AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಕ್ಯಾಪ್ಟನ್​ ರೂಂನಲ್ಲಿ ಭೂತ? ಕಪ್ಪಗಿನ ಆಕೃತಿ ಕಂಡು ಬೆಚ್ಚಿಬಿದ್ದ ಶಮಂತ್​

Bigg Boss Kannada: ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್​ ರೂಂ ಇದೆ. ಈ ಕ್ಯಾಪ್ಟನ್​ ರೂಂನಲ್ಲಿ ಐಷಾರಾಮಿ ವ್ಯವಸ್ಥೆ ಇದೆ. ಅಲ್ಲಿಯ ಬೆಡ್​ ಕೂಡ ವಿಶೇಷವಾಗಿದೆ.

ಬಿಗ್​ ಬಾಸ್​ ಕ್ಯಾಪ್ಟನ್​ ರೂಂನಲ್ಲಿ ಭೂತ? ಕಪ್ಪಗಿನ ಆಕೃತಿ ಕಂಡು ಬೆಚ್ಚಿಬಿದ್ದ ಶಮಂತ್​
ಶಮಂತ್​ ಬ್ರೋ ಗೌಡ
TV9 Web
| Edited By: |

Updated on:Jun 25, 2021 | 10:38 AM

Share

ಬಿಗ್​ ಬಾಸ್​ ಮನೆಯಲ್ಲಿ ವಿಚಿತ್ರ ಶಕ್ತಿ ಇದೆಯಾ? ದೆವ್ವ ಇದೆಯಾ? ಹೀಗೊಂದು ಚರ್ಚೆಯನ್ನು ಹುಟ್ಟು ಹಾಕುವ ಕೆಲಸವನ್ನು ಶಮಂತ್​ ಹೇಳಿಕೆ ಮಾಡಿದೆ. ಎರಡನೇ ಇನ್ನಿಂಗ್ಸ್​ನ ಮೊದಲ ದಿನ ನಡೆದ ಭಯಾನಕ ಅನುಭವದ ಬಗ್ಗೆ ಶಮಂತ್​ ಹೇಳಿಕೊಂಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್​ ರೂಂ ಇದೆ. ಈ ಕ್ಯಾಪ್ಟನ್​ ರೂಂನಲ್ಲಿ ಐಷಾರಾಮಿ ವ್ಯವಸ್ಥೆ ಇದೆ. ಅಲ್ಲಿಯ ಬೆಡ್​ ಕೂಡ ವಿಶೇಷವಾಗಿದೆ. ಮನೆಯ ಕ್ಯಾಪ್ಟನ್​ಗೆ ಸಿಗುವ ವಿಶೇಷ ಸವಲತ್ತುಗಳಲ್ಲಿ ಇದು ಕೂಡ ಒಂದು. ಕ್ಯಾಪ್ಟನ್​ ಆಗಲು ಬಯಸೋಕೆ ಇದು ಕೂಡ ಒಂದು ಕಾರಣ. ಆದರೆ, ಕ್ಯಾಪ್ಟನ್​ ಆದಷ್ಟು ದಿನ ಶಮಂತ್​ಗೆ ಅಲ್ಲಿ ನಿದ್ದೇಯೆ ಬಂದಿಲ್ಲವಂತೆ.

ಮೊದಲ ದಿನದಂದು ಶಮಂತ್ ಹಾಗೂ ಪ್ರಿಯಾಂಕಾ ಮಾತನಾಡಿಕೊಂಡರು. ‘ನಾನು ಬೆಡ್​ರೂಂಗೆ ಹೋದೆ. ರಘು ಭೂತ-ಕೋಲ ಎಂದು ಏನೋ ಹೇಳುತ್ತಿದ್ದರು. ಆಗ ಕ್ಯಾಪ್ಟನ್​ ರೂಂನಲ್ಲಿ ವಿಚಿತ್ರ ಆಕೃತಿಯೊಂದು ಹಾದು ಹೋಯ್ತು. ನಾನು ಐದು ನಿಮಿಷ ತಲೆಕೆಡಿಸಿಕೊಂಡೆ. ಆದರೆ, ಈ ವಿಚಾರವನ್ನು ಯಾರಿಗೂ ಹೇಳಿಲ್ಲ. ನಿಮಗೇ ಮೊದಲು ಹೇಳುತ್ತಿದ್ದೇನೆ. ನಾನು ಪ್ರ್ಯಾಂಕ್​ ಮಾಡ್ತಿಲ್ಲ. ಈ ವಿಚಾರದಲ್ಲಿ ಪ್ರ್ಯಾಂಕ್’​ ಮಾಡಬಾರದು’ ಎಂದು ಪ್ರಿಯಾಂಕಾಗೆ ಶಮಂತ್​ ಹೇಳಿದರು.

‘ನಾನು ಕ್ಯಾಪ್ಟನ್​ ಆದಾಗ ನಿದ್ದೆಯೇ ಮಾಡಿಲ್ಲ. ಅಲ್ಲಿ ಮಲಗಿದವರಿಗೆ ಯಾರಿಗೂ ನಿದ್ದೆ ಬರಲ್ಲ. ಎರಡು ವಾರ ಅಲ್ಲಿ ಹೇಗೆ ಕಳೆದೆನೋ ಗೊತ್ತಿಲ್ಲ. ಜಾಸ್ತಿ ಹೊತ್ತು ಅದರ ಬಗ್ಗೆ ಮಾತನಾಡಬಾರದು’ ಎಂದು ಮಾತುಕತೆ ಮುಗಿಸಿದರು ಶಮಂತ್.  ​

ನಂತರ ಈ ಬಗ್ಗೆ ಚಕ್ರವರ್ತಿ ಚಂದ್ರಚೂಡ್​ ಜತೆ ಶಮಂತ್​ ಚರ್ಚೆ ಮಾಡಿದರು. ಚಕ್ರವರ್ತಿ ಕೆಲವು ಸಾಧ್ಯತೆಗಳ ಬಗ್ಗೆ ಹೇಳಿದರೂ ಶಮಂತ್​ಗೆ ಆ ಹೇಳಿಕೆ ತೃಪ್ತಿ ನೀಡಿಲ್ಲ. ನಂತರ ಅವರು​ ತಲೆಕೆಡಿಸಿಕೊಂಡು, ಬಿಗ್​ ಬಾಸ್ ಎದುರೂ ಅದನ್ನು ಹೇಳಿಕೊಂಡರು.

ಇದನ್ನೂ ಓದಿ: Divya Uruduga: ಕೊವಿಡ್​ನಿಂದ ಕುಟುಂಬದವರನ್ನು ಕಳೆದುಕೊಂಡಿದ್ದಾರೆ ದಿವ್ಯಾ ಉರುಡುಗ; ಬಿಗ್​ ಬಾಸ್​ ಮನೆಯಲ್ಲಿ ಭಾವುಕ ನುಡಿ

150 ಜೊತೆ ಬಟ್ಟೆಯೊಂದಿಗೆ ಬಿಗ್​ ಬಾಸ್​ ಮನೆಗೆ ಬಂದಿದ್ದಾರೆ ಪ್ರಶಾಂತ್ ಸಂಬರಗಿ; ಸುದೀಪ್​ ರಿಯಾಕ್ಷನ್​​ ಹೇಗಿತ್ತು?

Published On - 9:59 am, Fri, 25 June 21

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?