AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕ್ಯಾಪ್ಟನ್ ಮಿಲ್ಲರ್’ ಹಾಡು ಬಿಡುಗಡೆ: ಈರಪ್ಪನ ನೆನೆಯುತ ಧನುಶ್ ಜೊತೆ ಶಿವಣ್ಣನ ಕುಣಿತ

Shiva Rajkumar: ಶಿವರಾಜ್ ಕುಮಾರ್ ನಟಿಸಿರುವ ಎರಡನೇ ತಮಿಳು ಸಿನಿಮಾ ‘ಕ್ಯಾಪ್ಟನ್ ಮಿಲ್ಲರ್’ನ ಹಾಡೊಂದು ಬಿಡುಗಡೆ ಆಗಿದೆ.

‘ಕ್ಯಾಪ್ಟನ್ ಮಿಲ್ಲರ್’ ಹಾಡು ಬಿಡುಗಡೆ: ಈರಪ್ಪನ ನೆನೆಯುತ ಧನುಶ್ ಜೊತೆ ಶಿವಣ್ಣನ ಕುಣಿತ
ಮಂಜುನಾಥ ಸಿ.
|

Updated on:Jan 03, 2024 | 5:46 PM

Share

ಜೈಲರ್’ (Jailer) ಸಿನಿಮಾದ ಬಳಿಕ ತಮಿಳುನಾಡಿನಲ್ಲಿ ಶಿವರಾಜ್ ಕುಮಾರ್ ಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿಯಾಗಿದೆ. ‘ಜೈಲರ್’ ಸಣ್ಣ ಪಾತ್ರದಿಂದಲೇ ದೊಡ್ಡ ಪರಿಣಾಮವನ್ನು ಶಿವರಾಜ್ ಕುಮಾರ್ ಬೀರಿದ್ದಾರೆ. ಇದೀಗ ಅವರ ನಟನೆಯ ಎರಡನೇ ತಮಿಳು ಸಿನಿಮಾ ಬಿಡುಗಡೆಗೆ ರೆಡಿಯಾಗಿದ್ದು, ಸಿನಿಮಾದ ಹಾಡೊಂದು ಇದೀಗ ಬಿಡುಗಡೆ ಆಗಿದೆ.

ನಟ ಧನುಶ್ ಜೊತೆಗೆ ಶಿವರಾಜ್ ಕುಮಾರ್ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ನಟಿಸಿದ್ದಾರೆ. ‘ಜೈಲರ್’ ಸಿನಿಮಾದಲ್ಲಿ ಶಿವಣ್ಣನದ್ದು ಅತಿಥಿ ಪಾತ್ರವಷ್ಟೆ ಆಗಿತ್ತು, ಆದರೆ ‘ಕ್ಯಾಪ್ಟನ್ ಮಿಲ್ಲರ್’ನಲ್ಲಿ ನಾಯಕನ ಪಾತ್ರದಲ್ಲಿ ನಟಿಸಿದ್ದಾರೆ. ಇದೀಗ ಈ ಸಿನಿಮಾದ ಹಾಡೊಂದು ಬಿಡುಗಡೆ ಆಗಿದ್ದು, ಹಾಡಿನಲ್ಲಿ ನಟ ಧನುಶ್ ಜೊತೆಗೆ ಶಿವಣ್ಣ ಸಖತ್ ಆಗಿ ಹೆಜ್ಜೆ ಹಾಕಿದ್ದಾರೆ.

ಇಲ್ಲಿದೆ ನೋಡಿ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದ ಹಾಡು

ರೆಟ್ರೋ ಶೈಲಿಯ ಹಾಡು ಇದಾಗಿದ್ದು, ಬುಡಕಟ್ಟು ಹಾಡಿಯೊಂದರಲ್ಲಿ ಧನುಶ್ ಹಾಗೂ ಶಿವಣ್ಣ ಸಖತ್ ಆಗಿ ಸ್ಟೆಪ್ ಹಾಕಿದ್ದಾರೆ. ಹಾಡು ಸಹ ಜನಪದದ ಫೀಲ್ ನೀಡುವಂತಿದೆ. ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಹಾಡು ಬಿಡುಗಡೆ ಆಗಿದ್ದು, ಕನ್ನಡದಲ್ಲಿ ‘ಕರಘಟ್ಟದ ಈರಪ್ಪನೂ’ ಹೆಸರಿನಲ್ಲಿ ಹಾಡು ಪ್ರಾರಂಭವಾಗುತ್ತದೆ. ಶಿವಣ್ಣ ರೆಟ್ರೋ ಶೈಲಿಯ ಶರ್ಟ್-ಪ್ಯಾಂಟ್ ಧರಿಸಿದ್ದರೆ, ಧನುಶ್ ಹಳ್ಳಿ ಹೈದನ ರೀತಿ ಉಡುಪು ಧರಿಸಿ ಸಖತ್ ಆಗಿ ಕುಣಿದಿದ್ದಾರೆ.

ಇದನ್ನೂ ಓದಿ:ಶಿವರಾಜ್ ಕುಮಾರ್ ನಟನೆಯ ತಮಿಳು ಸಿನಿಮಾದ ಬಿಡುಗಡೆ ದಿನಾಂಕ ನಿಗದಿ

ಸಿನಿಮಾದ ವಿಡಿಯೋ ಹಾಡು ಇದೀಗ ಬಿಡುಗಡೆ ಆಗಿದ್ದು ಬಿಹೈಂಡ್​ ದಿ ಕ್ಯಾಮೆರಾ ದೃಶ್ಯಗಳನ್ನು ಸಹ ವಿಡಿಯೋನಲ್ಲಿ ಸೇರಿಸಲಾಗಿದೆ. ಧನುಶ್ ಹಾಗೂ ಶಿವಣ್ಣ ಆಪ್ತವಾಗಿ ಮಾತನಾಡುತ್ತಾ, ಹರಟೆ ಹೊಡೆಯುತ್ತಾ ಕೆಲಸ ಮಾಡುತ್ತಿರುವ ದೃಶ್ಯಗಳು ವಿಡಿಯೋನಲ್ಲಿವೆ.

‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾ ಪಕ್ಕಾ ಆಕ್ಷನ್ ಸಿನಿಮಾ ಆಗಿದ್ದು, ಸಿನಿಮಾದ ಪೋಸ್ಟರ್​ ಹಾಗೂ ಟೀಸರ್ ಈಗಾಗಲೇ ಬಿಡುಗಡೆ ಆಗಿದೆ. ಸಿನಿಮಾವನ್ನು ಅರುಣ್ ಮಟ್ಟೇಶ್ವರನ್ ನಿರ್ದೇಶನ ಮಾಡಿದ್ದು, ನಿರ್ಮಾಣ ಮಾಡುತ್ತಿರುವುದು ಸತ್ಯಜ್ಯೋತಿ ಫಿಲಮ್ಸ್​, ಈ ಸಿನಿಮಾದಲ್ಲಿ ಶಿವಣ್ಣ-ಧನುಷ್ ಜೊತೆಗೆ ಪ್ರಿಯಾಂಕಾ ಅರುಲ್, ಸಂದೀಪ್ ಕಿಶನ್, ನಿವೇದಿತಾ ಸತೀಶ್ ಇನ್ನೂ ಹಲವರು ನಟಿಸಿದ್ದಾರೆ. ಸಿನಿಮಾ ಜನವರಿ 12ಕ್ಕೆ ಪ್ಯಾನ್ ಇಂಡಿಯಾ ಲೆವೆಲ್​ನಲ್ಲಿ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:26 pm, Wed, 3 January 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ