AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿರುವ ಮಹಿಳಾ ಸ್ಪರ್ಧಿಗಳ ಬಗ್ಗೆ ಶಂಕರ್​ ಅಶ್ವತ್ಥ್ ಬೇಸರ!

ಬಿಗ್​ ಬಾಸ್ ಮನೆಯಲ್ಲಿ ಹೆಣ್ಮಕ್ಳಿಗೆ ಯಾವುದೇ ಕೊರತೆ ಮಾಡಿಲ್ಲ. ಈಗ ಹೋಗಿರುವ ಸ್ಪರ್ಧಿಗಳು ವೀಕ್​ ಇದ್ದರೇ ಹೊರತು ಇಲ್ಲಿ ಯಾರೂ ಉದ್ದೇಶ ಪೂರ್ವಕವಾಗಿ ಹೆಣ್ಮಕ್ಳನ್ನು ಟಾರ್ಗೆಟ್​ ಮಾಡುತ್ತಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದರು ಸುದೀಪ್​.

ಬಿಗ್​ ಬಾಸ್​ ಮನೆಯಲ್ಲಿರುವ ಮಹಿಳಾ ಸ್ಪರ್ಧಿಗಳ ಬಗ್ಗೆ ಶಂಕರ್​ ಅಶ್ವತ್ಥ್ ಬೇಸರ!
ಶಂಕರ್​ ಅಶ್ವತ್ಥ್​
ರಾಜೇಶ್ ದುಗ್ಗುಮನೆ
|

Updated on: Mar 29, 2021 | 10:11 PM

Share

ಬಿಗ್​ ಬಾಸ್​ ಮನೆಯಲ್ಲಿ ನಾಲ್ಕು ಮಹಿಳಾ ಸ್ಪರ್ಧಿಗಳೇ ಮನೆಯಿಂದ ಹೊರ ಹೋಗಿದ್ದಾರೆ. ದಿನ ಕಳೆದಂತೆ ಮಹಿಳಾ ಸ್ಪರ್ಧಿಗಳ ಸಂಖ್ಯೆ ಕಡಿಮೆ ಆಗುತ್ತಿದೆ. ಈ ವಿಚಾರದ ಬಗ್ಗೆ ಶುಭಾ ಪೂಂಜಾ-ನಿಧಿ ಸುಬ್ಬಯ್ಯ ಚರ್ಚೆ ಕೂಡ ಮಾಡಿದ್ದರು. ಈ ಬಗ್ಗೆ ಕಿಚ್ಚ ಸುದೀಪ್​ ಖಡಕ್​ ಎಚ್ಚರಿಕೆ ಕೂಡ ನೀಡಿದ್ದರು. ಈಗ ಮಹಿಳಾ ಸ್ಪರ್ಧಿಗಳ ಬಗ್ಗೆ ಶಂಕರ್​ ಅಶ್ವತ್ಥ್​ ಬೇಸರ ಹೊರ ಹಾಕಿದ್ದಾರೆ. ಉತ್ತಮ ಆಟ ಎಂದು ಬಂದಾಗ ನಾವು ಪ್ರತಿ ಬಾರಿ ರಾಜೀವ್​, ಮಂಜು, ಅರವಿಂದ್​ ಅವರ ಹೆಸರನ್ನು ಆಯ್ಕೆ ಮಾಡುತ್ತೇವೆ. ಆದರೆ, ಅವರು ಒಂದು ಬಾರಿಯಾದರೂ ನಮ್ಮ ಹೆಸರನ್ನು ಎತ್ತಿಕೊಂಡರಾ? ಗಂಡುಮಕ್ಕಳು ಟಾಸ್ಕ್​ ಆಧಾರದಮೇಲೆ ದಿವ್ಯಾ ಉರುಡುಗ, ದಿವ್ಯಾ ಸುರೇಶ್​ ಅವರ ಹೆಸರನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ. ನಾವು ಬಕೆಟ್​ ಹಿಡ್ಯಲ್ಲ. ಇದ್ದಿದ್ದು ಇದ್ದಂಗೆ ಹೇಳ್ತೀವಿ. ಮನೆಯಲ್ಲಿ ಬರೀ ಹೆಣ್ಮಕ್ಳೇ ಹೋಗ್ತಿದಾರೆ ಎಂದು ನಿಧಿ ಬೇಸರ ಹೊರ ಹಾಕಿದ್ದರು. ಅಲ್ಲದೆ, ಇನ್ಮುಂದೆ ಹೆಣ್ಣುಮಕ್ಕಳನ್ನು ಮಾತ್ರ ಬೆಂಬಲಿಸಬೇಕು ಎನ್ನುವ ನಿರ್ಧಾರಕ್ಕೆ ಬರಲಾಯಿತು.

ಆದರೆ, ಈ ಬಗ್ಗೆ ಸುದೀಪ್​ ಎಚ್ಚರಿಕೆ ನೀಡಿದ್ದರು. ಬಿಗ್​ ಬಾಸ್ ಮನೆಯಲ್ಲಿ ಹೆಣ್ಮಕ್ಳಿಗೆ ಯಾವುದೇ ಕೊರತೆ ಮಾಡಿಲ್ಲ. ಈಗ ಹೋಗಿರುವ ಸ್ಪರ್ಧಿಗಳು ವೀಕ್​ ಇದ್ದರೇ ಹೊರತು ಇಲ್ಲಿ ಯಾರೂ ಉದ್ದೇಶ ಪೂರ್ವಕವಾಗಿ ಹೆಣ್ಮಕ್ಳನ್ನು ಟಾರ್ಗೆಟ್​ ಮಾಡುತ್ತಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದರು. ಇದಕ್ಕೆ ಶಂಕರ್​ ಅಶ್ವತ್ಥ್​ ಕೂಡ ಧ್ವನಿಗೂಡಿಸಿದ್ದರು.

ನಾಲ್ಕನೇ ವಾರದ ಎಲಿಮಿನೇಷನ್​ ನಂತರ ಶಂಕರ್​ ಅಶ್ವತ್ಥ್​ ಈ ವಿಚಾರವಾಗಿ ಮನೆ ಮಂದಿ ಜತೆ ಮಾತನಾಡಿದ್ದಾರೆ. ಎಲಿಮಿನೇಷನ್​ ವೇಳೆ ನಾಲ್ಕೈದು ಜನ ಇದ್ದಾಗ ಸೇವ್​ ಆಗೋದು ಚಂದ್ರಕಲಾ ಎಂದು ಹೆಣ್ಮಕ್ಳು ಹೇಳಿದ್ದರು. ಕೊನೆಯಲ್ಲಿ ಇಬ್ಬರೇ ಉಳಿದಾಗ ಚಂದ್ರಕಲಾ ಬದಲು ವಿಶ್ವನ ಹೆಸರನ್ನು ಹೇಳಿದ್ದರು. ಅವರಲ್ಲೇ ಈ ಬಗ್ಗೆ ಕ್ಲ್ಯಾರಿಟಿ ಇಲ್ಲ. ಇದು ಸರಿ ಅಲ್ಲ ಎಂದು ಮನೆಯಲ್ಲಿರುವ ಮಹಿಳೆಯರ ಬಗ್ಗೆ ಬೇಸರ ಹೊರ ಹಾಕಿದರು.

ಇದನ್ನೂ ಓದಿ: ನಿನ್ನೆ-ಮೊನ್ನೆ ಬಂದ ಬಚ್ಚಾ ಎಂದಿದ್ದ ಶಂಕರ್​ ಅಶ್ವತ್ಥ್​ ವಿರುದ್ಧ ಮನೆ ಮಂದಿಯೆಲ್ಲಾ ಒಟ್ಟಾಗಿ ತಿರುಗಿ ಬಿದ್ರು!

ಬಿಗ್​ ಬಾಸ್​​ ಗೆಲ್ಲೋದು ಅರವಿಂದ್​; ಮುಂದಿನ ವಾರ ಶಂಕರ್​ ಎಲಿಮಿನೇಟ್! ಹಿರಿಯ ನಟಿಯ ಭವಿಷ್ಯ ನಿಜವಾಗತ್ತಾ?

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ