AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಸ್-ಅಕ್ಕ ಚೆನ್ನಾಗಿದ್ರು, ನಟಿ ಬಂದಮೇಲೆ ಹೀಗಾಗಿದ್ದು’; ಜನಪ್ರಿಯ ಧಾರಾವಾಹಿಯಲ್ಲಿ ದರ್ಶನ್ ಕಥೆ?

ಕಲರ್ಸ್ ಕನ್ನಡದಲ್ಲಿ ‘ಶಾಂತಂ ಪಾಪಂ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ನೋಡಿದ ಅನೇಕರಿಗೆ ರೇಣುಕಾ ಸ್ವಾಮಿ ಕೊಲೆ ಕೇಸ್ ನೆನಪಾಗಿದೆ. ದರ್ಶನ್ ಪ್ರಕರಣವನ್ನೇ ಸ್ಫೂರ್ತಿಯಾಗಿಟ್ಟುಕೊಂಡು ಈ ಧಾರಾವಾಹಿ ಮಾಡಿದಂತೆ ಕಾಣುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಆಗುತ್ತಿದೆ.

‘ಬಾಸ್-ಅಕ್ಕ ಚೆನ್ನಾಗಿದ್ರು, ನಟಿ ಬಂದಮೇಲೆ ಹೀಗಾಗಿದ್ದು’; ಜನಪ್ರಿಯ ಧಾರಾವಾಹಿಯಲ್ಲಿ ದರ್ಶನ್ ಕಥೆ?
‘ಬಾಸ್-ಅಕ್ಕ ಚೆನ್ನಾಗಿದ್ರು, ನಟಿ ಬಂದಮೇಲೆ ಹೀಗಾಗಿದ್ದು’; ಜನಪ್ರಿಯ ಧಾರಾವಾಹಿಯಲ್ಲಿ ದರ್ಶನ್ ಕಥೆ?
ರಾಜೇಶ್ ದುಗ್ಗುಮನೆ
|

Updated on: Jun 29, 2024 | 9:19 AM

Share

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದಾರೆ. ಅವರ ವಿಚಾರಣೆ ನಡೆಸಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಕುರಿತು ಭರ್ಜರಿ ಚರ್ಚೆಗಳು ನಡೆಯುತ್ತಿವೆ. ಅನೇಕರು ನಾನಾ ರೀತಿಯ ಮೀಮ್​ಗಳನ್ನು ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ಸಿನಿಮಾ ಮಾಡೋಕೆ ಕೆಲವರು ಟೈಟಲ್ ರಿಜಿಸ್ಟರ್ ಮಾಡುವ ಪ್ರಯತ್ನದಲ್ಲಿದ್ದಾರೆ. ಈ ಮಧ್ಯೆ ಧಾರಾವಾಹಿಯಲ್ಲಿ ದರ್ಶನ್ ಕಥೆ ಬಂತೇ ಎನ್ನುವ ಪ್ರಶ್ನೆ ಮೂಡಿದೆ.

ಕಲರ್ಸ್ ಕನ್ನಡದಲ್ಲಿ ‘ಶಾಂತಂ ಪಾಪಂ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ನೋಡಿದ ಅನೇಕರಿಗೆ ರೇಣುಕಾ ಸ್ವಾಮಿ ಕೊಲೆ ಕೇಸ್ ನೆನಪಾಗಿದೆ. ‘ಬಾಸ್​ ಹಾಗೂ ಅಕ್ಕ ಚೆನ್ನಾಗಿಯೇ ಇದ್ದರು. ನಟಿ ಬಂದಮೇಲೆ ಹೀಗೆ ಆಗಿದ್ದು’ ಎಂದು ದೇವನ ಸಹಾಯಕ ಹೇಳುತ್ತಾನೆ. ದರ್ಶನ್ ಜೀವನದಲ್ಲೂ ಹೀಗೆಯೇ ಆಗಿದೆ. ನಟಿಗೆ ತೊಂದರೆ ಕೊಟ್ಟವನ ಕರೆ ತರುವಂತೆ ದೇವ ತನ್ನ ಸಹಚರರಿಗೆ ಹೇಳುತ್ತಾನೆ. ಆ ಬಳಿಕ ನಟಿಗೆ ತೊಂದರೆ ಕೊಟ್ಟವನ ಚಿತ್ರಹಿಂಸೆ ಕೊಟ್ಟು ಸಾಯಿಸಲಾಗುತ್ತದೆ. ಆ ಬಳಿಕ ದೇವ ಅರೆಸ್ಟ್ ಆಗುತ್ತಾನೆ. ಈ ರೀತಿಯಲ್ಲಿ ಧಾರಾವಾಹಿ ಮೂಡಿ ಬಂದಿದೆ.

ಈ ಧಾರಾವಾಹಿ ಎಪಿಸೋಡ್ ನೋಡಿದ ಅನೇಕರು ದರ್ಶನ್ ಕಥೆಗೆ ಹೋಲಿಕೆ ಮಾಡಿಕೊಂಡಿದ್ದಾರೆ. ಆಪ್ತೆ ಪವಿತ್ರಾಗೆ ಕಿರುಕುಳ ನೀಡಿದ್ದಕ್ಕೆ ರೇಣುಕಾ ಸ್ವಾಮಿಯನ್ನು ದರ್ಶನ್ ಅವರು ಕೊಲೆ ಮಾಡಿದರು ಎನ್ನಲಾಗಿದೆ. ಈ ಆರೋಪದಲ್ಲಿ ಅರೆಸ್ಟ್ ಆಗಿ ಅವರು ವಿಚಾರಣೆ ಎದುರಿಸುತ್ತಿದ್ದಾರೆ.

ಇದನ್ನೂ ಓದಿ: ದರ್ಶನ್​ನ ಬೆಂಬಲಿಸಿ ಪೋಸ್ಟ್ ಹಾಕಿದ್ದ ನಾಗಶೌರ್ಯಗೆ ಟ್ರೋಲ್ ಕಾಟ

ರೇಣುಕಾ ಸ್ವಾಮಿ ಕೊಲೆ ಕೇಸ್ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿದೆ. ದರ್ಶನ್ ಅವರು ಈ ಪ್ರಕರಣದಿಂದ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಅವರ ಜೊತೆ ಪವಿತ್ರಾ ಗೌಡ ಸೇರಿ ಅನೇಕರು ಅರೆಸ್ಟ್ ಆಗಿದ್ದಾರೆ. ಕೆಲವರನ್ನು ತುಮಕೂರು ಜೈಲಿಗೆ ಶಿಫ್ಟ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು