AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಶಿಯಲ್ ಮೀಡಿಯಾದಲ್ಲಿ ಶಕೀಲಾ ಸಾವಿನ ಸುದ್ದಿ; ಅಸಲಿಯತ್ತೇನು?

ಒಂದು ಕಾಲದಲ್ಲಿ ಸಾಫ್ಟ್​ಕೋರ್​ ನೀಲಿ ಸಿನಿಮಾಗಳ ಮೂಲಕ ಹೆಸರು ಮಾಡಿದವರು ಶಕೀಲಾ. ಅಂಥ ಚಿತ್ರಗಳಿಂದಲೇ ಅವರು ಮಲಯಾಳಂ ಚಿತ್ರರಂಗದ ಸ್ಟಾರ್​ ನಟರಿಗೆ ಪೈಪೋಟಿ ನೀಡಿದ್ದರು. ಈಗ ಅವರು ಮೃತಪಟ್ಟಿದ್ದಾರೆ ಎನ್ನುವ ವದಂತಿ ಹಬ್ಬಿದೆ.

ಸೋಶಿಯಲ್ ಮೀಡಿಯಾದಲ್ಲಿ ಶಕೀಲಾ ಸಾವಿನ ಸುದ್ದಿ; ಅಸಲಿಯತ್ತೇನು?
ಶಕೀಲಾ
TV9 Web
| Edited By: |

Updated on: Jul 30, 2021 | 7:18 PM

Share

ಸಾಫ್ಟ್​ಕೋರ್​ ನೀಲಿ ಸಿನಿಮಾಗಳ ಮೂಲಕ ಹೆಸರು ಮಾಡಿದವರು ಶಕೀಲಾ. ಈಗ ಅವರು ಮೃತಪಟ್ಟಿದ್ದಾರೆ ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವದಂತಿ ಒಂದು ಹಬ್ಬಿತ್ತು. ಸೋಶಿಯಲ್​ ಮೀಡಿಯಾದಲ್ಲಿ ಅನೇಕರು ಶಕೀಲಾಗೆ ಸಂತಾಪ ಸೂಚಿಸಿದ್ದರು. ಇದು ಸುಳ್ಳು ಎಂದು ಶಕೀಲಾ ಸ್ಪಷ್ಟನೆ ನೀಡಿದ್ದಾರೆ.

‘ ಶಕೀಲಾ ಮೃತಪಟ್ಟಿದ್ದಾರೆ ಎಂದು ಕೆಲವು ಮಾಧ್ಯಮಗಳು ಹಾಗೂ ಸೋಶಿಯಲ್​ ಮೀಡಿಯಾಗಳು ವರದಿ ಬಿತ್ತರ ಮಾಡಿದ್ದವು. ಆದರೆ, ಆ ರೀತಿ ಏನೂ ಇಲ್ಲ. ನಾನು ಆರೋಗ್ಯವಾಗಿದ್ದೇನೆ. ಕೇರಳದ ಸಾಕಷ್ಟು ಜನರು ನನ್ನ ಆರೋಗ್ಯದ ಬಗ್ಗೆ ಆತಂಕ ಹೊರ ಹಾಕಿದ್ದಾರೆ. ಸಾಕಷ್ಟು ಜನರು ಈ ಬಗ್ಗೆ ಕಾಳಜಿ ತೋರಿದ್ದಾರೆ. ನನಗೆ ಈ ಬಗ್ಗೆ ಸಾಕಷ್ಟು ಕರೆಗಳು ಹಾಗೂ ಮೆಸೇಜ್​ಗಳು ಬಂದಿವೆ. ನಿಮ್ಮ ಪ್ರೀತಿಗೆ ನಾನು ಆಭಾರಿ’ ಎಂದು ಶಕೀಲಾ ಹೇಳಿದ್ದಾರೆ.

ಹಲವು ವರ್ಷಗಳ ಹಿಂದೆ ಶಕೀಲಾ ಮಗುವನ್ನು ದತ್ತು ಪಡೆದಿದ್ದರು. ಇದಕ್ಕೆ ಮಿಲಾ ಎಂದು ಶಕೀಲಾ ಹೆಸರಿಟ್ಟಿದ್ದಾರೆ. ಮಾರ್ಚ್​ ತಿಂಗಳಲ್ಲಿ ಮಿಲಾರನ್ನು ಅಭಿಮಾನಿಗಳಿಗೆ ಪರಿಚಯ ಮಾಡಿದ್ದರು ಶಕೀಲಾ. ಶಕೀಲಾ ಮದುವೆ ಆಗದೆ ಮಗುವನ್ನು ಹೊಂದಿದ್ದು ಹೇಗೆ ಎನ್ನುವ ಪ್ರಶ್ನೆ ಅನೇಕರದ್ದಾಗಿತ್ತು. ಇದಕ್ಕೆ ಅವರು ಉತ್ತರ ನೀಡಿದ್ದರು.

ಇತ್ತೀಚೆಗೆ ಶಕೀಲಾ ಅವರು ‘ಅಟ್ಟರ್​ ಫ್ಲಾಪ್’​ ಮತ್ತು ‘ರೊಮ್ಯಾಂಟಿಕ್​’ ಸಿನಿಮಾಗಳ ಪೋಸ್ಟರ್​ಗಳನ್ನು ಬಿಡುಗಡೆ ಮಾಡಿದ್ದರು. ಈ ಎರಡೂ ಸಿನಿಮಾಗಳಲ್ಲಿ ಅವರ ಸಾಕು ಮಗಳು ಮಿಲಾ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಈ ವೇಳೆ ತಮ್ಮ ಓಟಿಟಿ ಪ್ಲ್ಯಾನ್​ ಬಗ್ಗೆ ಶಕೀಲಾ ಬಾಯಿ ಬಿಟ್ಟಿದ್ದರು. ‘ಈ ಸಿನಿಮಾಗಳಲ್ಲಿ ನಾವು ಹೊಸ ಕಲಾವಿದರಿಗೆ ಅವಕಾಶ ನೀಡಬೇಕು ಎಂದುಕೊಂಡಿದ್ದೇವೆ. ನಾವು ಈ ಹಿಂದೆ ಮಾಡಿದ ‘ಲೇಡೀಸ್​ ನಾಟ್​ ಅಲೌಡ್​’ ಚಿತ್ರದ ರಿಲೀಸ್​ ವೇಳೆ ಸೆನ್ಸಾರ್​ ಮಂಡಳಿಯಿಂದ ಸಾಕಷ್ಟು ತೊಂದರೆ ಅನುಭವಿಸಿದ್ದೆವು. ಅಂಥ ತೊಂದರೆಗಳನ್ನು ತಪ್ಪಿಸಲು ಈಗ ತಾವೇ ಸ್ವಂತ ಓಟಿಟಿ ಆರಂಭಿಸಲು ಆಲೋಚಿಸಿದ್ದೇವೆ. ಹೊಸಬರಿಗೆ ಅದರಲ್ಲಿ ಅವಕಾಶ ನೀಡಲಿದ್ದೇವೆ’ ಎಂದು ಶಕೀಲಾ ಹೇಳಿದ್ದರು.

ಇದನ್ನೂ ಓದಿ: ಶೀಘ್ರವೇ ಬರಲಿದೆ ಶಕೀಲಾ ಓಟಿಟಿ; ಇಲ್ಲಿರುವ ಸಿನಿಮಾ ಎಂಥವು? ಯಾರಿಗೆಲ್ಲ ಸಿಗಲಿದೆ ಚಾನ್ಸ್​?

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?