AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru: ಕೊರಗಜ್ಜನ ಆದಿಸ್ಥಳಕ್ಕೆ ಕುಟುಂಬದ ಜತೆಗೆ ಭೇಟಿ ನೀಡಿದ ಶಿವಣ್ಣ

ಸಾಂಡ್ಯಲ್​ವುಡ್ ಹ್ಯಾಟ್ರಿಕ್ ಹೀರೋ ಶಿವಣ್ಣ ಮಂಗಳೂರಿನ ಕೊರಗಜ್ಜನ ಆದಿಸ್ಥಳ ಕುತ್ತಾರುಗೆ ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ಪತ್ನಿ ಗೀತಾ, ಮಗಳೊಂದಿಗೆ ಕುತ್ತಾರು ಕ್ಷೇತ್ರಕ್ಕೆ ಶಿವಣ್ಣ ಭೇಟಿ ನೀಡಿ ಕೊರಗಜ್ಜ ದೈವದ ಆದಿ ಸ್ಥಳದಲ್ಲಿ ಪೂಜೆ ಸಲ್ಲಿಸಿದ್ದಾರೆ.

Mangaluru: ಕೊರಗಜ್ಜನ ಆದಿಸ್ಥಳಕ್ಕೆ ಕುಟುಂಬದ ಜತೆಗೆ ಭೇಟಿ ನೀಡಿದ ಶಿವಣ್ಣ
ಶಿವಣ್ಣ ಮತ್ತು ಕುಟುಂಬ ಕುತರುಗೆ ಭೇಟಿ
TV9 Web
| Edited By: |

Updated on:Dec 10, 2022 | 12:59 PM

Share

ಮಂಗಳೂರು: ಸಾಂಡ್ಯಲ್​ವುಡ್​ನ ಹ್ಯಾಟ್ರಿಕ್ ಹೀರೋ ಶಿವಣ್ಣ (Hattrick Hero Shivaraj Kumar ) ಮಂಗಳೂರಿನ ಕೊರಗಜ್ಜನ ಆದಿಸ್ಥಳ ಕುತ್ತಾರುಗೆ ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ಪತ್ನಿ ಗೀತಾ, ಮಗಳೊಂದಿಗೆ ಕುತ್ತಾರು ಕ್ಷೇತ್ರಕ್ಕೆ ಶಿವಣ್ಣ ಭೇಟಿ ನೀಡಿ ಕೊರಗಜ್ಜ ದೈವದ ಆದಿ ಸ್ಥಳದಲ್ಲಿ ಪೂಜೆ ಸಲ್ಲಿಸಿದ್ದಾರೆ. ಕೊರಗಜ್ಜನಿಗೆ ಪ್ರಿಯವಾದ ಮತ್ತು ಭಕ್ತರು ಅಂದುಕೊಂಡದನ್ನು ಹರಕೆಯ ಮೂಲಕ ನೀಡಲು ಕೊರಗಜ್ಜನಿಗೆ ವೀಳ್ಯದೆಲೆ, ಚಕ್ಕುಲಿ ಇಟ್ಟು ಪ್ರಾರ್ಥನೆ ಮಾಡುತ್ತಾರೆ. ಈ ಸಾನಿಧ್ಯಕ್ಕೆ ಭೇಟಿ ನೀಡಿದ ಶಿವಣ್ಣ ಕೊರಗಜ್ಜನಿಗೆ ವೀಳ್ಯದೆಲೆ, ಚಕ್ಕುಲಿ ಇಟ್ಟ ಪ್ರಾರ್ಥನೆ ಮಾಡಿದ್ದಾರೆ. ವೇದ (Veda) ಚಿತ್ರದ ಪ್ರಮೋಷನ್​​ಗಾಗಿ ಮಂಗಳೂರಿಗೆ ಭೇಟಿ ನೀಡಿದ್ದ ಶಿವಣ್ಣ ಈ ಕ್ಷೇತ್ರಕ್ಕೂ ಭೇಟಿ ನೀಡಿದ್ದಾರೆ. ಮಂಗಳೂರಿನ ಅಭಿಮಾನಿಗಳು ಅವರನ್ನು ಪ್ರೀತಿಯಿಂದ ಸ್ವಾಗತಿಸಿದ್ದಾರೆ.

ಶಿವರಾಜ್ ಕುಮಾರ್ ಜೊತೆಗೆ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಮತ್ತು ಶಿವಣ್ಣ ಮಗಳು ಕೂಡ ತಂದೆ ಜೊತೆಗೆ ಭೇಟಿ ನೀಡಿದ್ದಾರೆ. ವೇದ ಚಿತ್ರ ತಂಡವು ಕೂಡ ಶಿವಣ್ಣನಿಗೆ ಸಾಥ್ ನೀಡಿದೆ. ವೇದ ಚಿತ್ರದ ಪ್ರಮೋಷನ್​​ಗಾಗಿ ಮಂಗಳೂರಿಗೆ ಆಗಮಿಸಿರುವ ಶಿವಣ್ಣ. ಸಂಜೆ ಪಣಂಬೂರು ಕಡಲ ಕಿನಾರೆಯಲ್ಲಿ ವೇದ ಚಿತ್ರದ ಪ್ರಮೋಶನ್ ನಡೆಯಲಿದೆ. ವೇದ ಸಿನಿಮಾ ಭಾರೀ ಸದ್ದು ಮಾಡುತ್ತಿದೆ. ಹ್ಯಾಟ್ರಿಕ್ ಹೀರೋ’ ಶಿವರಾಜ್‌ಕುಮಾರ್ ನಟನೆಯ ಬಹು ನಿರೀಕ್ಷಿತ ‘ವೇದ’ ಸಿನಿಮಾ ಇದೇ ಡಿಸೆಂಬರ್ 23ರಂದು ತೆರೆಗೆ ಬರಲು ಸಜ್ಜಾಗಿದೆ. ಇದಕ್ಕೆ ಅಭಿಮಾನಿಗಳು ಸಹ ಕಾತರದಿಂದ ಕಾಯುತ್ತಿದ್ದಾರೆ.

ತಮಿಳು ನಟ ಧನುಷ್ ಜತೆ ಸ್ಕ್ರೀನ್ ಶೇರ್ ಮಾಡಲಿರುವ ಶಿವಣ್ಣ

ಅರುಣ್ ಮಾಥೇಶ್ವರನ್ ನಿರ್ದೇಶನದಲ್ಲಿ ಶಿವರಾಜ್ ಕುಮಾರ್ ಅಭಿನಯಿಸಿದ್ದು, ಈ ಬಗ್ಗೆ ಶಿವಣ್ಣ ಸಿನಿಮಾ ಪೋಸ್ಟರ್ ಹಂಚಿಕೊಳ್ಳುವುದರ ಮೂಲಕ ಅಭಿಮಾನಿಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. ಇದರೊಂದಿಗೆ ಕಾಲಿವುಡ್ ಗೆ ಸ್ಯಾಂಡಲ್ ವುಡ್ ಶಿವಣ್ಣನ ಆಗಮನವಾಗಿದೆ.

ಇದನ್ನು ಓದಿ:ಪೋಸ್ಟರ್​ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳೊಂದಿಗೆ ಸಿಹಿ ಸುದ್ದಿ ಹಂಚಿಕೊಂಡ ಶಿವಣ್ಣ

ಸ್ಯಾಂಡಲ್ ವುಡ್ ಶಿವಣ್ಣ ಈಗ ಅರುಣ್ ಮಾಥೇಶ್ವರನ್ ನಿರ್ದೇಶನದ ತಮಿಳು ನಟ ಧನುಷ್ ಅಭಿನಯದ ‘ಕ್ಯಾಪ್ಟನ್ ಮಿಲ್ಲರ್’ ಚಿತ್ರದಲ್ಲಿ ಸ್ಕ್ರೀನ್ ಶೇರ್ ಮಾಡಲಿದ್ದು, ಧನುಷ್ ಅಣ್ಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕ್ಯಾಪ್ಟನ್ ಮಿಲ್ಲರ್ ಚಿತ್ರಕ್ಕೆ ಸತ್ಯಜ್ಯೋತಿ ಫಿಲ್ಮ್ಸ್‌ ಬಂಡವಾಳ ಹೂಡಿದೆ.

ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:57 pm, Sat, 10 December 22

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು