AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ಕರ್ನಾಟಕ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯ ಕನ್ನಡ ಪ್ರೇಮಕ್ಕೆ ಇದೇ ಸಾಕ್ಷಿ

Shilpa Shetty hotel: ಮಂಗಳೂರು ಮೂಲದ ಶಿಲ್ಪಾ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ ಆದರೂ ಕರ್ನಾಟಕವನ್ನು ಅವರು ಮರೆತಿಲ್ಲ. ಇದೀಗ ನಟಿ ಶಿಲ್ಪಾ ಶೆಟ್ಟಿ, ಮುಂಬೈನಲ್ಲಿ ಹೊಸ ರೆಸ್ಟೊರೆಂಟ್ ಪ್ರಾರಂಭ ಮಾಡಿದ್ದು, ರೆಸ್ಟೊರೆಂಟ್ ಕರ್ನಾಟಕ ಥೀಮ್​ನದ್ದಾಗಿದೆ. ರೆಸ್ಟೊರೆಂಟ್​​ನ ಮೆನು ಕಾರ್ಡ್​​ನಲ್ಲಿ ಕರ್ನಾಟಕ ಭೂಪಟವನ್ನು ಸಹ ಮುದ್ರಿಸಿದ್ದಾರೆ. ರೆಸ್ಟಾರೆಂಟ್​​ನ ವಿಶೇಷತೆಯೇನು? ತಿಳಿಯಿರಿ..

ಮುಂಬೈನಲ್ಲಿ ಕರ್ನಾಟಕ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯ ಕನ್ನಡ ಪ್ರೇಮಕ್ಕೆ ಇದೇ ಸಾಕ್ಷಿ
Shilpa Shetty
ಮಂಜುನಾಥ ಸಿ.
|

Updated on: Feb 25, 2026 | 9:46 AM

Share

ಶಿಲ್ಪಾ ಶೆಟ್ಟಿ (Shilpa Shetty) ಬಾಲಿವುಡ್​​ನ ಸ್ಟಾರ್ ನಟಿ ಆಗಿರುವ ಜೊತೆಗೆ ಬಲು ಯಶಸ್ವಿ ಉದ್ಯಮಿಯೂ ಸಹ ಹೌದು. ಮಂಗಳೂರು ಮೂಲದವರಾದರೂ ಸಹ ಶಿಲ್ಪಾ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿಯೇ. ಬಾಲ್ಯದಿಂದಲೂ ಮುಂಬೈನಲ್ಲೇ ಬೆಳೆದಿದ್ದರೂ ಸಹ ತಮ್ಮ ಮೂಲವಾದ ಕರ್ನಾಟಕವನ್ನು ಶಿಲ್ಪಾ ಶೆಟ್ಟಿ ಮರೆತಿಲ್ಲ. ಇತ್ತೀಚೆಗಷ್ಟೆ ಮುಂಬೈನಲ್ಲಿ ಹೋಟೆಲ್ ಒಂದನ್ನು ಶಿಲ್ಪಾ ಶೆಟ್ಟಿ ಪ್ರಾರಂಭ ಮಾಡಿದ್ದು, ಕರ್ನಾಟಕ ಥೀಮ್​​​ನ ಹೋಟೆಲ್ ಇದಾಗಿದೆ. ಮಾತ್ರವಲ್ಲದೆ ಇದಕ್ಕೆ ಇರಿಸಿರುವುದು ಸಹ ಕನ್ನಡದ ಹೆಸರನ್ನೇ.

ಶಿಲ್ಪಾ ಶೆಟ್ಟಿ ಈಗಾಗಲೇ ಬಾಸ್ಟಿಯನ್ ಹೆಸರಿನಲ್ಲಿ ಮುಂಬೈನಲ್ಲಿ ಒಂದು ಹಾಗೂ ಗೋವಾನಲ್ಲಿ ಒಂದು ಐಶಾರಾಮಿ ಹೋಟೆಲ್ ಹೊಂದಿದ್ದಾರೆ. ಆ ರೆಸ್ಟಾರೆಂಟ್​​ಗಳು ಸಿರಿವಂತರ ಮತ್ತು ಅಲ್ಟ್ರಾ ಸಿರಿವಂತರ ಹೋಟೆಲ್​​ಗಳಾಗಿವೆ. ಇದೀಗ ಅದೇ ಬಾಸ್ಟಿಯನ್ ಹೆಸರಿನಲ್ಲಿ ಮೇಲ್ಮಧ್ಯಮ ವರ್ಗದವರಿಗಾಗಿ ರೆಸ್ಟೊರೆಂಟ್ ಆರಂಭಿಸಿದ್ದಾರೆ ಶಿಲ್ಪಾ ಶೆಟ್ಟಿ. ರೆಸ್ಟಾರೆಂಟ್​​ನ ಹೆಸರು ‘ಬಾಸ್ಟಿಯನ್ ಅಮ್ಮ ಕೈ’. ಈ ರೆಸ್ಟಾರೆಂಟ್​​ ಕರ್ನಾಟಕ ಥೀಮ್​​ನ ರೆಸ್ಟಾರೆಂಟ್ ಆಗಿದ್ದು, ಇಲ್ಲಿ ಸಿಕ್ಕುವ ಖಾದ್ಯಗಳು ಕರ್ನಾಟಕದ ಜನಪ್ರಿಯ ಖಾದ್ಯಗಳೇ ಆಗಿವೆ.

ಮುಂಬೈನ ಬಾಂದ್ರಾ ವೆಸ್ಟ್​ನ ನ್ಯೂ ಲಿಂಕ್ ರಸ್ತೆಯಲ್ಲಿ ಈ ಹೋಟೆಲ್ ಅನ್ನು ಶಿಲ್ಪಾ ಶೆಟ್ಟಿ ಪ್ರಾರಂಭಿಸಿದ್ದಾರೆ. ಹೋಟೆಲ್​ನ ವಿಶೇಷತೆಯೆಂದರೆ ಅದರ ಮೆನು. ಅವರ ಮೆನುವಿನಲ್ಲಿ ಕರ್ನಾಟಕದ ಮ್ಯಾಪ್ ಅನ್ನೇ ಪ್ರಿಂಟ್ ಮಾಡಿದ್ದಾರೆ ನಟಿ. ಹೋಟೆಲ್ ಮುಂಬೈನಲ್ಲಿದ್ದರೂ ಸಹ ಖಾದ್ಯಗಳ ಹೆಸರು ಹಿಂದಿಯ ಬದಲಿಗೆ ಕನ್ನಡದಲ್ಲಿಯೇ ಇವೆ. ಮೆಣಸಿಕಾಯಿ ಬಜ್ಜಿ, ಸಬ್ಬಕ್ಕಿ ವಡೆ ಎಂದೇ ಮೆನುವಿನಲ್ಲಿ ಮುದ್ರಿಸಲಾಗಿದೆ. ಮುಂಬೈನಲ್ಲಿ ಈ ಖಾದ್ಯಗಳನ್ನು ಮಿರ್ಚಿ ಬಜಿ, ಸಾಬೂದಾನ ವಡಾ ಎಂದು ಕರೆಯಲಾಗುತ್ತದೆ. ಆದರೆ ಹಿಂದಿ ಹೆಸರಿನ ಬದಲಾಗಿ ಮೆನುವಿನಲ್ಲಿ ಕನ್ನಡದ ಹೆಸರುಗಳನ್ನೇ ಇರಿಸಿದ್ದಾರೆ ಶಿಲ್ಪಾ ಶೆಟ್ಟಿ.

ಇದನ್ನೂ ಓದಿ:ನಟಿ ಶಿಲ್ಪಾ ಶೆಟ್ಟಿ ಮುಂಬೈ ನಿವಾಸದ ಮೇಲೆ ಐಟಿ ದಾಳಿ: 60 ಕೋಟಿ ರೂ. ವಂಚನೆ ಕೇಸ್

ಅದು ಮಾತ್ರವೇ ಅಲ್ಲದೆ ಮೈಸೂರು ಮಸಾಲೆ ದೋಸೆ, ದಾವಣೆಗೆರೆ ಬೆಣ್ಣೆ ದೋಸೆ, ಕೂರ್ಗಿ ಪಂದಿ ಕರಿ, ಕೂರ್ಗಿ ಚಿಕನ್, ಮಂಗಳೂರು ಗೀ ರೋಸ್ಟ್, ಬಿಸಿಬೇಳೆ ಬಾತ್, ಮಂಗಳೂರು ಸುಕ್ಕಾ, ಮೈಸೂರು ಮಸಾಲ ಮೊಟ್ಟೆ ಬುರ್ಜಿ ಇನ್ನೂ ಹಲವು ಕರ್ನಾಟದ ಖಾದ್ಯಗಳು ರೆಸ್ಟಾರೆಂಟ್​​ನಲ್ಲಿ ಲಭ್ಯವಿದೆ. ಮೆನುಕಾರ್ಡ್​​ನಲ್ಲಿ ಕರ್ನಾಟಕದ ಭೂಪಟವನ್ನೇ ಮುದ್ರಿಸಿರುವ ಶಿಲ್ಪಾ ಶೆಟ್ಟಿ, ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರಸಿದ್ಧ ಖಾದ್ಯಗಳು ಮತ್ತು ಡ್ರಿಂಕ್​​ಗಳನ್ನು ತಮ್ಮ ಹೋಟೆಲ್​​ನಲ್ಲಿ ಸರ್ವ್ ಮಾಡುವುದಾಗಿ ಮೆನು ಕಾರ್ಡ್​​ನಲ್ಲಿ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ವ್ಯಕ್ತಿಯನ್ನು ಚೀಲಕ್ಕೆ ತುಂಬಿಕೊಂಡು ತಂದು ಕೊರಿಯರ್ ಮಾಡುವಂತೆ ಪಟ್ಟು
ವ್ಯಕ್ತಿಯನ್ನು ಚೀಲಕ್ಕೆ ತುಂಬಿಕೊಂಡು ತಂದು ಕೊರಿಯರ್ ಮಾಡುವಂತೆ ಪಟ್ಟು
ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು
ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು
ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ
ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ
ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ
ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್