AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೆದ್ದಿ’ ಸಿನಿಮಾನಲ್ಲಿ ಶಿವರಾಜ್ ಕುಮಾರ್ ಪಾತ್ರವೇನು?

Shiva Rajkumar: ‘ಪೆದ್ದಿ’ ಸಿನಿಮಾನಲ್ಲಿ ಶಿವರಾಜ್ ಕುಮಾರ್ ಸಹ ನಟಿಸುತ್ತಿದ್ದಾರೆ. ಶಿವರಾಜ್ ಕುಮಾರ್ ಅವರ ಪಾತ್ರದ ಪೋಸ್ಟರ್ ಅನ್ನು ಈ ಹಿಂದೆ ಬಿಡುಗಡೆ ಮಾಡಲಾಗಿತ್ತು. ಶಿವಣ್ಣನ ಪಾತ್ರದ ಹೆಸರು ಗೌರನಾಯ್ಡು ಎಂದಿದೆ. ಆದರೆ ಶಿವಣ್ಣನ ಪಾತ್ರ ಎಂಥಹದ್ದು ಎಂಬ ವಿಷಯ ಬಹಿರಂಗವಾಗಿರಲಿಲ್ಲ. ಇದೀಗ ಸಿನಿಮಾದ ಹೊಸ ಟೀಸರ್ ಬಿಡುಗಡೆ ಆದ ಬಳಿಕ ಶಿವಣ್ಣನ ಪಾತ್ರದ ಬಗ್ಗೆ ಸುಳಿವು ದೊರೆತಿದೆ.

‘ಪೆದ್ದಿ’ ಸಿನಿಮಾನಲ್ಲಿ ಶಿವರಾಜ್ ಕುಮಾರ್ ಪಾತ್ರವೇನು?
Ram Charan Shiva Rajkumar
ಮಂಜುನಾಥ ಸಿ.
|

Updated on: Mar 27, 2026 | 3:07 PM

Share

ರಾಮ್ ಚರಣ್ (Ram Charan) ಹುಟ್ಟುಹಬ್ಬ ಇಂದು (ಮಾರ್ಚ್ 27). ಅವರ ನಟನೆಯ ಹೊಸ ಸಿನಿಮಾ ‘ಪೆದ್ದಿ’ಯ ಟೀಸರ್ ಇಂದು ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಬಿಡುಗಡೆ ಆಗಿದ್ದ ಹಾಡು, ಟೀಸರ್ ನೋಡಿ, ‘ಪೆದ್ದಿ’ ಸಿನಿಮಾನಲ್ಲಿ ರಾಮ್ ಚರಣ್ ಅವರದ್ದು ಹಳ್ಳಿ ಕ್ರಿಕೆಟಿಗನೊಬ್ಬನ ಪಾತ್ರ ಎಂದುಕೊಂಡಿದ್ದರು ಅಭಿಮಾನಿಗಳು. ಆದರೆ ಈಗ ಬಿಡುಗಡೆ ಆಗಿರುವ ಟೀಸರ್​​ನಲ್ಲಿ ರಾಮ್ ಚರಣ್ ಕುಸ್ತಿ ಪಟುವಾಗಿ ಕಾಣಿಸಿಕೊಂಡಿದ್ದಾರೆ. ಕುಸ್ತಿ ಪಟುವಿನಂತೆ ಲಂಗೋಟಿ ಧರಿಸಿ, ಕಟ್ಟುಮಸ್ತಾದ ದೇಹ ಪ್ರದರ್ಶಿಸುತ್ತಾ ಅಖಾಡದಲ್ಲಿ ಕುಸ್ತಿ ಆಡುತ್ತಿದ್ದಾರೆ.

‘ಪೆದ್ದಿ’ ಸಿನಿಮಾನಲ್ಲಿ ಶಿವರಾಜ್ ಕುಮಾರ್ ಸಹ ನಟಿಸುತ್ತಿದ್ದಾರೆ. ಶಿವರಾಜ್ ಕುಮಾರ್ ಅವರ ಪಾತ್ರದ ಪೋಸ್ಟರ್ ಅನ್ನು ಈ ಹಿಂದೆ ಬಿಡುಗಡೆ ಮಾಡಲಾಗಿತ್ತು. ಶಿವಣ್ಣನ ಪಾತ್ರದ ಹೆಸರು ಗೌರನಾಯ್ಡು ಎಂದಿದೆ. ಆದರೆ ಶಿವಣ್ಣನ ಪಾತ್ರ ಎಂಥಹದ್ದು ಎಂಬ ವಿಷಯ ಬಹಿರಂಗವಾಗಿರಲಿಲ್ಲ. ಇದೀಗ ಸಿನಿಮಾದ ಹೊಸ ಟೀಸರ್ ಬಿಡುಗಡೆ ಆದ ಬಳಿಕ ಶಿವಣ್ಣನ ಪಾತ್ರದ ಬಗ್ಗೆ ಸುಳಿವು ದೊರೆತಿದೆ.

ಶಿವರಾಜ್ ಕುಮಾರ್ ಅವರು ‘ಪೆದ್ದಿ’ ಸಿನಿಮಾನಲ್ಲಿ ರಾಮ್ ಚರಣ್ ಪಾತ್ರದ ಗುರುವಿನ ಪಾತ್ರದಲ್ಲಿ ನಟಿಸಿದ್ದಾರೆ. ಇಂದು ಬಿಡುಗಡೆ ಆಗಿರುವ ಟೀಸರ್​​ನಲ್ಲಿ ರಾಮ್ ಚರಣ್ ಕುಸ್ತಿ ಪಟುವಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ರಾಮ್ ಚರಣ್​​ಗೆ ಕುಸ್ತಿ ಹೇಳಿಕೊಡುವ ಗುರುವಾಗಿ ಶಿವರಾಜ್ ಕುಮಾರ್ ನಟಿಸಿದ್ದಾರೆ. ‘ಪೆದ್ದಿ’ ಸಿನಿಮಾದ ಟೀಸರ್ ಕನ್ನಡದಲ್ಲಿಯೂ ಬಿಡುಗಡೆ ಆಗಿದ್ದು, ಕನ್ನಡ ಟೀಸರ್​​ನಲ್ಲಿ ಖುದ್ದು ಶಿವರಾಜ್ ಕುಮಾರ್ ಅವರೇ ಧ್ವನಿ ನೀಡಿದ್ದಾರೆ. ‘ಕುಸ್ತಿ ಅಂದರೆ ಬ್ಯಾಟಿನಿಂದ ಬಾಲ್​​ನ ಹೊಡೆಯೋ ಆಟ ಅಲ್ಲ’ ಎಂದು ರಾಮ್ ಚರಣ್​​ಗೆ ಕುಸ್ತಿಯ ಮಹತ್ವ ಹೇಳುವ ಸಂಭಾಷಣೆಯನ್ನು ಟೀಸರ್​ನಲ್ಲಿ ಶಿವಣ್ಣ ಹೇಳಿದ್ದಾರೆ.

ಇದನ್ನೂ ಓದಿ:ರಾಮ್ ಚರಣ್ ವರ್ಷದ ಆದಾಯದಲ್ಲಿ ಬಿಗ್ ಬಜೆಟ್ ಸಿನಿಮಾ ಮಾಡಬಹುದು

‘ಪೆದ್ದಿ’ ಸಿನಿಮಾದ ನಿರ್ದೇಶಕ ಬುಚ್ಚಿಬಾಬು ಸನಾ ಅವರು ಪಾತ್ರಕ್ಕೆ ಶಿವರಾಜ್ ಕುಮಾರ್ ಅವರೇ ಬೇಕೆಂದು ಕಾದು ಅವರಿಂದ ನಟನೆ ಮಾಡಿಸಿಕೊಂಡಿದ್ದಾರೆ. ಸಿನಿಮಾದ ಮುಹೂರ್ತ ನಡೆಯುವ ಮುಂಚೆಯೇ ನಿರ್ದೇಶಕ ಬುಚ್ಚಿಬಾಬು ಸನಾ ಶಿವಣ್ಣನವರನ್ನು ಭೇಟಿಯಾಗಿ ಕತೆ ವಿವರಿಸಿದ್ದರು. ಆ ಬಳಿಕ ಶಿವಣ್ಣ ಆಪರೇಷನ್​​ಗಾಗಿ ಅಮೆರಿಕಕ್ಕೆ ತೆರಳಿದರು. ಕೆಲ ತಿಂಗಳ ಕಾಲ ವಿಶ್ರಾಂತಿ ತೆಗೆದುಕೊಂಡರು. ಅನಾರೋಗ್ಯದಿಂದ ದೇಹತೂಕವನ್ನೂ ಕಳೆದುಕೊಂಡರು. ಅಷ್ಟೆಲ್ಲ ಆದರೂ ಸಹ ಬುಚ್ಚಿಬಾಬು ಸನಾ, ಆ ಪಾತ್ರಕ್ಕೆ ಶಿವಣ್ಣನೇ ಇರಬೇಕೆಂದು ಕಾದು, ಶಿವಣ್ಣನ ಮನೆಗೆ ಬಂದು ಲುಕ್ ಟೆಸ್ಟ್ ಸಹ ಮಾಡಿದ್ದರು. ಕೊನೆಗೆ ಶಿವರಾಜ್ ಕುಮಾರ್ ಅವರು ಗೌರನಾಯ್ಡು ಪಾತ್ರಕ್ಕೆ ಬಣ್ಣ ಹಚ್ಚಿದರು.

‘ಪೆದ್ದಿ’ ಸಿನಿಮಾನಲ್ಲಿ ರಾಮ್ ಚರಣ್, ಶಿವರಾಜ್ ಕುಮಾರ್ ಜೊತೆಗೆ ಜಾನ್ಹವಿ ಕಪೂರ್ ಸಹ ನಟಿಸಿದ್ದಾರೆ. ಜಗಪತಿ ಬಾಬು, ಬೊಮನ್ ಇರಾನಿ ಇನ್ನೂ ಕೆಲವು ಪ್ರತಿಭಾವಂತ ಕಲಾವಿದರು ಸಿನಿಮಾನಲ್ಲಿದ್ದಾರೆ. ಸಿನಿಮಾಕ್ಕೆ ಎಆರ್ ರೆಹಮಾನ್ ಸಂಗೀತ ನೀಡಿದ್ದಾರೆ. ಸಿನಿಮಾಕ್ಕೆ ಮೈತ್ರಿ ಮೂವಿ ಮೇಕರ್ಸ್ ಬಂಡವಾಳ ಹೂಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ