AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shankar Ashwath: ಸುದೀಪ್​ ಎದುರಲ್ಲೇ ಹೆಂಡತಿ ಬಳಿ ಕ್ಷಮೆ ಕೇಳಿದ ಶಂಕರ್​ ಅಶ್ವತ್ಥ್​! ಅಂಥ ತಪ್ಪು ಏನಾಯ್ತು?

Bigg Boss Kannada Elimination: ಬಿಗ್​ ಬಾಸ್ ಕನ್ನಡ ಸೀಸನ್​ 8ರ ಹಿರಿಯ ಸ್ಪರ್ಧಿ ಶಂಕರ್​ ಅಶ್ವತ್ಥ್​ ಅವರು ಈ ರಿಯಾಲಿಟಿ ಶೋನಿಂದ ಹೊರಬಿದ್ದಿದ್ದಾರೆ. ಎಲಿಮಿನೇಟ್​ ಆಗುತ್ತಿದ್ದಂತೆಯೇ ಪತ್ನಿ ಬಳಿ ಅವರು ಕ್ಷಮೆ ಕೇಳಿದ್ದಾರೆ.

Shankar Ashwath: ಸುದೀಪ್​ ಎದುರಲ್ಲೇ ಹೆಂಡತಿ ಬಳಿ ಕ್ಷಮೆ ಕೇಳಿದ ಶಂಕರ್​ ಅಶ್ವತ್ಥ್​! ಅಂಥ ತಪ್ಪು ಏನಾಯ್ತು?
ಶಂಕರ್ ಅಶ್ವತ್ಥ್​ - ಬಿಗ್​ ಬಾಸ್​ ಕನ್ನಡ ಸೀಸನ್ 8​
ಮದನ್​ ಕುಮಾರ್​
| Updated By: Digi Tech Desk|

Updated on: Apr 05, 2021 | 12:29 PM

Share

ಹಲವು ಸಿನಿಮಾಗಳಲ್ಲಿ ನಟಿಸಿರುವ ಶಂಕರ್​ ಅಶ್ವತ್ಥ್​ ಅವರಿಗೆ ಬಿಗ್​ ಬಾಸ್​ ಮೂಲಕ ಇನ್ನಷ್ಟು ಜನಪ್ರಿಯತೆ ಸಿಕ್ಕಂತಾಗಿದೆ. ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಹಿರಿಯ ಸ್ಪರ್ಧಿ ಎಂಬ ಕಾರಣಕ್ಕೆ ಅವರು ಹೈಲೈಟ್​ ಆಗಿದ್ದರು. ಯುವಕರಿಗೆ ಸರಿಸಾಟಿಯಾಗಿ ಪೈಪೋಟಿ ನೀಡುತ್ತಿದ್ದ ಅವರಿಗೆ ಕೆಲವೊಮ್ಮೆ ಹಿನ್ನಡೆ ಆಗುತ್ತಿತ್ತು. ಒಟ್ಟು ಐದು ವಾರಗಳ ಕಾಲ ಅವರು ದೊಡ್ಮನೆಯಲ್ಲಿ ಹಣಾಹಣಿ ನಡೆಸಿದರು. ಐದನೇ ವಾರದ ಎಲಿಮಿನೇಷನ್​ನಲ್ಲಿ ಅವರಿಗೆ ಅದೃಷ್ಟ ಕೈ ಕೊಟ್ಟಿತು.

ಈ ಐದು ವಾರಗಳಲ್ಲಿ ಶಂಕರ್​ ಅಶ್ವತ್ಥ್​ ಅವರು ಎರಡು ಬಾರಿ ಕಳಪೆ ಹಣೆಪಟ್ಟಿ ಪಡೆದುಕೊಂಡರು. ಹಾಗಾಗಿ ಅವರು ಎರಡು ಸಲ ಜೈಲಿಗೆ ಹೋಗಬೇಕಾಯಿತು. ಯಾರ ಜೊತೆಗೂ ಹೆಚ್ಚು ಬೆರೆಯುವುದಿಲ್ಲ ಎಂಬ ಆರೋಪ ಕೂಡ ಕೇಳಿಬಂತು. ಒಂದು ಟಾಸ್ಕ್​ನಲ್ಲಿ ಆಕ್ರಮಣಕಾರಿಯಾಗಿ ಸ್ವಿಮ್ಮಿಂಗ್ ಪೂಲ್​ಗೆ ಜಿಗಿದು, ವೈಷ್ಣವಿಯವರನ್ನು ಬೀಳಿಸಿದರು ಎಂಬ ಕಾರಣಕ್ಕಾಗಿಯೂ ಶಂಕರ್​ ಅಶ್ವತ್ಥ್​ ಅವರ ಮೇಲೆ ಮನೆಯ ಇತರೆ ಸ್ಪರ್ಧಿಗಳು ಬೇಸರ ಮಾಡಿಕೊಂಡರು. ಈ ಎಲ್ಲ ವಿಚಾರಗಳು ವೀಕೆಂಡ್​ನಲ್ಲಿ ಸುದೀಪ್ ಎದುರು ಚರ್ಚೆ ಆಯಿತು.

ಎಲಿಮಿನೇಟ್​ ಆಗಿ ಹೊರಬಂದ ಶಂಕರ್​ ಅಶ್ವತ್ಥ್​ ಅವರು ಬಿಗ್​ ಬಾಸ್​ ವೇದಿಕೆಯಲ್ಲಿ ಸುದೀಪ್​ ಜೊತೆ ಕೆಲವು ವಿಚಾರಗಳನ್ನು ಹಂಚಿಕೊಂಡರು. ಈ ವೇಳೆ ಅವರ ಶಂಕರ್​ ಅಶ್ವತ್ಥ್​ ಅವರ ಪತ್ನಿ ಮತ್ತು ಮಗ ಕೂಡ ಇದ್ದರು. ಇವರ ಆಟ ಹೇಗನಿಸಿತು ಎಂದು ಸುದೀಪ್​ ಪ್ರಶ್ನಿಸಿದರು. ಮನೆಯಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿರುವ ಶಂಕರ್​ ಅವರು ಬಿಗ್​ ಬಾಸ್​ನಲ್ಲಿ ತಮ್ಮ ನಿರೀಕ್ಷೆಯ ಮಟ್ಟವನ್ನು ತಲುಪಲಿಲ್ಲ ಎಂದು ಶಂಕರ್​ ಪತ್ನಿ ಹೇಳಿದರು. ಆ ಮಾತಿಗೆ ಪ್ರತಿಕ್ರಿಯಿಸಿದ ಶಂಕರ್​. ‘ನನ್ನನ್ನು ಕ್ಷಮಿಸು’ ಎಂದರು. ಈ ವೇಳೆ ಅವರು ಸಖತ್​ ಎಮೋಷನಲ್​ ಆಗಿದ್ದರು.

‘ನಿಮ್ಮನ್ನು ಕ್ಷಮಿಸುವಂತಹ ತಪ್ಪನ್ನು ನೀವೇನೂ ಮಾಡಿಲ್ಲ. ನಿಮ್ಮ ಸಾಮರ್ಥ್ಯವನ್ನು ನೀವು ತೋರಿಲಿಲ್ಲ. ನಮ್ಮ ಮನೆಯಲ್ಲಿ ಇದ್ದ ಹಾಗೆ ನೀವು ಬಿಗ್​ ಬಾಸ್​ನಲ್ಲಿ ಇರಲಿಲ್ಲ’ ಎಂದು ಶಂಕರ್​ ಪತ್ನಿ ಬೇಸರ ವ್ಯಕ್ತಪಡಿಸಿದರು. ‘ನನ್ನ ಮಗನಿಗಾದರೆ ನಾನು ಬಯ್ಯಬಹುದು, ಬುದ್ಧಿ ಹೇಳಬಹುದು. ಎಲ್ಲರೂ ಬುದ್ಧಿ ಕೇಳುತ್ತಾರಾ? ಇತಿ ಮಿತಿ ಇಟ್ಟುಕೊಂಡು ನಾನು ಮಾಡಿದ್ದೀನಿ’ ಎಂದು ಶಂಕರ್ ಅಶ್ವತ್ಥ್​ ಅವರು ಸಮಜಾಯಿಷಿ ನೀಡಿದರು.

‘ನನ್ನ ಮನಸ್ಸು ಬಿಗ್​ ಬಾಸ್​ ಮೇಲಿದೆ. ಆದರೆ ದೇಹ ಸಹಕರಿಸುತ್ತಿಲ್ಲ. ನಾನು ಅಸಮರ್ಥ. ನನಗೆ ಎಷ್ಟು ಆಗುತ್ತದೆಯೋ ಅದನ್ನೂ ಮೀರಿ ಮಾಡಿದ್ದೇನೆ. ನನಗೆ ಬೆನ್ನುಹುರಿ ಪೆಟ್ಟಾಗಿ ಆಪರೇಷನ್​ ಆಗಿದೆ. ಏನಾದರೂ ಹೆಚ್ಚು ಕಡಿಮೆ ಆಗಿಬಿಟ್ಟರೆ 92 ವರ್ಷದ ತಾಯಿ, ಕತ್ತೆ ದುಡಿದಂತೆ ದುಡಿಯುವ ಹೆಂಡತಿ ಇದ್ದಾಳೆ. ಇವರಿಗೆಲ್ಲ ಎಲ್ಲಿ ಹೊರೆ ಆಗುತ್ತೇನೋ ಅಂತ ಭಯ ಆಯಿತು’ ಎಂದು ಶಂಕರ್​ ಅವರು ತಮ್ಮ ಹಿನ್ನಡೆಗೆ ಕಾರಣ ನೀಡಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿರುವ ಮಹಿಳಾ ಸ್ಪರ್ಧಿಗಳ ಬಗ್ಗೆ ಶಂಕರ್​ ಅಶ್ವತ್ಥ್ ಬೇಸರ!

ನಿನ್ನೆ-ಮೊನ್ನೆ ಬಂದ ಬಚ್ಚಾ ಎಂದಿದ್ದ ಶಂಕರ್​ ಅಶ್ವತ್ಥ್​ ವಿರುದ್ಧ ಮನೆ ಮಂದಿಯೆಲ್ಲಾ ಒಟ್ಟಾಗಿ ತಿರುಗಿ ಬಿದ್ರು!

(Bigg Boss Kannada 8 Elimination: Shankar Ashwath apologizes his wife in front of Kiccha Sudeep on BBK8 stage)

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ