ತಮಿಳುನಾಡಿನ ಎಲ್ಲಾ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣಲಿದೆ ರಜನಿ-ಶಿವಣ್ಣನ ಸಿನಿಮಾ?

ತಮಿಳಿನಾಡಿನಾದ್ಯಂತ ಇರುವ ಎಲ್ಲಾ ಚಿತ್ರಮಂದಿರಗಳಲ್ಲಿ ‘ಜೈಲರ್’ ಚಿತ್ರ ಪ್ರದರ್ಶನ ಮಾಡುವಂತೆ ಪ್ರದರ್ಶಕರ ಸಂಘದವರು ಕೋರಿದ್ದಾರೆ. ಒಂದೊಮ್ಮೆ ಈ ಕೋರಿಕೆಯನ್ನು ಚಿತ್ರಮಂದಿರದವರು ಒಪ್ಪಿದರೆ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಲಿದೆ.

ತಮಿಳುನಾಡಿನ ಎಲ್ಲಾ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣಲಿದೆ ರಜನಿ-ಶಿವಣ್ಣನ ಸಿನಿಮಾ?
ಶಿವಣ್ಣ-ರಜನಿ
Follow us
| Updated By: ರಾಜೇಶ್ ದುಗ್ಗುಮನೆ

Updated on: Aug 02, 2023 | 6:30 AM

ರಜನಿಕಾಂತ್, ಶಿವರಾಜ್​ಕುಮಾರ್ (Shivarajkumar) ನಟನೆಯ ‘ಜೈಲರ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಆಗಸ್ಟ್ 10ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್ ಆಗಲಿದೆ. ವಿಶೇಷ ಎಂದರೆ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಸುನಾಮಿ ಸೃಷ್ಟಿ ಮಾಡಲಿದೆ ಎನ್ನಲಾಗುತ್ತಿದೆ. ಚಲನಚಿತ್ರ ಪ್ರದರ್ಶಕರ ಸಂಘದವರು ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ತಮಿಳುನಾಡಿನಾದ್ಯಂತ ‘ಜೈಲರ್’ ಸಿನಿಮಾ (Jailer Movie) ಪ್ರದರ್ಶನ ಮಾಡುವಂತೆ ಕೋರಲಾಗಿದೆ.

ಸ್ಟಾರ್ ನಟರ ಸಿನಿಮಾಗಳು ರಿಲೀಸ್ ಆಗುತ್ತವೆ ಎಂದರೆ ಅದರ ಎದುರು ತಮ್ಮ ಸಿನಿಮಾಗಳನ್ನು ರಿಲೀಸ್ ಮಾಡಲು ಸಣ್ಣ ಬಜೆಟ್​ನ ಸಿನಿಮಾಗಳು ಹಿಂದೇಟು ಹಾಕುತ್ತವೆ. ‘ಜೈಲರ್’ ಸಿನಿಮಾ ವಿಚಾರದಲ್ಲೂ ಹಾಗೆಯೇ ಆಗಿದೆ. ಈ ಕಾರಣಕ್ಕೆ ತಮಿಳಿನಾಡಿನಾದ್ಯಂತ ಇರುವ ಎಲ್ಲಾ ಚಿತ್ರಮಂದಿರಗಳಲ್ಲಿ ‘ಜೈಲರ್’ ಚಿತ್ರ ಪ್ರದರ್ಶನ ಮಾಡುವಂತೆ ಪ್ರದರ್ಶಕರ ಸಂಘದವರು ಕೋರಿದ್ದಾರೆ.

‘ಜೈಲರ್ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅವರು ಎಲ್ಲರೂ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಬೇಕು ಎಂದು ಕೋರಿದ್ದಾರೆ. ಇದರಿಂದ ನಮಗೆ ತುಂಬಾ ಸಂತೋಷವಾಗಿದೆ. ತಮಿಳುನಾಡಿನ ಎಲ್ಲಾ ಚಿತ್ರಮಂದಿರಗಳಲ್ಲಿ ಜೈಲರ್ ಚಿತ್ರವನ್ನು ಪ್ರದರ್ಶಿಸಲು ಅವರು ಉತ್ಸುಕರಾಗಿದ್ದಾರೆ. ರಾಜ್ಯದ ಎಲ್ಲಾ ಥಿಯೇಟರ್​​ಗಳಲ್ಲಿ ಜೈಲರ್ ಚಿತ್ರ ಪ್ರದರ್ಶಿಸುವಂತೆ ನಾವು ನಿಮ್ಮನ್ನು ವಿನಂತಿಸುತ್ತೇವೆ’ ಎಂದು ತಮಿಳುನಾಡು ಪ್ರದರ್ಶಕ ಸಂಘದ ಪ್ರಧಾನ ಕಾರ್ಯದರ್ಶಿ ರೋಹಿಣಿ ಸೆಲ್ವನ್ ಅವರು ಚಿತ್ರಮಂದಿರದವರ ಬಳಿ ಕೋರಿದ್ದಾರೆ.

ಇದನ್ನೂ ಓದಿ: ‘ಜೈಲರ್​’ ಎದುರು ಪೈಪೋಟಿ ನೀಡಲಿರುವ ‘ತೋತಾಪುರಿ 2’; ಆಗಸ್ಟ್​ 11ರಂದು ಅದ್ದೂರಿಯಾಗಿ ಬಿಡುಗಡೆ

ಒಂದೊಮ್ಮೆ ಈ ಕೋರಿಕೆಯನ್ನು ಚಿತ್ರಮಂದಿರದವರು ಒಪ್ಪಿದರೆ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಲಿದೆ. ಯಾವುದೇ ತಮಿಳು ಸಿನಿಮಾ ಮಾಡಿರದ ದಾಖಲೆಯನ್ನು ಈ ಚಿತ್ರ ಮಾಡಲಿದೆ. ಇದರಿಂದ ಐತಿಹಾಸಿಕ ದಾಖಲೆ ಸೃಷ್ಟಿ ಆಗಲಿದೆ.

ಸನ್​ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಕಲಾನಿಧಿ ಮಾರನ್ ಅವರು ‘ಜೈಲರ್’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈ ಚಿತ್ರದಲ್ಲಿ ರಜನಿಕಾಂತ್ ಜೊತೆ ಶಿವಣ್ಣ, ಮೋಹನ್​ಲಾಲ್, ಜಾಕಿ ಶ್ರಾಫ್, ರಮ್ಯಾ ಕೃಷ್ಣನ್ ಮತ್ತು ತಮನ್ನಾ ಭಾಟಿಯಾ ನಟಿಸಿದ್ದಾರೆ. ‘ನನ್ನ ಪಾತ್ರ ಕೇವಲ 10 ನಿಮಿಷ ಇರುತ್ತದೆ’ ಎಂದು ಶಿವರಾಜ್​ಕುಮಾರ್ ಅವರು ಈ ಮೊದಲು ಹೇಳಿದ್ದರು. ಈ ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ನೆಲ್ಸನ್ ದಿಲೀಪ್ ಕುಮಾರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ