AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡ್ರ್ಯಾಗನ್’ ಸಿನಿಮಾದಲ್ಲಿ ಎನ್‌ಟಿಆರ್ ಜೊತೆ ಶಾಹಿದ್ ಕಪೂರ್, ಆಲಿಯಾ ಭಟ್?

ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ತೆಲುಗು ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇದೆ. ಈಗ ಅವರು ಜೂನಿಯರ್ ಎನ್​ಟಿಆರ್ ಜೊತೆ ‘ಡ್ರ್ಯಾಗನ್’ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾಗೆ ಬಾಲಿವುಡ್ ಸ್ಟಾರ್ ಕಲಾವಿದರ ಸೇರ್ಪಡೆ ಆಗುತ್ತಿದೆ. ಈ ಬಗ್ಗೆ ಟಾಲಿವುಡ್ ಅಂಗಳದಲ್ಲಿ ಸುದ್ದಿ ಕೇಳಿಬರುತ್ತಿದೆ.

‘ಡ್ರ್ಯಾಗನ್’ ಸಿನಿಮಾದಲ್ಲಿ ಎನ್‌ಟಿಆರ್ ಜೊತೆ ಶಾಹಿದ್ ಕಪೂರ್, ಆಲಿಯಾ ಭಟ್?
Jr Ntr, Alia Bhatt, Shahid KapoorImage Credit source: PTI
ಮದನ್​ ಕುಮಾರ್​
|

Updated on: Sep 03, 2026 | 6:43 PM

Share

ಜೂನಿಯರ್ ಎನ್‌ಟಿಆರ್ ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಡ್ರ್ಯಾಗನ್’ ಸದ್ಯ ಭಾರತೀಯ ಚಿತ್ರರಂಗದಲ್ಲಿ ಭಾರೀ ಕುತೂಹಲ ಮೂಡಿಸಿರುವ ಚಿತ್ರಗಳ ಪೈಕಿ ಒಂದಾಗಿದೆ. ಚಿತ್ರದ ಪ್ರತಿಯೊಂದು ಅಪ್‌ಡೇಟ್ ಕೂಡ ಅಭಿಮಾನಿಗಳಲ್ಲಿ ನಿರೀಕ್ಷೆಯನ್ನು ಹೆಚ್ಚಿಸುತ್ತಿದೆ. ಈಗಾಗಲೇ ಬಾಲಿವುಡ್‌ನ ಹಿರಿಯ ನಟ ಅನಿಲ್ ಕಪೂರ್ ಚಿತ್ರತಂಡಕ್ಕೆ ಸೇರ್ಪಡೆಯಾಗಿರುವುದು ‘ಡ್ರ್ಯಾಗನ್’ಗೆ ಮತ್ತಷ್ಟು ತಾರಾ ಮೆರುಗು ತಂದಿದೆ. ಇದರ ಬೆನ್ನಲ್ಲೇ ಬಾಲಿವುಡ್‌ನ ಸ್ಟಾರ್ ನಟರಾದ ಆಲಿಯಾ ಭಟ್ ಮತ್ತು ಶಾಹಿದ್ ಕಪೂರ್ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ನಿರ್ಮಾಪಕರ ಕಡೆಯಿಂದ ಈ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಹೊರಬಂದಿಲ್ಲ. ಆದರೆ ಚಿತ್ರರಂಗದ ಮೂಲಗಳ ಪ್ರಕಾರ, ಆಲಿಯಾ ಭಟ್ ಮತ್ತು ಶಾಹಿದ್ ಕಪೂರ್ ಇಬ್ಬರೂ ‘ಡ್ರ್ಯಾಗನ್’ ತಂಡವನ್ನು ಸೇರಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆಲಿಯಾ ಭಟ್ ಈಗಾಗಲೇ ಬಾಲಿವುಡ್ ಮಾತ್ರವಲ್ಲದೆ ದೇಶಾದ್ಯಂತ ದೊಡ್ಡ ಅಭಿಮಾನಿ ಬಳಗ ಹೊಂದಿರುವ ನಟಿ. ಅವರಂತಹ ಜನಪ್ರಿಯ ನಟಿ ಜೂನಿಯರ್ ಎನ್‌ಟಿಆರ್ ಜೊತೆ ತೆರೆ ಹಂಚಿಕೊಳ್ಳುತ್ತಿರುವುದು ಚಿತ್ರದ ಪ್ಯಾನ್ ಇಂಡಿಯಾ ವ್ಯಾಪ್ತಿಗೆ ಮತ್ತಷ್ಟು ಬಲ ನೀಡುವ ಸಾಧ್ಯತೆಯಿದೆ.

ಇನ್ನು, ಶಾಹಿದ್ ಕಪೂರ್ ಹಾಗೂ ಜೂನಿಯರ್ ಎನ್‌ಟಿಆರ್ ಕಾಂಬಿನೇಷನ್ ಕೂಡ ಸಿನಿಪ್ರಿಯರಿಗೆ ಸಾಕಷ್ಟು ಕುತೂಹಲ ಮೂಡಿಸಿದೆ. ಇಬ್ಬರು ಸ್ಟಾರ್ ನಟರು ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ನಿಜವಾದರೆ, ಇದು ಚಿತ್ರದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಲಿದೆ. ಬೇರೆ ಬೇರೆ ಸ್ಟಾರ್ ಕಲಾವಿದರ ಸೇರ್ಪಡೆಯ ಕಾರಣದಿಂದ ಈ ಚಿತ್ರದ ಮೇಲಿನ ಹೈಪ್ ಮತ್ತಷ್ಟು ಹೆಚ್ಚಿದೆ.

ಪ್ರಶಾಂತ್ ನೀಲ್ ಅವರು ತಮ್ಮ ಸಿನಿಮಾಗಳಲ್ಲಿ ಬೃಹತ್ ಆ್ಯಕ್ಷನ್ ಸನ್ನಿವೇಶಗಳು, ಮಾಸ್ ಎಲಿಮೆಂಟ್ಸ್ ಮತ್ತು ದೊಡ್ಡ ಮಟ್ಟದ ಪಾತ್ರಗಳನ್ನು ಕಟ್ಟಿಕೊಡುವುದಕ್ಕೆ ಹೆಸರುವಾಸಿ. ‘ಡ್ರ್ಯಾಗನ್’ನಲ್ಲೂ ಇದೇ ರೀತಿಯ ಅದ್ದೂರಿ ಟ್ರೀಟ್‌ಮೆಂಟ್ ನಿರೀಕ್ಷಿಸಲಾಗುತ್ತಿದೆ. ಸದ್ಯ ಜೂನಿಯರ್ ಎನ್‌ಟಿಆರ್ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದ್ದು, ಅವರ ಅನುಪಸ್ಥಿತಿಯಲ್ಲಿ ಪ್ರಶಾಂತ್ ನೀಲ್ ಇತರ ಕಲಾವಿದರನ್ನು ಒಳಗೊಂಡ ದೃಶ್ಯಗಳ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.

ಇದನ್ನೂ ಓದಿ: ಭುಜದ ಶಸ್ತ್ರಚಿಕಿತ್ಸೆ ಮುಕ್ತಾಯ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ಜೂನಿಯರ್ ಎನ್‌ಟಿಆರ್

ಆಲಿಯಾ ಭಟ್ ಮತ್ತು ಶಾಹಿದ್ ಕಪೂರ್ ಅವರ ಸೇರ್ಪಡೆಯ ಸುದ್ದಿ ಅಧಿಕೃತವಾಗಿ ದೃಢಪಟ್ಟರೆ, ಜೂನಿಯರ್ ಎನ್‌ಟಿಆರ್, ಅನಿಲ್ ಕಪೂರ್, ಆಲಿಯಾ ಭಟ್ ಮತ್ತು ಶಾಹಿದ್ ಕಪೂರ್ ಅವರಂತಹ ದೊಡ್ಡ ತಾರೆಯರ ಸಮಾಗಮದಿಂದ ‘ಡ್ರ್ಯಾಗನ್’ ಚಿತ್ರವು ಭಾರತೀಯ ಚಿತ್ರರಂಗದ ಅದ್ದೂರಿ ಸಿನಿಮಾ ಇದಾಗಲಿದೆ. ಚಿತ್ರತಂಡದಿಂದ ಅಧಿಕೃತ ಘೋಷಣೆ ಯಾವಾಗ ಹೊರಬೀಳಲಿದೆ ಎಂಬುದೇ ಸದ್ಯ ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಸ್ತೂರಿ ರಂಗನ್ ವರದಿ ವಿರೋಧಿಸಿ ಸಾಗರದಲ್ಲಿ ಬೃಹತ್ ಪಾದಯಾತ್ರೆ
ಕಸ್ತೂರಿ ರಂಗನ್ ವರದಿ ವಿರೋಧಿಸಿ ಸಾಗರದಲ್ಲಿ ಬೃಹತ್ ಪಾದಯಾತ್ರೆ
‘ಬೃಂದಾವಿಹಾರಿ’ ಸಿನಿಮಾ ಕತೆ ಬಗ್ಗೆ ರಂಗಾಯಣ ರಘು ಹೇಳಿದ್ದೇನು?
‘ಬೃಂದಾವಿಹಾರಿ’ ಸಿನಿಮಾ ಕತೆ ಬಗ್ಗೆ ರಂಗಾಯಣ ರಘು ಹೇಳಿದ್ದೇನು?
ಚಂದ್ರನ ಮೇಲೆ ಮನೆ ಕಟ್ಟಲಿದೆ ಭಾರತ; ಬೆಂಗಳೂರಿನ ವಿಜ್ಞಾನಿಗಳ 'ಭೀಮ್' ಯೋಜನೆ!
ಚಂದ್ರನ ಮೇಲೆ ಮನೆ ಕಟ್ಟಲಿದೆ ಭಾರತ; ಬೆಂಗಳೂರಿನ ವಿಜ್ಞಾನಿಗಳ 'ಭೀಮ್' ಯೋಜನೆ!
ಕಳುವಾಗಿದ್ದ ಬಂಗಾರ, ಹಣ ರಿಕವರಿ ಮಾಡಿ ಪೊಲೀಸರಿಂದಲೇ ಲೂಟಿ?
ಕಳುವಾಗಿದ್ದ ಬಂಗಾರ, ಹಣ ರಿಕವರಿ ಮಾಡಿ ಪೊಲೀಸರಿಂದಲೇ ಲೂಟಿ?
ಕೆಪಿಎಸ್‌ಸಿ ಹಗರಣದ ಕಿಂಗ್‌ಪಿನ್ IAS ಅಧಿಕಾರಿ ಎಸ್ಕೇಪ್ ಆಗಿದ್ದು ಹೇಗೆ?
ಕೆಪಿಎಸ್‌ಸಿ ಹಗರಣದ ಕಿಂಗ್‌ಪಿನ್ IAS ಅಧಿಕಾರಿ ಎಸ್ಕೇಪ್ ಆಗಿದ್ದು ಹೇಗೆ?
ಏರೋ ಇಂಡಿಯಾ ಏರ್ ಶೋ 16ನೇ ಆವೃತ್ತಿಯ ದಿನಾಂಕ ಘೋಷಣೆ
ಏರೋ ಇಂಡಿಯಾ ಏರ್ ಶೋ 16ನೇ ಆವೃತ್ತಿಯ ದಿನಾಂಕ ಘೋಷಣೆ
ನೈಸ್ ರಸ್ತೆ ವಿಚಾರದಲ್ಲಿ ಕ್ಯಾಬಿನೆಟ್ ಸಬ್ ಕಮಿಟಿಯಿಂದ ಮಹತ್ವದ ತೀರ್ಮಾ‌ನ
ನೈಸ್ ರಸ್ತೆ ವಿಚಾರದಲ್ಲಿ ಕ್ಯಾಬಿನೆಟ್ ಸಬ್ ಕಮಿಟಿಯಿಂದ ಮಹತ್ವದ ತೀರ್ಮಾ‌ನ
ರಾಜ್ಯ ಸರ್ಕಾರದಿಂದ ಉದ್ಯಾನವನ ತಿದ್ದುಪಡಿ ಮಸೂದೆ ವಾಪಸ್?
ರಾಜ್ಯ ಸರ್ಕಾರದಿಂದ ಉದ್ಯಾನವನ ತಿದ್ದುಪಡಿ ಮಸೂದೆ ವಾಪಸ್?
ಬೀಗ ಹಾಕಿದ್ದ ಮನೆಗೆ ಕನ್ನ, 40 ಗ್ರಾಂ ಚಿನ್ನ-ಬೆಳ್ಳಿ ಎಗರಿಸಿದ ಖದೀಮರು
ಬೀಗ ಹಾಕಿದ್ದ ಮನೆಗೆ ಕನ್ನ, 40 ಗ್ರಾಂ ಚಿನ್ನ-ಬೆಳ್ಳಿ ಎಗರಿಸಿದ ಖದೀಮರು
ನೇಗಿಲು ಹೊತ್ತು 3ನೇ ದಿನದ ಪಾದಯಾತ್ರೆಗೆ ಚಾಲನೆ ನೀಡಿದ ಬಿವೈ ವಿಜಯೇಂದ್ರ
ನೇಗಿಲು ಹೊತ್ತು 3ನೇ ದಿನದ ಪಾದಯಾತ್ರೆಗೆ ಚಾಲನೆ ನೀಡಿದ ಬಿವೈ ವಿಜಯೇಂದ್ರ