AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಶರ್ವಾನಂದಗೆ ಅಪಘಾತ, ಮದುವೆ ಕತೆ ಏನು?

Sharwanand: ಕೆಲವೇ ದಿನಗಳಲ್ಲಿ ವಿವಾಹ ಬಂಧಕ್ಕೆ ಒಳಗಾಗಲಿರುವ ನಟ ಶರ್ವಾನಂದರ ಕಾರು ಅಪಘಾತವಾಗಿದೆ.

ನಟ ಶರ್ವಾನಂದಗೆ ಅಪಘಾತ, ಮದುವೆ ಕತೆ ಏನು?
ಶರ್ವಾನಂದ
ಮಂಜುನಾಥ ಸಿ.
|

Updated on: May 28, 2023 | 4:03 PM

Share

ತಮಿಳು-ತೆಲುಗಿನ ಜನಪ್ರಿಯ ನಟ ಶರ್ವಾನಂದಗೆ (Sharwanand) ಅಪಘಾತವಾಗಿದೆ. ಮೇ 27 ತಡ ರಾತ್ರಿ ಹೈದರಾಬಾದ್​ನಲ್ಲಿ ಅಪಘಾತವಾಗಿದ್ದು, ಶರ್ವಾನಂದಗೆ ಗಾಯಗಳಾಗಿವೆ ಎನ್ನಲಾಗುತ್ತಿದೆ. ಶರ್ವಾನಂದಗೆ ಮದುವೆ ನಿಶ್ಚಯವಾಗಿದ್ದು, ಇನ್ನು ಮೂರು ದಿನಗಳಲ್ಲಿ ಮದುವೆ ಇದೆ. ಹೀಗಿರುವಾಗ ನಟನಿಗೆ ಅಪಘಾತವಾಗಿದೆ. ಹೈದರಾಬಾದ್​ನ ಫಿಲಂನಗರ್ ಬಳಿ ತಡರಾತ್ರಿ ಈ ಅಪಘಾತ ಸಂಭವಿಸಿದ್ದು ತಮ್ಮ ಲ್ಯಾಂಡ್​ರೋವರ್ ಕಾರ್​ನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದ ಮರಕ್ಕೆ ಢಿಕ್ಕಿ ಹೊಡೆದಿದ್ದಾರೆ.

ಕೂಡಲೇ ಸ್ಥಳೀಯರು ಆಗಮಿಸಿ ನಟನಿಗೆ ಸಹಾಯ ಮಾಡಿದ್ದು ಕಾರನ್ನು ಮತ್ತೆ ರಸ್ತೆಗೆ ತರಲು ಸಹಾಯ ಮಾಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಸಹ ಆಗಮಿಸಿದ್ದು, ಹೆಚ್ಚು ಗಾಯವಾಗಿಲ್ಲದ ಕಾರಣ ಶರ್ವಾನಂದ ಅವರೇ ತಮ್ಮ ಕಾರನ್ನು ಚಲಾಯಿಸಿಕೊಂಡು ಹೋಗಿದ್ದಾರೆ. ಘಟನೆಗೆ ಕುರಿತ ಕೆಲವು ಚಿತ್ರಗಳು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಶರ್ವಾನಂದ ಅವರ ಮದುವೆ ನಿಶ್ಚಯವಾಗಿದ್ದು ಇನ್ನು ಮೂರು ದಿನಗಳಲ್ಲಿ ರಕ್ಷಿತಾ ರೆಡ್ಡಿ ಅವರೊಟ್ಟಿಗೆ ಹೈದರಾಬಾದ್​ನಲ್ಲಿಯೇ ಮದುವೆ ನಡೆಯಲಿಕ್ಕಿದೆ. ಘಟನೆ ಬಗ್ಗೆ ಟ್ವೀಟ್ ಮಾಡಿರುವ ನಟ ಶರ್ವಾನಂದ, ”ಇಂದು ಬೆಳಗ್ಗೆ ನನ್ನ ಕಾರು ಅಪಘಾತಕ್ಕೀಡಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಅದೊಂದು ತೀರಾ ಚಿಕ್ಕ ಘಟನೆ. ನಿಮ್ಮೆಲ್ಲರ ಪ್ರೀತಿ ಮತ್ತು ಆಶೀರ್ವಾದಗಳೊಂದಿಗೆ ನಾನು ಸಂಪೂರ್ಣವಾಗಿ ಸುರಕ್ಷಿತವಾಗಿದ್ದೇನೆ ಮತ್ತು ಮನೆಯಲ್ಲಿಯೇ ಇದ್ದೇನೆ. ಚಿಂತೆ ಮಾಡುವ ಅಗತ್ಯ ಏನೂ ಇಲ್ಲ. ನಿಮ್ಮ ಕಾಳಜಿಗಾಗಿ ಎಲ್ಲರಿಗೂ ಧನ್ಯವಾದಗಳು, ಭಾನುವಾದ ಶುಭದಿನ” ಎಂದಿದ್ದಾರೆ.

ಇದನ್ನೂ ಓದಿ:ವಿವಾದದಲ್ಲಿ ಅರ್ಜುನ್ ಸರ್ಜಾ ಸಿನಿಮಾ; ತಿರುಗೇಟು ಕೊಟ್ಟ ವಿಶ್ವಕ್ ಸೇನ್; ಹೊಸ ಹೀರೋಗೆ ಮಣೆ?

2004 ರಲ್ಲಿ ನಟನೆಗೆ ಕಾಲಿಟ್ಟ ಶರ್ವಾನಂದ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ತಮಿಳು ಹಾಗೂ ತೆಲುಗು ಎರಡರಲ್ಲೂ ಜನಪ್ರಿಯ ನಟರಾಗಿರುವ ಶರ್ವಾನಂದ ಕೆಲವು ಸೂಪರ್ ಹಿಟ್ ಸಿನಿಮಾಗಳನ್ನು ಸಹ ನೀಡಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ಇವರ ವಿವಾಹ ನಿಶ್ಚಯವಾಗಿದೆ. ಈ ನಡುವೆ ಇವರ ವಿವಾಹ ನಿಶ್ಚಿತಾರ್ಥ ಮುರಿದು ಬಿದ್ದಿದೆ ಎಂಬ ಮಾತುಗಳು ಕೇಳಿ ಬಂದಿತ್ತು ಆದರೆ ಅದು ಸುಳ್ಳಾಗಿದ್ದು, ಶರ್ವಾನಂದ ಹಾಗೂ ರಕ್ಷಿತಾ ರೆಡ್ಡಿಯವರ ಮದುವೆ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!