AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಕ್ಯಾಪ್ಟನ್​ ರೂಂನಲ್ಲಿ ಭೂತ? ಕಪ್ಪಗಿನ ಆಕೃತಿ ಕಂಡು ಬೆಚ್ಚಿಬಿದ್ದ ಶಮಂತ್​

Bigg Boss Kannada: ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್​ ರೂಂ ಇದೆ. ಈ ಕ್ಯಾಪ್ಟನ್​ ರೂಂನಲ್ಲಿ ಐಷಾರಾಮಿ ವ್ಯವಸ್ಥೆ ಇದೆ. ಅಲ್ಲಿಯ ಬೆಡ್​ ಕೂಡ ವಿಶೇಷವಾಗಿದೆ.

ಬಿಗ್​ ಬಾಸ್​ ಕ್ಯಾಪ್ಟನ್​ ರೂಂನಲ್ಲಿ ಭೂತ? ಕಪ್ಪಗಿನ ಆಕೃತಿ ಕಂಡು ಬೆಚ್ಚಿಬಿದ್ದ ಶಮಂತ್​
ಶಮಂತ್​ ಬ್ರೋ ಗೌಡ
TV9 Web
| Edited By: |

Updated on:Jun 25, 2021 | 10:38 AM

Share

ಬಿಗ್​ ಬಾಸ್​ ಮನೆಯಲ್ಲಿ ವಿಚಿತ್ರ ಶಕ್ತಿ ಇದೆಯಾ? ದೆವ್ವ ಇದೆಯಾ? ಹೀಗೊಂದು ಚರ್ಚೆಯನ್ನು ಹುಟ್ಟು ಹಾಕುವ ಕೆಲಸವನ್ನು ಶಮಂತ್​ ಹೇಳಿಕೆ ಮಾಡಿದೆ. ಎರಡನೇ ಇನ್ನಿಂಗ್ಸ್​ನ ಮೊದಲ ದಿನ ನಡೆದ ಭಯಾನಕ ಅನುಭವದ ಬಗ್ಗೆ ಶಮಂತ್​ ಹೇಳಿಕೊಂಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್​ ರೂಂ ಇದೆ. ಈ ಕ್ಯಾಪ್ಟನ್​ ರೂಂನಲ್ಲಿ ಐಷಾರಾಮಿ ವ್ಯವಸ್ಥೆ ಇದೆ. ಅಲ್ಲಿಯ ಬೆಡ್​ ಕೂಡ ವಿಶೇಷವಾಗಿದೆ. ಮನೆಯ ಕ್ಯಾಪ್ಟನ್​ಗೆ ಸಿಗುವ ವಿಶೇಷ ಸವಲತ್ತುಗಳಲ್ಲಿ ಇದು ಕೂಡ ಒಂದು. ಕ್ಯಾಪ್ಟನ್​ ಆಗಲು ಬಯಸೋಕೆ ಇದು ಕೂಡ ಒಂದು ಕಾರಣ. ಆದರೆ, ಕ್ಯಾಪ್ಟನ್​ ಆದಷ್ಟು ದಿನ ಶಮಂತ್​ಗೆ ಅಲ್ಲಿ ನಿದ್ದೇಯೆ ಬಂದಿಲ್ಲವಂತೆ.

ಮೊದಲ ದಿನದಂದು ಶಮಂತ್ ಹಾಗೂ ಪ್ರಿಯಾಂಕಾ ಮಾತನಾಡಿಕೊಂಡರು. ‘ನಾನು ಬೆಡ್​ರೂಂಗೆ ಹೋದೆ. ರಘು ಭೂತ-ಕೋಲ ಎಂದು ಏನೋ ಹೇಳುತ್ತಿದ್ದರು. ಆಗ ಕ್ಯಾಪ್ಟನ್​ ರೂಂನಲ್ಲಿ ವಿಚಿತ್ರ ಆಕೃತಿಯೊಂದು ಹಾದು ಹೋಯ್ತು. ನಾನು ಐದು ನಿಮಿಷ ತಲೆಕೆಡಿಸಿಕೊಂಡೆ. ಆದರೆ, ಈ ವಿಚಾರವನ್ನು ಯಾರಿಗೂ ಹೇಳಿಲ್ಲ. ನಿಮಗೇ ಮೊದಲು ಹೇಳುತ್ತಿದ್ದೇನೆ. ನಾನು ಪ್ರ್ಯಾಂಕ್​ ಮಾಡ್ತಿಲ್ಲ. ಈ ವಿಚಾರದಲ್ಲಿ ಪ್ರ್ಯಾಂಕ್’​ ಮಾಡಬಾರದು’ ಎಂದು ಪ್ರಿಯಾಂಕಾಗೆ ಶಮಂತ್​ ಹೇಳಿದರು.

‘ನಾನು ಕ್ಯಾಪ್ಟನ್​ ಆದಾಗ ನಿದ್ದೆಯೇ ಮಾಡಿಲ್ಲ. ಅಲ್ಲಿ ಮಲಗಿದವರಿಗೆ ಯಾರಿಗೂ ನಿದ್ದೆ ಬರಲ್ಲ. ಎರಡು ವಾರ ಅಲ್ಲಿ ಹೇಗೆ ಕಳೆದೆನೋ ಗೊತ್ತಿಲ್ಲ. ಜಾಸ್ತಿ ಹೊತ್ತು ಅದರ ಬಗ್ಗೆ ಮಾತನಾಡಬಾರದು’ ಎಂದು ಮಾತುಕತೆ ಮುಗಿಸಿದರು ಶಮಂತ್.  ​

ನಂತರ ಈ ಬಗ್ಗೆ ಚಕ್ರವರ್ತಿ ಚಂದ್ರಚೂಡ್​ ಜತೆ ಶಮಂತ್​ ಚರ್ಚೆ ಮಾಡಿದರು. ಚಕ್ರವರ್ತಿ ಕೆಲವು ಸಾಧ್ಯತೆಗಳ ಬಗ್ಗೆ ಹೇಳಿದರೂ ಶಮಂತ್​ಗೆ ಆ ಹೇಳಿಕೆ ತೃಪ್ತಿ ನೀಡಿಲ್ಲ. ನಂತರ ಅವರು​ ತಲೆಕೆಡಿಸಿಕೊಂಡು, ಬಿಗ್​ ಬಾಸ್ ಎದುರೂ ಅದನ್ನು ಹೇಳಿಕೊಂಡರು.

ಇದನ್ನೂ ಓದಿ: Divya Uruduga: ಕೊವಿಡ್​ನಿಂದ ಕುಟುಂಬದವರನ್ನು ಕಳೆದುಕೊಂಡಿದ್ದಾರೆ ದಿವ್ಯಾ ಉರುಡುಗ; ಬಿಗ್​ ಬಾಸ್​ ಮನೆಯಲ್ಲಿ ಭಾವುಕ ನುಡಿ

150 ಜೊತೆ ಬಟ್ಟೆಯೊಂದಿಗೆ ಬಿಗ್​ ಬಾಸ್​ ಮನೆಗೆ ಬಂದಿದ್ದಾರೆ ಪ್ರಶಾಂತ್ ಸಂಬರಗಿ; ಸುದೀಪ್​ ರಿಯಾಕ್ಷನ್​​ ಹೇಗಿತ್ತು?

Published On - 9:59 am, Fri, 25 June 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ