AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಬಿಗ್​ ಬಾಸ್​ ಸ್ಪರ್ಧಿಗಳಿಗೆ ಶಾಕ್​; ಆರು ಪ್ರಮುಖರ ಮೇಲೆ ಎಲಿಮಿನೇಷನ್​ ತೂಗುಗತ್ತಿ!

Bigg Boss Kannada Season 8: ಮನೆಯ ಸ್ಟ್ರಾಂಗ್​ ಕಂಟೆಸ್ಟೆಂಟ್​ ಎನಿಸಿರುವ ಅರವಿಂದ್​ ಕೆಪಿ ಮೇಲೂ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿದೆ. ನಿಧಿ ಸುಬ್ಬಯ್ಯ, ಶುಭಾ ಪೂಂಜಾ ಕೂಡ ಬಿಗ್​ ಬಾಸ್​ ಮನೆಯಲ್ಲಿ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದಾರೆ.

Bigg Boss Kannada: ಬಿಗ್​ ಬಾಸ್​ ಸ್ಪರ್ಧಿಗಳಿಗೆ ಶಾಕ್​; ಆರು ಪ್ರಮುಖರ ಮೇಲೆ ಎಲಿಮಿನೇಷನ್​ ತೂಗುಗತ್ತಿ!
ಬಿಗ್​​ಬಾಸ್​​ ಕನ್ನಡ 8
ರಾಜೇಶ್ ದುಗ್ಗುಮನೆ
| Edited By: |

Updated on:Mar 30, 2021 | 10:28 AM

Share

ಬಿಗ್​ ಬಾಸ್​ ಐದನೇ ವಾರಕ್ಕೆ ಕಾಲಿಟ್ಟಿದೆ. ವೀಕ್​ ಇರುವ ಸ್ಪರ್ಧಿಗಳು ಈಗಾಗಲೇ ಬಿಗ್​ ಬಾಸ್​ ಮನೆಯಿಂದ ಹೊರ ಹೋಗಿದ್ದು, ಪ್ರಮುಖ ಎನಿಸಿರುವ 13 ಸ್ಪರ್ಧಿಗಳು ಬಿಗ್​ ಬಾಸ್​ ಮನೆಯಲ್ಲಿ ಉಳಿದುಕೊಂಡಿದ್ದಾರೆ. ಈ ಪೈಕಿ ಐದನೇ ವಾರದ ಎಲಿಮಿನೇಷನ್​ಗೆ 6 ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಎಲ್ಲಾ ಸ್ಪರ್ಧಿಗಳು ಪ್ರಮುಖರೇ ಅನ್ನೋದು ವಿಶೇಷ. ಮನೆಯ ಹಿರಿಯ ಸ್ಪರ್ಧಿ ಶಂಕರ್​ ಅಶ್ವತ್ಥ್​ಗೆ ಅತಿ ಹೆಚ್ಚು ಮತಗಳು ಬೀಳುವ ಮೂಲಕ ಅವರು ಮೊದಲು ನಾಮಿನೇಟ್​ ಆಗಿದ್ದಾರೆ. ಅವರು ಅಷ್ಟಾಗಿ ಮಾತನಾಡುತ್ತಿಲ್ಲ, ಟಾಸ್ಕ್​ ಚೆನ್ನಾಗಿ ಆಡ್ತಾರೆ ಆದರೆ, ಜಾಸ್ತಿ ಬೆರೆಯುವುದಿಲ್ಲ, ನಾಟಕ ಮಾಡ್ತಿದಾರೆ ಅನಿಸುತ್ತದೆ, ಅವರ ಆರೋಗ್ಯ ಸರಿಯಿಲ್ಲ ಎನ್ನುವ ಕಾರಣ ನೀಡಿ ಮನೆ ಮಂದಿ ನಾಮಿನೇಷನ್​ಗೆ ಅವರ ಹೆಸರನ್ನು ತೆಗೆದುಕೊಂಡರು.

ಶಮಂತ್​ ಕೂಡ ಈ ವಾರ ನಾಮಿನೇಟ್​ ಆಗಿದ್ದಾರೆ. ಅವರು ಬೆರೆಯುತ್ತಿಲ್ಲ ಎನ್ನುವ ಆರೋಪವನ್ನು ಮಾಡಿದರು. ಪ್ರಶಾಂತ್​ ಸಂಬರಗಿ ಕೂಡ ಈ ಬಾರಿ ನಾಮಿನೇಟ್​ ಸಾಲಿನಲ್ಲಿದ್ದಾರೆ. ಅವರು ಎಲ್ಲರ ಜತೆ ಮನಸ್ತಾಪ ಮಾಡಿಕೊಳ್ಳುತ್ತಾರೆ, ಅವರು ಕೆಲಸ ಮಾಡುವುದಿಲ್ಲ, ಬಿಗ್​ ಬಾಸ್​ ಮನೆಗೆ ಮುಳ್ಳು ಎನ್ನುವ ಆರೋಪವನ್ನು ಮನೆ ಮಂದಿ ಮಾಡಿದರು. ಹೀಗಾಗಿ, ಅವರು ಕೂಡ ನಾಮಿನೇಟ್ ಆದರು.

ಮನೆಯ ಸ್ಟ್ರಾಂಗ್​ ಕಂಟೆಸ್ಟೆಂಟ್​ ಎನಿಸಿರುವ ಅರವಿಂದ್​ ಕೆಪಿ ಮೇಲೂ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿದೆ. ನಿಧಿ ಸುಬ್ಬಯ್ಯ, ಶುಭಾ ಪೂಂಜಾ ಕೂಡ ಬಿಗ್​ ಬಾಸ್​ ಮನೆಯಲ್ಲಿ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದಾರೆ.

ದಿವ್ಯಾ ಸುರೇಶ್​ ಕೂಡ ಬಿಗ್​ ಬಾಸ್​ ಮನೆಯಲ್ಲಿ ನಾಮಿನೇಟ್​ ಆಗಿದ್ದರು. ಆದರೆ, ಮನೆಯ ಕ್ಯಾಪ್ಟನ್​ಗೆ ಒಬ್ಬರನ್ನು ಸೇಫ್​ ಮಾಡಬೇಕು ಎನ್ನುವ ಆಯ್ಕೆಯನ್ನು ಬಿಗ್ ಬಾಸ್​ ನೀಡಿದರು. ಆಗ ಮನೆಯ ಕ್ಯಾಪ್ಟನ್​ ವಿಶ್ವ ಅವರು ದಿವ್ಯಾ ಸುರೇಶ್​ ಅವರನ್ನು ಸೇಫ್​ ಮಾಡಿದರು. ಈ ಬಾರಿ ನಾಮಿನೇಟ್​ ಆಗಿರುವ ಎಲ್ಲಾ ಸ್ಪರ್ಧಿಗಳು ತುಂಬಾನೇ ಸ್ಟ್ರಾಂಗ್​ ಎನ್ನುವ ಮಾತುಗಳನ್ನು ಮನೆ ಮಂದಿ ಹೇಳಿಕೊಂಡರು.

ಇದನ್ನೂ ಓದಿ: BBK8 Elimination: ಬಿಗ್​ ಬಾಸ್​ ಮನೆಯಿಂದ ಚಂದ್ರಕಲಾ ಮೋಹನ್ ಎಲಿಮಿನೇಟ್​

ಬಿಗ್​ ಬಾಸ್​​ ಗೆಲ್ಲೋದು ಅರವಿಂದ್​; ಮುಂದಿನ ವಾರ ಶಂಕರ್​ ಎಲಿಮಿನೇಟ್! ಹಿರಿಯ ನಟಿಯ ಭವಿಷ್ಯ ನಿಜವಾಗತ್ತಾ?

Published On - 7:13 am, Tue, 30 March 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ