ಶಿಲ್ಪಾ ಹಾಗೂ ನಮ್ರತಾ ಮಧ್ಯೆ ವೈರತ್ವ ಇದೆಯೇ? ಸಿಕ್ಕಿತು ಉತ್ತರ

ನಮ್ರತಾ ಹಾಗೂ ಶಿಲ್ಪಾ ಇಬ್ಬರೂ ಚಿತ್ರರಂಗದಲ್ಲಿ ಇದ್ದವರು. ನಮ್ರತಾ ಮದುವೆ ಬಳಿಕ ಅಷ್ಟಾಗಿ ಚಿತ್ರರಂಗದಲ್ಲಿ ಮಿಂಚಲೇ ಇಲ್ಲ. ಶಿಲ್ಪಾ ಅವರು ಬಣ್ಣದ ಲೋಕದಲ್ಲಿ ಈ ಮೊದಲು ಸಾಕಷ್ಟು ಬೇಡಿಕೆ ಹೊಂದಿದ್ದರು. ಶಾರುಖ್ ಖಾನ್ ರೀತಿಯ ಸ್ಟಾರ್ ಹೀರೋಗಳ ಜೊತೆ ನಟಿಸಿದ್ದರು. ಅವರು ಈಗ ದೊಡ್ಮನೆಯ ಆಟವನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಶಿಲ್ಪಾ ಹಾಗೂ ನಮ್ರತಾ ಮಧ್ಯೆ ವೈರತ್ವ ಇದೆಯೇ? ಸಿಕ್ಕಿತು ಉತ್ತರ
ಶಿಲ್ಪಾ ಹಾಗೂ ನಮ್ರತಾ ಮಧ್ಯೆ ವೈರತ್ವ ಇದೆಯೇ? ಸಿಕ್ಕಿತು ಉತ್ತರ
Follow us
| Updated By: ರಾಜೇಶ್ ದುಗ್ಗುಮನೆ

Updated on: Oct 10, 2024 | 8:04 AM

‘ಬಿಗ್ ಬಾಸ್ ಹಿಂದಿ ಸೀಸನ್ 18’ರ ಸ್ಪರ್ಧಿ ಆಗಿ ಮಹೇಶ್ ಬಾಬು ಅವರ ಅತ್ತಿಗೆ ಅಂದರೆ ನಮ್ರತಾ ಶಿರೋಡ್ಕರ್ ಅವರ ಸಹೋದರಿ ಶಿಲ್ಪಾ ಶಿರೋಡ್ಕರ್ ಅವರು ಎಂಟ್ರಿ ಕೊಟ್ಟಿದ್ದಾರೆ. ಅವರು ದೊಡ್ಮನೆಯಲ್ಲಿ ಸಾಕಷ್ಟು ಸದ್ದು ಮಾಡುತ್ತಿದ್ದಾರೆ. ಮಹೇಶ್ ಬಾಬು ಸಂಬಂಧಿಗಳು ಎನ್ನುವ ಕಾರಣಕ್ಕೆ ದಕ್ಷಿಣ ಭಾರತದಲ್ಲಿ ಅವರಿಗೆ ಜನಪ್ರಿಯತೆ ಸಿಕ್ಕಿದೆ. ಶಿಲ್ಪಾ ಹಾಗೂ ನಮ್ರತಾ ಮಧ್ಯೆ ವೈರತ್ವ ಇದೆಯೇ? ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ನಮ್ರತಾ ಹಾಗೂ ಶಿಲ್ಪಾ ಇಬ್ಬರೂ ಚಿತ್ರರಂಗದಲ್ಲಿ ಇದ್ದವರು. ನಮ್ರತಾ ಮದುವೆ ಬಳಿಕ ಅಷ್ಟಾಗಿ ಚಿತ್ರರಂಗದಲ್ಲಿ ಮಿಂಚಲೇ ಇಲ್ಲ. ಶಿಲ್ಪಾ ಅವರು ಬಣ್ಣದ ಲೋಕದಲ್ಲಿ ಈ ಮೊದಲು ಸಾಕಷ್ಟು ಬೇಡಿಕೆ ಹೊಂದಿದ್ದರು. ಶಾರುಖ್ ಖಾನ್ ರೀತಿಯ ಸ್ಟಾರ್ ಹೀರೋಗಳ ಜೊತೆ ನಟಿಸಿದ್ದರು. ಅವರು ಈಗ ದೊಡ್ಮನೆಯ ಆಟವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅವರು ಸಂತೋಷದಿಂದ ಮಾತನಾಡಿದ್ದಾರೆ.

ಈ ಮೊದಲು ನಮ್ರತಾ ಅವರು ಶಿಲ್ಪಾ ಬಗ್ಗೆ ಮಾತನಾಡಿದ್ದರು. ತಮ್ಮ ಮಧ್ಯೆ ವೈರತ್ವ ಇದೆಯೇ ಎಂಬುದಕ್ಕೆ ಉತ್ತರ ನೀಡಿದ್ದರು. ‘ನಾನು ನನ್ನ ಸಹೋದರಿಯ ಟ್ಯಾಲೆಂಟ್​ಗೆ ಮ್ಯಾಚ್ ಮಾಡಲು ಸಾಧ್ಯ ಇದೆಯೋ ಅಥವಾ ಇಲ್ಲವೋ ಗೊತ್ತಿಲ್ಲ. ಆದರೆ ನಾನು ನನ್ನ ಕೈಲಾದಷ್ಟು ಮಾಡುತ್ತೇನೆ. ಅವಳ ಜೊತೆ ಕೆಲಸ ಮಾಡಲು ಅವಕಾಶ ಸಿಕ್ಕರೆ ಮಾಡುತ್ತೇನೆ. ನಮ್ಮಿಬ್ಬರ ಮಧ್ಯೆ ಯಾವುದೇ ವೈರತ್ವ ಇಲ್ಲ. ನಾವಿಬ್ಬರೂ ಬೆಸ್ಟ್ ಫ್ರೆಂಡ್ಸ್’ ಎಂದಿದ್ದರು ನಮ್ರತಾ.

ನಮ್ರತಾ ಅಕ್ಕ ಹಾಗೂ ಶಿಲ್ಪಾ ತಂಗಿ. ಆದರೆ, ಎಲ್ಲ ವಿಚಾರದಲ್ಲಿ ಮುಂದೆ ಇದ್ದಿದ್ದು ಶಿಲ್ಪಾ. ‘ನಾನು ನಮ್ರತಾಗಿಂತ ಮೊದಲೇ ಎಲ್ಲವನ್ನೂ ಮಾಡಿದ್ದೆ. ನಾನು ಅವಳಿಗಿಂತ ಮೊದಲು ಸಿನಿಮಾ ರಂಗಕ್ಕೆ ಬಂದೆ. ಅವಳಿಗಿಂದ ಮೊದಲು ಮದುವೆ ಆದೆ. ಅವಳಿಗಿಂತ ಮೊದಲು ನಾನು ತಾಯಿ ಆದೆ’ ಎಂದು ಈ ಮೊದಲು ಶಿಲ್ಪಾ ಹೇಳಿಕೊಂಡಿದ್ದರು. ‘ನಾನು ನಮ್ಮ ಕುಟುಂಬವನ್ನು ಕಳೆದುಕೊಂಡ ಬಳಿಕ ನಮ್ಮಿಬ್ಬರ ಮಧ್ಯೆ ಆಪ್ತತೆ ಬೆಳೆಯಿತು. ನನ್ನ ಭಾವ ಮಹೇಶ್ ಬಾಬು ಚಿತ್ರವನ್ನು ನೋಡುತ್ತೇನೆ’ ಎಂದು ಶಿಲ್ಪಾ ಈ ಮೊದಲು ಹೇಳಿದ್ದರು.

ಇದನ್ನೂ ಓದಿ: ಹಿಂದಿ ಬಿಗ್ ಬಾಸ್​ಗೆ ಎಂಟ್ರಿ ಕೊಟ್ಟ ಮಹೇಶ್ ಬಾಬು ಸಂಬಂಧಿ

ಮಹೇಶ್ ಬಾಬು ಅವರು ರಾಜಮೌಳಿ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರ ಸೆಟ್ಟೇರಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಈ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಇದು ಮಹೇಶ್ ಬಾಬು ಅವರ ಮೊದಲ ಪ್ಯಾನ್ ಇಂಡಿಯಾ ಸಿನಿಮಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ