AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಗಾಸ್ಟಾರ್ ಚಿರಂಜೀವಿಗೆ ಅಭಿನಂದನೆ ಕೋರಿದ ನಟ ಶಿವಣ್ಣ

Shiva Rajkumar: ಭಾರತದ ಎರಡನೇ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ಪದ್ಮ ವಿಭೂಷಣಕ್ಕೆ ಭಾಜನರಾಗಿರುವ ಚಿರಂಜೀವಿ ಅವರನ್ನು ಶಿವರಾಜ್ ಕುಮಾರ್ ಭೇಟಿಯಾಗಿ ಅಭಿನಂದಿಸಿದ್ದಾರೆ.

ಮೆಗಾಸ್ಟಾರ್ ಚಿರಂಜೀವಿಗೆ ಅಭಿನಂದನೆ ಕೋರಿದ ನಟ ಶಿವಣ್ಣ
ಮಂಜುನಾಥ ಸಿ.
|

Updated on: Feb 04, 2024 | 5:36 PM

Share

ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಅವರಿಗೂ ಕರ್ನಾಟಕಕ್ಕೂ ಹಳೆಯ ನಂಟಿದೆ. ದೊಡ್ಮನೆ ಮಾತ್ರವೇ ಅಲ್ಲದೆ ಕನ್ನಡದ ಹಲವು ಹಿರಿಯ ನಟರೊಟ್ಟಿಗೆ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಉತ್ತಮ ಬಾಂಧವ್ಯವಿದೆ. ಇತ್ತೀಚೆಗಷ್ಟೆ ಚಿರಂಜೀವಿ ಅವರಿಗೆ ಭಾರತದ ಎರಡನೇ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕೆಲವೇ ದಿನಗಳಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ಸಹ ನಡೆಯಲಿದೆ. ಹಲವು ಗಣ್ಯರು ಚಿರಂಜೀವಿ ಅವರಿಗೆ ಅಭಿನಂದನೆಗಳನ್ನು ತಿಳಿಸುತ್ತಿದ್ದಾರೆ. ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ (Shiva Rajkumar) ಸಹ ಚಿರಂಜೀವಿ ಅವರನ್ನು ಭೇಟಿಯಾಗಿ ಅಭಿನಂದನೆ ಕೋರಿದ್ದಾರೆ.

ಹೈದರಾಬಾದ್​ನ ಮೆಗಾಸ್ಟಾರ್ ಚಿರಂಜೀವಿ ಅವರ ನಿವಾಸಕ್ಕೆ ತೆರಳಿದ್ದ ಶಿವರಾಜ್ ಕುಮಾರ್ ಅವರು ಚಿರಂಜೀವಿ ಅವರಿಗೆ ಹೂಗುಚ್ಛ ನೀಡಿ ಶುಭಾಶಯ ಕೋರಿದ್ದಾರೆ. ಕೆಲವು ಸಮಯವನ್ನು ಇಬ್ಬರೂ ಒಟ್ಟಿಗೆ ಕಳೆದು ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ. ಶಿವರಾಜ್ ಕುಮಾರ್ ಅವರು ಭೇಟಿಯಾದ ಚಿತ್ರಗಳನ್ನು ಹಂಚಿಕೊಂಡಿರುವ ಮೆಗಾಸ್ಟಾರ್ ಚಿರಂಜೀವಿ, ‘ನನ್ನ ಪ್ರೀತಿಯ ಶಿವರಾಜ್ ಕುಮಾರ್ ಅವರು ಬೆಂಗಳೂರಿನಿಂದ ಇಲ್ಲಿಗೆ ಆಗಮಿಸಿ ಶುಭ ಕೋರಿದ್ದು ಬಹಳ ಖುಷಿಯಾಯಿತು’ ಎಂದು ಚಿರಂಜೀವಿ ಬರೆದುಕೊಂಡಿದ್ದಾರೆ.

ಮುಂದುವರೆದು, ‘ಕೆಲವು ಅತ್ಯುತ್ತಮ ಕ್ಷಣಗಳನ್ನು ನಾವು ಒಟ್ಟಿಗೆ ಕಳೆದವು. ಒಟ್ಟಿಗೆ ಭೋಜ ಮಾಡಿದೆವು. ಎರಡು ಕುಟುಂಬಗಳ ಬಂಧವನ್ನು ನೆನಪು ಮಾಡಿಕೊಂಡೆವು. ದಂತಕತೆ ಡಾ ರಾಜ್​ಕುಮಾರ್ ಅವರೊಟ್ಟಿಗೆ ಹಾಗೂ ಅವರ ಕುಟುಂಬದವರೊಟ್ಟಿಗೆ ಕಳೆದ ಕ್ಷಣಗಳ ನೆನಪುಗಳು ಜೀವನ ಪರ್ಯಂತ ಜೊತೆಗಿರುತ್ತವೆ’ ಎಂದಿದ್ದಾರೆ ಮೆಗಾಸ್ಟಾರ್ ಚಿರಂಜೀವಿ.

ಇದನ್ನೂ ಓದಿ:ಕ್ಯಾಪ್ಟನ್ ವಿಜಯ್​ಕಾಂತ್ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ ಶಿವರಾಜ್ ಕುಮಾರ್ ದಂಪತಿ

ಮೆಗಾಸ್ಟಾರ್ ಕುಟುಂಬದಲ್ಲಿ ಆದ ಎಲ್ಲ ಶುಭ ಸಮಾರಂಭಗಳಲ್ಲಿಯೂ ಡಾ ರಾಜ್​ಕುಮಾರ್ ಕುಟುಂಬದವರು ಭಾಗಿಯಾಗಿದ್ದಾರೆ. ಹಾಗೆಯೇ ದೊಡ್ಮನೆಯ ಕಾರ್ಯಕ್ರಮಗಳಿಗೂ ಮೆಗಾಸ್ಟಾರ್ ಕುಟುಂಬದವರು ತಪ್ಪದೇ ಹಾಜರಾಗುತ್ತಾರೆ. ರಾಮ್ ಚರಣ್ ವಿವಾಹಕ್ಕೆ ಪುನೀತ್ ರಾಜ್​ಕುಮಾರ್ ಅತಿಥಿಯಾಗಿದ್ದರು. ಅಲ್ಲು ಅರ್ಜುನ್ ವಿವಾಹಕ್ಕೆ ಪುನೀತ್ ರಾಜ್​ಕುಮಾರ್ ಹಾಗೂ ಶಿವರಾಜ್ ಕುಮಾರ್ ಇಬ್ಬರೂ ಹೋಗಿದ್ದರು.

ಇದೀಗ ನಟ ಶಿವರಾಜ್ ಕುಮಾರ್ ಚಿರಂಜೀವಿ ಅವರ ಪುತ್ರ ರಾಮ್ ಚರಣ್ ಅವರೊಟ್ಟಿಗೆ ಸಿನಿಮಾದಲ್ಲಿ ಒಟ್ಟಿಗೆ ನಟಿಸಲಿದ್ದಾರೆ. ಬುಚ್ಚಿಬಾಬು ಸನಾ ನಿರ್ದೇಶನ ಮಾಡಲಿರುವ ಹೊಸ ಸಿನಿಮಾದಲ್ಲಿ ರಾಮ್ ಚರಣ್ ಹಾಗೂ ಬುಚ್ಚಿಬಾಬು ಸನಾ ಒಟ್ಟಿಗೆ ನಟಿಸುತ್ತಿದ್ದಾರೆ. ತೆಲುಗು ಚಿತ್ರರಂಗ ಶಿವಣ್ಣನಿಗೆ ಹೊಸದೇನೂ ಅಲ್ಲ, ಈಗಾಗಲೇ ಬಾಲಕೃಷ್ಣ ಜೊತೆಗೆ ಗೌತಮಿ ಪುತ್ರ ಶಾತಕರ್ಣಿ ಸಿನಿಮಾದಲ್ಲಿ ಶಿವಣ್ಣ ನಟಿಸಿದ್ದಾರೆ. ಇದೀಗ ರಾಮ್ ಚರಣ್ ಸಿನಿಮಾದ ಜೊತೆಗೆ ಇನ್ನೆರಡು ತೆಲುಗು ಸಿನಿಮಾಗಳ ಆಫರ್ ಅನ್ನು ಸಹ ಶಿವಣ್ಣ ಪಡೆದುಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ