AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಬಿಗ್​ ಬಾಸ್​ ಸ್ಪರ್ಧಿಗಳಿಗೆ ಶಾಕ್​; ಆರು ಪ್ರಮುಖರ ಮೇಲೆ ಎಲಿಮಿನೇಷನ್​ ತೂಗುಗತ್ತಿ!

Bigg Boss Kannada Season 8: ಮನೆಯ ಸ್ಟ್ರಾಂಗ್​ ಕಂಟೆಸ್ಟೆಂಟ್​ ಎನಿಸಿರುವ ಅರವಿಂದ್​ ಕೆಪಿ ಮೇಲೂ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿದೆ. ನಿಧಿ ಸುಬ್ಬಯ್ಯ, ಶುಭಾ ಪೂಂಜಾ ಕೂಡ ಬಿಗ್​ ಬಾಸ್​ ಮನೆಯಲ್ಲಿ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದಾರೆ.

Bigg Boss Kannada: ಬಿಗ್​ ಬಾಸ್​ ಸ್ಪರ್ಧಿಗಳಿಗೆ ಶಾಕ್​; ಆರು ಪ್ರಮುಖರ ಮೇಲೆ ಎಲಿಮಿನೇಷನ್​ ತೂಗುಗತ್ತಿ!
ಬಿಗ್​​ಬಾಸ್​​ ಕನ್ನಡ 8
ರಾಜೇಶ್ ದುಗ್ಗುಮನೆ
| Edited By: |

Updated on:Mar 30, 2021 | 10:28 AM

Share

ಬಿಗ್​ ಬಾಸ್​ ಐದನೇ ವಾರಕ್ಕೆ ಕಾಲಿಟ್ಟಿದೆ. ವೀಕ್​ ಇರುವ ಸ್ಪರ್ಧಿಗಳು ಈಗಾಗಲೇ ಬಿಗ್​ ಬಾಸ್​ ಮನೆಯಿಂದ ಹೊರ ಹೋಗಿದ್ದು, ಪ್ರಮುಖ ಎನಿಸಿರುವ 13 ಸ್ಪರ್ಧಿಗಳು ಬಿಗ್​ ಬಾಸ್​ ಮನೆಯಲ್ಲಿ ಉಳಿದುಕೊಂಡಿದ್ದಾರೆ. ಈ ಪೈಕಿ ಐದನೇ ವಾರದ ಎಲಿಮಿನೇಷನ್​ಗೆ 6 ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಎಲ್ಲಾ ಸ್ಪರ್ಧಿಗಳು ಪ್ರಮುಖರೇ ಅನ್ನೋದು ವಿಶೇಷ. ಮನೆಯ ಹಿರಿಯ ಸ್ಪರ್ಧಿ ಶಂಕರ್​ ಅಶ್ವತ್ಥ್​ಗೆ ಅತಿ ಹೆಚ್ಚು ಮತಗಳು ಬೀಳುವ ಮೂಲಕ ಅವರು ಮೊದಲು ನಾಮಿನೇಟ್​ ಆಗಿದ್ದಾರೆ. ಅವರು ಅಷ್ಟಾಗಿ ಮಾತನಾಡುತ್ತಿಲ್ಲ, ಟಾಸ್ಕ್​ ಚೆನ್ನಾಗಿ ಆಡ್ತಾರೆ ಆದರೆ, ಜಾಸ್ತಿ ಬೆರೆಯುವುದಿಲ್ಲ, ನಾಟಕ ಮಾಡ್ತಿದಾರೆ ಅನಿಸುತ್ತದೆ, ಅವರ ಆರೋಗ್ಯ ಸರಿಯಿಲ್ಲ ಎನ್ನುವ ಕಾರಣ ನೀಡಿ ಮನೆ ಮಂದಿ ನಾಮಿನೇಷನ್​ಗೆ ಅವರ ಹೆಸರನ್ನು ತೆಗೆದುಕೊಂಡರು.

ಶಮಂತ್​ ಕೂಡ ಈ ವಾರ ನಾಮಿನೇಟ್​ ಆಗಿದ್ದಾರೆ. ಅವರು ಬೆರೆಯುತ್ತಿಲ್ಲ ಎನ್ನುವ ಆರೋಪವನ್ನು ಮಾಡಿದರು. ಪ್ರಶಾಂತ್​ ಸಂಬರಗಿ ಕೂಡ ಈ ಬಾರಿ ನಾಮಿನೇಟ್​ ಸಾಲಿನಲ್ಲಿದ್ದಾರೆ. ಅವರು ಎಲ್ಲರ ಜತೆ ಮನಸ್ತಾಪ ಮಾಡಿಕೊಳ್ಳುತ್ತಾರೆ, ಅವರು ಕೆಲಸ ಮಾಡುವುದಿಲ್ಲ, ಬಿಗ್​ ಬಾಸ್​ ಮನೆಗೆ ಮುಳ್ಳು ಎನ್ನುವ ಆರೋಪವನ್ನು ಮನೆ ಮಂದಿ ಮಾಡಿದರು. ಹೀಗಾಗಿ, ಅವರು ಕೂಡ ನಾಮಿನೇಟ್ ಆದರು.

ಮನೆಯ ಸ್ಟ್ರಾಂಗ್​ ಕಂಟೆಸ್ಟೆಂಟ್​ ಎನಿಸಿರುವ ಅರವಿಂದ್​ ಕೆಪಿ ಮೇಲೂ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿದೆ. ನಿಧಿ ಸುಬ್ಬಯ್ಯ, ಶುಭಾ ಪೂಂಜಾ ಕೂಡ ಬಿಗ್​ ಬಾಸ್​ ಮನೆಯಲ್ಲಿ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದಾರೆ.

ದಿವ್ಯಾ ಸುರೇಶ್​ ಕೂಡ ಬಿಗ್​ ಬಾಸ್​ ಮನೆಯಲ್ಲಿ ನಾಮಿನೇಟ್​ ಆಗಿದ್ದರು. ಆದರೆ, ಮನೆಯ ಕ್ಯಾಪ್ಟನ್​ಗೆ ಒಬ್ಬರನ್ನು ಸೇಫ್​ ಮಾಡಬೇಕು ಎನ್ನುವ ಆಯ್ಕೆಯನ್ನು ಬಿಗ್ ಬಾಸ್​ ನೀಡಿದರು. ಆಗ ಮನೆಯ ಕ್ಯಾಪ್ಟನ್​ ವಿಶ್ವ ಅವರು ದಿವ್ಯಾ ಸುರೇಶ್​ ಅವರನ್ನು ಸೇಫ್​ ಮಾಡಿದರು. ಈ ಬಾರಿ ನಾಮಿನೇಟ್​ ಆಗಿರುವ ಎಲ್ಲಾ ಸ್ಪರ್ಧಿಗಳು ತುಂಬಾನೇ ಸ್ಟ್ರಾಂಗ್​ ಎನ್ನುವ ಮಾತುಗಳನ್ನು ಮನೆ ಮಂದಿ ಹೇಳಿಕೊಂಡರು.

ಇದನ್ನೂ ಓದಿ: BBK8 Elimination: ಬಿಗ್​ ಬಾಸ್​ ಮನೆಯಿಂದ ಚಂದ್ರಕಲಾ ಮೋಹನ್ ಎಲಿಮಿನೇಟ್​

ಬಿಗ್​ ಬಾಸ್​​ ಗೆಲ್ಲೋದು ಅರವಿಂದ್​; ಮುಂದಿನ ವಾರ ಶಂಕರ್​ ಎಲಿಮಿನೇಟ್! ಹಿರಿಯ ನಟಿಯ ಭವಿಷ್ಯ ನಿಜವಾಗತ್ತಾ?

Published On - 7:13 am, Tue, 30 March 21

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್