AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜವಾನ್’ ಆಡಿಯೋ ಲಾಂಚ್: ಅದ್ಧೂರಿ ವೇದಿಕೆಯಲ್ಲಿ ಮಿಂಚು ಹರಿಸಿದ ಶಾರುಖ್ ಖಾನ್

Jawan: ಶಾರುಖ್ ಖಾನ್ ನಟನೆಯ 'ಜವಾನ್' ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮ ಚೆನ್ನೈನಲ್ಲಿ ಅದ್ಧೂರಿಯಾಗಿ ನೆರವೇರಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾರುಖ್ ಖಾನ್, ಸಿನಿಮಾಕ್ಕೆ ಕೆಲಸ ಮಾಡಿದ ಎಲ್ಲರಿಗೂ ತಮಿಳಿನಲ್ಲಿ ಬಿರುದು ಕೊಟ್ಟಿದ್ದಾರೆ.

'ಜವಾನ್' ಆಡಿಯೋ ಲಾಂಚ್: ಅದ್ಧೂರಿ ವೇದಿಕೆಯಲ್ಲಿ ಮಿಂಚು ಹರಿಸಿದ ಶಾರುಖ್ ಖಾನ್
ಶಾರುಖ್ ಖಾನ್
ಮಂಜುನಾಥ ಸಿ.
|

Updated on: Aug 30, 2023 | 10:23 PM

Share

ಶಾರುಖ್ ಖಾನ್ (Shah Rukh Khan) ನಟನೆಯ ‘ಜವಾನ್‘ (Jawan) ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ಇಂದು (ಆಗಸ್ಟ್ 30) ಚೆನ್ನೈನಲ್ಲಿ ಅದ್ಧೂರಿಯಾಗಿ ನಡೆದಿದೆ. ‘ಜವಾನ್’ ಹಿಂದಿ ಸಿನಿಮಾ ಆದರೂ ಬಹುತೇಕ ನಟ, ತಂತ್ರಜ್ಙರು ತಮಿಳಿನವರೇ ಆಗಿರುವ ಕಾರಣ ಹಾಗೂ ಸಿನಿಮಾ ಸಹ ಹಿಂದಿಯ ಜೊತೆಗೆ ತಮಿಳು, ತೆಲುಗು ಭಾಷೆಗಳಿಗೆ ಡಬ್ ಆಗುತ್ತಿರುವ ಕಾರಣ ಚೆನ್ನೈನಲ್ಲಿ ಅದ್ಧೂರಿಯಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶಾರುಖ್ ಖಾನ್ ಮಿರಿ-ಮಿರಿ ಮಿಂಚಿದ್ದಾರೆ.

ಬಿಳಿ ಬಣ್ಣದ ಶರ್ಟ್, ನೀಲಿ ಜೀನ್ಸ್ ತೊಟ್ಟು ವೇದಿಕೆ ಏರಿದ ಶಾರುಖ್ ಖಾನ್ ಮೊದಲಿಗೆ ಸಂಗೀತ ನಿರ್ದೇಶಕ ಅನಿರುದ್ಧ್ ಜೊತೆ ಕುಣಿದು ಕುಪ್ಪಳಿಸಿದರು. ಆ ಬಳಿಕ ಮಾತು ಆರಂಭಿಸಿದ ಶಾರುಖ್ ಖಾನ್ ‘ನಾನು ಈ ಮೂರು ವರ್ಷ ತಮಿಳು ಕಲಾವಿದರಿಂದ ಸಾಕಷ್ಟು ವಿಷಯಗಳನ್ನು ಕಲಿತಿದ್ದೇನೆ. ಬಹಳಷ್ಟು ಜನ ಗೆಳೆಯರನ್ನು ನಾನು ಮಾಡಿಕೊಂಡಿದ್ದೇನೆ. ತಮಿಳು ಜನರ ಪ್ರೀತಿ ನೋಡಿದ್ದೇನೆ, ಮುಂದೆಯೂ ನೋಡಲಿದ್ದೇನೆ” ಎಂದರು.

ವಿಜಯ್ ಸೇತುಪತಿ, ಯೋಗಿಬಾಬು, ನಯನತಾರಾ, ಅಟ್ಲಿ ಇನ್ನೂ ಹಲವರನ್ನು ಬಹುವಾಗಿ ಕೊಂಡಾಡಿದ ಶಾರುಖ್ ಖಾನ್, ಸಂಗೀತ ನಿರ್ದೇಶಕ ಅನಿರುದ್ಧ್ ಅನ್ನು ತಮ್ಮ ಮಗ ಎಂದರು. ಅಟ್ಲಿಗೆ ಇನ್ನೊಂದು ಮಗುವಾಗಲಿ ಎಂದು ಹಾರೈಸಿದರು. ವಿಜಯ್ ಸೇತುಪತಿ ನನ್ನ ಸಹೋದರ, ಅವರಿಂದ ನಾನು ಬಹಳಷ್ಟು ವಿಷಯಗಳನ್ನು ಕಲಿತಿದ್ದೇನೆ. ಅವರಂಥಹಾ ನಟರು ಭಾರತದಲ್ಲಿ ಅಪರೂಪ ಎಂದರು. ಸಿನಿಮಾದಲ್ಲಿ ಕೆಲಸ ಮಾಡಿದ ಎಲ್ಲರಿಗೂ ವೇದಿಕೆ ಮೇಲಿಂದ ಧನ್ಯವಾದ ಹೇಳಿದ ಶಾರುಖ್ ಖಾನ್ ಪ್ರತಿಯೊಬ್ಬರಿಗೂ ತಮಿಳಿನಲ್ಲಿಯೇ ಒಂದೊಂದು ಬಿರುದು ನೀಡಿ, ಪ್ರೇಕ್ಷಕರು ವಾವ್ ಎನ್ನುವಂತೆ ಮಾಡಿದರು.

ಇದನ್ನೂ ಓದಿ:ಮಧ್ಯರಾತ್ರಿ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡಿದ ಶಾರುಖ್ ಖಾನ್; ನಟನ ನಂಬಿಕೆಗೆ ಕಾರಣವೇನು?

ಕಾರ್ಯಕ್ರಮದಲ್ಲಿ ಮಾತನಾಡಿದ ನಟ ವಿಜಯ್ ಸೇತುಪತಿ, ”ನಾನು ಶಾರುಖ್ ಖಾನ್ ಜೊತೆ ನಟಿಸುತ್ತೇನೆ, ಅವರೊಟ್ಟಿಗೆ ಫೈಟ್ ಮಾಡುತ್ತೇನೆ ಎಂದು ಕನಸಿನಲ್ಲೂ ಭಾವಿಸಿರಲಿಲ್ಲ. ಅವರೊಬ್ಬ ಅದ್ಭುತ ನಟ ಆಗಿರುವ ಜೊತೆಗೆ ಅದ್ಭುತವಾದ ವ್ಯಕ್ತಿ. ಎಲ್ಲರನ್ನೂ ಸಮಾನವಾಗಿ, ಗೌರವದಿಂದ ಕಾಣುವ ಗುಣ ಕಲಾವಿದನಿಗೆ ಮೊದಲಿಗೆ ಇರಬೇಕಾಗುತ್ತದೆ. ಆ ಗುಣ ಅವರಲ್ಲಿ ತುಂಬಿ ತುಳುಕುತ್ತಿದೆ. ಅವರು ತಮ್ಮ ಸುತ್ತಲೂ ಇರುವವರನ್ನು ನಡೆಸಿಕೊಳ್ಳುವ ರೀತಿ ಅದ್ಭುತ” ಎಂದರು.

‘ಜವಾನ್’ ಸಿನಿಮಾ ಸೆಪ್ಟೆಂಬರ್ 7ರಂದು ಬಿಡುಗಡೆ ಆಗಲಿದೆ. ಸಿನಿಮಾದಲ್ಲಿ ಶಾರುಖ್ ಖಾನ್ ಮಾಜಿ ಮಿಲಿಟರಿ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದಾರೆ. ನಯನತಾರಾ ಮೊದಲ ಬಾರಿಗೆ ಶಾರುಖ್ ಖಾನ್​ ಎದುರು ನಾಯಕಿಯಾಗಿ ನಟಿಸಿದ್ದು, ವಿಜಯ್ ಸೇತುಪತಿ ವಿಲನ್. ಯೋಗಿಬಾಬು ಸಹ ಇದ್ದಾರೆ. ಸಿನಿಮಾದಲ್ಲಿ ಪ್ರಿಯಾಮಣಿ ಸೇರಿದಂತೆ ಇನ್ನೂ ಕೆಲವು ಪ್ರಮುಖ ನಟಿಯರು ಶಾರುಖ್ ಖಾನ್ ಜೊತೆಗಿದ್ದಾರೆ. ದೀಪಿಕಾ ಪಡುಕೋಣೆ ಸಹ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾಕ್ಕೆ ಅನಿರುದ್ಧ್ ಸಂಗೀತ ನೀಡಿದ್ದು, ನಿರ್ಮಾಣ ಮಾಡಿರುವುದು ಶಾರುಖ್ ಖಾನ್ ಒಡೆತನದ ರೆಡ್ ಚಿಲ್ಲೀಸ್.‘

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ