AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಾರ್ ನಿರ್ದೇಶಕ ಶಂಕರ್​ಗೆ ನೋ ಹೇಳಿದ ಸ್ಟಾರ್ ನಟರಿವರು

Shankar: ನಿರ್ದೇಶಕ ಶಂಕರ್ ನಿರ್ದೇಶಿಸಿ ರಾಮ್ ಚರಣ್ ನಟಿಸಿರುವ ‘ಗೇಮ್ ಚೇಂಜರ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಮಾತನಾಡಿದ ಶಂಕರ್, ತಾವು ತೆಲುಗಿನ ಯಾವ ಯಾವ ಸ್ಟಾರ್ ನಟರೊಟ್ಟಿಗೆ ಸಿನಿಮಾ ಮಾಡಲು ಪ್ರಯತ್ನಿಸಿ ವಿಫಲನಾದೆ ಎಂದು ಹೇಳಿಕೊಂಡಿದ್ದಾರೆ.

ಸ್ಟಾರ್ ನಿರ್ದೇಶಕ ಶಂಕರ್​ಗೆ ನೋ ಹೇಳಿದ ಸ್ಟಾರ್ ನಟರಿವರು
Shankar
ಮಂಜುನಾಥ ಸಿ.
|

Updated on: Dec 24, 2024 | 3:38 PM

Share

ಭಾರತದ ಈಗಿನ ಸ್ಟಾರ್ ನಿರ್ದೇಶಕ ಯಾರೆಂದರೆ ಕೇಳುವ ಒಂದೇ ಹೆಸರು ರಾಜಮೌಳಿ. ಆದರೆ ಹದಿನೈದು, ಇಪ್ಪತ್ತು ವರ್ಷದ ಹಿಂದೆ ಪರಿಸ್ಥಿತಿ ಹೀಗಿರಲಿಲ್ಲ. ಆಗ ಶಂಕರ್ ಭಾರತದ ಸ್ಟಾರ್ ನಿರ್ದೇಶಕ. ಅಸಾಧ್ಯ ಎನಿಸುವುದನ್ನು ತೆರೆಯ ಮೇಲೆ ತರುತ್ತಿದ್ದರು. ಅವರ ಹಾಡುಗಳು, ಮೇಕಿಂಗ್ ಭಾರಿ ಅದ್ಧೂರಿಯಾಗಿರುತ್ತಿದ್ದವು. ಶಂಕರ್ ಸಿನಿಮಾದ ಆಕ್ಷನ್ ದೃಶ್ಯಗಳನ್ನು ಹಾಲಿವುಡ್ ಸಿನಿಮಾಗಳಿಗೆ ಹೋಲಿಕೆ ಮಾಡಲಾಗುತ್ತಿತ್ತು. ಅವರ ಸಿನಿಮಾಗಳು ಆಗಲೇ ಬಾಲಿವುಡ್ ಸಿನಿಮಾಗಳನ್ನು ಹಿಂದೆ ಹಾಕಿದ್ದವು. ಆದರೆ ಇತ್ತೀಚೆ ಶಂಕರ್ ಅವರ ಹವಾ ತುಸು ಕಡಿಮೆ ಆಗಿದೆ. ಅಂದಹಾಗೆ ಶಂಕರ್ ಹಲವು ಸ್ಟಾರ್ ನಟರೊಟ್ಟಿಗೆ ಸಿನಿಮಾ ಮಾಡಲು ಪ್ರಯತ್ನಿಸಿ ವಿಫಲವಾಗಿದ್ದರಂತೆ ಈ ಬಗ್ಗೆ ಅವರೇ ಮಾತನಾಡಿದ್ದಾರೆ.

ರಜನೀಕಾಂತ್, ಕಮಲ್ ಹಾಸನ್, ವಿಜಯ್ ಸೇರಿದಂತೆ ಹಲವು ಸ್ಟಾರ್ ನಟರೊಟ್ಟಿಗೆ ಸಿನಿಮಾ ಮಾಡಿರುವ ಶಂಕರ್​ಗೆ ಮೆಗಾಸ್ಟಾರ್ ಚಿರಂಜೀವಿ ಅವರೊಟ್ಟಿಗೆ ತೆಲುಗಿನಲ್ಲಿ ಸಿನಿಮಾ ಮಾಡುವ ಆಸೆಯಿತ್ತಂತೆ. ಇದಕ್ಕಾಗಿ ಸಾಕಷ್ಟು ಬಾರಿ ಪ್ರಯತ್ನ ಮಾಡಿದ್ದರೂ ಅದು ಸಾಧ್ಯವಾಗಲಿಲ್ಲವಂತೆ. ಆದರೆ ಈಗ ಅವರು ಮೆಗಾಸ್ಟಾರ್ ಚಿರಂಜೀವಿ ಅವರ ಪುತ್ರ ರಾಮ್ ಚರಣ್ ಜೊತೆ ಸಿನಿಮಾ ಮಾಡಿದ್ದಾರೆ. ಶಂಕರ್ ಹಾಗೂ ರಾಮ್ ಚರಣ್ ತೇಜ ಕಾಂಬಿನೇಷನ್​ನ ‘ಗೇಮ್ ಚೇಂಜರ್’ ಸಿನಿಮಾ ಕೆಲವೇ ದಿನಗಳಲ್ಲಿ ತೆರೆಗೆ ಬರಲಿದೆ.

ಇದನ್ನೂ ಓದಿ:‘ಪುಷ್ಪ 2’ ಎಫೆಕ್ಟ್​, ರಾಮ್ ಚರಣ್​ ಸಿನಿಮಾಕ್ಕೆ ಇಲ್ಲ ವಿಶೇಷ ಶೋ, ಭಾರಿ ನಷ್ಟ

ಮೆಗಾಸ್ಟಾರ್ ಚಿರಂಜೀವಿ ಮಾತ್ರವೇ ಅಲ್ಲದೆ ತೆಲುಗಿನ ಮತ್ತೊಬ್ಬ ಸ್ಟಾರ್ ನಟ ಮಹೇಶ್ ಬಾಬು ಅವರೊಟ್ಟಿಗೂ ಸಿನಿಮಾ ಮಾಡಲು ಶಂಕರ್ ಪ್ರಯತ್ನಿಸಿದ್ದರಂತೆ. ಆದರೆ ಆ ಸಿನಿಮಾ ಸಹ ಸೆಟ್ಟೇರಲಿಲ್ಲವಂತೆ. ಸಿನಿಮಾ ಕತೆ ಎಲ್ಲವೂ ಇಷ್ಟವಾದರೂ ಬೇರೆ ಬೇರೆ ಕಾರಣಗಳಿಗಾಗಿ ಸಿನಿಮಾ ಸೆಟ್ಟೇರಲಿಲ್ಲವಂತೆ. ಇದು ಮಾತ್ರವೇ ಅಲ್ಲದೆ, ಕೋವಿಡ್ ಸಮಯದಲ್ಲಿ ನಟ ಪ್ರಭಾಸ್ ಜೊತೆಗೂ ಕತೆಯೊಂದರ ಬಗ್ಗೆ ಚರ್ಚಿಸಿದ್ದರಂತೆ ಶಂಕರ್. ಪ್ರಭಾಸ್ ಸಹ ಕತೆ ಕೇಳಿದ್ದರಂತೆ ಆದರೆ ಆ ಸಿನಿಮಾ ಸಹ ಅನಿವಾರ್ಯ ಕಾರಣಗಳಿಂದಾಗಿ ಸೆಟ್ಟೇರಲಿಲ್ಲವಂತೆ.

ಇದೀಗ ಶಂಕರ್, ರಾಮ್ ಚರಣ್​ಗಾಗಿ ‘ಗೇಮ್ ಚೇಂಜರ್’ ಸಿನಿಮಾ ನಿರ್ದೇಶಿಸಿದ್ದಾರೆ. ಇದು ರಾಜಕೀಯ ಥ್ರಿಲ್ಲರ್ ಕತೆಯುಳ್ಳ ಸಿನಿಮಾ ಎನ್ನಲಾಗುತ್ತಿದೆ. ಐಎಎಸ್ ಅಧಿಕಾರಿಯ ಪಾತ್ರದಲ್ಲಿ ರಾಮ್ ಚರಣ್ ನಟಿಸಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾದಲ್ಲಿ ಕಿಯಾರಾ ಅಡ್ವಾಣಿ ನಾಯಕಿ. ಸಿನಿಮಾದಲ್ಲಿ ತೆಲುಗು ನಟ ಸುನಿಲ್, ತಮಿಳು ನಟ ಎಸ್​ಜೆ ಸೂರ್ಯ ಸೇರಿದಂತೆ ಇನ್ನೂ ಕೆಲವು ಸ್ಟಾರ್ ನಟರಿದ್ದಾರೆ. ಸಿನಿಮಾಕ್ಕೆ ಎಸ್ ತಮನ್ ಸಂಗೀತ ನೀಡಿದ್ದಾರೆ. ಶಂಕರ್ ನಿರ್ದೇಶನದ ‘ಇಂಡಿಯನ್ 2’ ಸಿನಿಮಾ ಕೆಲ ತಿಂಗಳ ಹಿಂದಷ್ಟೆ ಬಿಡುಗಡೆ ಆಗಿತ್ತು. ಸಿನಿಮಾ ಫ್ಲಾಪ್ ಆಯ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?