AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಣ್ಣನ ವೃತ್ತಿ ಬದುಕಿಗೆ 40 ವರ್ಷ; ಕಲರ್ಸ್ ವೇದಿಕೆ ಮೇಲೆ ಉತ್ಸವ

Shivarajkumar: ಶಿವರಾಜ್ ಕುಮಾರ್ ಅವರು ಚಿತ್ರರಂಗಕ್ಕೆ ಕಾಲಿಟ್ಟು 40 ವರ್ಷಗಳು ಪೂರ್ಣಗೊಂಡ ಸಂಭ್ರಮದಲ್ಲಿ ಕಲರ್ಸ್ ಕನ್ನಡ ವಾಹಿನಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿದೆ. ಅವರ ಮೊದಲ ಚಿತ್ರ ‘ಆನಂದ’ 39ನೇ ವಾರ್ಷಿಕೋತ್ಸವವನ್ನೂ ಈ ಕಾರ್ಯಕ್ರಮದಲ್ಲಿ ಆಚರಿಸಲಾಗಿದೆ. ಅನೇಕ ಸೆಲೆಬ್ರಿಟಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ಶಿವಣ್ಣನ ವೃತ್ತಿ ಬದುಕಿಗೆ 40 ವರ್ಷ; ಕಲರ್ಸ್ ವೇದಿಕೆ ಮೇಲೆ ಉತ್ಸವ
ಶಿವಣ್ಣ
ರಾಜೇಶ್ ದುಗ್ಗುಮನೆ
|

Updated on: Jun 04, 2025 | 1:03 PM

Share

ಶಿವರಾಜ್​ಕುಮಾರ್ (Shivarajkumar) ಅವರು ಚಿತ್ರರಂಗಕ್ಕೆ ಕಾಲಿಟ್ಟು ಬರೋಬ್ಬರಿ 40 ವರ್ಷಗಳು ಕಳೆದಿವೆ. ಈ ಖುಷಿಯನ್ನು ಸೆಲೆಬ್ರೇಟ್ ಮಾಡಲು ವೇದಿಕೆ ಸಿದ್ಧವಾಗಿದೆ. ಅವರ ನಟನೆಯ ‘ಆನಂದ್’ ಚಿತ್ರ ರಿಲೀಸ್ ಆಗಿ 39 ವರ್ಷಗಳು ಕಳೆದಿವೆ. ಶಿವಣ್ಣ  ಅವರು ಈ ಚಿತ್ರವನ್ನು ಅವರು ಒಪ್ಪಿಕೊಂಡು 4 ದಶಕ ಕಳೆದಿದೆ. ಈ ಖುಷಿಯನ್ನು ಕಲರ್ಸ್ ಕನ್ನಡ ವೇದಿಕೆ ಮೇಲೆ ಸಂಭ್ರಮಿಸಲಾಗಿದೆ. ಆ ಸಂದರ್ಭದ ಪ್ರೋಮೋ ರಿಲೀಸ್ ಆಗಿದೆ.

ಶಿವರಾಜ್​ಕುಮಾರ್ ನಟಿಸಿದ ಮೊದಲ ಚಿತ್ರ ‘ಆನಂದ್’. ಈ ಸಿನಿಮಾ 1986ರ ಜೂನ್ 19ರಂದು ರಿಲೀಸ್ ಆಯಿತು. ಸಿಂಗೀತಮ್ ಶ್ರೀನಿವಾಸ್ ರಾವ್ ಈ ಚಿತ್ರ ನಿರ್ದೇಶನ ಮಾಡಿದರು. ಈ ಸಿನಿಮಾಗೆ ಸುಧಾ ರಾಣಿ ನಾಯಕಿ. ಈ ಚಿತ್ರ ಸೂಪರ್ ಹಿಟ್ ಆಯಿತು. ಈ ಸಿನಿಮ ಥಿಯೇಟರ್​ನಲ್ಲಿ ಬರೋಬ್ಬರಿ 38 ವಾರ ಪ್ರದರ್ಶನ ಕಂಡಿತ್ತು.

ಇದನ್ನೂ ಓದಿ
Image
ದಾಖಲೆ ಭರ್ಜರಿ ದಾಖಲೆ... ಈ ರೀತಿಯಾಗಿ ಟ್ರೋಫಿ ಎತ್ತಿಹಿಡಿದ ಏಕೈಕ ತಂಡ RCB
Image
ಖುಷಿ ತಡೆಯಲಾರದೆ ತಣ್ಣೀರು ಸುರಿದು ನಮಸ್ಕಾರ ಹಾಕಿದ ಅಲ್ಲು ಅರ್ಜುನ್ ಮಗ
Image
RCB ಮ್ಯಾಚ್ ನೋಡುತ್ತಲೇ ಮುಗಿದಯೋಯ್ತು ವೈಷ್ಣವಿ ‘ಸಂಗೀತ್’ ಕಾರ್ಯಕ್ರಮ
Image
ತಮಿಳಿಗರಿಗೆ ಕಮಲ್ ಅಭಿಮಾನಿಗಳಿಂದ ಓಪನ್ ಪತ್ರ; ಎಚ್ಚರಿಕೆಯ ಸಂದೇಶ ರವಾನೆ

ಶಿವರಾಜ್​ಕುಮಾರ್ ಅವರ ಈ ವಿಶೇಷ ಮೈಲಿಗಲ್ಲನ್ನು ಕಲರ್ಸ್ ಕನ್ನಡ ವಾಹಿನಿ ಸಂಭ್ರಮಿಸುತ್ತಿದೆ. ಕಲರ್ಸ್ ಕನ್ನಡ ಆರಂಭ ಆಗಿ 1 ದಶಕ ಕಳೆದಿದೆ. ಈ ದಶಕದ ಸಂಭ್ರವನ್ನು ವಾಹಿನಿ ಅದ್ದೂರಿಯಾಗಿ ಆಚರಿಸುತ್ತಿದೆ. ಈ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮನಿಸಿದ್ದರು. ಶಿವರಾಜ್​ಕುಮಾರ್ ಕೂಡ ವೇದಿಕೆ ಏರಿದ್ದಾರೆ.

ಶಿವರಾಜ್​ಕುಮಾರ್ ಅವರು ಗ್ರ್ಯಾಂಡ್ ಆಗಿ ವೇದಿಕೆ ಏರಿದ್ದಾರೆ. ‘ಶಿವಣ್ಣ 40’ ಎಂಬ ಲೈನ್ ಮೂಲಕ ವಿಡಿಯೋ ಮಾಡಲಾಗಿದೆ. ಈ ವಿಡಿಯೋ ಎಲ್ಲರ ಗಮನ ಸೆಳೆದಿದೆ. ‘ಅಣ್ಣಾವ್ರು ಹೋದ ಮೇಲೆ ಆ ಪ್ರೀತಿ-ಅಭಿಮಾನ ಶಿವಣ್ಣನಿಗೆ ಸಿಕ್ಕಿದೆ’ ಎಂದು ದುನಿಯಾ ವಿಜಯ್ ಅವರು ಹೇಳಿದರು. ‘ನೀವು ಬಂಗಾರದ ಮನುಷ್ಯ’ ಎಂದು ಬಾಯ್ತುಂಬ ಹೊಗಳಿದರು ತಾರಾ. ಶಿವಣ್ಣ ಎನರ್ಜಿಟಿಕ್ ಆಗಿ ಡ್ಯಾನ್ಸ್ ಕೂಡ ಮಾಡಿದ್ದಾರೆ. ಶನಿವಾರ ಹಾಗೂ ಭಾನುವಾರ ಸಂಜೆ 7ಗಂಟೆಗೆ ಕಾರ್ಯಕ್ರಮ ಪ್ರಸಾರ ಆಗಲಿದೆ.

ಇದನ್ನೂ ಓದಿ: ಶಿವರಾಜ್​ಕುಮಾರ್ ಜೊತೆ ನಟಿಸಿದ ಈ ನಟಿ ಈಗ ಐಟಿ ಉದ್ಯೋಗಿ

ಶಿವರಾಜ್​ಕುಮಾರ್ ಅವರು ಇತ್ತೀಚೆಗೆ ಸುದ್ದಿ ಆದರು. ಕಮಲ್ ಹಾಸನ್ ಅವರು ವೇದಿಕೆ ಮೇಲೆ ‘ಕನ್ನಡ ಹುಟ್ಟಿದ್ದು ತಮಿಳಿನಿಂದ’ ಎಂದು ಹೇಳುವಾಗ ಶಿವರಾಜ್​ಕುಮಾರ್ ಅಲ್ಲಿಯೇ ಇದ್ದರು. ಆದರೆ, ಇದನ್ನು ಅವರು ವಿರೋಧಿಸಿಲ್ಲ ಎನ್ನುವ ಪ್ರಶ್ನೆ ಎದುರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ