AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಬಿಗ್​ ಬಾಸ್​ ಸ್ಪರ್ಧಿಗಳಿಗೆ ಶಾಕ್​; ಆರು ಪ್ರಮುಖರ ಮೇಲೆ ಎಲಿಮಿನೇಷನ್​ ತೂಗುಗತ್ತಿ!

Bigg Boss Kannada Season 8: ಮನೆಯ ಸ್ಟ್ರಾಂಗ್​ ಕಂಟೆಸ್ಟೆಂಟ್​ ಎನಿಸಿರುವ ಅರವಿಂದ್​ ಕೆಪಿ ಮೇಲೂ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿದೆ. ನಿಧಿ ಸುಬ್ಬಯ್ಯ, ಶುಭಾ ಪೂಂಜಾ ಕೂಡ ಬಿಗ್​ ಬಾಸ್​ ಮನೆಯಲ್ಲಿ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದಾರೆ.

Bigg Boss Kannada: ಬಿಗ್​ ಬಾಸ್​ ಸ್ಪರ್ಧಿಗಳಿಗೆ ಶಾಕ್​; ಆರು ಪ್ರಮುಖರ ಮೇಲೆ ಎಲಿಮಿನೇಷನ್​ ತೂಗುಗತ್ತಿ!
ಬಿಗ್​​ಬಾಸ್​​ ಕನ್ನಡ 8
Follow us
ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:Mar 30, 2021 | 10:28 AM

ಬಿಗ್​ ಬಾಸ್​ ಐದನೇ ವಾರಕ್ಕೆ ಕಾಲಿಟ್ಟಿದೆ. ವೀಕ್​ ಇರುವ ಸ್ಪರ್ಧಿಗಳು ಈಗಾಗಲೇ ಬಿಗ್​ ಬಾಸ್​ ಮನೆಯಿಂದ ಹೊರ ಹೋಗಿದ್ದು, ಪ್ರಮುಖ ಎನಿಸಿರುವ 13 ಸ್ಪರ್ಧಿಗಳು ಬಿಗ್​ ಬಾಸ್​ ಮನೆಯಲ್ಲಿ ಉಳಿದುಕೊಂಡಿದ್ದಾರೆ. ಈ ಪೈಕಿ ಐದನೇ ವಾರದ ಎಲಿಮಿನೇಷನ್​ಗೆ 6 ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಎಲ್ಲಾ ಸ್ಪರ್ಧಿಗಳು ಪ್ರಮುಖರೇ ಅನ್ನೋದು ವಿಶೇಷ. ಮನೆಯ ಹಿರಿಯ ಸ್ಪರ್ಧಿ ಶಂಕರ್​ ಅಶ್ವತ್ಥ್​ಗೆ ಅತಿ ಹೆಚ್ಚು ಮತಗಳು ಬೀಳುವ ಮೂಲಕ ಅವರು ಮೊದಲು ನಾಮಿನೇಟ್​ ಆಗಿದ್ದಾರೆ. ಅವರು ಅಷ್ಟಾಗಿ ಮಾತನಾಡುತ್ತಿಲ್ಲ, ಟಾಸ್ಕ್​ ಚೆನ್ನಾಗಿ ಆಡ್ತಾರೆ ಆದರೆ, ಜಾಸ್ತಿ ಬೆರೆಯುವುದಿಲ್ಲ, ನಾಟಕ ಮಾಡ್ತಿದಾರೆ ಅನಿಸುತ್ತದೆ, ಅವರ ಆರೋಗ್ಯ ಸರಿಯಿಲ್ಲ ಎನ್ನುವ ಕಾರಣ ನೀಡಿ ಮನೆ ಮಂದಿ ನಾಮಿನೇಷನ್​ಗೆ ಅವರ ಹೆಸರನ್ನು ತೆಗೆದುಕೊಂಡರು.

ಶಮಂತ್​ ಕೂಡ ಈ ವಾರ ನಾಮಿನೇಟ್​ ಆಗಿದ್ದಾರೆ. ಅವರು ಬೆರೆಯುತ್ತಿಲ್ಲ ಎನ್ನುವ ಆರೋಪವನ್ನು ಮಾಡಿದರು. ಪ್ರಶಾಂತ್​ ಸಂಬರಗಿ ಕೂಡ ಈ ಬಾರಿ ನಾಮಿನೇಟ್​ ಸಾಲಿನಲ್ಲಿದ್ದಾರೆ. ಅವರು ಎಲ್ಲರ ಜತೆ ಮನಸ್ತಾಪ ಮಾಡಿಕೊಳ್ಳುತ್ತಾರೆ, ಅವರು ಕೆಲಸ ಮಾಡುವುದಿಲ್ಲ, ಬಿಗ್​ ಬಾಸ್​ ಮನೆಗೆ ಮುಳ್ಳು ಎನ್ನುವ ಆರೋಪವನ್ನು ಮನೆ ಮಂದಿ ಮಾಡಿದರು. ಹೀಗಾಗಿ, ಅವರು ಕೂಡ ನಾಮಿನೇಟ್ ಆದರು.

ಮನೆಯ ಸ್ಟ್ರಾಂಗ್​ ಕಂಟೆಸ್ಟೆಂಟ್​ ಎನಿಸಿರುವ ಅರವಿಂದ್​ ಕೆಪಿ ಮೇಲೂ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿದೆ. ನಿಧಿ ಸುಬ್ಬಯ್ಯ, ಶುಭಾ ಪೂಂಜಾ ಕೂಡ ಬಿಗ್​ ಬಾಸ್​ ಮನೆಯಲ್ಲಿ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದಾರೆ.

ದಿವ್ಯಾ ಸುರೇಶ್​ ಕೂಡ ಬಿಗ್​ ಬಾಸ್​ ಮನೆಯಲ್ಲಿ ನಾಮಿನೇಟ್​ ಆಗಿದ್ದರು. ಆದರೆ, ಮನೆಯ ಕ್ಯಾಪ್ಟನ್​ಗೆ ಒಬ್ಬರನ್ನು ಸೇಫ್​ ಮಾಡಬೇಕು ಎನ್ನುವ ಆಯ್ಕೆಯನ್ನು ಬಿಗ್ ಬಾಸ್​ ನೀಡಿದರು. ಆಗ ಮನೆಯ ಕ್ಯಾಪ್ಟನ್​ ವಿಶ್ವ ಅವರು ದಿವ್ಯಾ ಸುರೇಶ್​ ಅವರನ್ನು ಸೇಫ್​ ಮಾಡಿದರು. ಈ ಬಾರಿ ನಾಮಿನೇಟ್​ ಆಗಿರುವ ಎಲ್ಲಾ ಸ್ಪರ್ಧಿಗಳು ತುಂಬಾನೇ ಸ್ಟ್ರಾಂಗ್​ ಎನ್ನುವ ಮಾತುಗಳನ್ನು ಮನೆ ಮಂದಿ ಹೇಳಿಕೊಂಡರು.

ಇದನ್ನೂ ಓದಿ: BBK8 Elimination: ಬಿಗ್​ ಬಾಸ್​ ಮನೆಯಿಂದ ಚಂದ್ರಕಲಾ ಮೋಹನ್ ಎಲಿಮಿನೇಟ್​

ಬಿಗ್​ ಬಾಸ್​​ ಗೆಲ್ಲೋದು ಅರವಿಂದ್​; ಮುಂದಿನ ವಾರ ಶಂಕರ್​ ಎಲಿಮಿನೇಟ್! ಹಿರಿಯ ನಟಿಯ ಭವಿಷ್ಯ ನಿಜವಾಗತ್ತಾ?

Published On - 7:13 am, Tue, 30 March 21

ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಬಿಜೆಪಿ ಮತ್ತು ನಾನು ಪರಸ್ಪರ ಅವಲಂಬಿತರಾಗಿದ್ದೇವೆ: ಬಸನಗೌಡ ಯತ್ನಾಳ್
ಬಿಜೆಪಿ ಮತ್ತು ನಾನು ಪರಸ್ಪರ ಅವಲಂಬಿತರಾಗಿದ್ದೇವೆ: ಬಸನಗೌಡ ಯತ್ನಾಳ್
ರಾಷ್ಟ್ರಪತಿ ಭೇಟಿಗೆ ತೆರಳುವೆ, ಮೋದಿ ಭೇಟಿಗೂ ಸಮಯ ಕೇಳಿದ್ದೇನೆ: ಸಿಎಂ
ರಾಷ್ಟ್ರಪತಿ ಭೇಟಿಗೆ ತೆರಳುವೆ, ಮೋದಿ ಭೇಟಿಗೂ ಸಮಯ ಕೇಳಿದ್ದೇನೆ: ಸಿಎಂ
ರಾಜ್ಯ ರಾಜ್ಯಕಾರಣದಲ್ಲಿ ಯಡಿಯೂರಪ್ಪ ಸಕ್ರಿಯರಾಗುವ ಹಿಂದೆ ಕಾರಣವಿದೆಯೇ?
ರಾಜ್ಯ ರಾಜ್ಯಕಾರಣದಲ್ಲಿ ಯಡಿಯೂರಪ್ಪ ಸಕ್ರಿಯರಾಗುವ ಹಿಂದೆ ಕಾರಣವಿದೆಯೇ?
ಈಶ್ವರಪ್ಪರ ಪ್ರಕಾರ ಅಲ್ಪಸಂಖ್ಯಾತರು ಅನ್ನೋದು ಕೂಡ ಒಂದು ಧರ್ಮ!
ಈಶ್ವರಪ್ಪರ ಪ್ರಕಾರ ಅಲ್ಪಸಂಖ್ಯಾತರು ಅನ್ನೋದು ಕೂಡ ಒಂದು ಧರ್ಮ!
ತಾಯಿಗೆ ಹೊಡೆಯುವಾಗ ತಂದೆಗೆ ಕೈಮುಗಿದು ಬೇಡಿದ ಮಗಳು
ತಾಯಿಗೆ ಹೊಡೆಯುವಾಗ ತಂದೆಗೆ ಕೈಮುಗಿದು ಬೇಡಿದ ಮಗಳು
ಆರೋಪಿಗಳು ಓಡಿ ಹೋಗಲು ಅವಕಾಶ ಮಾಡಿಕೊಟ್ಟ ಇಬ್ಬರು ಪೊಲೀಸರ ಅಮಾನತು
ಆರೋಪಿಗಳು ಓಡಿ ಹೋಗಲು ಅವಕಾಶ ಮಾಡಿಕೊಟ್ಟ ಇಬ್ಬರು ಪೊಲೀಸರ ಅಮಾನತು