Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಸಿನಿಮಾದಲ್ಲಿ ಶಿವಣ್ಣ, ಪ್ರಭಾಸ್​, ಮೋಹನ್​ಲಾಲ್​, ವಿಷ್ಣು ಮಂಚು; ದೊಡ್ಡದಾಯ್ತು ‘ಕಣ್ಣಪ್ಪ’ ಪಾತ್ರವರ್ಗ

1988ರಲ್ಲಿ ಶಿವರಾಜ್‍ಕುಮಾರ್ ನಟನೆಯ ‘ಶಿವ ಮೆಚ್ಚಿದ ಕಣ್ಣಪ್ಪ’ ಸಿನಿಮಾ ಬಿಡುಗಡೆ ಆಗಿತ್ತು. ಆ ಸಿನಿಮಾದಲ್ಲಿ ಶಿವಣ್ಣ ಅವರು ಕಣ್ಣಪ್ಪನ ಪಾತ್ರ ಮಾಡಿದ್ದರು. ಈಗ ಅದೇ ಕಣ್ಣಪ್ಪನ ಕಥೆಯನ್ನು ಇಟ್ಟುಕೊಂಡು ತೆಲುಗಿನಲ್ಲಿ ವಿಷ್ಣು ಮಂಚು ಅವರು ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರತಂಡಕ್ಕೆ ಶಿವರಾಜ್​ಕುಮಾರ್​ ಸೇರ್ಪಡೆ ಆಗಿದ್ದಾರೆ.

ಒಂದೇ ಸಿನಿಮಾದಲ್ಲಿ ಶಿವಣ್ಣ, ಪ್ರಭಾಸ್​, ಮೋಹನ್​ಲಾಲ್​, ವಿಷ್ಣು ಮಂಚು; ದೊಡ್ಡದಾಯ್ತು ‘ಕಣ್ಣಪ್ಪ’ ಪಾತ್ರವರ್ಗ
ಶಿವರಾಜ್​ಕುಮಾರ್​, ಪ್ರಭಾಸ್​, ಮೋಹನ್​ಲಾಲ್​, ವಿಷ್ಣು ಮಂಚು
Follow us
ಮದನ್​ ಕುಮಾರ್​
|

Updated on: Oct 13, 2023 | 2:37 PM

‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್​ (Shivarajkumar) ಅವರ ಖ್ಯಾತಿ ಕೇವಲ ಕನ್ನಡ ಚಿತ್ರರಂಗಕ್ಕೆ ಮಾತ್ರ ಸೀಮಿತವಾಗಿಲ್ಲ. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಈಗಂತೂ ಶಿವರಾಜ್​ಕುಮಾರ್​ ಅವರಿಗೆ ಪರಭಾಷೆಯಿಂದ ಬರುವ ಆಫರ್​ಗಳು ಹೆಚ್ಚಾಗಿದೆ. ಈ ವರ್ಷ ಬಿಡುಗಡೆ ಆದ ‘ಜೈಲರ್​’ ಸಿನಿಮಾದಲ್ಲಿ ಅವರು ರಜನಿಕಾಂತ್​ ಜೊತೆ ನಟಿಸಿದ್ದರು. ಆ ಸಿನಿಮಾದಲ್ಲಿ ಶಿವಣ್ಣ ಮಾಡಿದ ಪಾತ್ರಕ್ಕೆ ಭರ್ಜರಿ ಶಿಳ್ಳೆ, ಚಪ್ಪಾಳೆ ಸಿಕ್ಕಿತು. ಈಗ ಮತ್ತೊಂದು ಪರಭಾಷೆಯ ಸಿನಿಮಾದಲ್ಲಿ ಅವರು ನಟಿಸುವುದು ಖಚಿತವಾಗಿದೆ. ಹೌದು, ತೆಲುಗಿನ ಖ್ಯಾತ ನಟ ವಿಷ್ಣು ಮಂಚು (Vishnu Manchu) ಅಭಿನಯಿಸುತ್ತಿರುವ ‘ಕಣ್ಣಪ್ಪ’ (Kannappa) ಸಿನಿಮಾದ ಪಾತ್ರವರ್ಗಕ್ಕೆ ಶಿವರಾಜ್​ಕುಮಾರ್​ ಅವರ ಎಂಟ್ರಿ ಆಗಿದೆ. ಈ ಬಗ್ಗೆ ಕೆಲವು ದಿನಗಳಿಂದ ಗುಸುಗುಸು ಕೇಳಿಬರುತ್ತಿತ್ತು. ಆಗ ಅಧಿಕೃತವಾಗಿ ಚಿತ್ರತಂಡದಿಂದಲೇ ಮಾಹಿತಿ ಹೊರಬಿದ್ದಿದೆ.

ನಟ ವಿಷ್ಣು ಮಂಚು ಮತ್ತು ಅವರ ಫ್ಯಾನ್ಸ್​ ಪಾಲಿಗೆ ‘ಕಣ್ಣಪ್ಪ’ ಸಿನಿಮಾ ಮಹತ್ವಾಕಾಂಕ್ಷೆಯ ಪ್ರಾಜೆಕ್ಟ್​ ಆಗಿದೆ. ಈ ಸಿನಿಮಾ ಬಗ್ಗೆ ಈಗಾಗಲೇ ಅಭಿಮಾನಿಗಳ ವಲಯದಲ್ಲಿ ಸಖತ್​ ಕುತೂಹಲ ಮನೆಮಾಡಿದೆ. ಈ ಪರಿ ಹೈಪ್​ ಹೆಚ್ಚಲು ಕಾರಣ ಆಗಿರುವುದೇ ಈ ಸಿನಿಮಾದ ಪಾತ್ರವರ್ಗ. ಟಾಲಿವುಡ್​ ಹೀರೋ ಪ್ರಭಾಸ್​, ಮಲಯಾಳಂ ಸ್ಟಾರ್​ ನಟ ಮೋಹನ್​ಲಾಲ್​ ಅವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರ ಜೊತೆಗೆ ಈಗ ಶಿವರಾಜ್​ಕುಮಾರ್​ ಕೂಡ ಸೇರ್ಪಡೆ ಆಗಿರುವುದರಿಂದ ‘ಕಣ್ಣಪ್ಪ’ ಸಿನಿಮಾದ ಮೇಲಿನ ನಿರೀಕ್ಷೆ ಡಬಲ್​ ಆಗಿದೆ.

1988ರಲ್ಲಿ ಶಿವರಾಜ್‍ಕುಮಾರ್ ನಟನೆಯ ‘ಶಿವ ಮೆಚ್ಚಿದ ಕಣ್ಣಪ್ಪ’ ಸಿನಿಮಾ ಬಿಡುಗಡೆ ಆಗಿತ್ತು. ಆ ಸಿನಿಮಾದಲ್ಲಿ ಶಿವಣ್ಣ ಅವರು ಕಣ್ಣಪ್ಪನ ಪಾತ್ರ ಮಾಡಿದ್ದರು. ಈಗ ಅದೇ ಕಣ್ಣಪ್ಪನ ಕಥೆಯನ್ನು ಇಟ್ಟುಕೊಂಡು ತೆಲುಗಿನಲ್ಲಿ ವಿಷ್ಣು ಮಂಚು ಅವರು ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ಅವರ ಪಾತ್ರ ಹೇಗಿರಲಿದೆ ಎಂಬುದು ಸದ್ಯಕ್ಕೆ ರಹಸ್ಯವಾಗಿದೆ. ಘಟಾನುಘಟಿ ಕಲಾವಿದರನ್ನು ಒಂದೇ ಸಿನಿಮಾದಲ್ಲಿ ನೋಡುವ ಅವಕಾಶ ಸಿಗಲಿರುವುದರಿಂದ ಸಿನಿಪ್ರಿಯರಿಗೆ ಈ ಪ್ರಾಜೆಕ್ಟ್​​ ಬಗ್ಗೆ ಕಾತರ ಹೆಚ್ಚಾಗಿದೆ.

ಇದನ್ನೂ ಓದಿ: ನಿಖಿಲ್​ ಕುಮಾರ್​ ಸಿನಿಮಾದ ಸೆಟ್​ಗೆ ಭೇಟಿ ನೀಡಿದ ಶಿವರಾಜ್​ಕುಮಾರ್​; ಫೋಟೋ ವೈರಲ್​

‘ಕಣ್ಣಪ್ಪ’ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ಅವರ ಪಾತ್ರ ಹೈಲೈಟ್​ ಆಗಲಿದೆ ಎಂದು ಹೇಳಲಾಗುತ್ತಿದೆ. ‘ಸ್ಟಾರ್ ಪ್ಲಸ್‍’ ಚಾನೆಲ್​ನಲ್ಲಿ ಪ್ರಸಾರವಾದ ‘ಮಹಾಭಾರತ’ ಸೀರಿಯಲ್​ಗೆ ನಿರ್ದೇಶನ ಮಾಡಿದ್ದ ಮುಕೇಶ್‍ ಕುಮಾರ್ ಸಿಂಗ್‍ ಅವರು ಈಗ ‘ಕಣ್ಣಪ್ಪ’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಮೋಹನ್‍ ಬಾಬು ಅವರು ನಿರ್ಮಾಣ ಮಾಡುತ್ತಿದ್ದಾರೆ. ಪೌರಾಣಿಕ ಕಥಾಹಂದರ ಇರುವ ಈ ಸಿನಿಮಾದ ಶೂಟಿಂಗ್​ ಈಗಾಗಲೇ ನ್ಯೂಜಿಲ್ಯಾಂಡ್‍ನಲ್ಲಿ ಆರಂಭ ಆಗಿದೆ. ಶಿವರಾಜ್​ಕುಮಾರ್​ ನಟನೆಯ ‘ಘೋಸ್ಟ್​’ ಸಿನಿಮಾ ಅಕ್ಟೋಬರ್​ 19ರಂದು ಬಿಡುಗಡೆ ಆಗಲಿದೆ. ಇದಲ್ಲದೇ, ಧನುಷ್ ನಟನೆಯ ‘ಕ್ಯಾಪ್ಟನ್​ ಮಿಲ್ಲರ್​’ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ಅವರಿಗೆ ಒಂದು ಮುಖ್ಯವಾದ ಪಾತ್ರವಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!