AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನಲ್ಲಿ ಲಿಂಗ ತಾರತಮ್ಯ; ಸ್ಟಾರ್​ ನಟರಿಂದ ವಿದ್ಯಾ ಬಾಲನ್​ಗೆ ಈ ಒಂದು ಕಷ್ಟ ತಪ್ಪಿರಲಿಲ್ಲ

Vidya Balan: ಲಿಂಗ ತಾರತಮ್ಯ ಎಂಬುದು ಮೊದಲಿಗಿಂತಲೂ ಈಗ ಕಡಿಮೆ ಆಗಿದೆ. ಆದರೆ ಇಂದಿಗೂ ನಾನು ಆ ಸಮಸ್ಯೆ ಎದುರಿಸುತ್ತಿರುವುದು ನಿಜ. ನನ್ನ ಸುತ್ತಮುತ್ತ ಇರುವ ಅನೇಕರಿಗೆ ಹಾಗೆ ಆಗಿದೆ ಎಂದು ವಿದ್ಯಾ ಬಾಲನ್​ ಹೇಳಿದ್ದಾರೆ.

ಬಾಲಿವುಡ್​ನಲ್ಲಿ ಲಿಂಗ ತಾರತಮ್ಯ; ಸ್ಟಾರ್​ ನಟರಿಂದ ವಿದ್ಯಾ ಬಾಲನ್​ಗೆ ಈ ಒಂದು ಕಷ್ಟ ತಪ್ಪಿರಲಿಲ್ಲ
ವಿದ್ಯಾ ಬಾಲನ್​
ಮದನ್​ ಕುಮಾರ್​
|

Updated on: Jun 19, 2021 | 8:12 AM

Share

ಎಲ್ಲ ಕ್ಷೇತ್ರಗಳ ರೀತಿ ಬಾಲಿವುಡ್​ನಲ್ಲಿಯೂ ಲಿಂಗ ತಾರತಮ್ಯ ಇದೆ. ಸಂಭಾವನೆ ವಿಚಾರದಲ್ಲಿ ನಟ-ನಟಿಯರ ನಡುವೆ ದೊಡ್ಡ ಅಂತರ ಇದೆ ಎಂಬುದು ಗೊತ್ತಿರುವ ವಿಚಾರ. ಕೆಲವು ನಟಿಯರು ಹಿಟ್​ ಸಿನಿಮಾಗಳನ್ನು ನೀಡಿದ್ದರು ಕೂಡ ಅವರನ್ನು ಸ್ಟಾರ್​ ನಟರಿಗೆ ಸರಿಸಮನಾಗಿ ಪರಿಗಣಿಸುವುದಿಲ್ಲ ಈ ಚಿತ್ರರಂಗ. ಈ ವಿಚಾರದ ಬಗ್ಗೆ ನಟಿ ವಿದ್ಯಾ ಬಾಲನ್​ ಬೇಸರ ವ್ಯಕ್ತಪಡಿಸಿದ್ದಾರೆ.

ಕಹಾನಿ, ದಿ ಡರ್ಟಿ ಪಿಕ್ಚರ್​, ಶಕುಂತಲಾ ದೇವಿ ಮುಂತಾದ ಸಿನಿಮಾಗಳ ಮೂಲಕ ಗಮನ ಸೆಳೆದವರು ನಟಿ ವಿದ್ಯಾ ಬಾಲನ್​. ‘ಚಿತ್ರರಂಗದಲ್ಲಿ ನಾವು ಲಿಂಗ ತಾರತಮ್ಯ ಎದುರಿಸುತ್ತಿದ್ದೇವೆ. ಪುರುಷರಿಂದ ಮಾತ್ರವಲ್ಲ, ಮಹಿಳೆಯರಿಂದಲೂ ಇದು ನಡೆಯುತ್ತದೆ. ಇಂದಿಗೂ ನಾನು ಅದನ್ನು ಅನುಭವಿಸುತ್ತಿದ್ದೇನೆ. ಅದು ನನಗೆ ತುಂಬ ಕಿರಿಕಿರಿ ಉಂಟು ಮಾಡುತ್ತದೆ’ ಎಂದು ವಿದ್ಯಾ ಬಾಲನ್​ ಹೇಳಿದ್ದಾರೆ.

‘ಲಿಂಗ ತಾರತಮ್ಯ ಎಂಬುದು ಮೊದಲಿಗಿಂತಲೂ ಈಗ ಕಡಿಮೆ ಆಗಿದೆ. ಆದರೆ ಇಂದಿಗೂ ನಾನು ಆ ಸಮಸ್ಯೆ ಎದುರಿಸುತ್ತಿರುವುದು ನಿಜ. ನನ್ನ ಸುತ್ತಮುತ್ತ ಇರುವ ಅನೇಕರಿಗೆ ಹಾಗೆ ಆಗಿದೆ. ಆರಂಭದ ದಿನಗಳಲ್ಲಿ ನಟರ ಡೇಟ್ಸ್​ಗೆ​ ಅನುಗುಣವಾಗಿ ನನ್ನ ಡೇಟ್ಸ್​ ಹೊಂದಿಸಿಕೊಳ್ಳುವಂತೆ ನಿರ್ದೇಶಕರು ಹೇಳುತ್ತಿದ್ದರು. ಆ ನಟರಿಗಿಂತಲೂ ಹೆಚ್ಚು ಪ್ರಾಮುಖ್ಯತೆ ಇರುವ ಪಾತ್ರವನ್ನು ನಾನು ಮಾಡುತ್ತಿದ್ದರೂ ಕೂಡ ನಾನು ಅವರ ಡೇಟ್ಸ್​ಗೆ ಹೊಂದಿಕೊಳ್ಳಬೇಕಿತ್ತು’ ಎಂದು ವಿದ್ಯಾ ಬೇಸರ ಹೊರಹಾಕಿದ್ದಾರೆ.

2005ರಲ್ಲಿ ತೆರೆಕಂಡ ‘ಪರಿಣೀತಾ’ ಸಿನಿಮಾದಿಂದ ವಿದ್ಯಾ ಬಾಲನ್​ ಅವರು ಬಾಲಿವುಡ್​ಗೆ ಕಾಲಿಟ್ಟರು. ಆ ಚಿತ್ರದಲ್ಲಿ ಅವರು ಸೈಫ್​ ಅಲಿ ಖಾನ್​ ಮತ್ತು ಸಂಜಯ್​ ದತ್​ ಜೊತೆ ತೆರೆ ಹಂಚಿಕೊಂಡರು. ಅಂಥ ಸ್ಟಾರ್​ ನಟರ ನಡುವೆಯೂ ವಿದ್ಯಾ ಮಿಂಚಿದರು. ಮೊದಲ ಚಿತ್ರದಲ್ಲೇ ಅವರಿಗೆ ಫಿಲ್ಮ್​ ಫೇರ್ ಪ್ರಶಸ್ತಿ ಸಿಕ್ಕಿತು. ಬಳಿಕ ಅನೇಕ ಮಹಿಳಾಪ್ರಧಾನ ಸಿನಿಮಾ ಮಾಡಿ ಗುರುತಿಸಿಕೊಂಡರು. ಯಾವುದೇ ಸ್ಟಾರ್​ ನಟನ ಅನಿವಾರ್ಯತೆ ಇಲ್ಲದೆಯೋ ತಮ್ಮ ಸಿನಿಮಾವನ್ನು ಗೆಲ್ಲಿಸಬಲ್ಲ ನಟಿಯಾಗಿ ಅವರು ಬೆಳೆದುನಿಂತರು. ಅವರು ನಟಿಸಿರುವ ಹೊಸ ಸಿನಿಮಾ ‘ಶೇರ್ನಿ’ ಅಮೇಜಾನ್ ಪ್ರೈಂ ವಿಡಿಯೋದಲ್ಲಿ ಜೂ.18ರಂದು ಬಿಡುಗಡೆ ಆಗಿದೆ.

ಇದನ್ನೂ ಓದಿ:

‘ನೀನು ನನ್ನೊಂದಿಗೆ ರಾತ್ರಿ ಕಳೆಯುವುದಿಲ್ಲವೇ?’ ದಕ್ಷಿಣ ಭಾರತದ ನಿರ್ಮಾಪಕನ ನಿಜಮುಖ ಬಯಲು ಮಾಡಿದ ಬಾಲಿವುಡ್​ ನಟಿ

ಯಾಮಿ ಗೌತಮ್​ ಪೋಸ್ಟ್​ನಲ್ಲಿ ಕಂಗನಾ ಕಿರಿಕ್​; ಬಾಲಿವುಡ್​ ನಟನಿಗೆ ಚಪ್ಪಲಿ ತೋರಿಸುವ ಬಗ್ಗೆ ಮಾತನಾಡಿದ ನಟಿ

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ