AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರ್​ಆರ್​ಆರ್​’ ಸ್ಟಾರ್ ಜೊತೆ ಶಿವರಾಜ್ ಕುಮಾರ್ ನಟನೆ, ನಿರ್ದೇಶಕ ಯಾರು?

Shiva Rajkumar: ತಮಿಳಿನ ‘ಜೈಲರ್’ ಸಿನಿಮಾದಲ್ಲಿ ನಟಿಸಿ ತಮಿಳು ಪ್ರೇಕ್ಷಕರಿಗೆ ಹತ್ತಿರವಾಗಿರುವ ಶಿವರಾಜ್ ಕುಮಾರ್ ಈಗ ತೆಲುಗಿನಲ್ಲಿ ಸ್ಟಾರ್ ನಟನೊಟ್ಟಿಗೆ ನಟಿಸಲಿದ್ದಾರೆ.

‘ಆರ್​ಆರ್​ಆರ್​’ ಸ್ಟಾರ್ ಜೊತೆ ಶಿವರಾಜ್ ಕುಮಾರ್ ನಟನೆ, ನಿರ್ದೇಶಕ ಯಾರು?
ಶಿವರಾಜ್ ಕುಮಾರ್
ಮಂಜುನಾಥ ಸಿ.
|

Updated on: Jan 05, 2024 | 5:15 PM

Share

ಶಿವರಾಜ್ ಕುಮಾರ್ (Shiva Rajkumar) ಕನ್ನಡದ ಅತ್ಯಂತ ಬ್ಯುಸಿ ಸ್ಟಾರ್ ನಟ, ಇತ್ತೀಚೆಗೆ ಕನ್ನಡ ಚಿತ್ರರಂಗ ಮಾತ್ರವೇ ಅಲ್ಲದೆ ಪರಭಾಷೆಯ ಸಿನಿಮಾರಂಗಗಳಿಂದಲೂ ಒಂದರ ಹಿಂದೊಂದು ಅವಕಾಶಗಳು ಶಿವಣ್ಣನನ್ನು ಅರಸಿ ಬರುತ್ತಿವೆ. ಪರಭಾಷೆಯ ದೊಡ್ಡ ಸ್ಟಾರ್ ನಟರೇ, ತಮ್ಮ ಸಿನಿಮಾದಲ್ಲಿ ಶಿವಣ್ಣ ಇರಬೇಕೆಂದು, ಪ್ರಮುಖ ಪಾತ್ರದಲ್ಲಿ ನಟಿಸಬೇಕೆಂದು ಬಯಸುತ್ತಿದ್ದಾರೆ. ರಜನೀಕಾಂತ್ ಜೊತೆಗೆ ‘ಜೈಲರ್’ ಸಿನಿಮಾದಲ್ಲಿ ನಟಿಸಿದ್ದ ಶಿವಣ್ಣ, ಧನುಶ್ ಜೊತೆ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಇದೀಗ ತೆಲುಗಿನ ದೊಡ್ಡ ಸ್ಟಾರ್ ನಟನೊಟ್ಟಿಗೆ ಪರದೆ ಹಂಚಿಕೊಳ್ಳಲಿದ್ದಾರೆ.

‘ಆರ್​ಆರ್​ಆರ್’ ಸಿನಿಮಾದ ಸ್ಟಾರ್ ನಟ ರಾಮ್ ಚರಣ್ ಜೊತೆಗೆ ಶಿವರಾಜ್ ಕುಮಾರ್ ಹೊಸದೊಂದು ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಬಗ್ಗೆ ಹಲವು ದಿನಗಳಿಂದಲೂ ಸುದ್ದಿ ಹರಿದಾಡುತ್ತಿತ್ತು. ಇದೀಗ ಇದು ಖಾತ್ರಿಗೊಂಡಿದೆ. ಶಿವರಾಜ್ ಕುಮಾರ್ ಹಾಗೂ ರಾಮ್ ಚರಣ್ ಒಂದೇ ಸಿನಿಮಾದಲ್ಲಿ ನಟಿಸಲಿದ್ದಾರೆ. ಸಿನಿಮಾದ ಚಿತ್ರೀಕರಣ ಮೇ ತಿಂಗಳಿನಿಂದ ಹೈದರಾಬಾದ್​ನಲ್ಲಿ ಪ್ರಾರಂಭವಾಗಲಿದೆ.

ಕೆಲ ದಿನಗಳ ಹಿಂದೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಶಿವರಾಜ್ ಕುಮಾರ್, ‘ರಾಮ್ ಚರಣ್ ಜೊತೆಗೆ ಸಿನಿಮಾ ಮಾಡುವ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಈಗಲೇ ಏನೂ ಹೇಳಲಾಗುವುದಿಲ್ಲ, ಬುಚ್ಚಿ ಬಾಬು ಸನಾ, ಭೇಟಿ ಆಗಬೇಕು ಎಂದು ಹೇಳಿದ್ದಾರೆ. ಬರುವಂತೆ ಹೇಳಿದ್ದೇನೆ. ನೋಡೋಣ ಮುಂದೇನಾಗುತ್ತದೆ’ ಎಂದಷ್ಟೆ ಹೇಳಿದ್ದರು. ಆದರೆ ಇದೀಗ ಹೊರಬಿದ್ದಿರುವ ಸುದ್ದಿಯ ಪ್ರಕಾರ, ರಾಮ್ ಚರಣ್ ಹಾಗೂ ಶಿವರಾಜ್ ಕುಮಾರ್ ಒಟ್ಟಿಗೆ ನಟಿಸುವುದು ಪಕ್ಕಾ ಆಗಿದೆ.

ಇದನ್ನೂ ಓದಿ:ವಿಷ್ಣು ಸ್ಮಾರಕ ವಿವಾದ: ಶಿವರಾಜ್ ಕುಮಾರ್ ಹೇಳಿದ್ದು ಹೀಗೆ…

ಶಿವರಾಜ್ ಕುಮಾರ್ ಅವರಿಗೆ ತೆಲುಗು ಚಿತ್ರರಂಗ ಹೊಸದೇನೂ ಅಲ್ಲ. ತೆಲುಗು ಚಿತ್ರರಂಗದಲ್ಲಿ ಹಲವು ಆತ್ಮೀಯ ಗೆಳೆಯರನ್ನು ಶಿವಣ್ಣ ಹೊಂದಿದ್ದಾರೆ. ಮಾತ್ರವಲ್ಲದೆ ಈಗಾಗಲೆ ಒಂದು ತೆಲುಗು ಸಿನಿಮಾದಲ್ಲಿ ನಟನೆ ಸಹ ಮಾಡಿದ್ದಾರೆ. ನಂದಮೂರಿ ಬಾಲಕೃಷ್ಣ ನಟನೆಯ ‘ಗೌತಮಿ ಪುತ್ರ ಶಾತಕರ್ಣಿ’ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಇದು ಅವರಿಗೆ ಎರಡನೇ ತೆಲುಗು ಸಿನಿಮಾ. ಇದಾದ ಬಳಿಕ ಮತ್ತೊಮ್ಮೆ ನಂದಮೂರಿ ಬಾಲಕೃಷ್ಣ ಜೊತೆಗೆ ಸಿನಿಮಾ ಒಂದರಲ್ಲಿ ನಟಿಸುವ ಸಾಧ್ಯತೆ ಇದೆ.

ಶಿವರಾಜ್ ಕುಮಾರ್ ನಟನೆಯ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾ ಜನವರಿ 12ಕ್ಕೆ ಬಿಡುಗಡೆ ಆಗಲಿದೆ. ಕನ್ನಡದಲ್ಲಿ ‘ಕರಟಕ ಧಮನಕ’ ಸಿನಿಮಾದಲ್ಲಿ ಶಿವಣ್ಣ ನಟಿಸುತ್ತಿದ್ದಾರೆ, ‘ಭೈರತಿ ರಣಗಲ್’ ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿಸಿದ್ದಾರೆ. ಕೆಲವೇ ದಿನಗಳಲ್ಲಿ ದಿನಕರ್ ತೂಗುದೀಪ್ ನಿರ್ದೇಶನದ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಲಿದೆ. ‘ಘೋಸ್ಟ್ 2’ಗೆ ತಯಾರಿ ಆರಂಭವಾಗಿದೆ. ಅರ್ಜುನ್ ಜನ್ಯ ನಿರ್ದೇಶನದ ‘45’ ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದೆ. ಈ ಸಿನಿಮಾದಲ್ಲಿ ಶಿವಣ್ಣನ ಜೊತೆಗೆ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಸಹ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ