ ಜೊತೆ ಮೀನಾಕ್ಷಿ ಚೌಧರಿ, ರಮ್ಯಾ ಕೃಷ್ಣನ್​ ಮುಂತಾದವರು ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ