AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅರ್ಜುನ್​ ರೆಡ್ಡಿ’, ‘ಜೆರ್ಸಿ’ ಬಳಿಕ ಮತ್ತೊಂದು ಸೂಪರ್​ ಹಿಟ್​ ಚಿತ್ರದ ಮೇಲೆ ಶಾಹಿದ್​ ಕಪೂರ್​ ಕಣ್ಣು

ಶಾಹಿದ್ ಕಪೂರ್​ ಅವರು ‘ಶ್ಯಾಮ್​ ಸಿಂಗ ರಾಯ್​’ ಚಿತ್ರವನ್ನು ವೀಕ್ಷಣೆ ಮಾಡಿದ್ದಾರೆ. ಅವರಿಗೆ ಚಿತ್ರದ ಕಥೆ ತುಂಬಾನೇ ಇಷ್ಟವಾಗಿದೆ. ಹೀಗಾಗಿ, ಚಿತ್ರದ ರಿಮೇಕ್​ ಮಾಡೋಕೆ ಅವರು ಉತ್ಸಾಹ ತೋರಿಸಿದ್ದಾರೆ ಎನ್ನಲಾಗಿದೆ. ಟಾಲಿವುಡ್​ನ ಹಲವು ಸಿನಿಮಾಗಳನ್ನು ಬಾಲಿವುಡ್​ಗೆ ರಿಮೇಕ್​ ಮಾಡಲಾಗುತ್ತಿದೆ. ಇವುಗಳಲ್ಲಿ ಬಹುತೇಕ ಸಿನಿಮಾಗಳು ಯಶಸ್ಸು ಕಂಡಿವೆ. ಗೆಲ್ಲೋಕೆ ಇದು ಸುಲಭ ತಂತ್ರ ಎಂಬುದನ್ನು ಬಾಲಿವುಡ್​ ನಿರ್ಮಾಪಕರು ಕಂಡುಕೊಂಡಿದ್ದಾರೆ. ಹೀಗಾಗಿ, ದಕ್ಷಿಣ ಭಾರತದ ಸೂಪರ್​ ಹಿಟ್​ ಚಿತ್ರಗಳನ್ನು ರಿಮೇಕ್​ ಮಾಡೋಕೆ ಅವರು ಕೊಂಚವೂ ಹಿಂದೇಟು ಹಾಕುವುದಿಲ್ಲ. ನಟ ಶಾಹಿದ್​ ಕಪೂರ್​  (Shahid Kapoor) ಕೂಡ ರಿಮೇಕ್​ ಚಿತ್ರಗಳಲ್ಲಿ ನಟಿಸೋಕೆ ಸಾಕಷ್ಟು ಉತ್ಸುಕತೆ ತೋರುತ್ತಿದ್ದಾರೆ.

‘ಅರ್ಜುನ್​ ರೆಡ್ಡಿ’, ‘ಜೆರ್ಸಿ’ ಬಳಿಕ ಮತ್ತೊಂದು ಸೂಪರ್​ ಹಿಟ್​ ಚಿತ್ರದ ಮೇಲೆ ಶಾಹಿದ್​ ಕಪೂರ್​ ಕಣ್ಣು
ಶಾಹಿದ್ ಕಪೂರ್
TV9 Web
| Edited By: |

Updated on:Jul 06, 2026 | 10:29 AM

Share

ಟಾಲಿವುಡ್​ನ ಹಲವು ಸಿನಿಮಾಗಳನ್ನು ಬಾಲಿವುಡ್​ಗೆ ರಿಮೇಕ್​ ಮಾಡಲಾಗುತ್ತಿದೆ. ಇವುಗಳಲ್ಲಿ ಬಹುತೇಕ ಸಿನಿಮಾಗಳು ಯಶಸ್ಸು ಕಂಡಿವೆ. ಗೆಲ್ಲೋಕೆ ಇದು ಸುಲಭ ತಂತ್ರ ಎಂಬುದನ್ನು ಬಾಲಿವುಡ್​ ನಿರ್ಮಾಪಕರು ಕಂಡುಕೊಂಡಿದ್ದಾರೆ. ಹೀಗಾಗಿ, ದಕ್ಷಿಣ ಭಾರತದ ಸೂಪರ್​ ಹಿಟ್​ ಚಿತ್ರಗಳನ್ನು ರಿಮೇಕ್​ ಮಾಡೋಕೆ ಅವರು ಕೊಂಚವೂ ಹಿಂದೇಟು ಹಾಕುವುದಿಲ್ಲ. ನಟ ಶಾಹಿದ್​ ಕಪೂರ್​  (Shahid Kapoor) ಕೂಡ ರಿಮೇಕ್​ ಚಿತ್ರಗಳಲ್ಲಿ ನಟಿಸೋಕೆ ಸಾಕಷ್ಟು ಉತ್ಸುಕತೆ ತೋರುತ್ತಿದ್ದಾರೆ. ತೆಲುಗಿನ ‘ಅರ್ಜುನ್​ ರೆಡ್ಡಿ’ ಚಿತ್ರವನ್ನು​ ‘ಕಬೀರ್​ ಸಿಂಗ್’ ಆಗಿ ಹಿಂದಿಗೆ ರಿಮೇಕ್​ ಮಾಡಲಾಗಿತ್ತು. ಇದು ಶಾಹಿದ್​ ಕಪೂರ್​ ವೃತ್ತಿ ಜೀವನಕ್ಕೆ ದೊಡ್ಡ ಹಿಟ್​ ನೀಡಿತ್ತು. ಆ ಬಳಿಕ ನಾನಿ ನಟನೆಯ​ ‘ಜೆರ್ಸಿ’ ಚಿತ್ರದ ರಿಮೇಕ್​ನಲ್ಲಿ ಶಾಹಿದ್​ ಕಪೂರ್ ಬಣ್ಣ ಹಚ್ಚಿದ್ದಾರೆ. ಇದಕ್ಕೆ ಹಿಂದಿಯಲ್ಲೂ ‘ಜೆರ್ಸಿ’ (Jersey Movie) ಎಂದು ಹೆಸರು ಇಡಲಾಗಿದೆ. ಈ ಸಿನಿಮಾ ಕ್ರಿಕೆಟರ್​ ಓರ್ವನ ಕಥೆಯನ್ನು ಹೇಳುತ್ತಿದೆ. ತೆಲುಗಿನಲ್ಲಿ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಮೂಲ ಚಿತ್ರದಲ್ಲಿ ನಾನಿ ಹಾಗೂ ಶ್ರದ್ಧಾ ಶ್ರೀನಾಥ್​ ಬಣ್ಣ ಹಚ್ಚಿದ್ದರು. ಕೊವಿಡ್ ಕಾರಣದಿಂದ ಚಿತ್ರದ ರಿಲೀಸ್​ ದಿನಾಂಕ ವಿಳಂಬವಾಗಿದೆ. ಈ ಮಧ್ಯೆ ಮತ್ತೊಂದು ಟಾಲಿವುಡ್​​ ಚಿತ್ರದ ಮೇಲೆ ಶಾಹಿದ್​ ಕಪೂರ್​ ಕಣ್ಣಿಟ್ಟಿದ್ದಾರೆ.

ಕಳೆದ ವರ್ಷಾಂತ್ಯಕ್ಕೆ ತೆರೆಗೆ ಬಂದ ‘ಶ್ಯಾಮ್​ ಸಿಂಗ ರಾಯ್​’ ಚಿತ್ರಕ್ಕೆ ನಾನಿ ಹೀರೋ. ಅವರ ಜತೆ ಸಾಯಿ ಪಲ್ಲವಿ, ಕೃತಿ ಶೆಟ್ಟಿ, ಮಡೋನ್ನಾ ಸೆಬಾಸ್ಟಿಯನ್​ ಕೂಡ ನಟಿಸಿದ್ದಾರೆ. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಗಳಿಕೆ ಮಾಡಿದೆ. ಒಟಿಟಿಯಲ್ಲಿ ರಿಲೀಸ್​ ಆಗಿ ಚಿತ್ರ ಹೆಚ್ಚು ಸದ್ದು ಮಾಡಿದೆ. ಪುನರ್ಜನ್ಮದ ಕಥೆಯನ್ನು ಚಿತ್ರದಲ್ಲಿ ಹೇಳಲಾಗಿದೆ. ಈ ಚಿತ್ರ ಯಶಸ್ಸು ಕಂಡಿರುವುದರಿಂದ ಅನೇಕ ಬಾಲಿವುಡ್​ ನಿರ್ಮಾಪಕರು ಇದರ ರಿಮೇಕ್ ಹಕ್ಕನ್ನು ಪಡೆಯಲು ಮುಂದೆ ಬಂದಿದ್ದಾರೆ ಎನ್ನಲಾಗುತ್ತಿದೆ.

ಶಾಹಿದ್ ಕಪೂರ್​ ಅವರು ‘ಶ್ಯಾಮ್​ ಸಿಂಗ ರಾಯ್​’ ಚಿತ್ರವನ್ನು ವೀಕ್ಷಣೆ ಮಾಡಿದ್ದಾರೆ. ಅವರಿಗೆ ಚಿತ್ರದ ಕಥೆ ತುಂಬಾನೇ ಇಷ್ಟವಾಗಿದೆ. ಹೀಗಾಗಿ, ಚಿತ್ರದ ರಿಮೇಕ್​ ಮಾಡೋಕೆ ಅವರು ಉತ್ಸಾಹ ತೋರಿಸಿದ್ದಾರೆ ಎನ್ನಲಾಗಿದೆ. ಯಾವ ನಿರ್ಮಾಪಕರು ಈ ಚಿತ್ರದ ರಿಮೇಕ್​ ಹಕ್ಕು ಪಡೆದುಕೊಳ್ಳುತ್ತಾರೆ, ಇದರ ನಿರ್ದೇಶನವನ್ನು ಯಾರು ಮಾಡಲಿದ್ದಾರೆ ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದು ಬರಬೇಕಿದೆ. ಸಾಲುಸಾಲು ತೆಲುಗು ರಿಮೇಕ್​ನಲ್ಲಿ ಶಾಹಿದ್​ ನಟಿಸುತ್ತಿದ್ದಾರೆ.

‘ಜೆರ್ಸಿ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಶಾಹಿದ್​ ಬ್ಯುಸಿ ಆಗಲಿದ್ದಾರೆ. ಈ ಚಿತ್ರವನ್ನು ಗೌತಮ್​ ಹಿಂದಿಗೆ ರಿಮೇಕ್​ ಮಾಡಿದ್ದಾರೆ. ಪಂಕಜ್​ ಕಪೂರ್​ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮೃನಾಲ್​ ಠಾಕೂರ್​ ಸಿನಿಮಾಗೆ ನಾಯಕಿ. ಟಾಲಿವುಡ್​ನಲ್ಲಿ ತೆರೆಕಂಡ ‘ಅರ್ಜುನ್​ ರೆಡ್ಡಿ’ ಸಿನಿಮಾ ಬಾಲಿವುಡ್​ನಲ್ಲಿ ‘ಕಬೀರ್​ ಸಿಂಗ್’​ ಆಗಿ ತೆರೆಗೆ ಬಂದಿತ್ತು. ಈ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಹೀಗಾಗಿ ತೆಲುಗಿನ ‘ಜೆರ್ಸಿ’ ಸಿನಿಮಾವನ್ನು ಬಾಲಿವುಡ್​ಗೆ ರಿಮೇಕ್​ ಮಾಡಲಾಗಿದೆ.

‘ಪುನೀತ್​ ಸಾವಿನಿಂದ ಕಟು ಸತ್ಯ ಬಯಲಾಗಿದೆ’: ಆತಂಕದಲ್ಲೇ ಅನಿಸಿಕೆ ಹಂಚಿಕೊಂಡ ರಾಮ್​ ಗೋಪಾಲ್​ ವರ್ಮಾ

Published On - 8:12 am, Tue, 8 February 22

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ