AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನಲ್ಲಿ ಲಿಂಗ ತಾರತಮ್ಯ; ಸ್ಟಾರ್​ ನಟರಿಂದ ವಿದ್ಯಾ ಬಾಲನ್​ಗೆ ಈ ಒಂದು ಕಷ್ಟ ತಪ್ಪಿರಲಿಲ್ಲ

Vidya Balan: ಲಿಂಗ ತಾರತಮ್ಯ ಎಂಬುದು ಮೊದಲಿಗಿಂತಲೂ ಈಗ ಕಡಿಮೆ ಆಗಿದೆ. ಆದರೆ ಇಂದಿಗೂ ನಾನು ಆ ಸಮಸ್ಯೆ ಎದುರಿಸುತ್ತಿರುವುದು ನಿಜ. ನನ್ನ ಸುತ್ತಮುತ್ತ ಇರುವ ಅನೇಕರಿಗೆ ಹಾಗೆ ಆಗಿದೆ ಎಂದು ವಿದ್ಯಾ ಬಾಲನ್​ ಹೇಳಿದ್ದಾರೆ.

ಬಾಲಿವುಡ್​ನಲ್ಲಿ ಲಿಂಗ ತಾರತಮ್ಯ; ಸ್ಟಾರ್​ ನಟರಿಂದ ವಿದ್ಯಾ ಬಾಲನ್​ಗೆ ಈ ಒಂದು ಕಷ್ಟ ತಪ್ಪಿರಲಿಲ್ಲ
ವಿದ್ಯಾ ಬಾಲನ್​
ಮದನ್​ ಕುಮಾರ್​
|

Updated on: Jun 19, 2021 | 8:12 AM

Share

ಎಲ್ಲ ಕ್ಷೇತ್ರಗಳ ರೀತಿ ಬಾಲಿವುಡ್​ನಲ್ಲಿಯೂ ಲಿಂಗ ತಾರತಮ್ಯ ಇದೆ. ಸಂಭಾವನೆ ವಿಚಾರದಲ್ಲಿ ನಟ-ನಟಿಯರ ನಡುವೆ ದೊಡ್ಡ ಅಂತರ ಇದೆ ಎಂಬುದು ಗೊತ್ತಿರುವ ವಿಚಾರ. ಕೆಲವು ನಟಿಯರು ಹಿಟ್​ ಸಿನಿಮಾಗಳನ್ನು ನೀಡಿದ್ದರು ಕೂಡ ಅವರನ್ನು ಸ್ಟಾರ್​ ನಟರಿಗೆ ಸರಿಸಮನಾಗಿ ಪರಿಗಣಿಸುವುದಿಲ್ಲ ಈ ಚಿತ್ರರಂಗ. ಈ ವಿಚಾರದ ಬಗ್ಗೆ ನಟಿ ವಿದ್ಯಾ ಬಾಲನ್​ ಬೇಸರ ವ್ಯಕ್ತಪಡಿಸಿದ್ದಾರೆ.

ಕಹಾನಿ, ದಿ ಡರ್ಟಿ ಪಿಕ್ಚರ್​, ಶಕುಂತಲಾ ದೇವಿ ಮುಂತಾದ ಸಿನಿಮಾಗಳ ಮೂಲಕ ಗಮನ ಸೆಳೆದವರು ನಟಿ ವಿದ್ಯಾ ಬಾಲನ್​. ‘ಚಿತ್ರರಂಗದಲ್ಲಿ ನಾವು ಲಿಂಗ ತಾರತಮ್ಯ ಎದುರಿಸುತ್ತಿದ್ದೇವೆ. ಪುರುಷರಿಂದ ಮಾತ್ರವಲ್ಲ, ಮಹಿಳೆಯರಿಂದಲೂ ಇದು ನಡೆಯುತ್ತದೆ. ಇಂದಿಗೂ ನಾನು ಅದನ್ನು ಅನುಭವಿಸುತ್ತಿದ್ದೇನೆ. ಅದು ನನಗೆ ತುಂಬ ಕಿರಿಕಿರಿ ಉಂಟು ಮಾಡುತ್ತದೆ’ ಎಂದು ವಿದ್ಯಾ ಬಾಲನ್​ ಹೇಳಿದ್ದಾರೆ.

‘ಲಿಂಗ ತಾರತಮ್ಯ ಎಂಬುದು ಮೊದಲಿಗಿಂತಲೂ ಈಗ ಕಡಿಮೆ ಆಗಿದೆ. ಆದರೆ ಇಂದಿಗೂ ನಾನು ಆ ಸಮಸ್ಯೆ ಎದುರಿಸುತ್ತಿರುವುದು ನಿಜ. ನನ್ನ ಸುತ್ತಮುತ್ತ ಇರುವ ಅನೇಕರಿಗೆ ಹಾಗೆ ಆಗಿದೆ. ಆರಂಭದ ದಿನಗಳಲ್ಲಿ ನಟರ ಡೇಟ್ಸ್​ಗೆ​ ಅನುಗುಣವಾಗಿ ನನ್ನ ಡೇಟ್ಸ್​ ಹೊಂದಿಸಿಕೊಳ್ಳುವಂತೆ ನಿರ್ದೇಶಕರು ಹೇಳುತ್ತಿದ್ದರು. ಆ ನಟರಿಗಿಂತಲೂ ಹೆಚ್ಚು ಪ್ರಾಮುಖ್ಯತೆ ಇರುವ ಪಾತ್ರವನ್ನು ನಾನು ಮಾಡುತ್ತಿದ್ದರೂ ಕೂಡ ನಾನು ಅವರ ಡೇಟ್ಸ್​ಗೆ ಹೊಂದಿಕೊಳ್ಳಬೇಕಿತ್ತು’ ಎಂದು ವಿದ್ಯಾ ಬೇಸರ ಹೊರಹಾಕಿದ್ದಾರೆ.

2005ರಲ್ಲಿ ತೆರೆಕಂಡ ‘ಪರಿಣೀತಾ’ ಸಿನಿಮಾದಿಂದ ವಿದ್ಯಾ ಬಾಲನ್​ ಅವರು ಬಾಲಿವುಡ್​ಗೆ ಕಾಲಿಟ್ಟರು. ಆ ಚಿತ್ರದಲ್ಲಿ ಅವರು ಸೈಫ್​ ಅಲಿ ಖಾನ್​ ಮತ್ತು ಸಂಜಯ್​ ದತ್​ ಜೊತೆ ತೆರೆ ಹಂಚಿಕೊಂಡರು. ಅಂಥ ಸ್ಟಾರ್​ ನಟರ ನಡುವೆಯೂ ವಿದ್ಯಾ ಮಿಂಚಿದರು. ಮೊದಲ ಚಿತ್ರದಲ್ಲೇ ಅವರಿಗೆ ಫಿಲ್ಮ್​ ಫೇರ್ ಪ್ರಶಸ್ತಿ ಸಿಕ್ಕಿತು. ಬಳಿಕ ಅನೇಕ ಮಹಿಳಾಪ್ರಧಾನ ಸಿನಿಮಾ ಮಾಡಿ ಗುರುತಿಸಿಕೊಂಡರು. ಯಾವುದೇ ಸ್ಟಾರ್​ ನಟನ ಅನಿವಾರ್ಯತೆ ಇಲ್ಲದೆಯೋ ತಮ್ಮ ಸಿನಿಮಾವನ್ನು ಗೆಲ್ಲಿಸಬಲ್ಲ ನಟಿಯಾಗಿ ಅವರು ಬೆಳೆದುನಿಂತರು. ಅವರು ನಟಿಸಿರುವ ಹೊಸ ಸಿನಿಮಾ ‘ಶೇರ್ನಿ’ ಅಮೇಜಾನ್ ಪ್ರೈಂ ವಿಡಿಯೋದಲ್ಲಿ ಜೂ.18ರಂದು ಬಿಡುಗಡೆ ಆಗಿದೆ.

ಇದನ್ನೂ ಓದಿ:

‘ನೀನು ನನ್ನೊಂದಿಗೆ ರಾತ್ರಿ ಕಳೆಯುವುದಿಲ್ಲವೇ?’ ದಕ್ಷಿಣ ಭಾರತದ ನಿರ್ಮಾಪಕನ ನಿಜಮುಖ ಬಯಲು ಮಾಡಿದ ಬಾಲಿವುಡ್​ ನಟಿ

ಯಾಮಿ ಗೌತಮ್​ ಪೋಸ್ಟ್​ನಲ್ಲಿ ಕಂಗನಾ ಕಿರಿಕ್​; ಬಾಲಿವುಡ್​ ನಟನಿಗೆ ಚಪ್ಪಲಿ ತೋರಿಸುವ ಬಗ್ಗೆ ಮಾತನಾಡಿದ ನಟಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?