AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್ ಚಿತ್ರರಂಗಕ್ಕೆ ಕಾಲಿಟ್ಟು 37 ವರ್ಷ; ವಿಶೇಷವಾಗಿ ಧನ್ಯವಾದ ಹೇಳಿದ ಶಿವಣ್ಣ

ಶಿವರಾಜ್​ಕುಮಾರ್ ಅವರು ಮೊದಲು ಬಣ್ಣ ಹಚ್ಚಿದ ಸಿನಿಮಾ ‘ಆನಂದ್’. ಈ ಚಿತ್ರ ಸೆಟ್ಟೇರಿದ್ದು 1986, ಫೆ.19ರಂದು. ಶಿವಣ್ಣ ಅವರು ಮೊದಲ ಬಾರಿಗೆ ಕ್ಯಾಮೆರಾ ಎದುರಿಸಿದ್ದು ಈ ದಿನಾಂಕದಂದು.

ಶಿವರಾಜ್​ಕುಮಾರ್ ಚಿತ್ರರಂಗಕ್ಕೆ ಕಾಲಿಟ್ಟು 37 ವರ್ಷ; ವಿಶೇಷವಾಗಿ ಧನ್ಯವಾದ ಹೇಳಿದ ಶಿವಣ್ಣ
ಶಿವರಾಜ್​ಕುಮಾರ್
ರಾಜೇಶ್ ದುಗ್ಗುಮನೆ
|

Updated on: Feb 21, 2023 | 11:01 AM

Share

ಶಿವರಾಜ್​ಕುಮಾರ್ (Shivarajkumar) ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು 37 ವರ್ಷ ಕಳೆದಿದೆ. ಸುದೀರ್ಘ ಪಯಣದಲ್ಲಿ ಅವರ ಬತ್ತಳಿಕೆಯಿಂದ 125 ಚಿತ್ರಗಳು ತೆರೆಗೆ ಬಂದಿವೆ. ಈ ಪಯಣದಲ್ಲಿ ಅವರು ಅನೇಕ ಏಳು-ಬೀಳುಗಳನ್ನು ಕಂಡಿದ್ದಾರೆ, ಅನೇಕರನ್ನು ಗಳಿಸಿದ್ದಾರೆ, ಅನೇಕ ಆಪ್ತರನ್ನು ಕಳೆದುಕೊಂಡಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಕೋಟ್ಯಂತರ ಅಭಿಮಾನಿಗಳನ್ನು ಅವರು ಸಂಪಾದಿಸಿದ್ದಾರೆ. ಶಿವಣ್ಣ (Shivanna) ಅವರು ನಟನೆಯ ಜೊತೆಗೆ ಸಿಂಪ್ಲಿಸಿಟಿಯಿಂದ ಹೆಚ್ಚು ಇಷ್ಟವಾಗುತ್ತಾರೆ. ಈಗ ಶಿವರಾಜ್​ಕುಮಾರ್ ಅವರು ಸುದೀರ್ಘ ಪಯಣದಲ್ಲಿ ಬೆಂಬಲವಾಗಿ ನಿಂತ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ.

ಶಿವರಾಜ್​ಕುಮಾರ್ ಅವರು ಮೊದಲು ಬಣ್ಣ ಹಚ್ಚಿದ ಸಿನಿಮಾ ‘ಆನಂದ್’. ಈ ಚಿತ್ರ ಸೆಟ್ಟೇರಿದ್ದು 1986, ಫೆ.19ರಂದು. ಶಿವಣ್ಣ ಅವರು ಮೊದಲ ಬಾರಿಗೆ ಕ್ಯಾಮೆರಾ ಎದುರಿಸಿದ್ದು ಈ ದಿನಾಂಕದಂದು. ಈ ದಿನವನ್ನು ಶಿವಣ್ಣ ಸೋಶಿಯಲ್ ಮೀಡಿಯಾದಲ್ಲಿ ನೆನಪಿಸಿಕೊಂಡಿದ್ದಾರೆ. ಈ ಬಗ್ಗೆ ಅವರು ಪತ್ರ ಬರೆದಿದ್ದಾರೆ.

ಇದನ್ನೂ ಓದಿ
Image
ಶಿವಣ್ಣ ಜತೆ ನಟಿಸುವ ಚಾನ್ಸ್​ ಸಿಕ್ಕರೂ ಮುಹೂರ್ತಕ್ಕೆ ಪ್ರಭುದೇವ ಬರಲಿಲ್ಲ; ಕಾರಣ ತಿಳಿಸಿ ಕ್ಷಮೆ ಕೇಳಿದ ನಟ
Image
ಶಿವರಾಜ್​​ಕುಮಾರ್ ಅವರನ್ನು ಬಾಯ್ತುಂಬ ಹೊಗಳಿದ ಅನುಶ್ರೀ; ಶಿವಣ್ಣನ ರಿಯಾಕ್ಷನ್ ಹೇಗಿತ್ತು ನೋಡಿ
Image
‘ನಾವು ಬೇರೆ ಭಾಷೆಯಲ್ಲಿ ಮಾತಾಡ್ತೀವಿ, ಅದು ಯಾವುದು ಅಂತ ಈಗ ಬೇಡ’: ವೇದಿಕೆಯಲ್ಲಿ ಶಿವಣ್ಣ ಮನದ ಮಾತು
Image
ರಜನಿಕಾಂತ್ ಜತೆ ಶಿವಣ್ಣ ನಟನೆ; ವಿಷಯ ಖಚಿತಪಡಿಸಿ ಹೊಸ ಅಪ್​ಡೇಟ್ ನೀಡಿದ ಶಿವರಾಜ್​ಕುಮಾರ್

‘ಕನ್ನಡ ಚಿತ್ರರಂಗಕ್ಕೆ ನಾನು ಪಾದಾರ್ಪಣೆ ಮಾಡಿ ಇಂದಿಗೆ 37 ವರ್ಷಗಳು. ಆನಂದ್ ಚಿತ್ರದ ಮೊದಲ ದೃಶ್ಯ ಈಗಲೂ ಕಣ್ಣಿಗೆ ಕಟ್ಟಿದಂತಿದೆ. ಆನಂದ್ ಇಂದ ವೇದವರೆಗೂ ನೀವು ಕೊಟ್ಟ ಪ್ರೀತಿ ಬೆಲೆಕಟ್ಟಲಾಗದ್ದು. ನನ್ನನ್ನು ನೀವು ಕೇವಲ ಒಬ್ಬ ನಟನಾಗಿ, ಸ್ಟಾರ್ ಆಗಿ ಮಾತ್ರವಲ್ಲದೆ ನಿಮ್ಮ ಮನೆಮಗನಾಗಿ ಬೆಳೆಸಿದ್ದೀರಿ. ದೇವರ ಸ್ವರೂಪವಾಗಿರುವ ಅಭಿಮಾನಿಗಳಿಗೆ, ಮಾಧ್ಯಮ ಮಿತ್ರರಿಗೆ, ಹಿರಿಯರಿಗೆ, ಕಿರಿಯರಿಗೆ, ಸಹದ್ಯೋಗಿಗಳಿಗೆ ಹಾಗು ನನ್ನ ಇಡೀ ಕುಟುಂಬಕ್ಕೆ ಅನಂತ ವಂದನೆಗಳು’ ಎಂದು ಶಿವಣ್ಣ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಶಿವರಾತ್ರಿಗೆ ನರ್ತನ್ ಹೊಸ ಸಿನಿಮಾ ಘೋಷಣೆ; ‘ಭೈರತಿ ರಣಗಲ್’ ಆಗಿ ಬಂದ ಶಿವರಾಜ್​ಕುಮಾರ್

ಶಿವರಾಜ್​ಕುಮಾರ್ ಅವರ ಮೊದಲ ಸಿನಿಮಾ ‘ಆನಂದ್’ ಯಶಸ್ಸು ಕಂಡಿತು. ಈ ಚಿತ್ರದಿಂದ ಶಿವರಾಜ್​ಕುಮಾರ್ ವೃತ್ತಿಜೀವನಕ್ಕೆ ಭದ್ರಬುನಾದಿ ಸಿಕ್ಕಿತು. ಅವರ ನಟನೆಯ 125ನೇ ಚಿತ್ರ ‘ವೇದ’ ಕಳೆದ ವರ್ಷಾಂತ್ಯಕ್ಕೆ ರಿಲೀಸ್ ಆಗಿ ಯಶಸ್ಸು ಕಂಡಿತು. ಈ ಚಿತ್ರವನ್ನು ಗೀತಾ ಪಿಕ್ಚರ್ಸ್ ಮೂಲಕ ನಿರ್ಮಾಣ ಮಾಡಲಾಯಿತು.

ಶಿವರಾಜ್​ಕುಮಾರ್ ಹಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಪ್ರತಿ ವರ್ಷ ಅವರ ನಟನೆಯ ಸರಾಸರಿ ಮೂರು ಚಿತ್ರಗಳು ರಿಲೀಸ್ ಆಗುತ್ತವೆ. ಹಲವು ಸಿನಿಮಾಗಳಲ್ಲಿ ಶಿವಣ್ಣ ಬ್ಯುಸಿ ಇದ್ದಾರೆ. ‘ಭೈರತಿ ರಣಗಲ್​’ ಚಿತ್ರಕ್ಕಾಗಿ ನರ್ತನ್ ಜೊತೆ ಅವರು ಕೈ ಜೋಡಿಸಿದ್ದಾರೆ. ‘45’, ನೀ ಸಿಗೋವರೆಗೂ’, ಶ್ರೀನಿ ನಿರ್ದೇಶನದ ‘ಘೋಸ್ಟ್​’ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ನಟಿಸುತ್ತಿದ್ದಾರೆ. ರಜನಿಕಾಂತ್​ ನಟನೆಯ ‘ಜೈಲರ್​, ಧನುಷ್​ ಅಭಿನಯದ ‘ಕ್ಯಾಪ್ಟನ್​ ಮಿಲ್ಲರ್​’ ಚಿತ್ರದಲ್ಲಿ ಶಿವಣ್ಣ ಬಣ್ಣಹಚ್ಚುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ https://tv9kannada.com/entertainment

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ