‘ಬಾಸ್-ಅಕ್ಕ ಚೆನ್ನಾಗಿದ್ರು, ನಟಿ ಬಂದಮೇಲೆ ಹೀಗಾಗಿದ್ದು’; ಜನಪ್ರಿಯ ಧಾರಾವಾಹಿಯಲ್ಲಿ ದರ್ಶನ್ ಕಥೆ?

|

Updated on: Jun 29, 2024 | 9:19 AM

ಕಲರ್ಸ್ ಕನ್ನಡದಲ್ಲಿ ‘ಶಾಂತಂ ಪಾಪಂ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ನೋಡಿದ ಅನೇಕರಿಗೆ ರೇಣುಕಾ ಸ್ವಾಮಿ ಕೊಲೆ ಕೇಸ್ ನೆನಪಾಗಿದೆ. ದರ್ಶನ್ ಪ್ರಕರಣವನ್ನೇ ಸ್ಫೂರ್ತಿಯಾಗಿಟ್ಟುಕೊಂಡು ಈ ಧಾರಾವಾಹಿ ಮಾಡಿದಂತೆ ಕಾಣುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಆಗುತ್ತಿದೆ.

‘ಬಾಸ್-ಅಕ್ಕ ಚೆನ್ನಾಗಿದ್ರು, ನಟಿ ಬಂದಮೇಲೆ ಹೀಗಾಗಿದ್ದು’; ಜನಪ್ರಿಯ ಧಾರಾವಾಹಿಯಲ್ಲಿ ದರ್ಶನ್ ಕಥೆ?
‘ಬಾಸ್-ಅಕ್ಕ ಚೆನ್ನಾಗಿದ್ರು, ನಟಿ ಬಂದಮೇಲೆ ಹೀಗಾಗಿದ್ದು’; ಜನಪ್ರಿಯ ಧಾರಾವಾಹಿಯಲ್ಲಿ ದರ್ಶನ್ ಕಥೆ?
Follow us on

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದಾರೆ. ಅವರ ವಿಚಾರಣೆ ನಡೆಸಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಕುರಿತು ಭರ್ಜರಿ ಚರ್ಚೆಗಳು ನಡೆಯುತ್ತಿವೆ. ಅನೇಕರು ನಾನಾ ರೀತಿಯ ಮೀಮ್​ಗಳನ್ನು ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ಸಿನಿಮಾ ಮಾಡೋಕೆ ಕೆಲವರು ಟೈಟಲ್ ರಿಜಿಸ್ಟರ್ ಮಾಡುವ ಪ್ರಯತ್ನದಲ್ಲಿದ್ದಾರೆ. ಈ ಮಧ್ಯೆ ಧಾರಾವಾಹಿಯಲ್ಲಿ ದರ್ಶನ್ ಕಥೆ ಬಂತೇ ಎನ್ನುವ ಪ್ರಶ್ನೆ ಮೂಡಿದೆ.

ಕಲರ್ಸ್ ಕನ್ನಡದಲ್ಲಿ ‘ಶಾಂತಂ ಪಾಪಂ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ನೋಡಿದ ಅನೇಕರಿಗೆ ರೇಣುಕಾ ಸ್ವಾಮಿ ಕೊಲೆ ಕೇಸ್ ನೆನಪಾಗಿದೆ. ‘ಬಾಸ್​ ಹಾಗೂ ಅಕ್ಕ ಚೆನ್ನಾಗಿಯೇ ಇದ್ದರು. ನಟಿ ಬಂದಮೇಲೆ ಹೀಗೆ ಆಗಿದ್ದು’ ಎಂದು ದೇವನ ಸಹಾಯಕ ಹೇಳುತ್ತಾನೆ. ದರ್ಶನ್ ಜೀವನದಲ್ಲೂ ಹೀಗೆಯೇ ಆಗಿದೆ. ನಟಿಗೆ ತೊಂದರೆ ಕೊಟ್ಟವನ ಕರೆ ತರುವಂತೆ ದೇವ ತನ್ನ ಸಹಚರರಿಗೆ ಹೇಳುತ್ತಾನೆ. ಆ ಬಳಿಕ ನಟಿಗೆ ತೊಂದರೆ ಕೊಟ್ಟವನ ಚಿತ್ರಹಿಂಸೆ ಕೊಟ್ಟು ಸಾಯಿಸಲಾಗುತ್ತದೆ. ಆ ಬಳಿಕ ದೇವ ಅರೆಸ್ಟ್ ಆಗುತ್ತಾನೆ. ಈ ರೀತಿಯಲ್ಲಿ ಧಾರಾವಾಹಿ ಮೂಡಿ ಬಂದಿದೆ.


ಈ ಧಾರಾವಾಹಿ ಎಪಿಸೋಡ್ ನೋಡಿದ ಅನೇಕರು ದರ್ಶನ್ ಕಥೆಗೆ ಹೋಲಿಕೆ ಮಾಡಿಕೊಂಡಿದ್ದಾರೆ. ಆಪ್ತೆ ಪವಿತ್ರಾಗೆ ಕಿರುಕುಳ ನೀಡಿದ್ದಕ್ಕೆ ರೇಣುಕಾ ಸ್ವಾಮಿಯನ್ನು ದರ್ಶನ್ ಅವರು ಕೊಲೆ ಮಾಡಿದರು ಎನ್ನಲಾಗಿದೆ. ಈ ಆರೋಪದಲ್ಲಿ ಅರೆಸ್ಟ್ ಆಗಿ ಅವರು ವಿಚಾರಣೆ ಎದುರಿಸುತ್ತಿದ್ದಾರೆ.

ಇದನ್ನೂ ಓದಿ: ದರ್ಶನ್​ನ ಬೆಂಬಲಿಸಿ ಪೋಸ್ಟ್ ಹಾಕಿದ್ದ ನಾಗಶೌರ್ಯಗೆ ಟ್ರೋಲ್ ಕಾಟ

ರೇಣುಕಾ ಸ್ವಾಮಿ ಕೊಲೆ ಕೇಸ್ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿದೆ. ದರ್ಶನ್ ಅವರು ಈ ಪ್ರಕರಣದಿಂದ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಅವರ ಜೊತೆ ಪವಿತ್ರಾ ಗೌಡ ಸೇರಿ ಅನೇಕರು ಅರೆಸ್ಟ್ ಆಗಿದ್ದಾರೆ. ಕೆಲವರನ್ನು ತುಮಕೂರು ಜೈಲಿಗೆ ಶಿಫ್ಟ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.