AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಖಾನ್​ ಬಗ್ಗೆ ಹರಿದಾಡಿದ್ದ ಸುದ್ದಿ ಸುಳ್ಳು; ಆದರೂ ಬೇಸರಗೊಂಡ ಫ್ಯಾನ್ಸ್​

ಈಗ ಶಾರುಖ್​ ಖಾನ್​ ಬಗ್ಗೆ ಹರಿದಾಡಿದ್ದ ವದಂತಿಗೆ ಚಿತ್ರತಂಡದಿಂದ ಸ್ಪಷ್ಟನೆ ಸಿಕ್ಕಿದೆ. ಇದನ್ನು ಕೇಳಿ ಅಭಿಮಾನಿಗಳು ಸಾಕಷ್ಟು ಬೇಸರ ಮಾಡಿಕೊಂಡಿದ್ದಾರೆ.

ಶಾರುಖ್​ ಖಾನ್​ ಬಗ್ಗೆ ಹರಿದಾಡಿದ್ದ ಸುದ್ದಿ ಸುಳ್ಳು; ಆದರೂ ಬೇಸರಗೊಂಡ ಫ್ಯಾನ್ಸ್​
ಶಾರುಖ್​ ಖಾನ್​
TV9 Web
| Edited By: |

Updated on: Jul 18, 2021 | 7:43 PM

Share

ಚಿತ್ರರಂಗದಲ್ಲಿ ನಟ-ನಟಿಯರ ಬಗ್ಗೆ ಸಾಕಷ್ಟು ವದಂತಿಗಳು ಹುಟ್ಟಿಕೊಳ್ಳುತ್ತವೆ. ಇದರಲ್ಲಿ ಬಹುತೇಕವು ಫೇಕ್​ ಆದರೆ, ಇನ್ನೂ ಕೆಲವು ನಿಜವಾಗಿರುತ್ತದೆ. ಈಗ ಶಾರುಖ್​ ಖಾನ್​ ಬಗ್ಗೆ ಹರಿದಾಡಿದ್ದ ವದಂತಿಗೆ ಚಿತ್ರತಂಡದಿಂದ ಸ್ಪಷ್ಟನೆ ಸಿಕ್ಕಿದೆ. ಇದನ್ನು ಕೇಳಿ ಅಭಿಮಾನಿಗಳು ಸಾಕಷ್ಟು ಬೇಸರ ಮಾಡಿಕೊಂಡಿದ್ದಾರೆ. ಅಷ್ಟಕ್ಕೂ ಅವರ ಬಗ್ಗೆ ಹರಿದಾಡಿದ ವದಂತಿ ಏನು ಎನ್ನುವುದಕ್ಕೆ ಇಲ್ಲಿದೆ ಉತ್ತರ.

ಸಿದ್ಧಾರ್ಥ್​ ಮಲ್ಹೋತ್ರ ನಟನೆಯ ‘ಶೇರ್​ಷಾ’ ಸಿನಿಮಾದಲ್ಲಿ ಶಾರುಖ್​ ಖಾನ್​ ನಟಿಸಲಿದ್ದಾರೆ ಎನ್ನುವ ವದಂತಿ ಹರಿದಾಡಿತ್ತು. ಶಾರುಖ್​ ಪಾತ್ರದ ಬಗ್ಗೆಯೂ ಒಂದಷ್ಟು ವಿಚಾರಗಳು ಹುಟ್ಟಿಕೊಂಡಿದ್ದವು. ಆದರೆ, ಅಸಲಿಗೆ ಶಾರುಖ್​ ಖಾನ್​ ಈ ಸಿನಿಮಾದಲ್ಲಿ ನಟಿಸುತ್ತಲೇ ಇಲ್ಲ. ಈ ವಿಚಾರ ಕೇಳಿದ ಅಭಿಮಾನಿಗಳು ಸಾಕಷ್ಟು ಬೇಸರಗೊಂಡಿದ್ದಾರೆ.

ಕರಣ್​ ಜೋಹರ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಬಗ್ಗೆ ಕರಣ್​ ಕಡೆಯಿಂದಲೇ ಈಗ ಸ್ಪಷ್ಟನೆ ಸಿಕ್ಕಿದೆ. ಶಾರುಖ್​ ಖಾನ್ ಈ ಸಿನಿಮಾದಲ್ಲಿ ಯಾವುದೇ ಅತಿಥಿ ಪಾತ್ರದಲ್ಲಿ ನಟಿಸುತ್ತಿಲ್ಲ ಎಂದು ಹೇಳಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳಿಗೆ ಕೊಂಚ ಬೇಸರವಾಗಿದ್ದಂತೂ ನಿಜ.

ಜುಲೈ 16ರಂದು ಸಿನಿಮಾದ ಟ್ರೇಲರ್​ ರಿಲೀಸ್​ ಆಗುತ್ತಿದೆ. ಸ್ವಾತಂತ್ರ್ಯೋತ್ಸವದ ನಿಮಿತ್ತ ಸಿನಿಮಾ ಆಗಸ್ಟ್​ 12ರಂದು ತೆರೆಗೆ ಬರುತ್ತಿದೆ. ಅಂದಹಾಗೆ ಈ ಸಿನಿಮಾ ಸ್ವತಂತ್ರ್ಯ ದಿನಾಚರಣೆ ಪ್ರಯುಕ್ತ ರಿಲೀಸ್​ ಆಗುತ್ತಿರುವುದಕ್ಕೂ ಒಂದು ಕಾರಣವಿದೆ. ಕಾರ್ಗಿಲ್​ ವಾರ್​ನಲ್ಲಿ ಹುತಾತ್ಮರಾದ ಕ್ಯಾಪ್ಟನ್ ವಿಕ್ರಮ್​ ಬಾತ್ರ ಬಗ್ಗೆ ಈ ಸಿನಿಮಾ ಇದೆ. ವಿಕ್ರಮ್​ ಪಾತ್ರದಲ್ಲಿ ಸಿದ್ಧಾರ್ಥ್​ ನಟಿಸುತ್ತಿದ್ದಾರೆ. ಕಿಯಾರಾ ಅಡ್ವಾಣಿ ಈ ಸಿನಿಮಾದಲ್ಲಿ ಹೀರೋಯಿನ್​ ಆಗಿ ಕಾಣಿಸಿಕೊಂಡಿದ್ದಾರೆ.

ಶಾರುಖ್​ ಖಾನ್​ ಪಠಾಣ್​ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ‘ಜೀರೋ’ ಸಿನಿಮಾ ಸೋತ ನಂತರದಲ್ಲಿ ಶಾರುಖ್​ ಕೈಗೆತ್ತಿಕೊಂಡ ಮೊದಲ ಸಿನಿಮಾ ಇದಾಗಿದೆ. ಹೀಗಾಗಿ ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಅಲ್ಲದೆ, ಈ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್​ ಇರಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ಟೈಮ್​ಗೆ​ ಸರಿಯಾಗಿ ಶೂಟಿಂಗ್​ಗೆ ಬರ್ತೀನಿ, ಪ್ಲೀಸ್​ ಚಾನ್ಸ್​ ಕೊಡಿ’; ನಿರ್ಮಾಪಕಿ ಬಳಿ ಶಾರುಖ್​ ಮನವಿ

ಸೆಲೆಬ್ರಿಟಿ ಬಾಡಿಗಾರ್ಡ್​ ಸಂಬಳ ಎಷ್ಟು? ಶಾರುಖ್​, ಸಲ್ಲು, ಕೊಯ್ಲಿ ಕೊಡ್ತಾರೆ ಕೋಟಿ ಕೋಟಿ ಮೊತ್ತ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್