AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಕ್ಯಾಪ್ಟನ್​ ರೂಂನಲ್ಲಿ ಭೂತ? ಕಪ್ಪಗಿನ ಆಕೃತಿ ಕಂಡು ಬೆಚ್ಚಿಬಿದ್ದ ಶಮಂತ್​

Bigg Boss Kannada: ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್​ ರೂಂ ಇದೆ. ಈ ಕ್ಯಾಪ್ಟನ್​ ರೂಂನಲ್ಲಿ ಐಷಾರಾಮಿ ವ್ಯವಸ್ಥೆ ಇದೆ. ಅಲ್ಲಿಯ ಬೆಡ್​ ಕೂಡ ವಿಶೇಷವಾಗಿದೆ.

ಬಿಗ್​ ಬಾಸ್​ ಕ್ಯಾಪ್ಟನ್​ ರೂಂನಲ್ಲಿ ಭೂತ? ಕಪ್ಪಗಿನ ಆಕೃತಿ ಕಂಡು ಬೆಚ್ಚಿಬಿದ್ದ ಶಮಂತ್​
ಶಮಂತ್​ ಬ್ರೋ ಗೌಡ
TV9 Web
| Edited By: |

Updated on:Jun 25, 2021 | 10:38 AM

Share

ಬಿಗ್​ ಬಾಸ್​ ಮನೆಯಲ್ಲಿ ವಿಚಿತ್ರ ಶಕ್ತಿ ಇದೆಯಾ? ದೆವ್ವ ಇದೆಯಾ? ಹೀಗೊಂದು ಚರ್ಚೆಯನ್ನು ಹುಟ್ಟು ಹಾಕುವ ಕೆಲಸವನ್ನು ಶಮಂತ್​ ಹೇಳಿಕೆ ಮಾಡಿದೆ. ಎರಡನೇ ಇನ್ನಿಂಗ್ಸ್​ನ ಮೊದಲ ದಿನ ನಡೆದ ಭಯಾನಕ ಅನುಭವದ ಬಗ್ಗೆ ಶಮಂತ್​ ಹೇಳಿಕೊಂಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್​ ರೂಂ ಇದೆ. ಈ ಕ್ಯಾಪ್ಟನ್​ ರೂಂನಲ್ಲಿ ಐಷಾರಾಮಿ ವ್ಯವಸ್ಥೆ ಇದೆ. ಅಲ್ಲಿಯ ಬೆಡ್​ ಕೂಡ ವಿಶೇಷವಾಗಿದೆ. ಮನೆಯ ಕ್ಯಾಪ್ಟನ್​ಗೆ ಸಿಗುವ ವಿಶೇಷ ಸವಲತ್ತುಗಳಲ್ಲಿ ಇದು ಕೂಡ ಒಂದು. ಕ್ಯಾಪ್ಟನ್​ ಆಗಲು ಬಯಸೋಕೆ ಇದು ಕೂಡ ಒಂದು ಕಾರಣ. ಆದರೆ, ಕ್ಯಾಪ್ಟನ್​ ಆದಷ್ಟು ದಿನ ಶಮಂತ್​ಗೆ ಅಲ್ಲಿ ನಿದ್ದೇಯೆ ಬಂದಿಲ್ಲವಂತೆ.

ಮೊದಲ ದಿನದಂದು ಶಮಂತ್ ಹಾಗೂ ಪ್ರಿಯಾಂಕಾ ಮಾತನಾಡಿಕೊಂಡರು. ‘ನಾನು ಬೆಡ್​ರೂಂಗೆ ಹೋದೆ. ರಘು ಭೂತ-ಕೋಲ ಎಂದು ಏನೋ ಹೇಳುತ್ತಿದ್ದರು. ಆಗ ಕ್ಯಾಪ್ಟನ್​ ರೂಂನಲ್ಲಿ ವಿಚಿತ್ರ ಆಕೃತಿಯೊಂದು ಹಾದು ಹೋಯ್ತು. ನಾನು ಐದು ನಿಮಿಷ ತಲೆಕೆಡಿಸಿಕೊಂಡೆ. ಆದರೆ, ಈ ವಿಚಾರವನ್ನು ಯಾರಿಗೂ ಹೇಳಿಲ್ಲ. ನಿಮಗೇ ಮೊದಲು ಹೇಳುತ್ತಿದ್ದೇನೆ. ನಾನು ಪ್ರ್ಯಾಂಕ್​ ಮಾಡ್ತಿಲ್ಲ. ಈ ವಿಚಾರದಲ್ಲಿ ಪ್ರ್ಯಾಂಕ್’​ ಮಾಡಬಾರದು’ ಎಂದು ಪ್ರಿಯಾಂಕಾಗೆ ಶಮಂತ್​ ಹೇಳಿದರು.

‘ನಾನು ಕ್ಯಾಪ್ಟನ್​ ಆದಾಗ ನಿದ್ದೆಯೇ ಮಾಡಿಲ್ಲ. ಅಲ್ಲಿ ಮಲಗಿದವರಿಗೆ ಯಾರಿಗೂ ನಿದ್ದೆ ಬರಲ್ಲ. ಎರಡು ವಾರ ಅಲ್ಲಿ ಹೇಗೆ ಕಳೆದೆನೋ ಗೊತ್ತಿಲ್ಲ. ಜಾಸ್ತಿ ಹೊತ್ತು ಅದರ ಬಗ್ಗೆ ಮಾತನಾಡಬಾರದು’ ಎಂದು ಮಾತುಕತೆ ಮುಗಿಸಿದರು ಶಮಂತ್.  ​

ನಂತರ ಈ ಬಗ್ಗೆ ಚಕ್ರವರ್ತಿ ಚಂದ್ರಚೂಡ್​ ಜತೆ ಶಮಂತ್​ ಚರ್ಚೆ ಮಾಡಿದರು. ಚಕ್ರವರ್ತಿ ಕೆಲವು ಸಾಧ್ಯತೆಗಳ ಬಗ್ಗೆ ಹೇಳಿದರೂ ಶಮಂತ್​ಗೆ ಆ ಹೇಳಿಕೆ ತೃಪ್ತಿ ನೀಡಿಲ್ಲ. ನಂತರ ಅವರು​ ತಲೆಕೆಡಿಸಿಕೊಂಡು, ಬಿಗ್​ ಬಾಸ್ ಎದುರೂ ಅದನ್ನು ಹೇಳಿಕೊಂಡರು.

ಇದನ್ನೂ ಓದಿ: Divya Uruduga: ಕೊವಿಡ್​ನಿಂದ ಕುಟುಂಬದವರನ್ನು ಕಳೆದುಕೊಂಡಿದ್ದಾರೆ ದಿವ್ಯಾ ಉರುಡುಗ; ಬಿಗ್​ ಬಾಸ್​ ಮನೆಯಲ್ಲಿ ಭಾವುಕ ನುಡಿ

150 ಜೊತೆ ಬಟ್ಟೆಯೊಂದಿಗೆ ಬಿಗ್​ ಬಾಸ್​ ಮನೆಗೆ ಬಂದಿದ್ದಾರೆ ಪ್ರಶಾಂತ್ ಸಂಬರಗಿ; ಸುದೀಪ್​ ರಿಯಾಕ್ಷನ್​​ ಹೇಗಿತ್ತು?

Published On - 9:59 am, Fri, 25 June 21

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ