ಮೆಗಾಸ್ಟಾರ್ ಚಿರಂಜೀವಿಗೆ ಅಭಿನಂದನೆ ಕೋರಿದ ನಟ ಶಿವಣ್ಣ

Shiva Rajkumar: ಭಾರತದ ಎರಡನೇ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ಪದ್ಮ ವಿಭೂಷಣಕ್ಕೆ ಭಾಜನರಾಗಿರುವ ಚಿರಂಜೀವಿ ಅವರನ್ನು ಶಿವರಾಜ್ ಕುಮಾರ್ ಭೇಟಿಯಾಗಿ ಅಭಿನಂದಿಸಿದ್ದಾರೆ.

ಮೆಗಾಸ್ಟಾರ್ ಚಿರಂಜೀವಿಗೆ ಅಭಿನಂದನೆ ಕೋರಿದ ನಟ ಶಿವಣ್ಣ
Follow us
|

Updated on: Feb 04, 2024 | 5:36 PM

ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಅವರಿಗೂ ಕರ್ನಾಟಕಕ್ಕೂ ಹಳೆಯ ನಂಟಿದೆ. ದೊಡ್ಮನೆ ಮಾತ್ರವೇ ಅಲ್ಲದೆ ಕನ್ನಡದ ಹಲವು ಹಿರಿಯ ನಟರೊಟ್ಟಿಗೆ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಉತ್ತಮ ಬಾಂಧವ್ಯವಿದೆ. ಇತ್ತೀಚೆಗಷ್ಟೆ ಚಿರಂಜೀವಿ ಅವರಿಗೆ ಭಾರತದ ಎರಡನೇ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕೆಲವೇ ದಿನಗಳಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ಸಹ ನಡೆಯಲಿದೆ. ಹಲವು ಗಣ್ಯರು ಚಿರಂಜೀವಿ ಅವರಿಗೆ ಅಭಿನಂದನೆಗಳನ್ನು ತಿಳಿಸುತ್ತಿದ್ದಾರೆ. ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ (Shiva Rajkumar) ಸಹ ಚಿರಂಜೀವಿ ಅವರನ್ನು ಭೇಟಿಯಾಗಿ ಅಭಿನಂದನೆ ಕೋರಿದ್ದಾರೆ.

ಹೈದರಾಬಾದ್​ನ ಮೆಗಾಸ್ಟಾರ್ ಚಿರಂಜೀವಿ ಅವರ ನಿವಾಸಕ್ಕೆ ತೆರಳಿದ್ದ ಶಿವರಾಜ್ ಕುಮಾರ್ ಅವರು ಚಿರಂಜೀವಿ ಅವರಿಗೆ ಹೂಗುಚ್ಛ ನೀಡಿ ಶುಭಾಶಯ ಕೋರಿದ್ದಾರೆ. ಕೆಲವು ಸಮಯವನ್ನು ಇಬ್ಬರೂ ಒಟ್ಟಿಗೆ ಕಳೆದು ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ. ಶಿವರಾಜ್ ಕುಮಾರ್ ಅವರು ಭೇಟಿಯಾದ ಚಿತ್ರಗಳನ್ನು ಹಂಚಿಕೊಂಡಿರುವ ಮೆಗಾಸ್ಟಾರ್ ಚಿರಂಜೀವಿ, ‘ನನ್ನ ಪ್ರೀತಿಯ ಶಿವರಾಜ್ ಕುಮಾರ್ ಅವರು ಬೆಂಗಳೂರಿನಿಂದ ಇಲ್ಲಿಗೆ ಆಗಮಿಸಿ ಶುಭ ಕೋರಿದ್ದು ಬಹಳ ಖುಷಿಯಾಯಿತು’ ಎಂದು ಚಿರಂಜೀವಿ ಬರೆದುಕೊಂಡಿದ್ದಾರೆ.

ಮುಂದುವರೆದು, ‘ಕೆಲವು ಅತ್ಯುತ್ತಮ ಕ್ಷಣಗಳನ್ನು ನಾವು ಒಟ್ಟಿಗೆ ಕಳೆದವು. ಒಟ್ಟಿಗೆ ಭೋಜ ಮಾಡಿದೆವು. ಎರಡು ಕುಟುಂಬಗಳ ಬಂಧವನ್ನು ನೆನಪು ಮಾಡಿಕೊಂಡೆವು. ದಂತಕತೆ ಡಾ ರಾಜ್​ಕುಮಾರ್ ಅವರೊಟ್ಟಿಗೆ ಹಾಗೂ ಅವರ ಕುಟುಂಬದವರೊಟ್ಟಿಗೆ ಕಳೆದ ಕ್ಷಣಗಳ ನೆನಪುಗಳು ಜೀವನ ಪರ್ಯಂತ ಜೊತೆಗಿರುತ್ತವೆ’ ಎಂದಿದ್ದಾರೆ ಮೆಗಾಸ್ಟಾರ್ ಚಿರಂಜೀವಿ.

ಇದನ್ನೂ ಓದಿ:ಕ್ಯಾಪ್ಟನ್ ವಿಜಯ್​ಕಾಂತ್ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ ಶಿವರಾಜ್ ಕುಮಾರ್ ದಂಪತಿ

ಮೆಗಾಸ್ಟಾರ್ ಕುಟುಂಬದಲ್ಲಿ ಆದ ಎಲ್ಲ ಶುಭ ಸಮಾರಂಭಗಳಲ್ಲಿಯೂ ಡಾ ರಾಜ್​ಕುಮಾರ್ ಕುಟುಂಬದವರು ಭಾಗಿಯಾಗಿದ್ದಾರೆ. ಹಾಗೆಯೇ ದೊಡ್ಮನೆಯ ಕಾರ್ಯಕ್ರಮಗಳಿಗೂ ಮೆಗಾಸ್ಟಾರ್ ಕುಟುಂಬದವರು ತಪ್ಪದೇ ಹಾಜರಾಗುತ್ತಾರೆ. ರಾಮ್ ಚರಣ್ ವಿವಾಹಕ್ಕೆ ಪುನೀತ್ ರಾಜ್​ಕುಮಾರ್ ಅತಿಥಿಯಾಗಿದ್ದರು. ಅಲ್ಲು ಅರ್ಜುನ್ ವಿವಾಹಕ್ಕೆ ಪುನೀತ್ ರಾಜ್​ಕುಮಾರ್ ಹಾಗೂ ಶಿವರಾಜ್ ಕುಮಾರ್ ಇಬ್ಬರೂ ಹೋಗಿದ್ದರು.

ಇದೀಗ ನಟ ಶಿವರಾಜ್ ಕುಮಾರ್ ಚಿರಂಜೀವಿ ಅವರ ಪುತ್ರ ರಾಮ್ ಚರಣ್ ಅವರೊಟ್ಟಿಗೆ ಸಿನಿಮಾದಲ್ಲಿ ಒಟ್ಟಿಗೆ ನಟಿಸಲಿದ್ದಾರೆ. ಬುಚ್ಚಿಬಾಬು ಸನಾ ನಿರ್ದೇಶನ ಮಾಡಲಿರುವ ಹೊಸ ಸಿನಿಮಾದಲ್ಲಿ ರಾಮ್ ಚರಣ್ ಹಾಗೂ ಬುಚ್ಚಿಬಾಬು ಸನಾ ಒಟ್ಟಿಗೆ ನಟಿಸುತ್ತಿದ್ದಾರೆ. ತೆಲುಗು ಚಿತ್ರರಂಗ ಶಿವಣ್ಣನಿಗೆ ಹೊಸದೇನೂ ಅಲ್ಲ, ಈಗಾಗಲೇ ಬಾಲಕೃಷ್ಣ ಜೊತೆಗೆ ಗೌತಮಿ ಪುತ್ರ ಶಾತಕರ್ಣಿ ಸಿನಿಮಾದಲ್ಲಿ ಶಿವಣ್ಣ ನಟಿಸಿದ್ದಾರೆ. ಇದೀಗ ರಾಮ್ ಚರಣ್ ಸಿನಿಮಾದ ಜೊತೆಗೆ ಇನ್ನೆರಡು ತೆಲುಗು ಸಿನಿಮಾಗಳ ಆಫರ್ ಅನ್ನು ಸಹ ಶಿವಣ್ಣ ಪಡೆದುಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ