AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru: ಕೊರಗಜ್ಜನ ಆದಿಸ್ಥಳಕ್ಕೆ ಕುಟುಂಬದ ಜತೆಗೆ ಭೇಟಿ ನೀಡಿದ ಶಿವಣ್ಣ

ಸಾಂಡ್ಯಲ್​ವುಡ್ ಹ್ಯಾಟ್ರಿಕ್ ಹೀರೋ ಶಿವಣ್ಣ ಮಂಗಳೂರಿನ ಕೊರಗಜ್ಜನ ಆದಿಸ್ಥಳ ಕುತ್ತಾರುಗೆ ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ಪತ್ನಿ ಗೀತಾ, ಮಗಳೊಂದಿಗೆ ಕುತ್ತಾರು ಕ್ಷೇತ್ರಕ್ಕೆ ಶಿವಣ್ಣ ಭೇಟಿ ನೀಡಿ ಕೊರಗಜ್ಜ ದೈವದ ಆದಿ ಸ್ಥಳದಲ್ಲಿ ಪೂಜೆ ಸಲ್ಲಿಸಿದ್ದಾರೆ.

Mangaluru: ಕೊರಗಜ್ಜನ ಆದಿಸ್ಥಳಕ್ಕೆ ಕುಟುಂಬದ ಜತೆಗೆ ಭೇಟಿ ನೀಡಿದ ಶಿವಣ್ಣ
ಶಿವಣ್ಣ ಮತ್ತು ಕುಟುಂಬ ಕುತರುಗೆ ಭೇಟಿ
TV9 Web
| Edited By: |

Updated on:Dec 10, 2022 | 12:59 PM

Share

ಮಂಗಳೂರು: ಸಾಂಡ್ಯಲ್​ವುಡ್​ನ ಹ್ಯಾಟ್ರಿಕ್ ಹೀರೋ ಶಿವಣ್ಣ (Hattrick Hero Shivaraj Kumar ) ಮಂಗಳೂರಿನ ಕೊರಗಜ್ಜನ ಆದಿಸ್ಥಳ ಕುತ್ತಾರುಗೆ ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ಪತ್ನಿ ಗೀತಾ, ಮಗಳೊಂದಿಗೆ ಕುತ್ತಾರು ಕ್ಷೇತ್ರಕ್ಕೆ ಶಿವಣ್ಣ ಭೇಟಿ ನೀಡಿ ಕೊರಗಜ್ಜ ದೈವದ ಆದಿ ಸ್ಥಳದಲ್ಲಿ ಪೂಜೆ ಸಲ್ಲಿಸಿದ್ದಾರೆ. ಕೊರಗಜ್ಜನಿಗೆ ಪ್ರಿಯವಾದ ಮತ್ತು ಭಕ್ತರು ಅಂದುಕೊಂಡದನ್ನು ಹರಕೆಯ ಮೂಲಕ ನೀಡಲು ಕೊರಗಜ್ಜನಿಗೆ ವೀಳ್ಯದೆಲೆ, ಚಕ್ಕುಲಿ ಇಟ್ಟು ಪ್ರಾರ್ಥನೆ ಮಾಡುತ್ತಾರೆ. ಈ ಸಾನಿಧ್ಯಕ್ಕೆ ಭೇಟಿ ನೀಡಿದ ಶಿವಣ್ಣ ಕೊರಗಜ್ಜನಿಗೆ ವೀಳ್ಯದೆಲೆ, ಚಕ್ಕುಲಿ ಇಟ್ಟ ಪ್ರಾರ್ಥನೆ ಮಾಡಿದ್ದಾರೆ. ವೇದ (Veda) ಚಿತ್ರದ ಪ್ರಮೋಷನ್​​ಗಾಗಿ ಮಂಗಳೂರಿಗೆ ಭೇಟಿ ನೀಡಿದ್ದ ಶಿವಣ್ಣ ಈ ಕ್ಷೇತ್ರಕ್ಕೂ ಭೇಟಿ ನೀಡಿದ್ದಾರೆ. ಮಂಗಳೂರಿನ ಅಭಿಮಾನಿಗಳು ಅವರನ್ನು ಪ್ರೀತಿಯಿಂದ ಸ್ವಾಗತಿಸಿದ್ದಾರೆ.

ಶಿವರಾಜ್ ಕುಮಾರ್ ಜೊತೆಗೆ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಮತ್ತು ಶಿವಣ್ಣ ಮಗಳು ಕೂಡ ತಂದೆ ಜೊತೆಗೆ ಭೇಟಿ ನೀಡಿದ್ದಾರೆ. ವೇದ ಚಿತ್ರ ತಂಡವು ಕೂಡ ಶಿವಣ್ಣನಿಗೆ ಸಾಥ್ ನೀಡಿದೆ. ವೇದ ಚಿತ್ರದ ಪ್ರಮೋಷನ್​​ಗಾಗಿ ಮಂಗಳೂರಿಗೆ ಆಗಮಿಸಿರುವ ಶಿವಣ್ಣ. ಸಂಜೆ ಪಣಂಬೂರು ಕಡಲ ಕಿನಾರೆಯಲ್ಲಿ ವೇದ ಚಿತ್ರದ ಪ್ರಮೋಶನ್ ನಡೆಯಲಿದೆ. ವೇದ ಸಿನಿಮಾ ಭಾರೀ ಸದ್ದು ಮಾಡುತ್ತಿದೆ. ಹ್ಯಾಟ್ರಿಕ್ ಹೀರೋ’ ಶಿವರಾಜ್‌ಕುಮಾರ್ ನಟನೆಯ ಬಹು ನಿರೀಕ್ಷಿತ ‘ವೇದ’ ಸಿನಿಮಾ ಇದೇ ಡಿಸೆಂಬರ್ 23ರಂದು ತೆರೆಗೆ ಬರಲು ಸಜ್ಜಾಗಿದೆ. ಇದಕ್ಕೆ ಅಭಿಮಾನಿಗಳು ಸಹ ಕಾತರದಿಂದ ಕಾಯುತ್ತಿದ್ದಾರೆ.

ತಮಿಳು ನಟ ಧನುಷ್ ಜತೆ ಸ್ಕ್ರೀನ್ ಶೇರ್ ಮಾಡಲಿರುವ ಶಿವಣ್ಣ

ಅರುಣ್ ಮಾಥೇಶ್ವರನ್ ನಿರ್ದೇಶನದಲ್ಲಿ ಶಿವರಾಜ್ ಕುಮಾರ್ ಅಭಿನಯಿಸಿದ್ದು, ಈ ಬಗ್ಗೆ ಶಿವಣ್ಣ ಸಿನಿಮಾ ಪೋಸ್ಟರ್ ಹಂಚಿಕೊಳ್ಳುವುದರ ಮೂಲಕ ಅಭಿಮಾನಿಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. ಇದರೊಂದಿಗೆ ಕಾಲಿವುಡ್ ಗೆ ಸ್ಯಾಂಡಲ್ ವುಡ್ ಶಿವಣ್ಣನ ಆಗಮನವಾಗಿದೆ.

ಇದನ್ನು ಓದಿ:ಪೋಸ್ಟರ್​ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳೊಂದಿಗೆ ಸಿಹಿ ಸುದ್ದಿ ಹಂಚಿಕೊಂಡ ಶಿವಣ್ಣ

ಸ್ಯಾಂಡಲ್ ವುಡ್ ಶಿವಣ್ಣ ಈಗ ಅರುಣ್ ಮಾಥೇಶ್ವರನ್ ನಿರ್ದೇಶನದ ತಮಿಳು ನಟ ಧನುಷ್ ಅಭಿನಯದ ‘ಕ್ಯಾಪ್ಟನ್ ಮಿಲ್ಲರ್’ ಚಿತ್ರದಲ್ಲಿ ಸ್ಕ್ರೀನ್ ಶೇರ್ ಮಾಡಲಿದ್ದು, ಧನುಷ್ ಅಣ್ಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕ್ಯಾಪ್ಟನ್ ಮಿಲ್ಲರ್ ಚಿತ್ರಕ್ಕೆ ಸತ್ಯಜ್ಯೋತಿ ಫಿಲ್ಮ್ಸ್‌ ಬಂಡವಾಳ ಹೂಡಿದೆ.

ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:57 pm, Sat, 10 December 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ