AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನಲ್ಲಿ ಲಿಂಗ ತಾರತಮ್ಯ; ಸ್ಟಾರ್​ ನಟರಿಂದ ವಿದ್ಯಾ ಬಾಲನ್​ಗೆ ಈ ಒಂದು ಕಷ್ಟ ತಪ್ಪಿರಲಿಲ್ಲ

Vidya Balan: ಲಿಂಗ ತಾರತಮ್ಯ ಎಂಬುದು ಮೊದಲಿಗಿಂತಲೂ ಈಗ ಕಡಿಮೆ ಆಗಿದೆ. ಆದರೆ ಇಂದಿಗೂ ನಾನು ಆ ಸಮಸ್ಯೆ ಎದುರಿಸುತ್ತಿರುವುದು ನಿಜ. ನನ್ನ ಸುತ್ತಮುತ್ತ ಇರುವ ಅನೇಕರಿಗೆ ಹಾಗೆ ಆಗಿದೆ ಎಂದು ವಿದ್ಯಾ ಬಾಲನ್​ ಹೇಳಿದ್ದಾರೆ.

ಬಾಲಿವುಡ್​ನಲ್ಲಿ ಲಿಂಗ ತಾರತಮ್ಯ; ಸ್ಟಾರ್​ ನಟರಿಂದ ವಿದ್ಯಾ ಬಾಲನ್​ಗೆ ಈ ಒಂದು ಕಷ್ಟ ತಪ್ಪಿರಲಿಲ್ಲ
ವಿದ್ಯಾ ಬಾಲನ್​
ಮದನ್​ ಕುಮಾರ್​
|

Updated on: Jun 19, 2021 | 8:12 AM

Share

ಎಲ್ಲ ಕ್ಷೇತ್ರಗಳ ರೀತಿ ಬಾಲಿವುಡ್​ನಲ್ಲಿಯೂ ಲಿಂಗ ತಾರತಮ್ಯ ಇದೆ. ಸಂಭಾವನೆ ವಿಚಾರದಲ್ಲಿ ನಟ-ನಟಿಯರ ನಡುವೆ ದೊಡ್ಡ ಅಂತರ ಇದೆ ಎಂಬುದು ಗೊತ್ತಿರುವ ವಿಚಾರ. ಕೆಲವು ನಟಿಯರು ಹಿಟ್​ ಸಿನಿಮಾಗಳನ್ನು ನೀಡಿದ್ದರು ಕೂಡ ಅವರನ್ನು ಸ್ಟಾರ್​ ನಟರಿಗೆ ಸರಿಸಮನಾಗಿ ಪರಿಗಣಿಸುವುದಿಲ್ಲ ಈ ಚಿತ್ರರಂಗ. ಈ ವಿಚಾರದ ಬಗ್ಗೆ ನಟಿ ವಿದ್ಯಾ ಬಾಲನ್​ ಬೇಸರ ವ್ಯಕ್ತಪಡಿಸಿದ್ದಾರೆ.

ಕಹಾನಿ, ದಿ ಡರ್ಟಿ ಪಿಕ್ಚರ್​, ಶಕುಂತಲಾ ದೇವಿ ಮುಂತಾದ ಸಿನಿಮಾಗಳ ಮೂಲಕ ಗಮನ ಸೆಳೆದವರು ನಟಿ ವಿದ್ಯಾ ಬಾಲನ್​. ‘ಚಿತ್ರರಂಗದಲ್ಲಿ ನಾವು ಲಿಂಗ ತಾರತಮ್ಯ ಎದುರಿಸುತ್ತಿದ್ದೇವೆ. ಪುರುಷರಿಂದ ಮಾತ್ರವಲ್ಲ, ಮಹಿಳೆಯರಿಂದಲೂ ಇದು ನಡೆಯುತ್ತದೆ. ಇಂದಿಗೂ ನಾನು ಅದನ್ನು ಅನುಭವಿಸುತ್ತಿದ್ದೇನೆ. ಅದು ನನಗೆ ತುಂಬ ಕಿರಿಕಿರಿ ಉಂಟು ಮಾಡುತ್ತದೆ’ ಎಂದು ವಿದ್ಯಾ ಬಾಲನ್​ ಹೇಳಿದ್ದಾರೆ.

‘ಲಿಂಗ ತಾರತಮ್ಯ ಎಂಬುದು ಮೊದಲಿಗಿಂತಲೂ ಈಗ ಕಡಿಮೆ ಆಗಿದೆ. ಆದರೆ ಇಂದಿಗೂ ನಾನು ಆ ಸಮಸ್ಯೆ ಎದುರಿಸುತ್ತಿರುವುದು ನಿಜ. ನನ್ನ ಸುತ್ತಮುತ್ತ ಇರುವ ಅನೇಕರಿಗೆ ಹಾಗೆ ಆಗಿದೆ. ಆರಂಭದ ದಿನಗಳಲ್ಲಿ ನಟರ ಡೇಟ್ಸ್​ಗೆ​ ಅನುಗುಣವಾಗಿ ನನ್ನ ಡೇಟ್ಸ್​ ಹೊಂದಿಸಿಕೊಳ್ಳುವಂತೆ ನಿರ್ದೇಶಕರು ಹೇಳುತ್ತಿದ್ದರು. ಆ ನಟರಿಗಿಂತಲೂ ಹೆಚ್ಚು ಪ್ರಾಮುಖ್ಯತೆ ಇರುವ ಪಾತ್ರವನ್ನು ನಾನು ಮಾಡುತ್ತಿದ್ದರೂ ಕೂಡ ನಾನು ಅವರ ಡೇಟ್ಸ್​ಗೆ ಹೊಂದಿಕೊಳ್ಳಬೇಕಿತ್ತು’ ಎಂದು ವಿದ್ಯಾ ಬೇಸರ ಹೊರಹಾಕಿದ್ದಾರೆ.

2005ರಲ್ಲಿ ತೆರೆಕಂಡ ‘ಪರಿಣೀತಾ’ ಸಿನಿಮಾದಿಂದ ವಿದ್ಯಾ ಬಾಲನ್​ ಅವರು ಬಾಲಿವುಡ್​ಗೆ ಕಾಲಿಟ್ಟರು. ಆ ಚಿತ್ರದಲ್ಲಿ ಅವರು ಸೈಫ್​ ಅಲಿ ಖಾನ್​ ಮತ್ತು ಸಂಜಯ್​ ದತ್​ ಜೊತೆ ತೆರೆ ಹಂಚಿಕೊಂಡರು. ಅಂಥ ಸ್ಟಾರ್​ ನಟರ ನಡುವೆಯೂ ವಿದ್ಯಾ ಮಿಂಚಿದರು. ಮೊದಲ ಚಿತ್ರದಲ್ಲೇ ಅವರಿಗೆ ಫಿಲ್ಮ್​ ಫೇರ್ ಪ್ರಶಸ್ತಿ ಸಿಕ್ಕಿತು. ಬಳಿಕ ಅನೇಕ ಮಹಿಳಾಪ್ರಧಾನ ಸಿನಿಮಾ ಮಾಡಿ ಗುರುತಿಸಿಕೊಂಡರು. ಯಾವುದೇ ಸ್ಟಾರ್​ ನಟನ ಅನಿವಾರ್ಯತೆ ಇಲ್ಲದೆಯೋ ತಮ್ಮ ಸಿನಿಮಾವನ್ನು ಗೆಲ್ಲಿಸಬಲ್ಲ ನಟಿಯಾಗಿ ಅವರು ಬೆಳೆದುನಿಂತರು. ಅವರು ನಟಿಸಿರುವ ಹೊಸ ಸಿನಿಮಾ ‘ಶೇರ್ನಿ’ ಅಮೇಜಾನ್ ಪ್ರೈಂ ವಿಡಿಯೋದಲ್ಲಿ ಜೂ.18ರಂದು ಬಿಡುಗಡೆ ಆಗಿದೆ.

ಇದನ್ನೂ ಓದಿ:

‘ನೀನು ನನ್ನೊಂದಿಗೆ ರಾತ್ರಿ ಕಳೆಯುವುದಿಲ್ಲವೇ?’ ದಕ್ಷಿಣ ಭಾರತದ ನಿರ್ಮಾಪಕನ ನಿಜಮುಖ ಬಯಲು ಮಾಡಿದ ಬಾಲಿವುಡ್​ ನಟಿ

ಯಾಮಿ ಗೌತಮ್​ ಪೋಸ್ಟ್​ನಲ್ಲಿ ಕಂಗನಾ ಕಿರಿಕ್​; ಬಾಲಿವುಡ್​ ನಟನಿಗೆ ಚಪ್ಪಲಿ ತೋರಿಸುವ ಬಗ್ಗೆ ಮಾತನಾಡಿದ ನಟಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ