AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ಎಲ್ಲಾ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣಲಿದೆ ರಜನಿ-ಶಿವಣ್ಣನ ಸಿನಿಮಾ?

ತಮಿಳಿನಾಡಿನಾದ್ಯಂತ ಇರುವ ಎಲ್ಲಾ ಚಿತ್ರಮಂದಿರಗಳಲ್ಲಿ ‘ಜೈಲರ್’ ಚಿತ್ರ ಪ್ರದರ್ಶನ ಮಾಡುವಂತೆ ಪ್ರದರ್ಶಕರ ಸಂಘದವರು ಕೋರಿದ್ದಾರೆ. ಒಂದೊಮ್ಮೆ ಈ ಕೋರಿಕೆಯನ್ನು ಚಿತ್ರಮಂದಿರದವರು ಒಪ್ಪಿದರೆ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಲಿದೆ.

ತಮಿಳುನಾಡಿನ ಎಲ್ಲಾ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣಲಿದೆ ರಜನಿ-ಶಿವಣ್ಣನ ಸಿನಿಮಾ?
ಶಿವಣ್ಣ-ರಜನಿ
TV9 Web
| Edited By: |

Updated on: Aug 02, 2023 | 6:30 AM

Share

ರಜನಿಕಾಂತ್, ಶಿವರಾಜ್​ಕುಮಾರ್ (Shivarajkumar) ನಟನೆಯ ‘ಜೈಲರ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಆಗಸ್ಟ್ 10ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್ ಆಗಲಿದೆ. ವಿಶೇಷ ಎಂದರೆ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಸುನಾಮಿ ಸೃಷ್ಟಿ ಮಾಡಲಿದೆ ಎನ್ನಲಾಗುತ್ತಿದೆ. ಚಲನಚಿತ್ರ ಪ್ರದರ್ಶಕರ ಸಂಘದವರು ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ತಮಿಳುನಾಡಿನಾದ್ಯಂತ ‘ಜೈಲರ್’ ಸಿನಿಮಾ (Jailer Movie) ಪ್ರದರ್ಶನ ಮಾಡುವಂತೆ ಕೋರಲಾಗಿದೆ.

ಸ್ಟಾರ್ ನಟರ ಸಿನಿಮಾಗಳು ರಿಲೀಸ್ ಆಗುತ್ತವೆ ಎಂದರೆ ಅದರ ಎದುರು ತಮ್ಮ ಸಿನಿಮಾಗಳನ್ನು ರಿಲೀಸ್ ಮಾಡಲು ಸಣ್ಣ ಬಜೆಟ್​ನ ಸಿನಿಮಾಗಳು ಹಿಂದೇಟು ಹಾಕುತ್ತವೆ. ‘ಜೈಲರ್’ ಸಿನಿಮಾ ವಿಚಾರದಲ್ಲೂ ಹಾಗೆಯೇ ಆಗಿದೆ. ಈ ಕಾರಣಕ್ಕೆ ತಮಿಳಿನಾಡಿನಾದ್ಯಂತ ಇರುವ ಎಲ್ಲಾ ಚಿತ್ರಮಂದಿರಗಳಲ್ಲಿ ‘ಜೈಲರ್’ ಚಿತ್ರ ಪ್ರದರ್ಶನ ಮಾಡುವಂತೆ ಪ್ರದರ್ಶಕರ ಸಂಘದವರು ಕೋರಿದ್ದಾರೆ.

‘ಜೈಲರ್ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅವರು ಎಲ್ಲರೂ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಬೇಕು ಎಂದು ಕೋರಿದ್ದಾರೆ. ಇದರಿಂದ ನಮಗೆ ತುಂಬಾ ಸಂತೋಷವಾಗಿದೆ. ತಮಿಳುನಾಡಿನ ಎಲ್ಲಾ ಚಿತ್ರಮಂದಿರಗಳಲ್ಲಿ ಜೈಲರ್ ಚಿತ್ರವನ್ನು ಪ್ರದರ್ಶಿಸಲು ಅವರು ಉತ್ಸುಕರಾಗಿದ್ದಾರೆ. ರಾಜ್ಯದ ಎಲ್ಲಾ ಥಿಯೇಟರ್​​ಗಳಲ್ಲಿ ಜೈಲರ್ ಚಿತ್ರ ಪ್ರದರ್ಶಿಸುವಂತೆ ನಾವು ನಿಮ್ಮನ್ನು ವಿನಂತಿಸುತ್ತೇವೆ’ ಎಂದು ತಮಿಳುನಾಡು ಪ್ರದರ್ಶಕ ಸಂಘದ ಪ್ರಧಾನ ಕಾರ್ಯದರ್ಶಿ ರೋಹಿಣಿ ಸೆಲ್ವನ್ ಅವರು ಚಿತ್ರಮಂದಿರದವರ ಬಳಿ ಕೋರಿದ್ದಾರೆ.

ಇದನ್ನೂ ಓದಿ: ‘ಜೈಲರ್​’ ಎದುರು ಪೈಪೋಟಿ ನೀಡಲಿರುವ ‘ತೋತಾಪುರಿ 2’; ಆಗಸ್ಟ್​ 11ರಂದು ಅದ್ದೂರಿಯಾಗಿ ಬಿಡುಗಡೆ

ಒಂದೊಮ್ಮೆ ಈ ಕೋರಿಕೆಯನ್ನು ಚಿತ್ರಮಂದಿರದವರು ಒಪ್ಪಿದರೆ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಲಿದೆ. ಯಾವುದೇ ತಮಿಳು ಸಿನಿಮಾ ಮಾಡಿರದ ದಾಖಲೆಯನ್ನು ಈ ಚಿತ್ರ ಮಾಡಲಿದೆ. ಇದರಿಂದ ಐತಿಹಾಸಿಕ ದಾಖಲೆ ಸೃಷ್ಟಿ ಆಗಲಿದೆ.

ಸನ್​ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಕಲಾನಿಧಿ ಮಾರನ್ ಅವರು ‘ಜೈಲರ್’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈ ಚಿತ್ರದಲ್ಲಿ ರಜನಿಕಾಂತ್ ಜೊತೆ ಶಿವಣ್ಣ, ಮೋಹನ್​ಲಾಲ್, ಜಾಕಿ ಶ್ರಾಫ್, ರಮ್ಯಾ ಕೃಷ್ಣನ್ ಮತ್ತು ತಮನ್ನಾ ಭಾಟಿಯಾ ನಟಿಸಿದ್ದಾರೆ. ‘ನನ್ನ ಪಾತ್ರ ಕೇವಲ 10 ನಿಮಿಷ ಇರುತ್ತದೆ’ ಎಂದು ಶಿವರಾಜ್​ಕುಮಾರ್ ಅವರು ಈ ಮೊದಲು ಹೇಳಿದ್ದರು. ಈ ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ನೆಲ್ಸನ್ ದಿಲೀಪ್ ಕುಮಾರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಕೆಪಿಎಸ್​ಸಿ ಹಗರಣ: ಜ್ಞಾನೇಂದ್ರ ಕುಮಾರ್, ಕನ್ನಾಳೆ ಬಂಧಿಸಿದ ಇಡಿ
ಕೆಪಿಎಸ್​ಸಿ ಹಗರಣ: ಜ್ಞಾನೇಂದ್ರ ಕುಮಾರ್, ಕನ್ನಾಳೆ ಬಂಧಿಸಿದ ಇಡಿ
ನಾನು ಈಗ ವೆಜ್​ಟೇರಿಯನ್, ಅಶೋಕಣ್ಣಂಗೆ ಫ್ರೆಶ್ ಮೀನು ಕಳಿಸ್ತೀನಿ: ಡಿಕೆಶಿ
ನಾನು ಈಗ ವೆಜ್​ಟೇರಿಯನ್, ಅಶೋಕಣ್ಣಂಗೆ ಫ್ರೆಶ್ ಮೀನು ಕಳಿಸ್ತೀನಿ: ಡಿಕೆಶಿ
ಬಂದರು ಪ್ರದೇಶದಲ್ಲಿ ಬೋಟ್ ಹತ್ತಿ ಸಮುದ್ರಕ್ಕಿಳಿದೇ ಬಿಟ್ರು ಸಿಎಂ ಡಿಕೆಶಿ
ಬಂದರು ಪ್ರದೇಶದಲ್ಲಿ ಬೋಟ್ ಹತ್ತಿ ಸಮುದ್ರಕ್ಕಿಳಿದೇ ಬಿಟ್ರು ಸಿಎಂ ಡಿಕೆಶಿ
ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ
ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ