AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಧ್ಯೆಯೂ ಹೊಸ ಪ್ರಯೋಗಕ್ಕೆ ಮುಂದಾದ ಶಾಹಿದ್ ಕಪೂರ್

ಈಗಾಗಲೇ ಬಾಲಿವುಡ್​ನಲ್ಲಿ ಸಾಕಷ್ಟು ನಟ-ನಟಿಯರು ತಮ್ಮದೇ ಆದ ಪ್ರೊಡಕ್ಷನ್​ ಹೌಸ್​ ಸ್ಥಾಪಿಸಿ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿವೆ. ಈಗ ಶಾಹಿದ್​ ಕೂಡ ಅದೇ ಆಲೋಚನೆಯಲ್ಲಿದ್ದಾರೆ. ತ

ಕೊರೊನಾ ಮಧ್ಯೆಯೂ ಹೊಸ ಪ್ರಯೋಗಕ್ಕೆ ಮುಂದಾದ ಶಾಹಿದ್ ಕಪೂರ್
ಶಾಹಿದ್​ ಕಪೂರ್​
ರಾಜೇಶ್ ದುಗ್ಗುಮನೆ
|

Updated on: Apr 29, 2021 | 9:30 PM

Share

ಕೊರೊನಾ ವೈರಸ್​ ಎರಡನೇ ಅಲೆಯ ಪ್ರಭಾವ ಜೋರಾಗಿದೆ. ಎಲ್ಲ ಕಡೆಗಳಲ್ಲೂ ಸಾವಿನ ಸುದ್ದಿ ಕೇಳಿಬರುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಹಲವು ರಾಜ್ಯಗಳಲ್ಲಿ ಲಾಕ್​ಡೌನ್ ಹೇರಲಾಗಿದೆ. ಇದರಿಂದ ಚಿತ್ರಮಂದಿರಗಳು ಮತ್ತೆ ಮುಚ್ಚಿವೆ. ಅನೇಕ ಚಿತ್ರಗಳು ನೇರವಾಗಿ ಒಟಿಟಿಯಲ್ಲಿ ರಿಲೀಸ್​ ಆಗುತ್ತಿವೆ. ಒಟಿಟಿ ವ್ಯಾಪ್ತಿ ದೊಡ್ಡದಾಗುತ್ತಿರುವುದನ್ನು ಮನಗಂಡ ಶಾಹಿದ್​ ಕಪೂರ್​ ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಅವರು ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ.  ಅದೂ, ಒಟಿಟಿ ಸಿನಿಮಾ ಅನ್ನೋದು ವಿಶೇಷ.

ಈಗಾಗಲೇ ಬಾಲಿವುಡ್​ನಲ್ಲಿ ಸಾಕಷ್ಟು ನಟ-ನಟಿಯರು ತಮ್ಮದೇ ಆದ ಪ್ರೊಡಕ್ಷನ್​ ಹೌಸ್​ ಸ್ಥಾಪಿಸಿ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿವೆ. ಈಗ ಶಾಹಿದ್​ ಕೂಡ ಅದೇ ಮಾರ್ಗ ತುಳಿಯುತ್ತಿದ್ದಾರೆ. ತಮ್ಮದೆ ಪ್ರೊಡಕ್ಷನ್​ ಹೌಸ್​ ಸ್ಥಾಪಿಸಬೇಕು ಎನ್ನುವ ಆಲೋಚನೆ ಶಾಹಿದ್ ಕಪೂರ್​ ಅವರದ್ದು. ಅವರ ಪ್ರೊಡಕ್ಷನ್​ ಹೌಸ್​​ನಿಂದಲೇ ಹೊಸ ಸಿನಿಮಾ ಮೂಡಿ ಬರಲಿದ್ದು, ನೆಟ್​ಫ್ಲಿಕ್ಸ್​​ನಲ್ಲಿ ರಿಲೀಸ್​ ಆಗುತ್ತಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಶೀಘ್ರವೇ ಶಾಹಿದ್​ ಹೊಸ ಅಪ್​ಡೇಟ್​ ನೀಡಲಿದ್ದಾರಂತೆ.

ಟಾಲಿವುಡ್​ನಲ್ಲಿ ತೆರೆಕಂಡ ಅರ್ಜುನ್​ ರೆಡ್ಡಿ ಸಿನಿಮಾ ಬಾಲಿವುಡ್​ನಲ್ಲಿ ಕಬೀರ್​ ಸಿಂಗ್​ ಆಗಿ ತೆರೆಗೆ ಬಂದಿತ್ತು. ಈ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಹೀಗಾಗಿ ತೆಲುಗಿನ ಜೆರ್ಸಿ ಸಿನಿಮಾವನ್ನು ಬಾಲಿವುಡ್​ಗೆ ರಿಮೇಕ್​ ಮಾಡಲಾಗುತ್ತಿದ್ದು, ಇದಕ್ಕೆ ಶಾಹಿದ್​ ಕಪೂರ್ ಹೀರೋ. ಶಶಾಂಕ್​ ಖೈತಾನ್​ ಮುಂದಿನ ಚಿತ್ರ ಯೋಧ ಸಿನಿಮಾದಲ್ಲಿ ಶಾಹಿದ್​ ನಟಿಸಬೇಕಿತ್ತು. ಆದರೆ, ಕೊನೆ ಕ್ಷಣದಲ್ಲಿ ಅವರು ಸಿನಿಮಾದಿಂದ ಹೊರ ಬಿದ್ದಿದ್ದರು.

ಇದನ್ನೂ ಓದಿ: ಕೊರೊನಾ ಸಂದರ್ಭದಲ್ಲಿ ಸಹಾಯ ಮಾಡದೆ ಸುಮ್ಮನಿರುವ ಕಂಗನಾಗೆ ಕ್ಲಾಸ್​

ಸೈಲೆಂಟಾಗಿ ಕೆಜಿಎಫ್​-2 ಚಿತ್ರ ತಂಡ ಸೇರಿಕೊಂಡ ಮತ್ತೋರ್ವ ಬಾಲಿವುಡ್​ ನಟಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ