AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಂಕರ್​ಗೆ ಮುಂದಿದೆ ಇನ್ನಷ್ಟು ಕಷ್ಟದ ದಿನಗಳು? ಸಿಗಲ್ಲ ಸಿನಿಮಾ ಆಫರ್?

ಶಂಕರ್ ಅವರ ಚಿತ್ರಗಳು ಒಂದು ಕಾಲದಲ್ಲಿ ಬ್ರಾಂಡ್ ಆಗಿದ್ದವು. ಆದರೆ ಇತ್ತೀಚಿನ ಚಿತ್ರಗಳಾದ 'ಇಂಡಿಯನ್ 2' ಮತ್ತು 'ಗೇಮ್ ಚೇಂಜರ್' ನಿರೀಕ್ಷೆಗಳನ್ನು ತಲುಪಿಲ್ಲ. ಇದರಿಂದ ನಿರ್ಮಾಪಕರು ಅವರ ಮುಂಬರುವ ಚಿತ್ರಗಳ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ. 'ವೀರಯುಗ ನಾಯಗನ್ ವೇಲ್ಪಾರಿ' ಚಿತ್ರದ ಮೇಲೆ ಭಾರೀ ನಿರೀಕ್ಷೆ ಇದೆ ಆದರೆ 'ಗೇಮ್ ಚೇಂಜರ್' ಯಶಸ್ಸು ಇದಕ್ಕೆ ನಿರ್ಣಾಯಕವಾಗಿದೆ.

ಶಂಕರ್​ಗೆ ಮುಂದಿದೆ ಇನ್ನಷ್ಟು ಕಷ್ಟದ ದಿನಗಳು? ಸಿಗಲ್ಲ ಸಿನಿಮಾ ಆಫರ್?
ಶಂಕರ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Jan 12, 2025 | 6:30 AM

Share

ನಿರ್ದೇಶಕ ಶಂಕರ್ ಅವರ ಹೆಸರು ಒಂದು ಕಾಲದಲ್ಲಿ ಬ್ರಾಂಡ್ ಆಗಿತ್ತು. ಅವರ ಸಿನಿಮಾಕ್ಕಾಗಿ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದರು. ಆದರೆ ಹಲವಾರು ವರ್ಷಗಳಿಂದ ಅವರ ರೇಂಜ್​ನಲ್ಲಿ ಒಂದೇ ಒಂದು ಸಿನಿಮಾ ಬರಲಿಲ್ಲ. ವಿಕ್ರಮ್ ಅಭಿನಯದ ‘ಐ’ ಚಿತ್ರದ ನಂತರ ಶಂಕರ್ ಅವರ ‘ನಂಬನ್’ ಸಿನಿಮಾ ಬಂದು ಹೆಚ್ಚು ಗಮನ ಸೆಳೆದಿಲ್ಲ. ಭಾರೀ ನಿರೀಕ್ಷೆಗಳ ನಡುವೆ ಬಂದ ‘2.0’ ಅಷ್ಟಾಗಿ ಗಮನ ಸೆಳೆದಿಲ್ಲ. ಈಗ ಅವರ ಮುಂಬರುವ ಸಿನಿಮಾಗಳ ಮೇಲೆ ನಿರ್ಮಾಪಕರಿ ಭಯ ಶುರುವಾಗಿದೆ. ದೊಡ್ಡ ಬಜೆಟ್​ನಲ್ಲಿ ಸಿನಿಮಾ ನಿರ್ಮಾಣ ಮಾಡಲು ನಿರ್ಮಾಪಕರು ಮುಂದೆ ಬರುತ್ತಿಲ್ಲ.

ಕಳೆದ ವರ್ಷ ರಿಲೀಸ್ ಆದ ‘ಇಂಡಿಯನ್ 2’ ತೀವ್ರವಾಗಿ ಸೋತಿತ್ತು. ಬಿಗ್ ಬಜೆಟ್​ನಲ್ಲಿ ಬಂದ ಸಿನಿಮಾ ನಷ್ಟ ಉಂಟು ಮಾಡಿತ್ತು. ಇತ್ತೀಚೆಗೆ ಬಿಡುಗಡೆಯಾದ ‘ಗೇಮ್ ಚೇಂಜರ್’ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ. ಈ ಚಿತ್ರದ ಫಲಿತಾಂಶದ ಮೇಲೆ ಶಂಕರ್ ಅವರ ವೃತ್ತಿ ಜೀವನ ನಿಂತಿದೆ ಎನ್ನಲಾಗಿದೆ. ಇತ್ತೀಚಿಗೆ ಹೆಚ್ಚಾಗಿ ವಿಎಫ್ ಎಕ್ಸ್ ಚಿತ್ರಗಳನ್ನು ಮಾಡುತ್ತಿರುವ ಶಂಕರ್ ಬಹಳ ವರ್ಷಗಳ ನಂತರ ರಾಜಕೀಯ ಸಿನಿಮಾ ಮಾಡಿದ್ದಾರೆ.

‘ಗೇಮ್ ಚೇಂಜರ್’ ನಂತರ ‘ಇಂಡಿಯನ್ 3’ ಮಾಡಬೇಕಿದೆ. ಸದ್ಯ ಈ ಸಿನಿಮಾ ಸಾಧಾರಣ ಗಳಿಕೆ ಮಾಡುತ್ತಿದೆ. ಒಂದು ವೇಳೆ ‘ಗೇಮ್ ಚೇಂಜರ್’ ಮೂಲಕ ನಷ್ಟ ಆದರೆ ‘ಇಂಡಿಯನ್ 3’ ಸೆಟ್ಟೇರುವುದು ಅನುಮಾನ ಆಗಲಿದೆ. ‘ಇಂಡಿಯನ್ 2’ ದುರಂತ ಆಗಿರುವುದರಿಂದ ಮೂರನೇ ಭಾಗಕ್ಕಾಗಿ ಯಾರೂ ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿಲ್ಲ. ಶಂಕರ್ ಈಗಾಗಲೇ ಮೂರನೇ ಸಿನಿಮಾಗಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಶಂಕರ್ ಅವರು ‘ವೀರಯುಗ ನಾಯಗನ್ ವೇಲ್ಪಾರಿ’ ಪುಸ್ತಕವನ್ನು ಆಧರಿಸಿ 3 ಭಾಗಗಳ ಚಿತ್ರವನ್ನು ಮಾಡಲು ಯೋಜಿಸಿದ್ದಾರೆ.

ಇದನ್ನೂ ಓದಿ: ಶಂಕರ್​ನಾಗ್ ಸ್ಟೈಲ್​ನಲ್ಲಿ ಮಾತನಾಡಿದ್ದ ಯಶ್; ಎಷ್ಟು ಪರ್ಫೆಕ್ಟ್ ಮಿಮಿಕ್ರಿ ನೋಡಿ

ವಾಸ್ತವವಾಗಿ ‘ವೀರಯುಗ ನಾಯಗನ್ ವೇಲ್ಪಾರಿ’ ಶಂಕರ್ ಅವರ ಕನಸಿನ ಯೋಜನೆಯಾಗಿದೆ. ಶಂಕರ್ ಕೂಡ ಈ ಸಿನಿಮಾವನ್ನು ಖಚಿತಪಡಿಸಿದ್ದಾರೆ. ಆದರೆ, ಈಗ ಶಂಕರ್ ಅವರ ಚಾರ್ಮ್ ನೋಡಿದರೆ ನಿರ್ಮಾಪಕರಿಗೆ ಮುಂದೇನು ಎನ್ನುವ ಪ್ರಶ್ನೆ ಮೂಡಿದೆ. ಪರಿಸ್ಥಿತಿ ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!