AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಶಿಯಲ್ ಮೀಡಿಯಾದಲ್ಲಿ ಶಕೀಲಾ ಸಾವಿನ ಸುದ್ದಿ; ಅಸಲಿಯತ್ತೇನು?

ಒಂದು ಕಾಲದಲ್ಲಿ ಸಾಫ್ಟ್​ಕೋರ್​ ನೀಲಿ ಸಿನಿಮಾಗಳ ಮೂಲಕ ಹೆಸರು ಮಾಡಿದವರು ಶಕೀಲಾ. ಅಂಥ ಚಿತ್ರಗಳಿಂದಲೇ ಅವರು ಮಲಯಾಳಂ ಚಿತ್ರರಂಗದ ಸ್ಟಾರ್​ ನಟರಿಗೆ ಪೈಪೋಟಿ ನೀಡಿದ್ದರು. ಈಗ ಅವರು ಮೃತಪಟ್ಟಿದ್ದಾರೆ ಎನ್ನುವ ವದಂತಿ ಹಬ್ಬಿದೆ.

ಸೋಶಿಯಲ್ ಮೀಡಿಯಾದಲ್ಲಿ ಶಕೀಲಾ ಸಾವಿನ ಸುದ್ದಿ; ಅಸಲಿಯತ್ತೇನು?
ಶಕೀಲಾ
TV9 Web
| Edited By: |

Updated on: Jul 30, 2021 | 7:18 PM

Share

ಸಾಫ್ಟ್​ಕೋರ್​ ನೀಲಿ ಸಿನಿಮಾಗಳ ಮೂಲಕ ಹೆಸರು ಮಾಡಿದವರು ಶಕೀಲಾ. ಈಗ ಅವರು ಮೃತಪಟ್ಟಿದ್ದಾರೆ ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವದಂತಿ ಒಂದು ಹಬ್ಬಿತ್ತು. ಸೋಶಿಯಲ್​ ಮೀಡಿಯಾದಲ್ಲಿ ಅನೇಕರು ಶಕೀಲಾಗೆ ಸಂತಾಪ ಸೂಚಿಸಿದ್ದರು. ಇದು ಸುಳ್ಳು ಎಂದು ಶಕೀಲಾ ಸ್ಪಷ್ಟನೆ ನೀಡಿದ್ದಾರೆ.

‘ ಶಕೀಲಾ ಮೃತಪಟ್ಟಿದ್ದಾರೆ ಎಂದು ಕೆಲವು ಮಾಧ್ಯಮಗಳು ಹಾಗೂ ಸೋಶಿಯಲ್​ ಮೀಡಿಯಾಗಳು ವರದಿ ಬಿತ್ತರ ಮಾಡಿದ್ದವು. ಆದರೆ, ಆ ರೀತಿ ಏನೂ ಇಲ್ಲ. ನಾನು ಆರೋಗ್ಯವಾಗಿದ್ದೇನೆ. ಕೇರಳದ ಸಾಕಷ್ಟು ಜನರು ನನ್ನ ಆರೋಗ್ಯದ ಬಗ್ಗೆ ಆತಂಕ ಹೊರ ಹಾಕಿದ್ದಾರೆ. ಸಾಕಷ್ಟು ಜನರು ಈ ಬಗ್ಗೆ ಕಾಳಜಿ ತೋರಿದ್ದಾರೆ. ನನಗೆ ಈ ಬಗ್ಗೆ ಸಾಕಷ್ಟು ಕರೆಗಳು ಹಾಗೂ ಮೆಸೇಜ್​ಗಳು ಬಂದಿವೆ. ನಿಮ್ಮ ಪ್ರೀತಿಗೆ ನಾನು ಆಭಾರಿ’ ಎಂದು ಶಕೀಲಾ ಹೇಳಿದ್ದಾರೆ.

ಹಲವು ವರ್ಷಗಳ ಹಿಂದೆ ಶಕೀಲಾ ಮಗುವನ್ನು ದತ್ತು ಪಡೆದಿದ್ದರು. ಇದಕ್ಕೆ ಮಿಲಾ ಎಂದು ಶಕೀಲಾ ಹೆಸರಿಟ್ಟಿದ್ದಾರೆ. ಮಾರ್ಚ್​ ತಿಂಗಳಲ್ಲಿ ಮಿಲಾರನ್ನು ಅಭಿಮಾನಿಗಳಿಗೆ ಪರಿಚಯ ಮಾಡಿದ್ದರು ಶಕೀಲಾ. ಶಕೀಲಾ ಮದುವೆ ಆಗದೆ ಮಗುವನ್ನು ಹೊಂದಿದ್ದು ಹೇಗೆ ಎನ್ನುವ ಪ್ರಶ್ನೆ ಅನೇಕರದ್ದಾಗಿತ್ತು. ಇದಕ್ಕೆ ಅವರು ಉತ್ತರ ನೀಡಿದ್ದರು.

ಇತ್ತೀಚೆಗೆ ಶಕೀಲಾ ಅವರು ‘ಅಟ್ಟರ್​ ಫ್ಲಾಪ್’​ ಮತ್ತು ‘ರೊಮ್ಯಾಂಟಿಕ್​’ ಸಿನಿಮಾಗಳ ಪೋಸ್ಟರ್​ಗಳನ್ನು ಬಿಡುಗಡೆ ಮಾಡಿದ್ದರು. ಈ ಎರಡೂ ಸಿನಿಮಾಗಳಲ್ಲಿ ಅವರ ಸಾಕು ಮಗಳು ಮಿಲಾ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಈ ವೇಳೆ ತಮ್ಮ ಓಟಿಟಿ ಪ್ಲ್ಯಾನ್​ ಬಗ್ಗೆ ಶಕೀಲಾ ಬಾಯಿ ಬಿಟ್ಟಿದ್ದರು. ‘ಈ ಸಿನಿಮಾಗಳಲ್ಲಿ ನಾವು ಹೊಸ ಕಲಾವಿದರಿಗೆ ಅವಕಾಶ ನೀಡಬೇಕು ಎಂದುಕೊಂಡಿದ್ದೇವೆ. ನಾವು ಈ ಹಿಂದೆ ಮಾಡಿದ ‘ಲೇಡೀಸ್​ ನಾಟ್​ ಅಲೌಡ್​’ ಚಿತ್ರದ ರಿಲೀಸ್​ ವೇಳೆ ಸೆನ್ಸಾರ್​ ಮಂಡಳಿಯಿಂದ ಸಾಕಷ್ಟು ತೊಂದರೆ ಅನುಭವಿಸಿದ್ದೆವು. ಅಂಥ ತೊಂದರೆಗಳನ್ನು ತಪ್ಪಿಸಲು ಈಗ ತಾವೇ ಸ್ವಂತ ಓಟಿಟಿ ಆರಂಭಿಸಲು ಆಲೋಚಿಸಿದ್ದೇವೆ. ಹೊಸಬರಿಗೆ ಅದರಲ್ಲಿ ಅವಕಾಶ ನೀಡಲಿದ್ದೇವೆ’ ಎಂದು ಶಕೀಲಾ ಹೇಳಿದ್ದರು.

ಇದನ್ನೂ ಓದಿ: ಶೀಘ್ರವೇ ಬರಲಿದೆ ಶಕೀಲಾ ಓಟಿಟಿ; ಇಲ್ಲಿರುವ ಸಿನಿಮಾ ಎಂಥವು? ಯಾರಿಗೆಲ್ಲ ಸಿಗಲಿದೆ ಚಾನ್ಸ್​?

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ