AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್ ಕುಮಾರ್ ಹೊಸ ತಮಿಳು ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

Shiva Rajkumar: ರಜನೀಕಾಂತ್ ನಟನೆಯ 'ಜೈಲರ್' ಸಿನಿಮಾದಲ್ಲಿ ಶಿವರಾಜ್ ಕುಮಾರ್ ನಿರ್ವಹಿಸಿದ್ದ ಅತಿಥಿ ಪಾತ್ರ ಯಾವ ಮಟ್ಟಿಗೆ ಮೋಡಿ ಮಾಡಿದೆಯೆಂದರೆ ಶಿವಣ್ಣನಿಗೆ ತಮಿಳುನಾಡಿನಲ್ಲಿ ದೊಡ್ಡ ಅಭಿಮಾನಿ ವರ್ಗವೇ ಸೃಷ್ಟಿಯಾಗಿಬಿಟ್ಟಿದೆ. ಇದೀಗ ಶಿವಣ್ಣ ನಟಿಸಿರುವ ಮತ್ತೊಂದು ತಮಿಳು ಸಿನಿಮಾದ ಬಿಡುಗಡೆ ದಿನಾಂಕ ಘೊಷಣೆಯಾಗಿದೆ.

ಶಿವರಾಜ್ ಕುಮಾರ್ ಹೊಸ ತಮಿಳು ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಮಂಜುನಾಥ ಸಿ.
|

Updated on: Nov 08, 2023 | 10:03 PM

Share

ರಜನೀಕಾಂತ್ ನಟನೆಯ ‘ಜೈಲರ್’ ಸಿನಿಮಾದಲ್ಲಿ ಶಿವರಾಜ್ ಕುಮಾರ್ (Shiva Rajkumar) ನಿರ್ವಹಿಸಿದ್ದ ಅತಿಥಿ ಪಾತ್ರ ಯಾವ ಮಟ್ಟಿಗೆ ಮೋಡಿ ಮಾಡಿದೆಯೆಂದರೆ ಶಿವಣ್ಣನಿಗೆ ತಮಿಳುನಾಡಿನಲ್ಲಿ ದೊಡ್ಡ ಅಭಿಮಾನಿ ವರ್ಗವೇ ಸೃಷ್ಟಿಯಾಗಿಬಿಟ್ಟಿದೆ. ಅದೇ ಸಿನಿಮಾದಲ್ಲಿ ಮೋಹನ್​ಲಾಲ್, ಜಾಕಿ ಶ್ರಾಫ್ ಅವರುಗಳು ಸಹ ಅತಿಥಿ ಪಾತ್ರ ಮಾಡಿದ್ದರಾದರೂ ಶಿವಣ್ಣನ ಅತಿಥಿ ಪಾತ್ರ ದೊಡ್ಡ ಮಟ್ಟದ ಕ್ರೇಜ್ ಹುಟ್ಟು ಹಾಕಿತ್ತು. ಆ ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿ ಶಿವಣ್ಣ ಮತ್ತೊಂದು ತಮಿಳು ಸಿನಿಮಾದಲ್ಲಿ ನಟಿಸಿದ್ದು ಆ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ.

ಧನುಶ್ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಸಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾವು ಪಕ್ಕಾ ಆಕ್ಷನ್ ಕತೆಯುಳ್ಳದ್ದಾಗಿದ್ದು ಸಿನಿಮಾದ ಕೆಲವು ಪೋಸ್ಟರ್​ಗಳು ಮಾತ್ರವೇ ಈ ವರೆಗೆ ಬಿಡುಗಡೆ ಆಗಿದ್ದವು. ಪೋಸ್ಟರ್​ಗಳಲ್ಲಿ ಬಂದೂಕು ಹಿಡಿದು ಖಡಕ್​ ಲುಕ್​ನಲ್ಲಿ ಶಿವರಾಜ್ ಕುಮಾರ್ ಕಾಣಿಸಿಕೊಂಡಿದ್ದು, ಸಿನಿಮಾದ ಬಗ್ಗೆ ಭಾರಿ ನಿರೀಕ್ಷೆ ಹುಟ್ಟಿಸಿದೆ.

ಇದನ್ನೂ ಓದಿ: ಘೋಸ್ಟ್ ಸಿನಿಮಾ ನೋಡಲು ಕೆಲವು ಸಲಹೆ ಕೊಟ್ಟ ನಟ ಶಿವರಾಜ್ ಕುಮಾರ್

ಈ ಹಿಂದೆ ಹರಿದಾಡಿದ ಕೆಲವು ಸುದ್ದಿಗಳ ಪ್ರಕಾರ, ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದ ಶೂಟಿಂಗ್ ಈಗಾಗಲೇ ಮುಗಿದಿದೆ, ಆದರೆ ಬಿಡುಗಡೆ ದಿನಾಂಕವನ್ನು ಉದ್ದೇಶಪೂರ್ವಕವಾಗಿ ತಡಮಾಡಲಾಗಿದೆ ಎನ್ನಲಾಗುತ್ತಿತ್ತು, ಅದಕ್ಕೆ ಮುಖ್ಯ ಕಾರಣ ಕಾವೇರಿ ವಿವಾದ ಎಂಬ ಸುದ್ದಿಯೂ ಹರಿದಾಡುತ್ತಿತ್ತು. ಆದರೆ ಇದೀಗ ಕೊನೆಗೂ ಅಧಿಕೃತವಾಗಿ ಸಿನಿಮಾ ದಿನಾಂಕ ಘೋಷಣೆ ಮಾಡಲಾಗಿದೆ.

ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಆಗುತ್ತದೆ ಎಂದು ನಿರೀಕ್ಷಿಸಲಾಗಿದ್ದ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾವನ್ನು 2024ರ ಸಂಕ್ರಾಂತಿಗೆ ಬಿಡುಗಡೆ ಮಾಡಲಾಗುತ್ತಿದೆ. ಅಂದರೆ ಜನವರಿ 15ಕ್ಕೆ ಅಥವಾ 14 ಕ್ಕೆ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾದ ಬಿಡುಗಡೆ ದಿನಾಂಕವನ್ನು ನಿರ್ಮಾಣ ಸಂಸ್ಥೆಯಾದ ಸತ್ಯಜ್ಯೋತಿ ಫಿಲಮ್ಸ್​ ಘೋಷಣೆ ಮಾಡಿದೆ. ಸಿನಿಮಾವನ್ನು ಅರುಣ್ ಮತ್ತೇಶ್ವರನ್ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ಧನುಶ್, ಶಿವರಾಜ್ ಕುಮಾರ್ ಜೊತೆಗೆ ಪ್ರಿಯಾಂಕಾ ಅರುಲ್ ಮೋಹನ್, ಜಾನ್ ಕೊಕ್ಕೆನ್, ನಾಸರ್ ಇನ್ನೂ ಕೆಲವು ಉತ್ತಮ ನಟರಿದ್ದಾರೆ.

‘ಜೈಲರ್’ ಸಿನಿಮಾದಿಂದ ತಮಿಳಿನಲ್ಲಿ ಅಭಿಮಾನಿ ವರ್ಗ ಸೃಷ್ಟಿಸಿಕೊಂಡಿರುವ ಶಿವಣ್ಣನಿಗೆ, ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾ ಮೂಲಕ ಇನ್ನಷ್ಟು ತಮಿಳು ಅಭಿಮಾನಿಗಳು ಲಭ್ಯವಾಗುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ತಮಿಳಿನ ಕೆಲವು ನಿರ್ಮಾಪಕರು ಹಾಗೂ ನಿರ್ದೇಶಕರು ಶಿವಣ್ಣನನ್ನು ತಮಿಳಿನಲ್ಲಿ ಪೂರ್ಣಪ್ರಮಾಣದ ಸಿನಿಮಾ ಮಾಡಲು ಸಂಪರ್ಕ ಮಾಡಿದ್ದು, ಶಿವಣ್ಣ ಸಹ ಕತೆಗಳನ್ನು ಕೇಳುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು