AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕ್ಯಾಪ್ಟನ್ ಮಿಲ್ಲರ್’ ಹಾಡು ಬಿಡುಗಡೆ: ಈರಪ್ಪನ ನೆನೆಯುತ ಧನುಶ್ ಜೊತೆ ಶಿವಣ್ಣನ ಕುಣಿತ

Shiva Rajkumar: ಶಿವರಾಜ್ ಕುಮಾರ್ ನಟಿಸಿರುವ ಎರಡನೇ ತಮಿಳು ಸಿನಿಮಾ ‘ಕ್ಯಾಪ್ಟನ್ ಮಿಲ್ಲರ್’ನ ಹಾಡೊಂದು ಬಿಡುಗಡೆ ಆಗಿದೆ.

‘ಕ್ಯಾಪ್ಟನ್ ಮಿಲ್ಲರ್’ ಹಾಡು ಬಿಡುಗಡೆ: ಈರಪ್ಪನ ನೆನೆಯುತ ಧನುಶ್ ಜೊತೆ ಶಿವಣ್ಣನ ಕುಣಿತ
ಮಂಜುನಾಥ ಸಿ.
|

Updated on:Jan 03, 2024 | 5:46 PM

Share

ಜೈಲರ್’ (Jailer) ಸಿನಿಮಾದ ಬಳಿಕ ತಮಿಳುನಾಡಿನಲ್ಲಿ ಶಿವರಾಜ್ ಕುಮಾರ್ ಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿಯಾಗಿದೆ. ‘ಜೈಲರ್’ ಸಣ್ಣ ಪಾತ್ರದಿಂದಲೇ ದೊಡ್ಡ ಪರಿಣಾಮವನ್ನು ಶಿವರಾಜ್ ಕುಮಾರ್ ಬೀರಿದ್ದಾರೆ. ಇದೀಗ ಅವರ ನಟನೆಯ ಎರಡನೇ ತಮಿಳು ಸಿನಿಮಾ ಬಿಡುಗಡೆಗೆ ರೆಡಿಯಾಗಿದ್ದು, ಸಿನಿಮಾದ ಹಾಡೊಂದು ಇದೀಗ ಬಿಡುಗಡೆ ಆಗಿದೆ.

ನಟ ಧನುಶ್ ಜೊತೆಗೆ ಶಿವರಾಜ್ ಕುಮಾರ್ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ನಟಿಸಿದ್ದಾರೆ. ‘ಜೈಲರ್’ ಸಿನಿಮಾದಲ್ಲಿ ಶಿವಣ್ಣನದ್ದು ಅತಿಥಿ ಪಾತ್ರವಷ್ಟೆ ಆಗಿತ್ತು, ಆದರೆ ‘ಕ್ಯಾಪ್ಟನ್ ಮಿಲ್ಲರ್’ನಲ್ಲಿ ನಾಯಕನ ಪಾತ್ರದಲ್ಲಿ ನಟಿಸಿದ್ದಾರೆ. ಇದೀಗ ಈ ಸಿನಿಮಾದ ಹಾಡೊಂದು ಬಿಡುಗಡೆ ಆಗಿದ್ದು, ಹಾಡಿನಲ್ಲಿ ನಟ ಧನುಶ್ ಜೊತೆಗೆ ಶಿವಣ್ಣ ಸಖತ್ ಆಗಿ ಹೆಜ್ಜೆ ಹಾಕಿದ್ದಾರೆ.

ಇಲ್ಲಿದೆ ನೋಡಿ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದ ಹಾಡು

ರೆಟ್ರೋ ಶೈಲಿಯ ಹಾಡು ಇದಾಗಿದ್ದು, ಬುಡಕಟ್ಟು ಹಾಡಿಯೊಂದರಲ್ಲಿ ಧನುಶ್ ಹಾಗೂ ಶಿವಣ್ಣ ಸಖತ್ ಆಗಿ ಸ್ಟೆಪ್ ಹಾಕಿದ್ದಾರೆ. ಹಾಡು ಸಹ ಜನಪದದ ಫೀಲ್ ನೀಡುವಂತಿದೆ. ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಹಾಡು ಬಿಡುಗಡೆ ಆಗಿದ್ದು, ಕನ್ನಡದಲ್ಲಿ ‘ಕರಘಟ್ಟದ ಈರಪ್ಪನೂ’ ಹೆಸರಿನಲ್ಲಿ ಹಾಡು ಪ್ರಾರಂಭವಾಗುತ್ತದೆ. ಶಿವಣ್ಣ ರೆಟ್ರೋ ಶೈಲಿಯ ಶರ್ಟ್-ಪ್ಯಾಂಟ್ ಧರಿಸಿದ್ದರೆ, ಧನುಶ್ ಹಳ್ಳಿ ಹೈದನ ರೀತಿ ಉಡುಪು ಧರಿಸಿ ಸಖತ್ ಆಗಿ ಕುಣಿದಿದ್ದಾರೆ.

ಇದನ್ನೂ ಓದಿ:ಶಿವರಾಜ್ ಕುಮಾರ್ ನಟನೆಯ ತಮಿಳು ಸಿನಿಮಾದ ಬಿಡುಗಡೆ ದಿನಾಂಕ ನಿಗದಿ

ಸಿನಿಮಾದ ವಿಡಿಯೋ ಹಾಡು ಇದೀಗ ಬಿಡುಗಡೆ ಆಗಿದ್ದು ಬಿಹೈಂಡ್​ ದಿ ಕ್ಯಾಮೆರಾ ದೃಶ್ಯಗಳನ್ನು ಸಹ ವಿಡಿಯೋನಲ್ಲಿ ಸೇರಿಸಲಾಗಿದೆ. ಧನುಶ್ ಹಾಗೂ ಶಿವಣ್ಣ ಆಪ್ತವಾಗಿ ಮಾತನಾಡುತ್ತಾ, ಹರಟೆ ಹೊಡೆಯುತ್ತಾ ಕೆಲಸ ಮಾಡುತ್ತಿರುವ ದೃಶ್ಯಗಳು ವಿಡಿಯೋನಲ್ಲಿವೆ.

‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾ ಪಕ್ಕಾ ಆಕ್ಷನ್ ಸಿನಿಮಾ ಆಗಿದ್ದು, ಸಿನಿಮಾದ ಪೋಸ್ಟರ್​ ಹಾಗೂ ಟೀಸರ್ ಈಗಾಗಲೇ ಬಿಡುಗಡೆ ಆಗಿದೆ. ಸಿನಿಮಾವನ್ನು ಅರುಣ್ ಮಟ್ಟೇಶ್ವರನ್ ನಿರ್ದೇಶನ ಮಾಡಿದ್ದು, ನಿರ್ಮಾಣ ಮಾಡುತ್ತಿರುವುದು ಸತ್ಯಜ್ಯೋತಿ ಫಿಲಮ್ಸ್​, ಈ ಸಿನಿಮಾದಲ್ಲಿ ಶಿವಣ್ಣ-ಧನುಷ್ ಜೊತೆಗೆ ಪ್ರಿಯಾಂಕಾ ಅರುಲ್, ಸಂದೀಪ್ ಕಿಶನ್, ನಿವೇದಿತಾ ಸತೀಶ್ ಇನ್ನೂ ಹಲವರು ನಟಿಸಿದ್ದಾರೆ. ಸಿನಿಮಾ ಜನವರಿ 12ಕ್ಕೆ ಪ್ಯಾನ್ ಇಂಡಿಯಾ ಲೆವೆಲ್​ನಲ್ಲಿ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:26 pm, Wed, 3 January 24

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್